Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ದುಬೈ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ: ನಾಲ್ವರು ಭಾರತೀಯರು ಸೇರಿ 16 ಮಂದಿ ದುರ್ಮರಣ

editor tv by editor tv
April 16, 2023
in ವಿದೇಶ, ಸುದ್ದಿ
0
ದುಬೈ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ: ನಾಲ್ವರು ಭಾರತೀಯರು ಸೇರಿ 16 ಮಂದಿ ದುರ್ಮರಣ
1.9k
VIEWS
Share on FacebookShare on TwitterShare on Whatsapp

ಯುನೈಟೆಡ್ ಅರಬ್ ಎಮಿರೇಟ್ಸ್‌ನ ಏಳು ಎಮಿರೇಟ್‌ಗಳಲ್ಲಿ ಒಂದಾದ ದುಬೈ ಸುಮಾರು 3.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ. ಅವರಲ್ಲಿ ಭಾರತೀಯರು ಸೇರಿ ಸುಮಾರು 90 ಪ್ರತಿಶತ ವಿದೇಶಿಯರೇ ಆಗಿದ್ದಾರೆ ಎನ್ನುವುದು ಗಮನಾರ್ಹ

ದುಬೈ (ಏಪ್ರಿಲ್ 16, 2023): ಯುಎಇಯ ಪ್ರಮುಖ ನಗರವಾದ ದುಬೈನ ವಸತಿ ಕಟ್ಟಡವೊಂದರಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ 16 ಜನರು ಮೃತಪಟ್ಟಿದ್ದು,  9 ಜನರು ತೀವ್ರ ಗಾಯಗೊಂಡಿದ್ದಾರೆ. ಇನ್ನು, ಮೃತಪಟ್ಟವರಲ್ಲಿ ನಾಲ್ವರು ಭಾರತೀಯರೂ ಸೇರಿದ್ದಾರೆ ಎಂದು ಮಾಧ್ಯಮ ವರದಿಯೊಂದು ಭಾನುವಾರ ತಿಳಿಸಿದೆ.

ದುಬೈನ ಹಳೆಯ ನೆರೆಹೊರೆಯ ಅಲ್ ರಾಸ್‌ನಲ್ಲಿರುವ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ 12.35 ಕ್ಕೆ ಬೆಂಕಿ ಕಾಣಿಸಿಕೊಂಡ ಬಗ್ಗೆ ದುಬೈ ಸಿವಿಲ್ ಡಿಫೆನ್ಸ್ ಆಪರೇಷನ್ ರೂಮ್‌ಗೆ ಮೊದಲು ಮಾಹಿತಿ ನೀಡಲಾಯ್ತು ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ. ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು ಮತ್ತು ಇತರ ಪ್ರದೇಶಗಳಿಗೆ ಹರಡಲು ಪ್ರಾರಂಭಿಸಿತು ಎಂದು ಸ್ಥಳೀಯ ಪತ್ರಿಕೆಯೊಂದು ಹೇಳಿದೆ. ನಂತರ, ದುಬೈ ಸಿವಿಲ್ ಡಿಫೆನ್ಸ್ ಪ್ರಧಾನ ಕಚೇರಿಯ ತಂಡವು ಬೆಂಕಿ ಕಾಣಿಸಿಕೊಂಡ ಸ್ಥಳಕ್ಕೆ ಆಗಮಿಸಿತು ಮತ್ತು ಕಟ್ಟಡದಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿತು. ಅಲ್ಲದೆ, ಪೋರ್ಟ್ ಸಯೀದ್ ಅಗ್ನಿಶಾಮಕ ಠಾಣೆ ಮತ್ತು ಹಮ್ರಿಯಾ ಅಗ್ನಿಶಾಮಕ ಠಾಣೆಯ ತಂಡಗಳನ್ನು ಸಹ ಕರೆಸಲಾಯಿತು. ಮಧ್ಯಾಹ್ನ 2:42ಕ್ಕೆ (ಸ್ಥಳೀಯ ಕಾಲಮಾನ) ಬೆಂಕಿ ನಂದಿಸಲಾಯಿತು ಎಂದೂ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.  

ಇನ್ನು, ಸಂತ್ರಸ್ತರಲ್ಲಿ ಕೇರಳದ ದಂಪತಿ ಸೇರಿದಂತೆ ನಾಲ್ವರು ಭಾರತೀಯರನ್ನು ಗುರುತಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ. ದುಬೈ ಪೊಲೀಸ್ ಶವಾಗಾರದಲ್ಲಿದ್ದ ಭಾರತೀಯ ಸಮಾಜ ಸೇವಕ ನಾಸಿರ್ ವತನಪ್ಪಲ್ಲಿ ಅವರನ್ನು ಉಲ್ಲೇಖಿಸಿ ಈ ಮಾಹಿತಿ ನೀಡಿದೆ. ಇಲ್ಲಿಯವರೆಗೆ, ಕಟ್ಟಡದಲ್ಲಿ ಕೆಲಸ ಮಾಡಿದ ಕೇರಳದ ದಂಪತಿ ಮತ್ತು ತಮಿಳುನಾಡಿನ ಇಬ್ಬರು ಪುರುಷರು, 3 ಪಾಕಿಸ್ತಾನಿ ಸೋದರ ಸಂಬಂಧಿಗಳು ಮತ್ತು ನೈಜೀರಿಯಾದ ಮಹಿಳೆ ಸೇರಿದಂತೆ 4 ಭಾರತೀಯರನ್ನು ಗುರುತಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ನಾಸಿರ್ ವತನಪ್ಪಲ್ಲಿ ಹೇಳಿದ್ದಾರೆ.
ದುಬೈ ಪೊಲೀಸರು, ದುಬೈನಲ್ಲಿರುವ ಭಾರತೀಯ ದೂತಾವಾಸ, ಇತರ ರಾಜತಾಂತ್ರಿಕ ನಿಯೋಗಗಳು ಮತ್ತು ಮೃತರ ಸ್ನೇಹಿತರು ಹಾಗೂ ಸಂಬಂಧಿಕರೊಂದಿಗೆ ಸಮನ್ವಯ ಸಾಧಿಸುತ್ತಿರುವುದಾಗಿ ವತನಪ್ಪಲ್ಲಿ ಹೇಳಿದ್ದಾರೆ ಎಂದೂ ವರದಿ ತಿಳಿಸಿದೆ.

ಈ ಮಧ್ಯೆ, ಪ್ರಾಥಮಿಕ ತನಿಖೆಗಳು ಕಟ್ಟಡಕ್ಕೆ ಸಾಕಷ್ಟು ಸುರಕ್ಷತಾ ಅವಶ್ಯಕತೆಗಳಿಲ್ಲ ಎಂದು ತೋರಿಸಿದೆ ಎಂದು ದುಬೈ ಸಿವಿಲ್ ಡಿಫೆನ್ಸ್ ವಕ್ತಾರರು ತಿಳಿಸಿದ್ದಾರೆ. ಆದರೂ ಅಗ್ನಿ ಅವಘಡಕ್ಕೆ ಕಾರಣಗಳ ಬಗ್ಗೆ ವಿವರವಾದ ವರದಿಯನ್ನು ನೀಡಲು ಅಧಿಕಾರಿಗಳು ಸಮಗ್ರ ತನಿಖೆ ನಡೆಸುತ್ತಿದ್ದಾರೆ ಎಂದೂ ಮಾಹಿತಿ ನೀಡಲಾಗಿದೆ. 

Previous Post

ಪುಲ್ವಾಮ ದಾಳಿ 2019ರ ಚುನಾವಣೆ ಗೆಲ್ಲಲ್ಲು ಬಿಜೆಪಿ ನಡೆಸಿದ ಪಿತೂರಿಯೇ? ಸಂಜಯ್ ರಾವತ್ ಪ್ರಶ್ನೆ

Next Post

ಪುತ್ತೂರು ಕ್ಷೇತ್ರದಿಂದ ಪಕ್ಷೇತರನಾಗಿ ಸ್ಪರ್ಧಿಸಿ ಮತ್ತೆ ಬಿಜೆಪಿಗೆ ಬೆಂಬಲ ನೀಡುತ್ತೇನೆ: ಅರುಣ್‌ ಪುತ್ತಿಲ

Next Post
ಪುತ್ತೂರು ಕ್ಷೇತ್ರದಿಂದ ಪಕ್ಷೇತರನಾಗಿ ಸ್ಪರ್ಧಿಸಿ ಮತ್ತೆ ಬಿಜೆಪಿಗೆ ಬೆಂಬಲ ನೀಡುತ್ತೇನೆ: ಅರುಣ್‌ ಪುತ್ತಿಲ

ಪುತ್ತೂರು ಕ್ಷೇತ್ರದಿಂದ ಪಕ್ಷೇತರನಾಗಿ ಸ್ಪರ್ಧಿಸಿ ಮತ್ತೆ ಬಿಜೆಪಿಗೆ ಬೆಂಬಲ ನೀಡುತ್ತೇನೆ: ಅರುಣ್‌ ಪುತ್ತಿಲ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.