
ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ ನಡೆಸಲು ಕೆಲವು ವಿವಾದಿತ ವ್ಯಕ್ತಿಗಳನ್ನು ಅಹ್ವಾನಿಸಲು ಸಿದ್ದತೆ ನಡೆದಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಆಹ್ವಾನಿತರ ಪಟ್ಟಿಯಲ್ಲಿದ್ದ ರವಿಶಂಕರ್ ಗುರೂಜಿ ಮತ್ತು ಡಾ.ಗುರುರಾಜ ಕರ್ಜಗಿ ಅವರ ಹೆಸರನ್ನು ಕೈ ಬಿಡಲಾಗಿದೆ.

ಸಾರ್ವಜನಿಕರ ಭಾರೀ ವಿರೋಧವೇ ಈ ಇಬ್ಬರ ಹೆಸರನ್ನು ಕೈಬಿಡಲು ಕಾರಣ ಎಂದು ಹೇಳಲಾಗಿದೆ. ಗುರುರಾಜ ಕರ್ಜಗಿ ಅವರ ಬದಲಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಭಾಷಣಕ್ಕೆ ಆಹ್ವಾನಿಸಲಾಗಿದೆ.

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರವು ಜೂನ್ 26 ರಿಂದ ಜೂನ್ 29 ವರೆಗೆ ನೆಲಮಂಗಲದ ಕ್ಷೇಮ ವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಮಹಮ್ಮದ್ ಕುಂಞ, ಮತ್ತು ವೀಣಾ ಅವರು ನೂತನ ಶಾಸಕರಿಗೆ ಪ್ರವಚನ ನೀಡಲಿದ್ದಾರೆ.