Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಮಂಗಳೂರು: ಗಣಿಗಾರಿಕೆ ಸ್ಫೋಟದಿಂದ ದೇಗುಲ ಬಿರುಕು; ಸೂಕ್ತ ಪರಿಹಾರಕ್ಕಾಗಿ ನಾಳೆ ಹಿಂದೂ ಜಾಗರಣ ವೇದಿಕೆಯಿಂದ ಸಂಕಿರ್ತನ ಯಾತ್ರೆ

editor tv by editor tv
February 15, 2023
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ದಕ್ಷಿಣ ಕನ್ನಡ: ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿರುವ ಕಾರಿಂಜೇಶ್ವರ ದೇವಸ್ಥಾನ. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಶಿವ ಪಾರ್ವತಿಯ ದೇವಸ್ಥಾನವಿದೆ. ಆದ್ರೆ ಈ ದೇವಸ್ಥಾನದ ಸುತ್ತ ಕಾರ್ಯಾಚರಿಸುತ್ತಿದ್ದ ಕಲ್ಲು ಗಣಿಗಾರಿಕೆಗೆ ನಡೆಸಿದ ಸ್ಫೋಟದಿಂದ ದೇಗುಲ ಬಿರುಕು ಬಿಟ್ಟಿದೆ. ಇದರ ವಿರುದ್ದ ಹೋರಾಟ ನಡೆಸಿದ್ದ ಹಿಂದೂ ಜಾಗರಣ ವೇದಿಕೆ ಹಾಗೂ ಸ್ಥಳೀಯರಿಗೆ ಇದೀಗ ತಾತ್ಕಾಲಿಕ ಪರಿಹಾರ ಸಿಕ್ಕಿದೆ. ಜಿಲ್ಲಾಡಳಿತ ದೇವಸ್ಥಾನದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯನ್ನ ಗಣಿಗಾರಿಕೆ ಚಟುವಟಿಕೆಗಳ ನಿಷೇಧಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದ್ರೆ ಈ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಶಿವ ಮಾಲಾಧಾರಣೆ ಅಭಿಯಾನ ನಡೆಸಲು ಮುಂದಾಗಿದೆ.

ಇದೇ ಫೆಬ್ರವರಿ 16ರಂದು ಭಕ್ತರು ಮಾಲಾಧಾರಣೆ ಮಾಡಿ ಫೆಬ್ರವರಿ 18ರಂದು ಮಾಲಾಧಾರಿಗಳ ಬೃಹತ್ ಸಮೂಹದೊಂದಿಗೆ ಸಂಕೀರ್ತನ ಯಾತ್ರೆಯೊಂದಿಗೆ ಕಾರಿಂಜ ದೇವಸ್ಥಾನಕ್ಕೆ ತೆರಳಿ ಜಾಗೃತಿಗೆ ಮುಂದಾಗಿದೆ. ದೇವಸ್ಥಾನದಲ್ಲಿ ಇಟ್ಟ ತಾಂಬೂಲ ಪ್ರಶ್ನೆಯಲ್ಲಿ ಕಾರಿಂಜೇಶ್ವರನ ಬೆಟ್ಟದ ಕಲ್ಲು ಸುಮಾರು 6 ಕಿ.ಮೀ ವ್ಯಾಪ್ತಿಯವರೆಗೆ ಹರಡಿಕೊಂಡಿದೆ ಎಂಬುದು ತಿಳಿದುಬಂದಿತ್ತು. ಹರಡಿಕೊಂಡಿರುವ ಕಲ್ಲು ಈ ಬೆಟ್ಟದ ಪಂಚಾಗವಿದ್ದಂತೆ. ಹೀಗಾಗಿ ಈ ಅಕ್ರಮದ ವಿರುದ್ದ ಜನ ಎಚ್ಚೆತ್ತುಕೊಂಡಿದ್ದರು.

ಸದ್ಯ ಗಣಿಗಾರಿಕೆ ತಾತ್ಕಾಲಿಕವಾಗಿ ನಿಂತಿದ್ದು, ನಿಷೇಧದ ಪ್ರಸ್ತಾಪವನ್ನು ಸರ್ಕಾರಕ್ಕೆ ಕಳುಹಿಸಲಾಗಿದ್ದು ಶೀಘ್ರ ಅನುಮೋದನೆ ನೀಡುವಂತೆ ಒತ್ತಾಯಿಸಲಾಗಿದೆ. ಹೀಗಾಗಿ ಫೆ.16ರಂದು ಸೂರ್ಯೋದಯದ ಮೊದಲು ಶಿವ ಮಾಲಾಧಾರಣೆ ಮಾಡುವ ಭಕ್ತರು ಫೆ.18ರಂದು ಸಂಜೆ ಬೃಹತ್ ಭಕ್ತರ ಸಮೂಹ ದೇವಸ್ಥಾನಕ್ಕೆ ಸಾಗಿ ಮರುದಿನ ಮುಂಜಾನೆ ಮಾಲೆ ವಿಸರ್ಜನೆ ಮಾಡಲಿದ್ದಾರೆ.

ಅಕ್ರಮ ಗಣಿಗಾರಿಕೆಯ ವಿರುದ್ದ ಜನ ಒಗ್ಗಟ್ಟಾಗಿ ದೇವಸ್ಥಾನದ ಸಂರಕ್ಷಣೆಗೆ ಮುಂದೆ ಬಂದಿದ್ದರಿಂದ ಜನರಿಗೆ ತಾತ್ಕಾಲಿಕ ಪರಿಹಾರ ಸಿಕ್ಕಿದೆ. ಶಾಶ್ವತವಾಗಿ ಈ ಗಣಿಗಾರಿಕೆ ನಿಲ್ಲದಿದ್ದರೆ ಈ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಹಿಂದೂ ಜಾಗರಣ ವೇದಿಕೆ ನೀಡಿದೆ.

Previous Post

ಸಶಸ್ತ್ರ ಪಡೆಯಲ್ಲಿ ಮುಸ್ಲಿಮರಿಗೆ 30% ಮೀಸಲಾತಿ ನೀಡಿ: ಜೆಡಿಯು

Next Post

ಲವ್ ಜಿಹಾದ್ ಬಗ್ಗೆ ಮಾತ್ನಾಡೋ ನಳಿನ್‌ಗೆ ಲವ್ವಲ್ಲಿ ಹೆಚ್ಚು ಕಡಿಮೆ ಆಗಿರ್ಬೇಕು: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

Next Post
ಲವ್ ಜಿಹಾದ್ ಬಗ್ಗೆ ಮಾತ್ನಾಡೋ ನಳಿನ್‌ಗೆ ಲವ್ವಲ್ಲಿ ಹೆಚ್ಚು ಕಡಿಮೆ ಆಗಿರ್ಬೇಕು: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

ಲವ್ ಜಿಹಾದ್ ಬಗ್ಗೆ ಮಾತ್ನಾಡೋ ನಳಿನ್‌ಗೆ ಲವ್ವಲ್ಲಿ ಹೆಚ್ಚು ಕಡಿಮೆ ಆಗಿರ್ಬೇಕು: ಬಿ.ಕೆ.ಹರಿಪ್ರಸಾದ್ ವ್ಯಂಗ್ಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.