

ದುಬೈ(Dubai) ನಲ್ಲಿ 2019ರಲ್ಲಿ ಸಂಭವಿಸಿದ ಬಸ್(Accident)ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯನಿಗೆ 11 ಕೋಟಿ ರೂ. ಪರಿಹಾರ ನೀಡಲಾಗಿದೆ. 2019 ರಲ್ಲಿ ದುಬೈನಲ್ಲಿ 12 ಭಾರತೀಯರು ಸೇರಿದಂತೆ 17 ಮಂದಿ ಮೃತಪಟ್ಟಿದ್ದರು. ಆ ಬಸ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಭಾರತೀಯ ವ್ಯಕ್ತಿಗೆ 5 ಮಿಲಿಯನ್ ( 11 ಕೋಟಿ ರೂ. ಗೂ ಹೆಚ್ಚು) ಪರಿಹಾರವನ್ನು ನೀಡಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಮುಹಮ್ಮದ್ ಬೇಗ್ ಮಿರ್ಜಾ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಅವರು ಒಮಾನ್ನಿಂದ ಯುಎಇಗೆ ಪ್ರಯಾಣಿಸುತ್ತಿದ್ದ ಬಸ್ ದುಬೈನಲ್ಲಿ ಅಪಘಾತಕ್ಕೀಡಾಗಿತ್ತು.

31 ಪ್ರಯಾಣಿಕರಲ್ಲಿ 17 ಮಂದಿ ಸಾವನ್ನಪ್ಪಿದರು, ಅವರಲ್ಲಿ 12 ಮಂದಿ ಭಾರತೀಯರು ಎಂದು ಖಲೀಜ್ ಟೈಮ್ಸ್ ಪತ್ರಿಕೆ ವರದಿ ಮಾಡಿತ್ತು. ಇಲ್ಲಿನ ಮೆಟ್ರೋ ನಿಲ್ದಾಣದ ಪಾರ್ಕಿಂಗ್ನ ಪ್ರವೇಶ ಬಿಂದುವಿನಲ್ಲಿ ಬಸ್ ಚಾಲಕ ಓವರ್ಹೆಡ್ ಹೈಟ್ ಬ್ಯಾರಿಯರ್ಗೆ ಡಿಕ್ಕಿ ಹೊಡೆದಾಗ ಅಪಘಾತ ಸಂಭವಿಸಿತ್ತು.
ಓಮನ್ ಮೂಲದ ಚಾಲಕನಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು ಮತ್ತು ಸಂತ್ರಸ್ತರ ಕುಟುಂಬಗಳಿಗೆ 3.4 ಮಿಲಿಯನ್ ಹಣವನ್ನು ಪಾವತಿಸಲು ಆದೇಶಿಸಲಾಗಿದೆ

ಮಿರ್ಜಾ ಅವರು ತಮ್ಮ ಸಂಬಂಧಿಕರೊಂದಿಗೆ ರಜಾದಿನಗಳನ್ನು ಕಳೆದ ನಂತರ ಮಸ್ಕತ್ನಿಂದ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದಾಗ ಅವರು ತೀವ್ರವಾಗಿ ಗಾಯಗೊಂಡಿದ್ದರು. ಮಿರ್ಜಾ ಎರಡು ತಿಂಗಳ ಕಾಲ ದುಬೈನ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು 14 ದಿನಗಳ ಕಾಲ ಪ್ರಜ್ಞಾಹೀನರಾಗಿದ್ದರು, ನಂತರ ಪುನರ್ವಸತಿ ಕೇಂದ್ರದಲ್ಲಿ ಹಲವು ತಿಂಗಳುಗಳನ್ನು ಕಳೆದರು.
ಅವರು ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾದ ಭಾಗವಾಗಿ ಅಂತಿಮ ಸೆಮಿಸ್ಟರ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು ಮತ್ತು ಅವರ ಅಧ್ಯಯನವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.
ಅಪಘಾತದಲ್ಲಿ ಮಿರ್ಜಾ ಅವರ ಮೆದುಳಿಗೆ ತೀವ್ರ ಹಾನಿಯಾಗಿದೆ, ಇದರಿಂದಾಗಿ ಅವರು ಸಾಮಾನ್ಯ ಜೀವನಕ್ಕೆ ಮರಳುವ ಸಾಧ್ಯತೆಗಳು ಕಡಿಮೆ ಎಂದು ವೈದ್ಯರು ಹೇಳಿದ್ದಾರೆ.
ತಲೆ, ಕಿವಿಗಳು, ಬಾಯಿ, ಶ್ವಾಸಕೋಶ, ತೋಳುಗಳು ಮತ್ತು ಕಾಲುಗಳ ಗಾಯಗಳನ್ನು ವಿಧಿವಿಜ್ಞಾನ ವೈದ್ಯಕೀಯ ತಜ್ಞರು ಮೌಲ್ಯಮಾಪನ ಮಾಡಿದ್ದಾರೆ.
ಮಿರ್ಜಾ ಅವರ ಮೆದುಳಿಗೆ ಶೇಕಡಾ 50 ರಷ್ಟು ಶಾಶ್ವತ ಹಾನಿಯಾಗಿದೆ ಎಂದು ವರದಿಯನ್ನು ಆಧರಿಸಿ, ಯುಎಇ ಸುಪ್ರೀಂ ಕೋರ್ಟ್ ಪರಿಹಾರವನ್ನು ಪಾವತಿಸುವಂತೆ ವಿಮಾ ಕಂಪನಿಗೆ ಸೂಚಿಸಿದೆ ಎಂದು ವರದಿ ತಿಳಿದುಬಂದಿದೆ.
