Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Belagavi: ಆತ ಸರ್ಕಾರಿ ನೌಕರಿಯಲ್ಲಿದ್ದ ಬಾಡಿ ಬಿಲ್ಡರ್, ಪತ್ನಿ ಕೆಎಎಸ್ ಅಧಿಕಾರಿ: ಆದರೂ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

editor tv by editor tv
February 14, 2023
in ರಾಜ್ಯ, ಸುದ್ದಿ
0
Belagavi: ಆತ ಸರ್ಕಾರಿ ನೌಕರಿಯಲ್ಲಿದ್ದ ಬಾಡಿ ಬಿಲ್ಡರ್, ಪತ್ನಿ ಕೆಎಎಸ್ ಅಧಿಕಾರಿ: ಆದರೂ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?
1.9k
VIEWS
Share on FacebookShare on TwitterShare on Whatsapp

ಹೆಂಡತಿ ಉನ್ನತ ಹುದ್ದೆಯಲ್ಲಿದ್ದರೆ, ಗಂಡ (Husband) ಸಹ ಸರ್ಕಾರಿ ನೌಕರಿಯಲ್ಲಿದ್ದ. ಮದುವೆಯಾಗಿ ಎರಡು ಮಕ್ಕಳಿದ್ದು, ಕೆಲಸದ ಜತೆಗೆ ಆತ ಬಾಡಿ ಬಿಲ್ಡ್ (Body Builder) ಕೂಡ ಮಾಡಿ ಹೆಸರು ಮಾಡಿಕೊಂಡಿದ್ದ. ಹೀಗಿದ್ದವ ಇಂದು ಏಕಾಏಕಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾನೆ (Suicide). ಅಷ್ಟಕ್ಕೂ ಯಾರು ಆತ? ಅದ್ಯಾವ ಕಾರಣಕ್ಕೆ ಆತ್ಮಹತ್ಯೆ ದಾರಿ ಹಿಡಿದ? ಉನ್ನತ ಹುದ್ದೆಯಲ್ಲಿದ್ದರೂ ದಂಪತಿ ನಡುವೆ ಆಗಿದ್ದೇನು, ಅಂತೀರಾ? ಈ ಸ್ಟೋರಿ ನೋಡಿ. ಮೇಲಿನ ಪೋಟೋದಲ್ಲಿರುವ ವ್ಯಕ್ತಿಯ ಹೆಸರು ಜಾಫರ್ ಫಿರ್ಜಾದೆ ಅಂತಾ. ಇನ್ನೂ 39 ವರ್ಷ ವಯಸ್ಸು. ನೋಡಿದರೆ ಗೊತ್ತಾಗುತ್ತೆ ಈತ ಒಬ್ಬ ಬಾಡಿ ಬಿಲ್ಡರ್ ಅಂತಾ. ಕಟ್ಟು ಮಸ್ತ್ ಆದ ದೇಹ, ಒಳ್ಳೆಯ ಕೆಲಸದಲ್ಲಿರುವ ಈತ ಮನನೊಂದು ಮನೆಯಲ್ಲಿ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯ (Belagavi) ಅಜಂ ನಗರದ ನಿವಾಸಿಯಾಗಿರುವ ಜಾಫರ್ ಪ್ರಥಮ ದರ್ಜೆ ಸಹಾಯಕ (ಎಫ್​ಡಿಎ) ಆಗಿ ಸರ್ಕಾರಿ ನೌಕರಿಯಲ್ಲಿದ್ದ. ಇನ್ನು ಜಾಫರ್ ಫಿರ್ಜಾದೆ ಅವರ ಪತ್ನಿ ರೇಷ್ಮಾ ತಾಳಿಕೋಟೆ ಕೂಡ ಸರ್ಕಾರಿ ನೌಕರಿಯಲ್ಲಿದ್ದಾರೆ. ಕೆಎಎಸ್ ಮುಗಿಸಿರುವ (KAS officer) ಅವರು ಇದೀಗ ಬೆಳಗಾವಿ ಜಿಲ್ಲೆಯ ಹಿಡಕಲ್ ಡ್ಯಾಂ ವಿಷೇಶ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇಬ್ಬರು ಮಕ್ಕಳು ಕೂಡ ಈ ದಂಪತಿಗಿದ್ದು ಇಬ್ಬರು ಬಹಳ ಅನ್ಯೋನ್ಯವಾಗಿದ್ದರು. ಎರಡು ದಿನಗಳ ಹಿಂದೆ ಕರ್ತವ್ಯದ ನಿಮಿತ್ತ ರೇಷ್ಮಾ ತಾಳಿಕೋಟೆ ಬೆಂಗಳೂರಿಗೆ ಹೋಗಿದ್ದರು. ಇತ್ತ ಮನೆಯಲ್ಲಿ ಯಾರೂ ಇಲ್ಲದ್ದನ್ನ ನೋಡಿ ತಮ್ಮ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪತಿ ಜಾಫರ್. ಇನ್ನು ಕುಟುಂಬಸ್ಥರು ಸಂಜೆ ವೇಳೆಗೆ ಕೊಠಡಿ ಬಾಗಿಲು ಬಡಿದಿದ್ದಾರೆ.

ಈ ವೇಳೆ ಬಾಗಿಲು ತೆಗೆಯದಿದ್ದಾಗ ಅಕ್ಕಪಕ್ಕದ ಜನರು ಬಂದು ನೋಡಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಎಪಿಎಂಸಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಈ ವೇಳೆ ಬಂದು ಬಾಗಿಲು ತೆರೆದು ನೋಡಿದಾಗ ಜಾಫರ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಶವವನ್ನ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ಪೊಲೀಸರು ರವಾನೆ ಮಾಡಿದ್ದಾರೆ.

ಇನ್ನು ಪತ್ನಿ ರೇಷ್ಮಾ ತಾಳಿಕೋಟೆಗೆ ಗಂಡ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿಸಲಾಗಿ, ಅವರು ಬೆಂಗಳೂರಿನಿಂದ ವಾಪಸ್​ ಬೆಳಗಾವಿಗೆ ಹೊರಟಿದ್ದಾರೆ. ಅವರು ಬಂದ ಬಳಿಕ ಕೇಸ್ ದಾಖಲಿಸಿಕೊಂಡು ಎಪಿಎಂಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರು, ಸ್ನೇಹಿತರು ಸಹ ಆಗಮಿಸಿದ್ದಾರೆ.

ಸದ್ಯ ಪತಿ-ಪತ್ನಿ ಚೆನ್ನಾಗಿಯೇ ಇದ್ದರೂ ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಮನಸ್ತಾಪ ಆಗಿದ್ದು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರಾ ಅಥವಾ ಬೇರೆ ಯಾವುದಾದ್ರೂ ಕಾರಣಕ್ಕೆ ಜಾಫರ್ ಆತ್ಮಹತ್ಯೆಯತ್ತ ಮುಖ ಮಾಡಿದ್ರಾ? ಅನ್ನೋ ನಿಟ್ಟಿನಲ್ಲಿ ಪೊಲೀಸರಿಂದ ಕುಟುಂಬಸ್ಥರ ವಿಚಾರಣೆ ಬಳಿಕ ಆತ್ಮಹತ್ಯೆಗೆ ಕಾರಣ ಎನು ಅನ್ನೋದು ಗೊತ್ತಾಗಲಿದೆ.

ಸರ್ಕಾರಿ ನೌಕರಿ, ಕಟ್ಟುಮಸ್ತಾದ ಆರೋಗ್ಯ ಇದ್ದರೂ ಜಾಫರ್ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಸ್ಥರಿಗೂ, ಸ್ನೇಹಿತರಿಗೂ ಶಾಕ್ ಆಗಿದೆ. ಅದ್ಯಾವ ಕಾರಣಕ್ಕೆ ಜಾಫರ್ ಆತ್ಮಹತ್ಯೆ ಮಾಡಿಕೊಂಡರು ಎಂಬುದು ಪೊಲೀಸರ ತನಿಖೆಯಿಂದ ಹೊರ ಬರಬೇಕಿದೆ. ಅದೇನೆ ಇದ್ದರೂ ಕುಳಿತು ಬಗೆ ಹರಿಸಿಕೊಳ್ಳಬಹುದಿತ್ತು. ಈ ರೀತಿ ದುಡುಕಿನ ನಿರ್ಧಾರದಿಂದ ಚಿಕ್ಕ ವಯಸ್ಸಿನ ಮಕ್ಕಳು ತಂದೆಯನ್ನ ಕಳೆದುಕೊಂಡು ಅನಾಥವಾಗಿದ್ದಾರೆ.

Previous Post

ಮೊದಲ ಬಾರಿ ಬಾಹ್ಯಾಕಾಶಕ್ಕೆ ಸೌದಿ ಅರೇಬಿಯಾದ ಮಹಿಳೆ

Next Post

ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ – ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ

Next Post
ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ – ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ

ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ – ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.