Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

editor tv by editor tv
March 18, 2023
in ರಾಜ್ಯ, ಸುದ್ದಿ
0
ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ
1.9k
VIEWS
Share on FacebookShare on TwitterShare on Whatsapp

ಕೃಪೆ :ನಾನು ಗೌರಿ

“ಟಿಪ್ಪು ಸುಲ್ತಾನರನ್ನು ಕೊಂದಿದ್ದು ಉರಿಗೌಡ, ದೊಡ್ಡ ನಂಜೇಗೌಡ” ಎಂದು ಕರ್ನಾಟಕದಲ್ಲಿ ನಕಲಿ ಇತಿಹಾಸವನ್ನು ಸೃಷ್ಟಿಸುತ್ತಿರುವಂತೆಯೇ, ಉತ್ತರಭಾರತದಲ್ಲಿ ಗುರ್ಜರ್ ಸಮುದಾಯವನ್ನು ಮುಖ್ಯವಾಗಿಟ್ಟುಕೊಂಡು ನಕಲಿ ಇತಿಹಾಸ ಕಟ್ಟುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವ ಕುರಿತು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯವನ್ನು ವೋಟ್‌ಬ್ಯಾಂಕ್ ಮಾಡಿಕೊಳ್ಳಲು ಕರ್ನಾಟಕದಲ್ಲಿ ವಿಫಲ ಯತ್ನ ಮಾಡುತ್ತಿರುವಂತೆಯೇ ಉತ್ತರದಲ್ಲಿ ಗುರ್ಜರ್‌‌ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ನಕಲಿ ಇತಿಹಾಸ ಸೃಷ್ಟಿಸಲು ಪ್ರಯತ್ನಿಸಲಾಗಿದೆ. ಇತಿಹಾಸವನ್ನು ತಿರುಚಿ ನಿರ್ದಿಷ್ಟ ಸಮುದಾಯವನ್ನು ಸೆಳೆಯುವ ಹೊಸ ತಂತ್ರಗಾರಿಕೆಯನ್ನು ಸಂಘಪರಿವಾರ ಮಾಡುತ್ತಿದೆ.

ಕರ್ನಾಟಕದಲ್ಲಿ ಉರಿಗೌಡ, ದೊಡ್ಡನಂಜೇಗೌಡರನ್ನು ಪ್ರಸ್ತಾಪಿಸುತ್ತಿರುವಂತೆಯೇ ಉತ್ತರ ಭಾರತದಲ್ಲಿ ರಾಜಾ ಸುಹೇಲ್‌ದೇವ್ ಮತ್ತು ಗುರ್ಜರ್ ವೀರ ಮಹಿಳೆ ರಾಮ್‌ಪ್ಯಾರಿ ಗುರ್ಜರ್‌ ಎಂಬ ಪಾತ್ರಗಳನ್ನು ಚುನಾವಣಾ ರಂಗಕ್ಕೆ ಎಳೆದು ತರಲಾಗಿದೆ.

ಈ ಹಲವು ಪ್ರಕರಣಗಳಲ್ಲಿ ಬಿಜೆಪಿ ಹೇಳುವಂತೆ ಈ ವೀರರು ನಿಜವಾಗಿಯೂ ಅಸ್ತಿತ್ವದಲ್ಲಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಆದಾಗ್ಯೂ ಹಿಂದುತ್ವ ಪಕ್ಷವು ಅಂತಹ ವಾಸ್ತವಿಕ ಸತ್ಯಗಳನ್ನು ಅಲ್ಲಗಳೆಯುತ್ತಲೇ ಬಂದಿದೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಜಿಲ್ಲೆಗೆ ಮೋದಿ ಆಗಮಿಸಲಿದ್ದ ಹಿನ್ನೆಲೆಯಲ್ಲಿ ‘ಕಾಲ್ಪನಿಕ ವ್ಯಕ್ತಿ’ಗಳಾದ ಉರಿಗೌಡ, ನಂಜೇಗೌಡರ ಹೆಸರಿನ ಮಹಾದ್ವಾರವನ್ನು ತೆರೆದು ನಗೆಪಾಟಲಿಗೀಡಾಯಿತು. ಸ್ಥಳೀಯರು, ವಿರೋಧ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಹಾದ್ವಾರವನ್ನು ತೆರವು ಮಾಡಲಾಯಿತು. ಇಷ್ಟೆಲ್ಲ ಆದರೂ ಬಿಜೆಪಿ ನಾಯಕರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರಿಗೌಡ, ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು” ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ಅಲ್ಲಿ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು. ಯಾವುದೇ ದಾಖಲೆಗಳಿಲ್ಲದೆ, ಸುಳ್ಳಿನ ನಾಟಕ ಕಟ್ಟಿ ಜಾತಿ ರಾಜಕಾರಣ ಮಾಡಲು ಮುಂದಾಗಿರುವುದನ್ನು ಜನರು ಗುರುತಿಸಲಾರಂಭಿಸಿದ್ದಾರೆ.

ಒಬ್ಬ ರಾಜಪ್ರಭುತ್ವ ಕಾಲದ ಮುಸ್ಲಿಂ ಸುಲ್ತಾನನನ್ನು ವರ್ತಮಾನದಲ್ಲಿ ನಿಲ್ಲಿಸಿ ಆತ ಹಿಂದೂ ವಿರೋಧಿಯಾಗಿದ್ದ, ಒಕ್ಕಲಿಗರ, ಚಿತ್ರದುರ್ಗದ ನಾಯಕರ, ಕ್ರಿಶ್ಚಿಯನ್ನರ, ಕೊಡವರ, ಬ್ರಾಹ್ಮಣರ ಹಾಗೂ ಕನ್ನಡದ ವಿರೋಧಿಯಾಗಿದ್ದ. ಟಿಪ್ಪುವನ್ನು ಬೆಂಬಲಿಸುವವರು ಇವರೆಲ್ಲರ ವಿರೋಧಿ ಎಂಬುದನ್ನು ಸುಳ್ಳುಸುಳ್ಳೇ ಸಾಧಿಸುವುದು ಇಲ್ಲಿನ ಉದ್ದೇಶ. ಕೃತಿಯಲ್ಲಿ ಮತ್ತೆಮತ್ತೆ ಪುನರಾವರ್ತಿತವಾಗುವ ಜಾತಿ ಉದ್ದೇಶಿತ ಸಾಲುಗಳೇ ಇದನ್ನು ಮಾರ್ದನಿಸುತ್ತದೆ. ಇದು ಹಿಂದೂ ರಾಷ್ಟ್ರ, ಮುಸ್ಲಿಮರು ದ್ವಿತೀಯ ದರ್ಜೆಯಲ್ಲಿ ಬದುಕಬೇಕು ಎಂಬ ಸಂವಿಧಾನ ವಿರೋಧಿ ಆಶಯವನ್ನು ಅಡ್ಡಂಡ ಕಾರ್ಯಪ್ಪ ಇಲ್ಲಿ ಪ್ರತಿಪಾದಿಸಿದ್ದರು. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದರು ಎಂದು ನಾಟಕದ ಮೂಲಕ ಪ್ರಚಾರ ಮಾಡಿದರು

ಆದರೆ, ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳು ನಿಜವಾಗಿಯೂ ಅಸ್ತಿತ್ವದಲ್ಲಿ ಇಲ್ಲ. ಒಕ್ಕಲಿಗ ಮತದಾರರನ್ನು ಸೆಳೆಯಲು ಬಿಜೆಪಿಯು ಅವರನ್ನು ಸೃಷ್ಟಿಸಿದೆ ಎಂದು ಐತಿಹಾಸ ತಜ್ಞರು ಹೇಳುತ್ತಾರೆ. ನಾಲ್ಕನೇ ಆಂಗ್ಲೋ-ಮೈಸೂರು ಯುದ್ಧದ ಸಮಯದಲ್ಲಿ ಬ್ರಿಟಿಷರೊಂದಿಗೆ ಹೋರಾಡುವಾಗ ಟಿಪ್ಪುವಿನ ಮರಣವಾಗಿದೆ ಎಂದು ಇತಿಹಾಸ ಕೃತಿಗಳು ಹೇಳುತ್ತವೆ.

Previous Post

ಧರ್ಮಗಳ ಮದ್ಯೆ ಒಡಕು ಮೂಡಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಯಾವುದೇ ಹೇಳಿಕೆಗಳನ್ನು SDPI ಪಕ್ಷವು ತೀವ್ರವಾಗಿ ಖಂಡಿಸುತ್ತದೆ: ಅನ್ವರ್ ಸಾದತ್ ಬಜತ್ತೂರು

Next Post

ಭಾರತಕ್ಕೆ ಕೋವಿಡ್‌ ಅಲರ್ಟ್‌, ನಾಲ್ಕು ತಿಂಗಳ ಗರಿಷ್ಠಕ್ಕೇರಿದ ಸೋಂಕಿನ ಪ್ರಮಾಣ!

Next Post
ಭಾರತಕ್ಕೆ ಕೋವಿಡ್‌ ಅಲರ್ಟ್‌, ನಾಲ್ಕು ತಿಂಗಳ ಗರಿಷ್ಠಕ್ಕೇರಿದ ಸೋಂಕಿನ ಪ್ರಮಾಣ!

ಭಾರತಕ್ಕೆ ಕೋವಿಡ್‌ ಅಲರ್ಟ್‌, ನಾಲ್ಕು ತಿಂಗಳ ಗರಿಷ್ಠಕ್ಕೇರಿದ ಸೋಂಕಿನ ಪ್ರಮಾಣ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.