Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ಬಿಜೆಪಿ ನಾಯಕರಿಗೆ ಶಾಕ್​ ಕೊಟ್ಟ ಮಾಜಿ ಸಿಎಂ, ಜಗದೀಶ್ ಶೆಟ್ಟರ್​ ಗೆಲುವಿಗೆ ಲಿಂಗಾಯತ ಮುಖಂಡರು ಶಪಥ

editor tv by editor tv
April 30, 2023
in ಚುನಾವಣೆ, ಸುದ್ದಿ
0
ಬಿಜೆಪಿ ನಾಯಕರಿಗೆ ಶಾಕ್​ ಕೊಟ್ಟ ಮಾಜಿ ಸಿಎಂ, ಜಗದೀಶ್ ಶೆಟ್ಟರ್​ ಗೆಲುವಿಗೆ ಲಿಂಗಾಯತ ಮುಖಂಡರು ಶಪಥ
1.9k
VIEWS
Share on FacebookShare on TwitterShare on Whatsapp

ಹುಬ್ಬಳ್ಳಿ: ಕಾಂಗ್ರೆಸ್‌  (Congress) ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್‌(Jagadish shettar) ಅವರನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿದೆ. ಇದರಿಂದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದಲ್ಲಿ ಬಿಜೆಪಿ(BJP) ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಗೆಲುವಿಗೆ ರಾಜ್ಯ ಹಾಗೂ ಕೇಂದ್ರ ನಾಯಕರು ಇನ್ನಿಲ್ಲದ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಸಾಲದಕ್ಕೆ ಜಗದೀಶ್​ ಶೆಟ್ಟರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೂಲಕ ಲಿಂಗಾಯತ ಅಸ್ತ್ರ ಪ್ರಯೋಗಿಸಿದೆ.​ ಅದರಂತೆ ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತ ಮುಖಂಡರ ಸಭೆ ನಡೆಸಿದ ಬೆನ್ನಲ್ಲೇ ಇದೀಗ ಶೆಟ್ಟರ್‌ ಕೂಡ ವೀರಶೈವ ಲಿಂಗಾಯತ ಮುಖಂಡರ ಸಭೆ ನಡೆಸಿದ್ದು, ಶೆಟ್ಟರ್‌ ಗೆಲುವಿಗೆ ಶ್ರಮಿಸುವುದಾಗಿ ಸಭೆಯಲ್ಲಿದ್ದ ಎಲ್ಲರೂ ಶಪಥ ಕೂಡ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರವನ್ನು ಮತ್ತಷ್ಟು ರಂಗೇರುವಂತೆ ಮಾಡಿದೆ. ಅಲ್ಲದೇ ಜಗದೀಶ್ ಶೆಟ್ಟರ್​ ಅವರು ಬಿಜೆಪಿ ನಾಯಕರಿಗೆ ಚೆಕ್ ಮೆಟ್ ಕೊಟ್ಟಿದ್ದಾರೆ.

ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವೀರಶೈವ ಲಿಂಗಾಯತ ಮುಖಂಡರ ಸಭೆ ನಡೆಸಿದ ಜಗದೀಶ್ ಶೆಟ್ಟರ್‌, ತಮಗೆ ಬಿಜೆಪಿಯಲ್ಲಿ ಆದ ಅಪಮಾನ ಹಾಗೂ ಸ್ವಾಭಿಮಾನಕ್ಕೆ ಧಕ್ಕೆಯಾಗಿರುವುದರಿಂದ ಆ ಪಕ್ಷ ತೊರೆದಿದ್ದೇನೆ. ಇದೀಗ ಕಾಂಗ್ರೆಸ್‌ ಸೇರಿದ್ದೇನೆ. ಈ ಹಿಂದೆಯೂ ನೀವು ನನಗೆ ಬೆಂಬಲಿಸಿದ್ದೀರಿ. ಈಗಲೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಬಳಿಕ ಸಭೆಯಲ್ಲಿದ್ದವರೆಲ್ಲರೂ ಕೈ ಎತ್ತುವ ಮೂಲಕ ಜಗದೀಶ್​ ಶೆಟ್ಟರ್‌ಗೆ ಬೆಂಬಲ ಸೂಚಿಸಿದರು.

ಈ ವೇಳೆ ಬಂಗಾರೇಶ ಹಿರೇಮಠ ಮಾತನಾಡಿ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಶೆಟ್ಟರ್‌ ಮತ್ತೆ ಅತ್ಯುನ್ನತ ಸ್ಥಾನ ಅಲಂಕರಿಸುವ ಅವಕಾಶವಿದೆ. ಕಾರಣ ನಾವೆಲ್ಲರೂ ನಾವೇ ಅಭ್ಯರ್ಥಿ ಎಂದು ಕೆಲಸ ಮಾಡಿ ಹೆಚ್ಚಿನ ಅಂತರದಲ್ಲಿ ಗೆಲ್ಲಿಸೋಣ. ಅಲ್ಲಿವರೆಗೂ ವಿಶ್ರಮಿಸುವುದು ಬೇಡ ಎಂದು ಮನವಿ ಮಾಡಿದರು.

ಇನ್ನು ರಾಜಶೇಖರ ಮೆಣಸಿನಕಾಯಿ ಮಾತನಾಡಿ, 1994ರ ಚುನಾವಣೆಯಲ್ಲಿನ ಒಗ್ಗಟ್ಟು ಈ ಚುನಾವಣೆಯಲ್ಲಿ ಕಂಡು ಬರುತ್ತಿದೆ. ಬಿಜೆಪಿಯವರ ಪೊಳ್ಳು ಬೆದರಿಕೆಗಳಿಗೆ ಭಯ ಪಡದೆ ನಾವೆಲ್ಲರೂ ಶೆಟ್ಟರ್‌ ಗೆಲುವಿಗೆ ಎಲ್ಲರೂ ಶ್ರಮಿಸೋಣ ಎಂದರು.

ಎಲ್ಲರ ಭಾಷಣದ ಬಳಿ ಯಾರೂ ನಮ್ಮ ಜೊತೆ ಇರ್ತಾರೆ ಅವರನ್ನು ಬೆಂಬಲಿಸೋಣ. ನಮ್ಮ ನೋವಿಗೆ ಸ್ಪಂದಿಸುವವರಿಗೆ ಮತ ಹಾಕೋಣ ಎಂದು ಸಭೆಯಲ್ಲಿದ್ದ ಸುಮಾರು 200 ಕ್ಕೂ ಹೆಚ್ಚು ವೀರಶೈವ ಲಿಂಗಾಯತ ಮುಖಂಡರು ಕೈ ಎತ್ತಿ ಗೆಲ್ಲಿಸುವ ಶಪಥ ಮಾಡಿದರು. ಇದರೊಂದಿಗೆ ಜಗದೀಶ್​ ಶೆಟ್ಟರ್ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ.

ಈ ವೇಳೆ ಮಾಜಿ ಸಂಸದ ಐ.ಜಿ.ಸನದಿ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅನಿಲಕುಮಾರ ಪಾಟೀಲ, ನೀಲಕಂಠ ಅಸೂಟಿ, ಗಂಗಾಧರ ದೊಡ್ಡವಾಡ, ಮಲ್ಲಿಕಾರ್ಜುನ ಸಾವಕಾರ, ಬಾಪೂಗೌಡ ಪಾಟೀಲ, ಶಿವಪುತ್ರಪ್ಪ ಕಮತರ , ಸದಾಶಿವಯ್ಯ ಹಿರೇಮಠ , ಕಲ್ಲಪ್ಪ ಯಲಿವಾಳ , ಆರ್‌.ಕೆ.ಪಾಟೀಲ್‌, ಎಂ.ಎಸ್‌.ಪಾಟೀಲ್‌, ಸುನೀಲ್‌ ಮಠಪತಿ, ಸರೋಜಾ ಹೂಗಾರ, ಸುನಿತಾ ಹುರಕಡ್ಲಿ ಸೇರಿದಂತೆ ಮತ್ತಿತರರು ಇದ್ದರು.

ಯಡಿಯೂರಪ್ಪ ಹೇಳಿದ್ದೇನು?

ಯಾವುದೇ ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಯಾವ ಕಾರಣಕ್ಕೂ ಶೆಟ್ಟರ್ ಇಲ್ಲಿಂದ ಗೆಲ್ಲಲು ಸಾಧ್ಯವಿಲ್ಲ. ನಾಳೆ ರಾಲಿ ಏರ್ಪಡಿಸಲಾಗಿದೆ. ಹತ್ತಾರು ಸಾವಿರ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ‌ ಮಾಡಿ. ರಾಜಕೀಯ ದೊಂಬರಾಟ ಮಾಡುವವರಿಗೆ ತಕ್ಕ ಪಾಠ ಕಲಿಸಬೇಕು. ಇವತ್ತಿನಿಂದ ಜಗದೀಶ್ ಶೆಟ್ಟರ್ ಹೆಸರನ್ನು ಹೇಳಲ್ಲ. ನಂಬಿಕೆ‌ ದ್ರೋಹಿ, ವಿಶ್ವಾಸ ದ್ರೋಹಿ ಪಕ್ಷಾಂತರಿಗಳಿಗೆ ಕ್ಷಮಿಸುವುದಿಲ್ಲ ಎನ್ನುವ ಸುದ್ದಿ ಎಲ್ಲೆಡೆ ಹೋಗಬೇಕು. ಪ್ರಹ್ಲಾದ್ ಜೋಶಿ‌ ಮತ್ತು ಇತರೆ ನಾಯಕರು ಕೆಲಸ ಬದಿಗೊತ್ತಿ ಎಲ್ಲ‌ ಮುಖಂಡರು‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ. ಜಗದೀಶ್ ಶೆಟ್ಟರ್ ಕಂಪನಿಗೆ ಪಾಠ ಕಲಿಸಬೇಕು. ಶೆಟ್ಟರ್ ಸೋಲಿಸುವುದೇ ನಮ್ಮ ಗುರಿಯಾಗಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ವೀರಶೈವ ಲಿಂಗಾಯತರ ಸಭೆಯಲ್ಲಿ ಹೇಳಿದ್ದರು.

Previous Post

ಬಿಜೆಪಿಗರದ್ದು ಕೇವಲ ಪ್ರಚಾರಕ್ಕೆ ಸೀಮಿತವಾಗಿದ್ದ ಸರಕಾರವಾಗಿತ್ತು : ರಮಾನಾಥ ರೈ

Next Post

ಮಹಿಳೆಯ ಲಗೇಜ್‌ನಲ್ಲಿತ್ತು ವಿವಿಧ ಜಾತಿಯ 22 ಹಾವುಗಳು

Next Post
ಮಹಿಳೆಯ ಲಗೇಜ್‌ನಲ್ಲಿತ್ತು ವಿವಿಧ ಜಾತಿಯ 22 ಹಾವುಗಳು

ಮಹಿಳೆಯ ಲಗೇಜ್‌ನಲ್ಲಿತ್ತು ವಿವಿಧ ಜಾತಿಯ 22 ಹಾವುಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.