

ಭದ್ರತಾ ಸಿಬ್ಬಂದಿಯ ನಿಯೋಜನೆಯಿಂದಾಗಿ ಜನರು ತಮ್ಮ ಮನೆಗಳಿಂದ ಹೊರಬರುತ್ತಿಲ್ಲ. ಸಂಜೆ 7 ಗಂಟೆ ಸುಮಾರಿಗೆ, ಪಟ್ಟಣದಲ್ಲಿ ಸಿಕ್ಕಿಬಿದ್ದಿರುವ ಮೈತಿ ಜನರನ್ನು ಭದ್ರತಾ ಸಿಬ್ಬಂದಿಯಿಂದ ಸ್ಥಳಾಂತರಿಸಲಾಗುವುದು ಎಂಬ ಮಾಹಿತಿ ನಮಗೆ ಸಿಕ್ಕಿತು. ಪಟ್ಟಣದ ಮುಖ್ಯರಸ್ತೆಯಾದ ಟಿಡಿಂ ರಸ್ತೆಯಲ್ಲಿ ಜಮಾಯಿಸಿದ ಜನರು ತೆರವು ವಿರೋಧಿಸಿ ರಸ್ತೆ ತಡೆ ನಡೆಸಿದರು
ಮಣಿಪುರದ (Manipur) ಚುರಾಚಂದ್ಪುರದಲ್ಲಿ ಭದ್ರತಾ ಪಡೆಗಳು ಮೈತಿಗಳನ್ನು (Meiteis )ಸ್ಥಳಾಂತರಿಸುವ ಕಾರ್ಯಾಚರಣೆ ನಡೆಸುತ್ತಿದ್ದಾಗ ನಾಲ್ವರು ಗುಂಡೇಟಿಗೆ ಬಲಿಯಾಗಿದ್ದಾರೆ. ಏತನ್ಮಧ್ಯೆ ಇಂಫಾಲ್ನಲ್ಲಿ (Imphal) ಲೆಟ್ಮಿಂಥಾಂಗ್ ಹಾಕಿಪ್ ಎಂದು ಗುರುತಿಸಲಾದ ತೆರಿಗೆ ಸಹಾಯಕನ ಹತ್ಯೆ ನಡೆದಿದೆ ಎಂದು ಭಾರತೀಯ ಕಂದಾಯ ಸೇವೆ (IRS) ಅಸೋಸಿಯೇಷನ್ ಎಂದು ಹೇಳಿದರು.ಯಾವುದೇ ಕಾರಣ ನೀಡಿ ಅಥವಾ ಸಿದ್ಧಾಂತದ ಹೆಸರು ಹೇಳು ಕರ್ತವ್ಯದಲ್ಲಿದ್ದ ಅಮಾಯಕ ಸಾರ್ವಜನಿಕ ಸೇವಕನ ಹತ್ಯೆಯನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಐಆರ್ಎಸ್ ಟ್ವೀಟ್ ಮಾಡಿದೆ. ರಾಜ್ಯದ ಬಹುಸಂಖ್ಯಾತ ಮೈತಿ ಸಮುದಾಯ ಮತ್ತು ಕುಕಿ ಬುಡಕಟ್ಟು ಜನಾಂಗದ ನಡುವಿನ ಬುಧವಾರ ಕಾದಾಟ ನಡೆದಿದ್ದು, ಅದರ ಬೆನ್ನಲ್ಲೇ ಚುರಾಚಂದ್ಪುರದಲ್ಲಿ ಈ ಗುಂಡಿನ ದಾಳಿ ನಡೆದಿದೆ. ರಾಜ್ಯದ ರಾಜಧಾನಿ ಇಂಫಾಲ್ ಹಿಂಸಾಚಾರದಲ್ಲಿ ಕುಕಿಗಳು ಗುರಿಯಾದರೆ ಗುಡ್ಡಗಾಡು ಬುಡಕಟ್ಟು ಜನಾಂಗದವರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಮೈತಿಗಳೇ ಟಾರ್ಗೆಟ್.

ಬುಡಕಟ್ಟು ಜನಾಂಗದವರು ಮೈತಿಗಳನ್ನು ಪ್ರದೇಶದಿಂದ ಸ್ಥಳಾಂತರಿಸುವಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಗುಂಡಿನ ದಾಳಿ ನಡೆದಿದೆ.ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಪಟ್ಟಣದಲ್ಲಿ ಗಲಭೆ ಆರಂಭವಾಗಿದೆ ಎಂದು ಚುರಾಚಂದಪುರದ ಸಂಶೋಧಕ ಮತ್ತು ನಿವಾಸಿ ಮುವಾನ್ ಹನ್ಸಿಂಗ್ (24) ದಿ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಯ ನಿಯೋಜನೆಯಿಂದಾಗಿ ಜನರು ತಮ್ಮ ಮನೆಗಳಿಂದ ಹೊರಬರುತ್ತಿಲ್ಲ. ಸಂಜೆ 7 ಗಂಟೆ ಸುಮಾರಿಗೆ, ಪಟ್ಟಣದಲ್ಲಿ ಸಿಕ್ಕಿಬಿದ್ದಿರುವ ಮೈತಿ ಜನರನ್ನು ಭದ್ರತಾ ಸಿಬ್ಬಂದಿಯಿಂದ ಸ್ಥಳಾಂತರಿಸಲಾಗುವುದು ಎಂಬ ಮಾಹಿತಿ ನಮಗೆ ಸಿಕ್ಕಿತು. ಪಟ್ಟಣದ ಮುಖ್ಯರಸ್ತೆಯಾದ ಟಿಡಿಂ ರಸ್ತೆಯಲ್ಲಿ ಜಮಾಯಿಸಿದ ಜನರು ತೆರವು ವಿರೋಧಿಸಿ ರಸ್ತೆ ತಡೆ ನಡೆಸಿದರು. ನಾವು ಮಹಿಳೆಯರನ್ನು ಬ್ಯಾರಿಕೇಡ್ನ ಮುಂಭಾಗದಲ್ಲಿ ನಿಲ್ಲಿಸಿದ್ದೆವು. ಯಾಕೆಂದರೆ ಅವರ ಮೇಲೆ ಗುಂಡು ಹಾರಿಸುವುದಿಲ್ಲ ಎಂದು ನಾವು ಭಾವಿಸಿದ್ದೆವು. ಆದರೆ ಭದ್ರತಾ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಮುವಾನ್ ಆರೋಪಿಸಿದ್ದಾರೆ

80-200 ಜನರ ಸಭೆ ನಡೆದಿದೆ. ಇದರಲ್ಲಿ ನಾಲ್ಕು ಜನರು ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಂಫಾಲ್ನಲ್ಲಿರುವ ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ಹೇಳಿದರು. ರಾಜ್ಯದ ವಿವಿಧ ಭಾಗಗಳಿಂದ ಜನರನ್ನು ಸ್ಥಳಾಂತರಿಸುವುದು ನಿರಂತರವಾಗಿ ನಡೆಯುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ರಸ್ತೆಗಳ ತಡೆ ಸಾಮಾನ್ಯವಾಗಿದೆ ಎಂದಿದ್ದಾರೆ ಅವರು. ಅದೇ ವೇಳೆ ಕೇಂದ್ರ ಭದ್ರತಾ ಪಡೆಗಳ ಹಿರಿಯ ಅಧಿಕಾರಿಯೊಬ್ಬರು ನಾಲ್ವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು. ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮೂವರು ಸಾವಿಗೀಡಾಗಿದ್ದಾರೆ ಎಂದಿದ್ದಾರೆ.