Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಬಾಬಾ ರಾಮ್ ದೇವ್ ಪತಂಜಲಿ ಫುಡ್ಸ್ ನಿಂದ ಫಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರೈತ, ದಲಿತ, ಕಾರ್ಮಿಕ, ಜನಪರ ಸಂಘಟನೆಗಳು, ಎಡಪಕ್ಷಗಳ ಜಂಟಿ ನಿಯೋಗದಿಂದ ಸ್ಥಳ ಪರಿಶೀಲನೆ

editor tv by editor tv
June 7, 2023
in ಕರಾವಳಿ
0
ಬಾಬಾ ರಾಮ್ ದೇವ್ ಪತಂಜಲಿ ಫುಡ್ಸ್ ನಿಂದ ಫಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರೈತ, ದಲಿತ, ಕಾರ್ಮಿಕ, ಜನಪರ ಸಂಘಟನೆಗಳು, ಎಡಪಕ್ಷಗಳ ಜಂಟಿ ನಿಯೋಗದಿಂದ ಸ್ಥಳ ಪರಿಶೀಲನೆ
1.9k
VIEWS
Share on FacebookShare on TwitterShare on Whatsapp

ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ಮಾಲಕತ್ವದ ಪತಂಜಲಿ ಫುಡ್ಸ್ (ರುಚಿ ಸೋಯಾ) ತುಳುನಾಡಿನ ಜೀವನದಿ ಫಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ ಹರಿಸುವ ಕೊಳವೆಗಳು ಪತ್ತೆಯಾದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ರೈತ, ದಲಿತ, ಕಾರ್ಮಿಕ, ಜನಪರ ಸಂಘಟನೆಗಳು ಹಾಗೂ ಎಡಪಕ್ಷಗಳ ಜಂಟಿ ನಿಯೋಗ ಇಂದು ಭೇಟಿ ಮಾಡಿ ಆಗಿರುವ ಹಾನಿಯನ್ನು ವೀಕ್ಷಿಸಿತು.


ನಿಯೋಗವು ಮಾಲಿನ್ಯ ಪತ್ತೆಯಾದ ಪತಂಜಲಿ ಫುಡ್ಸ್ ಮುಂಭಾಗ ತಲುಪಿದಾಗ ಕಂಪೆನಿಯ ಕಾರ್ಮಿಕರು ಜೆಸಿಬಿ ಹಾಗೂ ಟಿಪ್ಪರ್ ಬಳಸಿ ತೋಕೂರು ನಾಲದಲ್ಲಿ ಹರಿಯದೆ ಶೇಖರಣೆ ಗೊಂಡಿರುವ, ದಶಕಗಳಿಂದ ಮಣ್ಣಿನ ಆಳಕ್ಕೆ ಇಳಿದು ಜಿಡ್ಡು ಗಟ್ಟಿರುವ ತ್ಯಾಜ್ಯವನ್ನು ತೆರವುಗೊಳಿಸುವ ಕೆಲಸದಲ್ಲಿ ತೊಡಗಿದ್ದರು. ಸತತ ಆರು ದಿನಗಳಿಂದ ತೆರವು ಕಾರ್ಯಾಚರಣೆ ನಡೆಯುತ್ತಿದ್ದರೂ ಮಾಲಿನ್ಯ ಕಣ್ಣಿಗೆ ರಾಚುವಂತೆ ಎದ್ದು ಕಾಣುತ್ತಿತ್ತು.
ದೊಡ್ಡ ನಿಯೋಗವನ್ನು ಕಂಡು ವಿಚಲಿತರಾದ ಕಂಪೆನಿಯ ಅಧಿಕಾರಿಗಳು ಮುಖಂಡರೊಂದಿಗೆ ಮಾತಾಡಿ ತಿಪ್ಪೆ ಸಾರಿಸಲು ಯತ್ನಿಸಿದರು. ತಿಂಗಳ ಹಿಂದೆ ಅಡುಗೆ ತೈಲದ ಮೂಲ ದ್ರವ್ಯಹೊಂದಿದ್ದ ಟ್ಯಾಂಕರ್ ಒಂದು ಕಂಪೆನಿಯ ಒಳಗಡೆ ಮಗುಚಿ ಬಿದ್ದು 30 ಟನ್ ದ್ರವ್ಯ ತೋಕೂರು ಹಳ್ಳಕ್ಕೆ ಹರಿದಿದೆ ಎಂಬುದು ಕಂಪೆನಿಯ ಸಮಜಾಯಿಷಿ. ಒಂದು ಟ್ಯಾಂಕರ್ ಮಗುಚಿ ಬಿದ್ದರೆ, ಆರು ದಿನಗಳ ಕಾಲ ಟಿಪ್ಪರ್, ಟ್ಯಾಂಕರ್, ಜೆಸಿಬಿ ಬಳಸಿ ಹಗಲು ರಾತ್ರಿ ತೆರವುಗೊಳಿಸುತ್ತಿದ್ದರೂ ಕಾರ್ಯಾಚರಣೆ ಯಾಕೆ ಪೂರ್ಣ ಗೊಳ್ಳುತ್ತಿಲ್ಲ, ತಿಂಗಳ ಹಿಂದೆ ಟ್ಯಾಂಕರ್ ಮಗುಚಿ ತೋಕೂರು ಹಳ್ಳಕ್ಕೆ ಹರಿದಿದ್ದರೂ ನಾಲ್ಕು ವಾರ ತೈಲ ತೆರವಿಗೆ ಕಾರ್ಯಾಚರಣೆ ನಡೆಸದಿರುವುದು ಯಾಕೆ ? ಸಮಿತಿ ದೂರು ಸಲ್ಲಿಸಿ, ಪರಿಸರ ಅಧಿಕಾರಿಗಳು ಮಹಜರು ನಡೆಸಿದ ನಂತರ (ಈಗ ಆರು ದಿನಗಳಿಂದ) ತೆರವುಗೊಳಿಸಲು ಕಾರಣ ಏನು ? ಕೈಗಾರಿಕಾ ತ್ಯಾಜ್ಯ ಹರಿಸುವ ಕುರಿತು ವರ್ಷಗಳಿಂದ ಪ್ರತಿಭಟಿಸುತ್ತಿದ್ದೇವೆ, ಮಾಲಿನ್ಯ ಪತ್ತೆಯಾದ ಸ್ಥಳದಲ್ಲಿಯೂ ತ್ಯಾಜ್ಯ ನೆಲದ ಆಳಕ್ಕೆ ಇಳಿದಿದೆ, ವೈಟ್ ಸಿಮೆಂಟ್ ರೀತಿ ಗಟ್ಟಿಯಾಗಿ ಪರಿವರ್ತನೆ ಹೊಂದಿದೆ, ಟ್ಯಾಂಕರ್ ಮಗುಚಿರುವುದಾದರೆ ಇದು ಹೇಗೆ ಸಾಧ್ಯ ? ಎಂಬ ಪ್ರಶ್ನೆಗಳಿಗೆ ಕಂಪೆನಿಯ ಅಧಿಕಾರಿಗಳಲ್ಲಿ ಉತ್ತರವಿರಲಿಲ್ಲ. ಸ್ಥಳೀಯರಿಗೆ ಉದ್ಯೋಗ ನೀಡದಿರುವ ಕುರಿತು ಪ್ರಶ್ನಿಸಿದಾಗಲೂ ಹಾರಿಕೆಯ ಉತ್ತರ ಮಾತ್ರ ಸಿಕ್ಕಿತು.


ಅಲ್ಲಿಂದ ನಿಯೋಗ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ರವಿ ಅವರನ್ನು ಭೇಟಿ ಮಾಡಿತು.‌ ಅಧಿಕಾರಿ ರವಿ, “ಪರಿಸರ ನಿಯಮಗಳ ಗಂಭೀರ ಉಲ್ಲಂಘನೆಗಾಗಿ ಪತಂಜಲಿ ಫುಡ್ಸ್ ಮುಚ್ಚಲು ಅನುಮತಿ ನೀಡುವಂತೆ ಈಗಾಗಲೆ ಮಾಲಿನ್ಯ ನಿಯಂತ್ರಣ ಮಂಡಳಿಯ ರಾಜ್ಯ ಅಧಿಕಾರಿಗೆ ಪತ್ರ ಬರೆಯಲಾಗಿದೆ, ಕ್ರಿಮಿನಲ್ ಮೊಕದ್ದಮೆ ಹೂಡಲೂ ಅನುಮತಿ ಕೇಳಲಾಗಿದೆ. ಮೇಲ್ಗಡೆಯ ಆದೇಶವನ್ನು ಕಾಯುತ್ತಿದ್ದೇವೆ” ಎಂದು ತಿಳಿಸಿದರು.
ತೋಕೂರು ಹಳ್ಳದಲ್ಲಿ ಶೇಖರಣೆ ಗೊಂಡಿರುವ ತ್ಯಾಜ್ಯವನ್ನು ತೆರುವುಗೊಳಿಸಲು ಕಂಪೆನಿಗೆ ಅವಕಾಶ ನೀಡಿರುವುದು ಯಾಕೆ ? ಸಂಗ್ರಹಿಸಿ ಕಂಪೆನಿಯ ಒಳಭಾಗಕ್ಕೆ ಕೊಂಡೊಯ್ದಿರುವ ತ್ಯಾಜ್ಯವನ್ನು ಕಂಪೆನಿ ಏನು ಮಾಡುತ್ತದೆ ? ಇದರಿಂದ ಸಾಕ್ಷಿ ನಾಶ ಆಗುವುದಿಲ್ಲವೇ ? ಎಂಬ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಸಿಗಲಿಲ್ಲ. ಕಂಪೆನಿಯ ಒಳಭಾಗ ತೆರಳಿ ಎಲ್ಲವನ್ನೂ ದಾಖಲಿಸಿಕೊಳ್ಳುವುದಾಗಿ ಸಮಾಧಾನಿಸಲು ಯತ್ನಿಸಿದರು‌.


ಈ ನಿಯೋಗದಲ್ಲಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ರಾಜ್ಯ ರೈತ ಸಂಘದ ಸನ್ನಿ ಡಿ ಸೋಜ, ಆದಿತ್ಯ ಕಲ್ಲಾಜೆ, ಪ್ರಾಂತ ರೈತ ಸಂಘದ ನಾಯಕ ಕೃಷ್ಣಪ್ಪ ಸಾಲ್ಯಾನ್, ದಲಿತ ಸಂಘರ್ಷ ಸಮಿತಿಯ ಎಂ ದೇವದಾಸ್, ರಘು ಎಕ್ಕಾರು, ಕಾರ್ಮಿಕ ಸಂಘಟನೆ ಸಿಐಟಿಯು ನ ಸುನಿಲ್ ಕುಮಾರ್ ಬಜಾಲ್, ಎಐಟಿಯುಸಿ ಕರುಣಾಕರ ಮಾರಿಪಳ್ಳ, ತಿಮ್ಮಪ್ಪ ಕಾವೂರು, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಶೇಖರ ಬಂಟ್ವಾಳ್, ಡಿವೈಎಫ್ಐ ಜಿಲ್ಲಾ ನಾಯಕರುಗಳಾದ ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಶ್ರೀನಾಥ್ ಕುಲಾಲ್, ಆಶಾ ಬೋಳೂರು, ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಜೋಕಟ್ಟೆ ಗ್ರಾಪಂ ಸದಸ್ಯರಾದ ಅಬೂಬಕ್ಕರ್ ಬಾವಾ, ಕೆವಿನ್ ಫೆರಾವೊ, ಪ್ರೆಸಿಲ್ಲಾ ಫೆರಾವೊ, ಪಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ತಯ್ಯುಬ್ ಬೆಂಗ್ರೆ, ಸಾಮಾಜಿಕ ಕಾರ್ಯಕರ್ತರಾದ ಅಸುಂತಾ ಡಿ ಸೋಜ, ಪ್ರಮೀಳಾ ದೇವಾಡಿಗ, ಪ್ರಮೀಳಾ ಶಕ್ತಿನಗರ, ಸಿಲ್ವಿಯಾ, ಇಕ್ಬಾಲ್ ಜೋಕಟ್ಟೆ, ನಜೀರ್ ಜೋಕಟ್ಟೆ, ಹನೀಫ್, ಮುನಾಝ್ ಮತ್ತಿತರರು ಭಾಗಿಗಳಾಗಿದ್ದರು.

Previous Post

Gruha jyothi scheme: ಫ್ರೀ ವಿದ್ಯುತ್ ಯೋಜನೆ ಬಗ್ಗೆ ಮತ್ತಷ್ಟು ವಿವರಣೆ ನೀಡಿದ ಸಚಿವ  ಕೆಜೆ ಜಾರ್ಜ್

Next Post

ಟಿಪ್ಪು ಸುಲ್ತಾನ್ ಬಗ್ಗೆ ಪೋಸ್ಟ್ ವಿವಾದ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಂಘರ್ಷ, ಕಲ್ಲು ತೂರಾಟ

Next Post
ಟಿಪ್ಪು ಸುಲ್ತಾನ್ ಬಗ್ಗೆ ಪೋಸ್ಟ್ ವಿವಾದ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಂಘರ್ಷ, ಕಲ್ಲು ತೂರಾಟ

ಟಿಪ್ಪು ಸುಲ್ತಾನ್ ಬಗ್ಗೆ ಪೋಸ್ಟ್ ವಿವಾದ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಂಘರ್ಷ, ಕಲ್ಲು ತೂರಾಟ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.