Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Lok Sabha Elections 2024: 12ಕ್ಕೂ ಹೆಚ್ಚು ಬಿಜೆಪಿ ಸಂಸದರಿಗೆ ಲೋಕಸಭೆ ಚುನಾವಣೆ ಟಿಕೆಟಿಲ್ಲ?

editor tv by editor tv
June 2, 2023
in ರಾಜ್ಯ
0
Lok Sabha Elections 2024: 12ಕ್ಕೂ ಹೆಚ್ಚು ಬಿಜೆಪಿ ಸಂಸದರಿಗೆ ಲೋಕಸಭೆ ಚುನಾವಣೆ ಟಿಕೆಟಿಲ್ಲ?
1.9k
VIEWS
Share on FacebookShare on TwitterShare on Whatsapp

ಕೆಲವರಿಗೆ ವಯಸ್ಸು ಹಾಗೂ ಅನಾರೋಗ್ಯದ ಕಾರಣದಿಂದ ಟಿಕೆಟ್‌ ತಪ್ಪಲಿದ್ದರೆ, ಇನ್ನು ಕೆಲವರಿಗೆ ಪಕ್ಷದ ಸಂಘಟನೆಯಲ್ಲಿನ ನಿಷ್ಕ್ರೀಯತೆ ಮತ್ತು ನಿರಾಸಕ್ತಿ ಕಾರಣಕ್ಕಾಗಿ ಟಿಕೆಟ್‌ ನೀಡದೇ ಇರುವ ಸಾಧ್ಯತೆ ಇದೆ. ಜತೆಗೆ ಕೆಲವರು ಸತತವಾಗಿ ಮೂರ್ನಾಲ್ಕು ಬಾರಿ ಗೆದ್ದಿರುವುದರಿಂದ ಆಡಳಿತ ವಿರೋಧಿ ಅಲೆ ಹೊಡೆತ ನೀಡಬಹುದು ಎಂಬ ಆತಂಕದಿಂದ ಅವರಿಗೆ ಟಿಕೆಟ್‌ ನೀಡಬಾರದು ಎಂಬ ಉದ್ದೇಶ.

ಬೆಂಗಳೂರು(ಜೂ.02):  ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಹಾಲಿ ಇರುವ 25 ಸಂಸದರ ಪೈಕಿ 12ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್‌ ತಪ್ಪುವ ಸಾಧ್ಯತೆಯಿದೆ. ಕೆಲವರಿಗೆ ವಯಸ್ಸು ಹಾಗೂ ಅನಾರೋಗ್ಯದ ಕಾರಣದಿಂದ ಟಿಕೆಟ್‌ ತಪ್ಪಲಿದ್ದರೆ, ಇನ್ನು ಕೆಲವರಿಗೆ ಪಕ್ಷದ ಸಂಘಟನೆಯಲ್ಲಿನ ನಿಷ್ಕ್ರೀಯತೆ ಮತ್ತು ನಿರಾಸಕ್ತಿ ಕಾರಣಕ್ಕಾಗಿ ಟಿಕೆಟ್‌ ನೀಡದೇ ಇರುವ ಸಾಧ್ಯತೆ ಇದೆ. ಜತೆಗೆ ಕೆಲವರು ಸತತವಾಗಿ ಮೂರ್ನಾಲ್ಕು ಬಾರಿ ಗೆದ್ದಿರುವುದರಿಂದ ಆಡಳಿತ ವಿರೋಧಿ ಅಲೆ ಹೊಡೆತ ನೀಡಬಹುದು ಎಂಬ ಆತಂಕದಿಂದ ಅವರಿಗೆ ಟಿಕೆಟ್‌ ನೀಡಬಾರದು ಎಂಬ ಉದ್ದೇಶವಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಇದೇ ವೇಳೆ ಈ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಪ್ರಬಲ ಪರ್ಯಾಯ ಅಭ್ಯರ್ಥಿಗಳಿಗಾಗಿ ಶೋಧವೂ ಆರಂಭಗೊಂಡಿದ್ದು, ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಮಾಜಿ ಸಚಿವರ ಹೆಸರೂಗಳು ಪ್ರಮುಖವಾಗಿ ಪ್ರಸ್ತಾಪವಾಗುತ್ತಿವೆ. ಹಲವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿಯನ್ನೂ ತೋರಿದ್ದಾರೆ ಎನ್ನಲಾಗಿದೆ. ಆದರೂ ಕೆಲವು ಕ್ಷೇತ್ರಗಳಲ್ಲಿ ಈಗಿರುವ ಸಂಸದರನ್ನು ಹೊರತುಪಡಿಸಿ ಪ್ರಬಲ ಪರ್ಯಾಯ ಅಭ್ಯರ್ಥಿಗಳು ಸಿಗುವುದು ಬಿಜೆಪಿಗೆ ಅಷ್ಟು ಸುಲಭವಾಗಿಲ್ಲ.

ತುಮಕೂರು ಕ್ಷೇತ್ರದ ಸಂಸದ ಜಿ.ಎಸ್‌.ಬಸವರಾಜು, ಚಾಮರಾಜನಗರ ಕ್ಷೇತ್ರದ ವಿ.ಶ್ರೀನಿವಾಸ್‌ ಪ್ರಸಾದ್‌, ಚಿಕ್ಕಬಳ್ಳಾಪುರ ಕ್ಷೇತ್ರದ ಬಿ.ಎನ್‌.ಬಚ್ಚೇಗೌಡ, ಉತ್ತರ ಕನ್ನಡ ಕ್ಷೇತ್ರದ ಅನಂತಕುಮಾರ್‌ ಹೆಗಡೆ, ಬೆಂಗಳೂರು ಉತ್ತರ ಕ್ಷೇತ್ರದ ಡಿ.ವಿ.ಸದಾನಂದಗೌಡ, ವಿಜಯಪುರ ಕ್ಷೇತ್ರದ ರಮೇಶ್‌ ಜಿಗಜಿಣಗಿ, ಕೊಪ್ಪಳ ಕ್ಷೇತ್ರದ ಕರಡಿ ಸಂಗಣ್ಣ, ಬಳ್ಳಾರಿ ಕ್ಷೇತ್ರದ ವೈ.ದೇವೇಂದ್ರಪ್ಪ, ಬೆಳಗಾವಿ ಕ್ಷೇತ್ರದ ಮಂಗಳಾ ಅಂಗಡಿ, ದಕ್ಷಿಣ ಕನ್ನಡ ಕ್ಷೇತ್ರದ ನಳಿನ್‌ಕುಮಾರ್‌ ಕಟೀಲ್‌, ಬಾಗಲಕೋಟೆ ಕ್ಷೇತ್ರದ ಪಿ.ಸಿ.ಗದ್ದಿಗೌಡರ್‌, ಹಾವೇರಿ ಕ್ಷೇತ್ರದ ಶಿವಕುಮಾರ್‌ ಉದಾಸಿ ಹಾಗೂ ದಾವಣಗೆರೆ ಕ್ಷೇತ್ರದ ಜಿ.ಎಂ.ಸಿದ್ದೇಶ್ವರ ಅವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ತಪ್ಪಬಹುದು ಎಂಬ ಮಾತು ಬಿಜೆಪಿ ಪಾಳೆಯದಿಂದಲೇ ಕೇಳಿಬರುತ್ತಿದೆ.

ಮಾಜಿ ಮುಖ್ಯಮಂತ್ರಿಯೂ ಆಗಿರುವ ಸದಾನಂದಗೌಡ ಅವರು ಎಲ್ಲ ಸ್ಥಾನಮಾನ ಅನುಭವಿಸಿರುವುದರಿಂದ ಟಿಕೆಟ್‌ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ರಮೇಶ್‌ ಜಿಗಜಿಣಗಿ, ದೇವೇಂದ್ರಪ್ಪ, ಪಿ.ಸಿ.ಗದ್ದಿಗೌಡರ್‌ ಅವರು ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿಲ್ಲ ಎಂಬ ಆರೋಪವಿದೆ. ಕರಡಿ ಸಂಗಣ್ಣ ಅವರು ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲೂ ತಮ್ಮ ಕುಟುಂಬದ ಸದಸ್ಯರಿಗೆ ಟಿಕೆಟ್‌ ಪಡೆಯಲು ಪಕ್ಷದ ನಾಯಕತ್ವಕ್ಕೆ ಪರೋಕ್ಷವಾಗಿ ಬೆದರಿಕೆ ತಂತ್ರ ಅನುಸರಿಸಿದರು ಎಂಬ ಕಾರಣಕ್ಕೆ ಅವರಿಗೆ ವಿರೋಧ ವ್ಯಕ್ತವಾಗಿದೆ.

ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್‌ಕುಮಾರ್‌ ಕಟೀಲ್‌ ಅವರು ಸತತ ಮೂರು ಬಾರಿ ಆಯ್ಕೆಯಾಗಿದ್ದು, ಕ್ಷೇತ್ರದಲ್ಲಿ ವಿರೋಧಿ ಅಲೆ ಬೀಸುತ್ತಿರುವುದರಿಂದ ಈ ಬಾರಿ ಗೆಲ್ಲುವುದು ಕಷ್ಟಎನ್ನಲಾಗುತ್ತಿದೆ. ಸಿದ್ದೇಶ್ವರ ಅವರೂ ನಾಲ್ಕು ಬಾರಿ ಆಯ್ಕೆಯಾಗಿರುವುದರಿಂದ ಮತ್ತು ವಯಸ್ಸಿನ ಕಾರಣದಿಂದ ಹೊಸಬರಿಗೆ ಅವಕಾಶ ಕೊಡಬೇಕು ಎಂಬ ವಾದ ಪ್ರಸ್ತಾಪವಾಗಿದೆ.

ಸೋತ ಮಾಜಿ ಸಚಿವರ ಹೆಸರು ಪ್ರಸ್ತಾಪ:

ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಹಲವು ಮಾಜಿ ಸಚಿವರ ಹೆಸರುಗಳು ಮುಂಬರುವ ಲೋಕಸಭಾ ಚುನಾವಣೆಗೆ ಪ್ರಸ್ತಾಪವಾಗಿವೆ

ವಿಜಯಪುರ ಕ್ಷೇತ್ರದಿಂದ ಗೋವಿಂದ ಕಾರಜೋಳ ಅಥವಾ ಅರವಿಂದ್‌ ಲಿಂಬಾವಳಿ, ತುಮಕೂರು ಕ್ಷೇತ್ರದಿಂದ ವಿ.ಸೋಮಣ್ಣ, ಬೆಂಗಳೂರು ಉತ್ತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಂದ ಡಾ.ಕೆ.ಸುಧಾಕರ್‌, ಹಾವೇರಿ ಕ್ಷೇತ್ರದಿಂದ ಬಿ.ಸಿ.ಪಾಟೀಲ್‌, ಬಳ್ಳಾರಿ ಕ್ಷೇತ್ರದಿಂದ ಬಿ.ಶ್ರೀರಾಮುಲು, ಉತ್ತರ ಕನ್ನಡ ಕ್ಷೇತ್ರದಿಂದ ವಿಶ್ವೇಶ್ವರ ಹೆಗಡೆ ಕಾಗೇರಿ, ಕೊಪ್ಪಳ ಕ್ಷೇತ್ರದಿಂದ ಆನಂದ್‌ ಸಿಂಗ್‌ ಹಾಗೂ ಬಾಗಲಕೋಟೆ ಕ್ಷೇತ್ರದಿಂದ ಮುರುಗೇಶ್‌ ನಿರಾಣಿ ಅವರ ಹೆಸರುಗಳು ಪ್ರಸ್ತಾಪವಾಗಿದ್ದು, ಈ ಪೈಕಿ ಕೆಲವರು ಆಸಕ್ತಿಯನ್ನೂ ತೋರಿದ್ದಾರೆ ಎನ್ನಲಾಗಿದೆ.

ಈ ಸಂಸದರಿಗೆ ಟಿಕೆಟ್‌ ಸಿಗೋದು ಅನುಮಾನ

1.ತುಮಕೂರು – ಜಿ.ಎಸ್‌.ಬಸವರಾಜು
2.ಚಾಮರಾಜನಗರ (ಎಸ್‌ಸಿ)- ವಿ.ಶ್ರೀನಿವಾಸ್‌ ಪ್ರಸಾದ್‌
3.ಚಿಕ್ಕಬಳ್ಳಾಪುರ – ಬಿ.ಎನ್‌.ಬಚ್ಚೇಗೌಡ
4.ಉತ್ತರ ಕನ್ನಡ – ಅನಂತಕುಮಾರ್‌ ಹೆಗಡೆ
5.ಬೆಂಗಳೂರು ಉತ್ತರ – ಡಿ.ವಿ.ಸದಾನಂದಗೌಡ
6.ವಿಜಯಪುರ (ಎಸ್‌ಸಿ)- ರಮೇಶ್‌ ಜಿಗಜಿಣಗಿ
7.ಕೊಪ್ಪಳ – ಕರಡಿ ಸಂಗಣ್ಣ
8.ಬಳ್ಳಾರಿ (ಎಸ್‌ಟಿ) – ವೈ.ದೇವೇಂದ್ರಪ್ಪ
9.ಬೆಳಗಾವಿ – ಮಂಗಳಾ ಅಂಗಡಿ
10.ದಕ್ಷಿಣ ಕನ್ನಡ – ನಳಿನ್‌ಕುಮಾರ್‌ ಕಟೀಲ್‌
11.ಬಾಗಲಕೋಟೆ – ಪಿ.ಸಿ.ಗದ್ದಿಗೌಡರ್‌
12.ಹಾವೇರಿ – ಶಿವಕುಮಾರ್‌ ಉದಾಸಿ
13.ದಾವಣಗೆರೆ – ಜಿ.ಎಂ.ಸಿದ್ದೇಶ್ವರ

ಕ್ಷೇತ್ರಗಳು ಮತ್ತು ಸ್ಪರ್ಧೆಗೆ ಪ್ರಸ್ತಾಪವಾದ ಮಾಜಿ ಸಚಿವರು

1.ವಿಜಯಪುರ- ಗೋವಿಂದ ಕಾರಜೋಳ/ ಅರವಿಂದ್‌ ಲಿಂಬಾವಳಿ
2.ತುಮಕೂರು- ವಿ.ಸೋಮಣ್ಣ
3.ಬೆಂಗಳೂರು ಉತ್ತರ- ಡಾ.ಕೆ.ಸುಧಾಕರ್‌
4.ಚಿಕ್ಕಬಳ್ಳಾಪುರ- ಡಾ.ಕೆ.ಸುಧಾಕರ್‌
5.ಹಾವೇರಿ- ಬಿ.ಸಿ.ಪಾಟೀಲ್‌
6.ಬಳ್ಳಾರಿ- ಬಿ.ಶ್ರೀರಾಮುಲು
7.ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ
8.ಕೊಪ್ಪಳ- ಆನಂದ್‌ ಸಿಂಗ್‌
9.ಬಾಗಲಕೋಟೆ- ಮುರುಗೇಶ್‌ ನಿರಾಣಿ

Previous Post

ಲಿಂಗಸೂಗೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಸ್ಟೇಟಸ್, ಆರ್‌ಎಸ್‌ಎಸ್‌ ಕಾರ್ಯಕರ್ತ ಅರೆಸ್ಟ್

Next Post

ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!

Next Post
ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!

ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.