

ಬೆಂಗಳೂರು (ಮಾ.09): ನಿಂತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ನಲ್ಲೇ ಸಜೀವ ದಹನವಾದ ಘಟನೆ ನಗರದ ಬ್ಯಾಡರಹಳ್ಳಿ ಡಿ ಗ್ರೂಪ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಮುತ್ತಯ್ಯ ಸ್ವಾಮಿ (45) ಎಂದು ಗುರುತಿಸಲಾಗಿದೆ. ಬಸ್ ಸುಮ್ಮನಹಳ್ಳಿ ಡಿಪೋ 31ಕ್ಕೆ ಸೇರಿದ್ದಾಗಿದೆ.

ಬಸ್ ತಡರಾತ್ರಿ ರೂಟ್ ಮುಗಿಸಿಕೊಂಡು 12ಕ್ಕೆ ಬಂದಿತ್ತು. ಹೀಗಾಗಿ ಲೇಟ್ ಆಗಿದ್ದರಿಂದ ಕಂಡಕ್ಟರ್ ಬಸ್ನ ಸೀಟ್ನಲ್ಲಿಯೇ ಮಲಗಿದ್ದರು. ಈ ವೇಳೆ ಬಸ್ಸಿಗೆ ದಿಢೀರ್ ಬೆಂಕಿ ಹೊತ್ತಿಕೊಂಡಿದ್ದು, ಮುತ್ತಯ್ಯ ಅವರು ಮಲಗಿದ್ದಲ್ಲೇ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
