Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಆಂಬುಲೆನ್ಸ್‌ಗೆ ಪಾವತಿಸಲು ಹಣವಿಲ್ಲದೆ ಮಗುವಿನ ಮೃತದೇಹ ಚೀಲದಲ್ಲಿ ಹಾಕಿಕೊಂಡು ಹೋದ ತಂದೆ!

editor tv by editor tv
June 17, 2023
in ರಾಷ್ಟ್ರೀಯ
0
ಆಂಬುಲೆನ್ಸ್‌ಗೆ ಪಾವತಿಸಲು ಹಣವಿಲ್ಲದೆ ಮಗುವಿನ ಮೃತದೇಹ ಚೀಲದಲ್ಲಿ ಹಾಕಿಕೊಂಡು ಹೋದ ತಂದೆ!
1.9k
VIEWS
Share on FacebookShare on TwitterShare on Whatsapp

ವೈದ್ಯಕೀಯ ವ್ಯವಸ್ಥೆಗಳು ಅದೆಷ್ಟು ಸುವ್ಯವಸ್ಥಿತವಾಗಿ ಸಜ್ಜುಗೊಂಡರೂ ಬಡವರು ಮಾತ್ರ ಸಮಸ್ಯೆಯಿಂದ ಹೈರಾಣಾಗುವುದು ತಪ್ಪಲ್ಲ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿರುವುದು, ಆಂಬುಲೆನ್ಸ್ ಸಿಗದಿರುವುದು ಮೊದಲಾದ ಘಟನೆಗಳು ನಡೆಯುತ್ತದೆ. ಅದೇ ರೀತಿ ಮಧ್ಯಪ್ರದೇಶದಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ.

ಜಬಲ್‌ಪುರ: ಬಡವರಿಗಾಗಿ ಸರ್ಕಾರ ಅನೇಕ ಆರೋಗ್ಯ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಆದರೆ ಅದೆಷ್ಟೇ ಸೌಲಭ್ಯವಿದ್ದರೂ ಅದೆಷ್ಟೋ ಬಾರಿ ಸಂಕಷ್ಟದಲ್ಲಿರುವ ಬಡವರಿಗೆ ಈ ಸೌಲಭ್ಯ ಸಮರ್ಪಕವಾಗಿ ಸಿಗುವುದೇ ಇಲ್ಲ. ಬಡವರು ಕೇವಲ ಚಿಕಿತ್ಸೆಗಾಗಿ ಮಾತ್ರವಲ್ಲ, ಸತ್ತ ನಂತರ ಮೃತದೇಹವನ್ನು ಸಾಗಿಸಲು ಸಹ ಒದ್ದಾಡಬೇಕಾಗುತ್ತದೆ. ಅದೆಷ್ಟೋ ಬಾರಿ ಮನೆ ಮಂದಿ, ಕುಟುಂಬ ಸದಸ್ಯರ ಮೃತದೇಹವನ್ನು ಹೊತ್ತುಕೊಂಡೇ ಹೋದ ಹಲವು ಘಟನೆಗಳು ನಡೆದಿವೆ. ಕೆಲವೆಡೆ ತಳ್ಳುಗಾಡಿಯಲ್ಲಿ ಹಾಕಿಕೊಂಡು ಮೃತದೇಹವನ್ನು ಕೊಂಡೊಯ್ಯುತ್ತಾರೆ. ಆಸ್ಪತ್ರೆ ಸಿಬ್ಬಂದಿ ಆಂಬುಲೆನ್ಸ್ ಕೊಡಲು ನಿರಾಕರಿಸಿದ ಕಾರಣ ಜನರು ಅನಿವಾರ್ಯವಾಗಿ ಹೀಗೆ ಮಾಡಬೇಕಾಗುತ್ತದೆ. ಹಾಗೆಯೇ ಇಲ್ಲೊಂದೆಡೆ, ತಂದೆ ತನ್ನ ಮಗುವಿನ ಮೃತದೇಹವನ್ನು ಆಸ್ಪತ್ರೆಯ ಆಂಬ್ಯುಲೆನ್ಸ್ ಸಿಗದೆ ಚೀಲದಲ್ಲಿ ಹಾಕಿ ಕೊಂಡೊಯ್ದಿದ್ದಾರೆ.

ಈ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ನಡೆದಿದೆ. ಬುಡಕಟ್ಟು ಜನಾಂಗದ ಸುನೀಲ್ ಧುರ್ವೆ ಮತ್ತು ಪತ್ನಿ ಜುಮ್ನಿಬಾಯಿ ಜಬಲ್ ಪುರ್‌ನ ವೈದ್ಯಕೀಯ ಕಾಲೇಜಿನಲ್ಲಿ ಮಗು (Baby)ವೊಂದಕ್ಕೆ ಜನ್ಮ ನೀಡಿದ್ದಾರೆ. ನವಜಾತ ಮಗು ಅನಾರೋಗ್ಯಕ್ಕೆ ಒಳಗಾಗಿತ್ತು. ಹೆಚ್ಚಿನ ಚಿಕಿತ್ಸೆ (Treatment) ಕೊಟ್ಟರೂ ಮಗು ಬದುಕುಳಿಯಲ್ಲಿಲ್ಲ. ಆದರೆ ದಂಪತಿಗಳ ಬಳಿ ಮಗುವಿನ ಮೃತದೇಹವನ್ನು ಆಂಬುಲೆನ್ಸ್‌ನಲ್ಲಿ ತೆಗೆದುಕೊಂಡು ಹೋಗಲು ದುಡ್ಡಿರಲಿಲ್ಲ. ಹೀಗಾಗಿ ನತದೃಷ್ಟ ತಂದೆ (Father), ನವಜಾತ ಶಿಶುವನ್ನು ಚೀಲದಲ್ಲಿಟ್ಟುಕೊಂಡು 150 ಕಿ.ಮೀ ಪ್ರಯಾಣಿಸಿದರು.

ಒ೦ದು ಕಡೆ ಮಗುವನ್ನ ಉಳಿಸಿಕೊಳ್ಳಲಾಗಲಿಲ್ಲ ಅನ್ನೊ ನೋವು. ಇನ್ನೊಂದು ಕಡೆ ಮಗುವಿನ ಮೃತದೇಹ (Deadbody) ಸ್ಮಶಾನಕ್ಕೆ ತೆಗೆದುಕೊಂಡು ಹೋಗೋದಾದರೂ ಹೇಗೆ ಅಂತ ಗೊತ್ತಾಗದ ಈ ದಂಪತಿ (Couple) ಕಂಗಾಲಾಗಿದ್ದರು. ಕೊನೆಗೆ ಕೈಯಲ್ಲಿದ್ದ ಚೀಲದಲ್ಲೇ ಮಗುವಿನ ಶವ ಹಾಕಿಕೊಂಡು ಅಲ್ಲೇ ಇದ್ದ ಬಸ್‌ನಲ್ಲಿ ಕುಳಿತಿದ್ದಾರೆ.

ನವಜಾತ ಶಿಶುವಿನ ಮೃತದೇಹವನ್ನು ವೈದ್ಯಕೀಯ ಕಾಲೇಜಿನಿಂದ ಆಟೋ ರಿಕ್ಷಾದಲ್ಲಿ ಜಬಲ್‌ಪುರ ಬಸ್ ನಿಲ್ದಾಣಕ್ಕೆ ತೆಗೆದುಕೊಂಡು ಬರಲಾಯಿತು. ಆದರೆ ಬಸ್ ಚಾಲಕ ಮೃತದೇಹದೊಂದಿಗೆ ಬಸ್ ಪ್ರವೇಶಿಸಲು ನಿರಾಕರಿಸಿದನು. ಕೊನೆಗೆ ಬಲವಂತದ ಮೇರೆಗೆ ಮೃತದೇಹವನ್ನು ಚೀಲದಲ್ಲಿ ಬಚ್ಚಿಟ್ಟು ಮತ್ತೊಂದು ಬಸ್ಸಿನಲ್ಲಿ 150 ಕಿಲೋಮೀಟರ್ ಪ್ರಯಾಣಿಸಿದ್ದಾರೆ. ಮತ್ತು ಹೇಗೋ ತಡರಾತ್ರಿ ದಿಂಡೋರಿಗೆ ತಲುಪಿದೆ. ಮಗುವಿನ ಶವವನ್ನು ಬ್ಯಾಗ್‌ನಲ್ಲಿ ಇಟ್ಟುಕೊಂಡು ತಮ್ಮ ಸಂಬಂಧಿಕರಿಗಾಗಿ ದಿಂಡೋರಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದರು, ಆದರೆ ದಿಂಡೂರಿನಲ್ಲೂ ಯಾರೂ ಸಹಾಯಕ್ಕೆ (Help) ಮುಂದಾಗಲಿಲ್ಲ.

ಮಗು ಕಳೆದುಕೊಂಡ ನೋವು ತಾಯಿಗೆ ಬಿಕ್ಕಿ-ಬಿಕ್ಕಿ ಅಳುವಂತೆ ಮಾಡಿತ್ತು. ಆದರೆ ತಂದೆ ಮಾತ್ರ ಕಲ್ಲು ಹೃದಯ ಮಾಡಿಕೊಂಡು ಮಗುವಿನ ಮೃತದೇಹ ಇರುವ ಚೀಲ ಹಿಡಿದುಕೊಂಡೇ ಕೂತಿದ್ದ. ಕೊನೆಗೆ ಬಸ್‌ನಿಂದ ಇಳಿಯುವಾಗ ಇದು ಕೆಲವರ ಗಮನಕ್ಕೆ ಬಂದಿದೆ. ತಕ್ಷಣವೇ ಸ್ಥಳೀಯರು ಅಲ್ಲಿ ಜಮಾಯಿಸಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಈ ಹಿಂದೆ ಪಶ್ಚಿಮಬಂಗಾಳದಲ್ಲೂ ಇಂಥಹದ್ದೇ ಘಟನೆಯೊಂದು ನಡೆದಿತ್ತು. ಸಿಲಿಗುರಿಯ ಕಲಿಯಾಗಂಜ್‌ನಲ್ಲಿ ಈ ಘಟನೆ ವರದಿಯಾಗಿತ್ತು. ತನ್ನ ಐದು ತಿಂಗಳ ಮಗುವಿನ ಶವವನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು 200 ಕಿಲೋಮೀಟರ್‌ಗಳವರೆಗೆ ಪ್ರಯಾಣಿಸಿ ನಂತರ ಅಲ್ಲಿಂದ ಸಾರ್ವಜನಿಕ ಬಸ್‌ನಲ್ಲಿ ಪ್ರಯಾಣಿಸಿದ್ದೇನೆ ಎಂದು ವ್ಯಕ್ತಿ ಹೇಳಿಕೊಂಡಿದ್ದ.ಆಂಬ್ಯುಲೆನ್ಸ್ ಚಾಲಕ  ಸಿಲಿಗುರಿಯಿಂದ ಕಲಿಯಾಗಂಜ್‌ಗೆ ಹೋಗಲು ನನ್ನ ಬಳಿ 8,000 ರೂ. ಕೇಳಿದ. ಅದನ್ನು ನನಗೆ ಕೊಡಲು ಸಾಧ್ಯವಾಗಲ್ಲಿಲ್ಲ ಎಂದು ವ್ಯಕ್ತಿ ತಿಳಿಸಿದ್ದಾನೆ. 

ಮಗುವಿನ ತಂದೆ (Father) ಆಶಿಮ್ ದೇಬ್‌ಶರ್ಮಾ, ‘ನನ್ನ ಐದು ತಿಂಗಳ ಮಗು ಕಳೆದ ರಾತ್ರಿ ಸಿಲಿಗುರಿಯ ಉತ್ತರ ಬಂಗಾಳ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆರು ದಿನಗಳ ಕಾಲ ಚಿಕಿತ್ಸೆ (Treatment) ಪಡೆದ ನಂತರ ಸಾವನ್ನಪ್ಪಿದೆ. ಈ ಸಮಯದಲ್ಲಿ ನಾನು ಆಸ್ಪತ್ರೆಯಲ್ಲಿ (Hospital) 16,000 ರೂ. ಪಾವತಿಸಿದೆ. ಆದರೆ ನನ್ನ ಮಗುವನ್ನು (Children) ಕಲಿಯಗಂಜ್‌ಗೆ ಸಾಗಿಸಲು ಅಲ್ಲಿನ ಆಂಬ್ಯುಲೆನ್ಸ್‌ ಡ್ರೈವರ್‌ 8,000 ಕೇಳಿದ. ಆದರೆ ಅಷ್ಟು ರೂಪಾಯಿ ಪಾವತಿಸಲು ನನ್ನ ಬಳಿ ಹಣವಿರಲಿಲ್ಲ ಎಂದು ವ್ಯಕ್ತಿ ತಿಳಿಸಿದ್ದಾನೆ.

Previous Post

ಹಜ್ ಯಾತ್ರಿಕರ ಆರೈಕೆ ಮಾಡಿದ ಸ್ವಯಂ ಸೇವಕರಿಗೆ ಉಮ್ರಾ ಪ್ರವಾಸ: ಜಮೀರ್ ಅಹ್ಮದ್

Next Post

ಸೌಜನ್ಯಾ ಆತ್ಯಾಚಾರ, ಕೊಲೆ ಪ್ರಕರಣಕ್ಕೆ ಸಾಕ್ಷಿಗಳೇ ಇಲ್ಲವಂತೆ:ಕಾಲೇಜಿಗೆ ಹೋದವಳು ವಾಪಸ್ ಬರಲೇ ಇಲ್ಲ!

Next Post
ಸೌಜನ್ಯಾ ಆತ್ಯಾಚಾರ, ಕೊಲೆ ಪ್ರಕರಣಕ್ಕೆ ಸಾಕ್ಷಿಗಳೇ ಇಲ್ಲವಂತೆ:ಕಾಲೇಜಿಗೆ ಹೋದವಳು ವಾಪಸ್ ಬರಲೇ ಇಲ್ಲ!

ಸೌಜನ್ಯಾ ಆತ್ಯಾಚಾರ, ಕೊಲೆ ಪ್ರಕರಣಕ್ಕೆ ಸಾಕ್ಷಿಗಳೇ ಇಲ್ಲವಂತೆ:ಕಾಲೇಜಿಗೆ ಹೋದವಳು ವಾಪಸ್ ಬರಲೇ ಇಲ್ಲ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.