Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಮಂಡ್ಯದಲ್ಲಿ ಮೋದಿ ಸ್ವಾಗತಕ್ಕೆ ಹಾಕಲಾಗಿದ್ದ ಉರಿಗೌಡ-ದೊಡ್ಡನಂಜೇಗೌಡ ಕಟೌಟ್​ ತೆರವು

editor tv by editor tv
March 12, 2023
in ರಾಜ್ಯ, ಸುದ್ದಿ
0
ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಮಂಡ್ಯದಲ್ಲಿ ಮೋದಿ ಸ್ವಾಗತಕ್ಕೆ ಹಾಕಲಾಗಿದ್ದ ಉರಿಗೌಡ-ದೊಡ್ಡನಂಜೇಗೌಡ ಕಟೌಟ್​ ತೆರವು
1.9k
VIEWS
Share on FacebookShare on TwitterShare on Whatsapp

ಮಂಡ್ಯ: ನರೇಂದ್ರ ಮೋದಿ (Nagendra Modi)ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿವಾದಿತ ಉರಿಗೌಡ ಹಾಗೂ ದೊಡ್ಡ ಮಂಜೇಗೌಡ (Uri Gowda And Dodda Nanjegowda Banner) ಮಹಾದ್ವಾರ ಎಂದು ಹಾಕಲಾಗಿದ್ದ ಬ್ಯಾನರ್​ ತೆರವುಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ರೋಡ್ ಶೋ ನಡೆಸುವ ಮಾರ್ಗದಲ್ಲಿ ಉರಿಗೌಡ ಹಾಗೂ ದೊಡ್ಡ ಮಂಜೇಗೌಡ ಮಹಾದ್ವಾರ ಎಂದು ಕಟೌಟ್​ ಹಾಕಲಾಗಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮಂಡ್ಯದಲ್ಲೇ ಇದಕ್ಕೆ ತೀವ್ರ ಆಕ್ರೋಶ, ಟೀಕೆಗಳು ವ್ಯಕ್ತವಾಗಿದ್ದವು. ಇದರಿಂದ ಈ ವಿವಾದಿತ ಬ್ಯಾನರ್​ ದ್ವಾರವನ್ನು ರಾತ್ರೋ ರಾತ್ರಿ ತೆರವುಗೊಳಿಸಲಾಗಿದೆ. ಈ ಸ್ಥಳದಲ್ಲಿ ಬಾಲಗಂಗಾಧರನಾಥ್ ಸ್ವಾಮೀಜಿ ಮಹಾದ್ವಾರ ಎಂದು ಬ್ಯಾನರ್​ ಹಾಕಲಾಗಿದೆ.

ಮಂಡ್ಯದ ಗೆಜ್ಜಲಗೆರೆಯಲ್ಲಿ ನರೇಂದ್ರ ಮೋದಿಅ ಅವರು ಇಂದು (ಮಾ.12) ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​​ವೇ ಉದ್ಘಾಟಿಸಲಿದ್ದಾರೆ. ಅಲ್ಲದೇ ನಗರ ವ್ಯಾಪ್ತಿಯಲ್ಲಿ 1.8 ಕಿ.ಮೀ ರೋಡ್​ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಗದುದ್ದಕ್ಕೂ ಕಟೌಟ್​ಗಳಿಂದ ನಾಲ್ಕು ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ರೋಡ್ ಶೋ ಆರಂಭವಾಗುವ ಪ್ರವಾಸಿ ಮಂದಿರದ ಬಳಿ ಸರ್.​ಎಂ. ವಿಶ್ವೇಶ್ವರಯ್ಯ, ಜೆಸಿ ವೃತ್ತದಲ್ಲಿ ಕೆಂಪೇಗೌಡ, ಮಹಾವೀರ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾದ್ವಾರ ಹಾಕಲಾಗಿದೆ. ಈ ಮೂರು ದ್ವಾರಗಳಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದ್ರೆ ನಾಲ್ಕನೇ ಮಹಾದ್ವಾರ ಫ್ಯಾಕ್ಟರಿ ಸರ್ಕಲ್​ನಲ್ಲಿ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರಕ್ಕೆ ಪರ ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ತೀವ್ರ ಟೀಕೆಗಳು ವ್ಯಕ್ತವಾಗಿದ್ದವು.

.@PMOIndia ಸ್ವಾಗತಕ್ಕಾಗಿ ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ-ನಂಜೇಗೌಡ ಹೆಸರಿನ ಕಮಾನು ಹಾಕಿರುವುದು
ಅಪ್ರತಿಮ‌ ಸ್ವಾತಂತ್ರ್ಯ
ಹೋರಾಟಗಾರರನ್ನು ನೀಡಿದ ಮಂಡ್ಯಕ್ಕೆ ಮಾತ್ರವಲ್ಲ‌ ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ.@CMofKarnataka ತಕ್ಷಣ ಮಧ್ಯೆ ಪ್ರವೇಶಿಸಿ ಈ ಸ್ವಾಗತ ಕಮಾನನ್ನು ಕಿತ್ತು ಹಾಕಿಸಬೇಕು. pic.twitter.com/M2yeKqgcrR

— Siddaramaiah (@siddaramaiah) March 11, 2023

ಮಾಜಿ ಸಿದ್ದರಾಮಯ್ಯ ಅವರು ಸಹ ಈ ಬಗ್ಗೆ ಟ್ವೀಟ್ ಮಾಡಿ, ಸ್ವಾಗತಕ್ಕಾಗಿ ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ-ನಂಜೇಗೌಡ ಹೆಸರಿನ ಕಮಾನು ಹಾಕಿರುವುದು ಅಪ್ರತಿಮ‌ ಸ್ವಾತಂತ್ರ್ಯ ಹೋರಾಟಗಾರರನ್ನು ನೀಡಿದ ಮಂಡ್ಯಕ್ಕೆ ಮಾತ್ರವಲ್ಲ‌ ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ತಕ್ಷಣ ಮಧ್ಯೆ ಪ್ರವೇಶಿಸಿ ಈ ಸ್ವಾಗತ ಕಮಾನನ್ನು ಕಿತ್ತು ಹಾಕಿಸಬೇಕು ಎಂದು ಕರ್ನಾಟಕ ಬಿಜೆಪಿಗೆ ಟ್ಯಾಗ್​ ಮಾಡಿ ಆಗ್ರಹಿಸಿದ್ದರು.

ಬೆಂಗಳೂರು- ಮೈಸೂರು ದಶಪಥಕ್ಕೆ ಮಂಡ್ಯದಲ್ಲಿ ಉರಿಗೌಡ ಮತ್ತು ನಂಜೇಗೌಡರ ಹೆಸರಿನ ದ್ವಾರ ನೋಡಿ ಕೆಲವರಿಗೆ ಉರಿ ಹತ್ತಿಕೊಂಡಿದೆ. ದ್ವಾರ ತೆಗೆಸುವಂತೆ @siddaramaiah ಆಗ್ರಹಿಸಿದ್ದಾರೆ. ನರಹಂತಕ , ಧರ್ಮಾಂಧ ಟಿಪ್ಪುವನ್ನು ಸೆದೆಬಡಿದ ಮಂಡ್ಯದ ವೀರರಿಗೆ ನಾಡ ಗೌರವ ಸಿಗುವುದನ್ನೂ ಇವರಿಂದ ಸಹಿಸಲಾಗುವುದಿಲ್ಲ.

1/5 pic.twitter.com/yvrZwXO5rO

— C T Ravi 🇮🇳 ಸಿ ಟಿ ರವಿ (@CTRavi_BJP) March 11, 2023

ಇನ್ನು ಉರಿಗೌಡ ಮತ್ತು ನಂಜೇಗೌಡರ ಹೆಸರಿನ ದ್ವಾರವನ್ನು ಸ್ವತಃ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದು, ಬೆಂಗಳೂರು- ಮೈಸೂರು ದಶಪಥಕ್ಕೆ ಮಂಡ್ಯದಲ್ಲಿ ಉರಿಗೌಡ ಮತ್ತು ನಂಜೇಗೌಡರ ಹೆಸರಿನ ದ್ವಾರ ನೋಡಿ ಕೆಲವರಿಗೆ ಉರಿ ಹತ್ತಿಕೊಂಡಿದೆ. ದ್ವಾರ ತೆಗೆಸುವಂತೆ ಆಗ್ರಹಿಸಿದ್ದಾರೆ. ನರಹಂತಕ , ಧರ್ಮಾಂಧ ಟಿಪ್ಪುವನ್ನು ಸೆದೆಬಡಿದ ಮಂಡ್ಯದ ವೀರರಿಗೆ ನಾಡ ಗೌರವ ಸಿಗುವುದನ್ನೂ ಇವರಿಂದ ಸಹಿಸಲಾಗುವುದಿಲ್ಲ ಎಂದು ಸಿದ್ದರಾಮಯ್ಯಗೆ ಟ್ಯಾಗ್​ ಮಾಡಿದ್ದಾರೆ.

ರಾಜಕೀಯ ಲಾಭಕ್ಕಾಗಿ ಬಿಜೆಪಿ, ಟಿಪ್ಪು ಕೊಂದ ದೋಷವನ್ನು ಒಕ್ಕಲಿಗ ಸಮುದಾಯದ ತಲೆಗೆ ಕಟ್ಟಲು ಮುಂದಾಗಿದ್ದಾರೆ. ಕಾಲ್ಪನಿಕ ವ್ತಕ್ತಿಗಳನ್ನು ನಿಜ ಎಂದು ಬಣ್ಣಿಸುತ್ತಿದ್ದಾರೆ ಎಂದು ಹಲವು ಆಕ್ರೋಶಗೊಂಡಿದ್ದರು. ಇದರ ಬೆನ್ನಲ್ಲೇ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರವನ್ನು ತೆರವುಗೊಳಿಸಲಾಗಿದೆ.

ಉರಿಗೌಡ ಮತ್ತು ದೊಡ್ಡ ನಂಜೇಗೌಡರು ಟಿಪ್ಪು ಸುಲ್ತಾನ್‌ನನ್ನು ಕೊಂದರು ಎಂದು ಬಿಜೆಪಿ ನಾಯಕರು ಸಭೆ ಸಮಾರಂಭಗಳಲ್ಲಿ ಹೇಳಿಕೊಳ್ಳುತ್ತಿದ್ದರು. ಆದರೆ, ಈ ಇಬ್ಬರು ವ್ಯಕ್ತಿಗಳು ಬದುಕಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಇತಿಹಾಸ ತಜ್ಞರು ತಿಳಿಸಿದ್ದರು. ಆದರೂ, ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್‌ನನ್ನು ರಾಜಕೀಯ ದಾಳ ಮಾಡಿಕೊಂಡಿದ್ದಾರೆ. ಗೌಡ ಸಮುದಾಯದ ಮಹಾನಾಯಕರಾದ ಉರಿಗೌಡ ಮತ್ತು ದೊಡ್ಡ ನಂಜೇಗೌಡರೇ ಟಿಪ್ಪುಅನ್ನು ಕೊಂದಿದ್ದಾಗಿ ವಾದ ಮಂಡಿಸುತ್ತಿದ್ದರು

ಒಟ್ಟಿನಲ್ಲಿ ಟಿಪ್ಪು ಸುಲ್ತಾನ್​ನನ್ನು ಉರಿಗೌಡ ಮತ್ತು ನಂಜೇಗೌಡ ಕೊಂದಿದ್ದು ಎಂದು ಬಿಜೆಪಿ ನಾಯರು ಬಾಯಿ ಮಾತುಗಳಲ್ಲೇ ಹೇಳುತ್ತಿದ್ದರು. ಇದೀಗ ಅದನ್ನು ಕಟೌಟ್​ ಮೂಲಕ ಮಹಾದ್ವಾರ ಹಾಕಿ ಮುಖಭಂಗಕ್ಕೀಡಾಗಿದ್ದಾರೆ.

Previous Post

ಮಿಥುನ್‌ ರೈ ಹೇಳಿಕೆ ವಿರೋಧಿಸಿದ ‘ರಕ್ಷಿತ್‌ ಶೆಟ್ಟಿ’ಗೆ ನೆಟ್ಟಿಗರಿಂದ ಇತಿಹಾಸ ಪಾಠ!

Next Post

ಉಮ್ರಾ ಯಾತ್ರೆಗೆ ತೆರಳಿದ್ದ ಉಡುಪಿಯ ಇಬ್ಬರು ಮಹಿಳಾ ಯಾತ್ರಿಕರ ಕೊನೆಯುಸಿರು; ಮಕ್ಕಾದಲ್ಲೇ ಅಂತ್ಯಕ್ರಿಯೆ

Next Post
ಉಮ್ರಾ ಯಾತ್ರೆಗೆ ತೆರಳಿದ್ದ ಉಡುಪಿಯ ಇಬ್ಬರು ಮಹಿಳಾ ಯಾತ್ರಿಕರ ಕೊನೆಯುಸಿರು; ಮಕ್ಕಾದಲ್ಲೇ ಅಂತ್ಯಕ್ರಿಯೆ

ಉಮ್ರಾ ಯಾತ್ರೆಗೆ ತೆರಳಿದ್ದ ಉಡುಪಿಯ ಇಬ್ಬರು ಮಹಿಳಾ ಯಾತ್ರಿಕರ ಕೊನೆಯುಸಿರು; ಮಕ್ಕಾದಲ್ಲೇ ಅಂತ್ಯಕ್ರಿಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.