Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Congress Allegation: ಸರ್ಕಾರದಿಂದ ಟೆಂಡರ್ ಗೋಲ್ಮಾಲ್: ಡಿಕೆಶಿ ನಿವಾಸದಲ್ಲಿ ಬಾಂಬ್ ಸಿಡಿಸಿದ ಕೈ ನಾಯಕರು

editor tv by editor tv
February 15, 2023
in ರಾಜ್ಯ, ಸುದ್ದಿ
0
ತ್ರಿಶೂಲ ಹಿಡ್ಕೊಂಡು ಬಿಜೆಪಿ ಕಾರ್ಯಕರ್ತರು ಸಾಯ್ತವ್ರೆ, ಯಾವ ಮಂತ್ರಿ ಮಗನೂ ಬಲಿಯಾಗಲ್ಲ: ಡಿ.ಕೆ.ಶಿವಕುಮಾರ್
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಸರ್ಕಾರದ ಅವಧಿ ಕೆಲವೇ ದಿನಗಳಿರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ವಿವಿಧ ಇಲಾಖೆಗಳಲ್ಲಿ ಟೆಂಡರ್ ಗೋಲ್ಮಾಲ್ ಹೇಗೆ ನಡೆಯುತ್ತಿದೆ ಎಂಬ ವಿವರ ನೀಡಿದ್ದಾರೆ.

ಸರ್ಕಾರ ಇನ್ನು ಒಂದು ತಿಂಗಳು ಮಾತ್ರ ಇರುತ್ತದೆ. ಬಜೆಟ್ ಸೆಷನ್ ಮುಗಿದ ಮೇಲೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಜಲಸಂಪನ್ಮೂಲ, ಇಂಧನ, ಆರೋಗ್ಯ ಸೇರಿ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಲ್ಲಿ ಟೆಂಡರ್ ಕರೆಯಲಾಗುತ್ತಿದೆ. ಎರಡು ಪಟ್ಟು ಹೆಚ್ಚು ಮೊತ್ತಕ್ಕೆ ಎಸ್ಟಿಮೇಟ್ ಮಾಡುತ್ತಿದ್ದಾರೆ. ಏಳು ದಿನ ಮಾತ್ರ ಟೈಂ ಕೊಟ್ಟು, ಗುತ್ತಿಗೆದಾರರನ್ನು ಸೆಟ್ ಮಾಡಲು ಶಾಸಕರಿಗೆ ಹಂಚಿಬಿಟ್ಟಿದ್ದಾರೆ. ಬೀದಿಯಲ್ಲಿ ನಿಂತು ಅವರು ಬನ್ನಿ ಬನ್ನಿ ಎಂದು ಕರೆಯುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಈ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

“ಮಂತ್ರಿ ಮಾಡದೇ ಇರುವವರಿಗೆ 2-3 ಸಾವಿರ ಕೋಟಿ ಕೆಲಸ ಅಂತ ಟೆಂಡರ್ ಹಂಚಿಕೆ ಮಾಡುತ್ತಾ ಇದ್ದಾರೆ. ನಮಗೆ ಅದೇ ಶಾಸಕರು ಮಾಹಿತಿ ಕೊಡುತ್ತಿದ್ದಾರೆ. ಸಾವಿರಾರು ಕೋಟಿ ರೂ ಮೊತ್ತದ ಹಳೆಯ ಕೆಲಸದ ಬಿಲ್ ಬಾಕಿ ಉಳಿದುಕೊಂಡಿದ್ದರೂ ಹೊಸ ಟೆಂಡರ್​ಗಳನ್ನು ಹಂಚಲಾಗುತ್ತಿದೆ. ಯಾರು ಮುಂಚಿತವಾಗಿ ಹಣ ತಲುಪಿಸುತ್ತಾರೋ ಅವರಿಗೆ ಕೆಲಸದ ಹಂಚಿಕೆ ಮಾಡುತ್ತಿದ್ದಾರೆ. ಯಾವುದೂ ಪಾರದರ್ಶಕವಾಗಿ ನಡೆಯುತ್ತಿಲ್ಲ.

“ಬಿಡಿಎ ಕಾರಂತ ಬಡಾವಣೆ ಇನ್ನೂ ಹಂಚಿಕೆ ಆಗಿಲ್ಲ. ಆದರೂ ಅಲ್ಲಿ 3 ಸಾವಿರ ಕೋಟಿ ರೂ ಟೆಂಡರ್ ಕರೆದಿದ್ದಾರೆ. ಬರೀ ವಸೂಲಿ ಬಾಜಿ ನಡೆಯುತ್ತಿದೆ. ಬೆಂಗಳೂರಿಗೆ ಕರಪ್ಷನ್ ಕ್ಯಾಟಿಟಲ್ ಅನ್ನೋ ಹೆಸರು ಬಂದಿದೆ. ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ. ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ. ಆಗ ಎಲ್ಲವನ್ನೂ ರದ್ದು ಮಾಡುತ್ತೇವೆ. ಅಧಿಕಾರಿಗಳು, ಗುತ್ತಿಗೆದಾರರು, ರಾಜಕಾರಣಿಗಳನ್ನು ಬಿಡುವುದಿಲ್ಲ” ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ಕಾರಣ ಎಂದ ಸಿದ್ದರಾಮಯ್ಯ

ಸರ್ಕಾರದಿಂದ ಟೆಂಡರ್ ಗೋಲ್ಮಾಲ್ ನಡೆದಿದೆ ಎನ್ನುವ ಆರೋಪವನ್ನು ಸಿದ್ದರಾಮಯ್ಯ ಕೂಡ ಮಾಡಿದ್ದು, ಇದಕ್ಕೆ ಸಿಎಂ ಬೊಮ್ಮಾಯಿ ಕಾರಣ ಎಂದು ದೂಷಿಸಿದ್ದಾರೆ. ಡಿಕೆ ಶಿವಕುಮಾರ್ ನಿವಾಸದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಈ ಹಗರಣವನ್ನು ಇಲ್ಲಿಗೇ ಬಿಡದೇ ಕೋರ್ಟ್ ಮೊರೆ ಹೋಗುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಟೆಂಡರ್ ರದ್ದು ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದನ್ನು ಸಿದ್ದರಾಮಯ್ಯ ಕೂಡ ಪುನರುಚ್ಚರಿಸಿದ್ದಾರೆ. ಸರ್ಕಾರದಿಂದ ಒಂದೇ ದಿನ 18 ಸಾವಿರ ಕೋಟಿ ರೂ ಟೆಂಡರ್ ಆಗಿದೆ. ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ತನಿಖಾ ಸಮಿತಿ ರಚನೆ ಮಾಡಿ ಹಗರಣ ಬಯಲಿಗೆಳೆಯುತ್ತೇವೆ. ಯಾರ ಮೇಲಾದರೂ ಆರೋಪ ಇದ್ದರೂ ಎಲ್ಲವನ್ನೂ ತನಿಖೆಗೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದೆಲ್ಲವೂ ಎಲೆಕ್ಷನ್ ಫಂಡ್ ರೇಸ್ ಆಗಿದೆ. ಚುನಾವಣೆಗೆ 6 ಸಾವಿರ ಕೋಟಿ ರೂ ಕೊಡುತ್ತೇವೆ ಎಂದು ಹೇಳ್ತಾರೆ. ಇಷ್ಟರಮಟ್ಟಿಗೆ ರಾಜ್ಯವನ್ನು ಹಾಳುಮಾಡಲು ಹೊರಟಿದ್ದಾರೆ ಎಂದು ಖೇದ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಬೋರ್ಡ್ ಮೀಟಿಂಗ್​ಗಳೆಲ್ಲಾ ಸಿಎಂ ಬೊಮ್ಮಾಯ ನೇತೃತ್ವದಲ್ಲೇ ನಡೆಯೋದು. ಟೆಂಡರ್ ಮೊತ್ತ ಎಷ್ಟು ಹೆಚ್ಚಿಸಬೇಕು ಎಂದು ಅವರೇ ಹೇಳಿರುತ್ತಾರೆ. ಇದಕ್ಕೆಲ್ಲಾ ಬೊಮ್ಮಾಯಿಯೇ ಕಾರಣ ಎಂದು ಆರೋಪಿಸಿದ್ದಾರೆ.

Previous Post

ಪುತ್ತೂರು: ಕಾರು ಪಲ್ಟಿಯಾಗಿ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Next Post

ಕಾರು ಬಾಂಬ್‌ ಸ್ಫೋಟ ಪ್ರಕರಣ – ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ NIA ದಾಳಿ

Next Post
ಕಾರು ಬಾಂಬ್‌ ಸ್ಫೋಟ ಪ್ರಕರಣ – ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ NIA ದಾಳಿ

ಕಾರು ಬಾಂಬ್‌ ಸ್ಫೋಟ ಪ್ರಕರಣ – ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ NIA ದಾಳಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.