Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಹುಬ್ಬಳ್ಳಿ ಧಾರವಾಡದಲ್ಲಿ ಚುನಾವಣೆಗೆ ನಿಲ್ಲಲು ಸಜ್ಜಾದ SDPI ಹಾಗೂ AIMIM ಪಕ್ಷಗಳು

editor tv by editor tv
February 14, 2023
in ರಾಜ್ಯ, ಸುದ್ದಿ
0
ಹುಬ್ಬಳ್ಳಿ ಧಾರವಾಡದಲ್ಲಿ ಚುನಾವಣೆಗೆ ನಿಲ್ಲಲು ಸಜ್ಜಾದ SDPI ಹಾಗೂ AIMIM ಪಕ್ಷಗಳು
1.9k
VIEWS
Share on FacebookShare on TwitterShare on Whatsapp

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಾಟೆ ಯಾರಿಗೆ ನೆನಪಿಲ್ಲ ಹೇಳಿ, ಈ ಗಲಾಟೆ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ವಾಟ್ಸಪ್ ಸ್ಟೇಟಸ್ ಹಾಕಿದ ಪರಿಣಾಮ ಹೊತ್ತಿಕೊಂಡ ಬೆಂಕಿ, ಜ್ವಾಲೆಯಾಗಿ ಉರಿದಿತ್ತು. ಪೊಲೀಸ್ ಠಾಣೆ ಮುಂಭಾಗವೇ ಒಂದು ಗುಂಪು ದೊಡ್ಡ ಮಟ್ಟದ ಹೋರಾಟ ಮಾಡಿ, ಪೊಲೀಸ್ ಜೀಪ್​ಗೆ ಬೆಂಕಿ ಹಚ್ಚಿದ್ರು. ಈ ಘಟನೆ ನಡೆದು ಬರೋಬ್ಬರಿ ಒಂದು ವರ್ಷ ಕಳೀತಾ ಬಂತು, ಇನ್ನು ಸುಮಾರು 150 ಕ್ಕೂ ಹೆಚ್ಚು ಜನ ಜೈಲಲ್ಲಿದ್ದಾರೆ‌. ಆದರೆ ಚುನಾಚಣೆ ಹೊತ್ತಲ್ಲಿ ಮತ್ತೆ ಈ ಘಟನೆ ಮುನ್ನೆಲೆಗೆ ಬಂದಿದೆ. ಅದಕ್ಕೆ ಕಾರಣ ಆ ಘಟನೆಯಲ್ಲಿ ಜೈಲು ಸೇರಿದವರು ಅಲ್ಪಸಂಖ್ಯಾತರರು. ಮೊದಲಿನಂದಲೂ ಕಾಂಗ್ರೆಸ್ ವೋಟ್ ಬ್ಯಾಂಕ್ ಆಗಿರುವ ಅಲ್ಪ ಸಂಖ್ಯಾತರರು‌ ಜೈಲಲ್ಲಿ ಇದ್ದು ಒಂದು ವರ್ಷ ಆದ್ರೂ ಕಾಂಗ್ರೆಸ್ ನಾಯಕರು ಯಾರಿಗೂ ಸಹಾಯ ‌ಮಾಡಿಲ್ಲ. ಇದು‌ ಅಲ್ಪ ಸಂಖ್ಯಾತ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಅದರಲ್ಲೂ SDPI ಇದನ್ನು ತೀವೃವಾಗಿ‌ ಖಂಡಿಸಿತ್ತು. ಅಮಾಯಕರು ಅರೆಸ್ಟ್ ಆದ್ರೂ ನಮಗೆ ಯಾರೂ ಸಹಾಯ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಇದೀಗ ಇದನ್ನೆ ಬಂಡವಾಳ ಮಾಡಿಕೊಂಡ SDPI ಹುಬ್ಬಳ್ಳಿ ಧಾರವಾಡದಲ್ಲಿ ಚುನಾವಣಾ ಕಣಕ್ಕೆ ಧುಮುಕಿದೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ SDPI ರಾಜ್ಯ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ( SDPI ರಾಜ್ಯ ಚುನಾವಣೆ ಉಸ್ತುವಾರಿ) ನಾವು ಹುಬ್ಬಳ್ಳಿ ಧಾರವಾಡದಲ್ಲಿ ಚುನಾವಣೆಗೆ ನಿಲ್ತೀವಿ ಎಂದಿದ್ದಾರೆ. ರಾಜ್ಯದಲ್ಲಿ ಈಗಾಗಲೇ 54 ಕ್ಷೇತ್ರದಲ್ಲಿ ಅಭ್ಯರ್ಥಿ ಫೈನಲ್ ಮಾಡಿರುವ SDPI, ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದಲ್ಲಿ ಅಭ್ಯರ್ಥಿ ಕಣಕ್ಕಿಳಿಸಲು ರೆಡಿಯಾಗಿದೆ. ಈಗಾಗಲೇ ನಾಲ್ಕೈದು ಜನ ಅಭ್ಯರ್ಥಿಗಳು ಸ್ಪರ್ಧಿಸೋಕೆ ಉತ್ಸುಕರಾಗಿದ್ದು ಅಭ್ಯರ್ಥಿ ಫೈನಲ್ ಆಗಿಲ್ಲ. ಎರಡನೇ ಹಂತದಲ್ಲಿ ಧಾರವಾಡ ಜಿಲ್ಲೆಯ ಉಳಿದ ಕ್ಷೇತ್ರದಲ್ಲೂ ಅಭ್ಯರ್ಥಿ ಹಾಕುವ ಬಗ್ಗೆ SDPI ತಯಾರಿ ನಡೆಸಿದೆ. SDPI ಮುಖ್ಯ ಅಜೆಂಡವೇ ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಸಹಾಯ ಮಾಡಿದವರ ವಿರುದ್ದ ಸೇಡು ತೀರಿಸಿಕೊಳ್ಳೋದು ಅಂತಾ ಕಾಣತ್ತೆ. ಅಮಾಯಕರು ಅರೆಸ್ಟ್ ಮಾಡಿದ್ರು, ನಮಗೆ ಯಾರೂ ಸಹಾಯ ಮಾಡಿಲ್ಲ ಎಂದೇ SDPI ಹೇಳಿ ಚುನಾವಣೆಗೆ ಹೋಗುತ್ತಿದೆ.

ಹುಬ್ಬಳ್ಳಿ ಧಾರಾವಡದಲ್ಲಿ SDPI ಅಲ್ಲ, ಅಸಾವುದ್ದೀನ್ ಓವೈಸಿ ನೇತೃತ್ವದ AIMIM ಪಕ್ಷವೂ ಚುನಾವಣೆಗೆ ರೆಡಿಯಾಗಿದೆ. ಈಗಾಗಲೇ ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆಯಲ್ಲಿ ಮೂರು ಜನ AIMIM ದಿಂದ ಗೆದ್ದಿದ್ದಾರೆ. ಇದೀಗ AIMIM ರಾಜ್ಯ ವಿಧಾನಸಭೆ ಚುನಾವಣೆಗೆ ನಿಲ್ಲೋಕೆ ರೆಡಿಯಾಗಿದ್ದು, ಧಾರವಾಡದ ಏಳು‌ ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕೋಕೆ ರೆಡಿಯಾಗಿದ್ದಾರೆ. ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿ ಸುದ್ದಿಯಾಗಿದ್ದ AIMIM ಇದೀಗ, ವಿಧಾನಸಭೆ ಚುನಾಚಣೆಗೂ ರೆಡಿಯಾಗಿದೆ. ಈಗಾಗಲೇ ಏಳು ಕ್ಷೇತ್ರಗಳಲ್ಲಿ ಅಭ್ಯರ್ಥಿ ಫೈನಲ್ ಆಗಿದ್ದು, ಘೋಷಣೆ ಒಂದೇ ಬಾಕಿ ಎನ್ನಲಾಗಿದೆ. ಇನ್ನು AIMIM ಪಕ್ಷದ ಜಿಲ್ಲಾಧ್ಷಕರೇ ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಅರೆಸ್ಟ್ ಆಗಿದ್ದು, ಬೇಲ್ ಮೇಲೆ ಹೊರಗಡೆ ಇದ್ದಾರೆ. ಅವರು ಕೂಡಾ ಹಳೇ ಹುಬ್ಬಳ್ಳಿ ಗಲಾಟೆಗೆ ಪ್ರತೀಕಾರ ತೀರಿಸಿಕೊಳ್ಳೋ ತವಕದಲ್ಲಿದ್ದಾರೆ. ಹೀಗಾಗಿ ಹುಬ್ಬಳ್ಳಿಯಲ್ಲಿ AIMIM ಪಕ್ಷ ಚುನಾವಣೆಗೆ ರೆಡಿಯಾಗಿದೆ.

Previous Post

ವಿಧಾನಮಂಡಲ ಅಧಿವೇಶನ ಖಾಲಿ ಖಾಲಿ: ಸಿಎಂ, ಸಿದ್ದು, ಡಿಕೆಶಿ, ಎಚ್‌ಡಿಕೆ ಸೇರಿ ಅನೇಕರು ಗೈರು

Next Post

ಮೊದಲ ಬಾರಿ ಬಾಹ್ಯಾಕಾಶಕ್ಕೆ ಸೌದಿ ಅರೇಬಿಯಾದ ಮಹಿಳೆ

Next Post
ಮೊದಲ ಬಾರಿ ಬಾಹ್ಯಾಕಾಶಕ್ಕೆ ಸೌದಿ ಅರೇಬಿಯಾದ ಮಹಿಳೆ

ಮೊದಲ ಬಾರಿ ಬಾಹ್ಯಾಕಾಶಕ್ಕೆ ಸೌದಿ ಅರೇಬಿಯಾದ ಮಹಿಳೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.