Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸಂಡೆ ರಾಬರಿ: ಚಿತ್ರದುರ್ಗದಲ್ಲಿ ಪಿಸ್ತೂಲ್ ಹಿಡಿದು ಮನೆಗೆ ನುಗ್ಗಿ ಇಬ್ಬರ ಒತ್ತೆಯಾಳಾಗಿಸಿಕೊಂಡು ಸಿನಿಮೀಯ ರೀತಿಯಲ್ಲಿ ಲಕ್ಷಾಂತರ ರೂ ದರೋಡೆ

editor tv by editor tv
July 10, 2023
in ರಾಜ್ಯ
0
ಸಂಡೆ ರಾಬರಿ: ಚಿತ್ರದುರ್ಗದಲ್ಲಿ ಪಿಸ್ತೂಲ್ ಹಿಡಿದು ಮನೆಗೆ ನುಗ್ಗಿ ಇಬ್ಬರ ಒತ್ತೆಯಾಳಾಗಿಸಿಕೊಂಡು ಸಿನಿಮೀಯ ರೀತಿಯಲ್ಲಿ ಲಕ್ಷಾಂತರ ರೂ ದರೋಡೆ
1.9k
VIEWS
Share on FacebookShare on TwitterShare on Whatsapp

M. Ashraf Kammaje |

Updated on:Jul 10, 2023 | 8:25 AM

  ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಎಸ್ಪಿ ಪರಶುರಾಮ್ ಪರಿಶೀಲನೆ ನಡೆಸಿದ್ದಾರೆ. ದರೋಡೆಕೋರರು ನಮ್ಮ ಮನೆಯಲ್ಲಿ ಕೋಟ್ಯಂತರ ಹಣವಿದೆ ಎಂದು ಭಾವಿಸಿ ಬಂದಿದ್ದರು ಅನ್ನಿಸುತ್ತದೆ. ಅವರು ಹಲವು ಭಾಷೆಯಲ್ಲಿ ಮಾತಾಡುತ್ತಿದ್ದರು. ಗಾಂಜಾ ವ್ಯಸನಿ, ಸೈಕೋ ರೀತಿ ವರ್ತಿಸುತ್ತಿದ್ದರು ಎನ್ನುತ್ತಾರೆ ದೂರುದಾರ ಉದ್ಯಮಿ ನಜೀರ್ ಅಹ್ಮದ್

ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಸಿನಿಮೀಯ ರೀತಿಯಲ್ಲಿ ದೊಡ್ಡ ದರೋಡೆಯೊಂದು (Robbery) ನಡೆದಿದೆ. ಹಾಡು ಹಗಲಲ್ಲೇ ದರೋಡೆಕೋರರು ಪಿಸ್ತೂಲ್ ಹಿಡಿದು ಮನೆಗೆ ನುಗ್ಗಿದ್ದಾರೆ. ಇಬ್ಬರನ್ನು ಒತ್ತೆಯಾಳಾಗಿರಿಸಿಕೊಂಡು ಲಕ್ಷಾಂತರ ರೂ. ಹಣ, ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಈ ಕುರಿತು ವರದಿ ಇಲ್ಲಿದೆ. ದಿನಪೂರ್ತಿ ದರೋಡೆಕೋರರ ಕಂಟ್ರೋಲ್ ನಲ್ಲಿದ್ದ ಮನೆ. ಐವತ್ತು ಲಕ್ಷ‌ ರೂ. ನಗದು, 12 ತೊಲೆ ಚಿನ್ನಾಭರಣ ದೋಚಿದ ದರೋಡೆಕೋರರು. ಸ್ಥಳಕ್ಕೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಎಸ್ಪಿ ಕೆ. ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೌದು, ಚಿತ್ರದುರ್ಗ ನಗರದ ಬ್ಯಾಂಕ್ ಕಾಲೋನಿಯಲ್ಲಿರುವ ಉದ್ಯಮಿ ನಜೀರ್ ಅಹ್ಮದ್ ಮನೆಗೆ ನಿನ್ನೆ ಬೆಳಗ್ಗೆ 9 ಗಂಟೆಗೆ ಮೂವರು ದರೋಡೆಕೋರರ ಗುಂಪು ಎಂಟ್ರಿ ಕೊಟ್ಟಿದೆ. ಪಿಸ್ತೂಲ್ ಮತ್ತು ಲಾಂಗ್, ಚಾಕು, ಪಂಚ್ ಹಿಡಿದಿದ್ದ ಗ್ಯಾಂಗ್ ಮನೆಯಲ್ಲಿದ್ದವರನ್ನು ಬೆದರಿಸಿದೆ. ಹೋಟೆಲ್ ಉದ್ಯಮಿ ನಜೀರ್ ಅಹ್ಮದ್ ಗೆ ಪಿಸ್ತೂಲ್ ನಿಂದ ತಿವಿದು ಕಣ್ಣಿನ ಬಳಿ ಗಾಯಗೊಳಿಸಿದೆ.

ಬಳಿಕ ಜೀವಬೆದರಿಕೆಯೊಡ್ಡಿ ಮನೆಯಲ್ಲಿದ್ದವರ ಬಳಿ ಮೊಬೈಲ್ ಕಸಿದುಕೊಂಡು ಒಂದು ಕೋಣೆಯಲ್ಲಿ ಕೂಡಿ ಹಾಕಿದೆ. ಕೈಗಳನ್ನು ಕಟ್ಟಿ ಹಾಕಿ ಹಣ ನೀಡುವಂತೆ ಬೆದರಿಸಿದೆ. ಐವತ್ತು ಲಕ್ಷ ರೂ ಕೊಡಲು ಒಪ್ಪಿದಾಗ ನಜೀರ್ ಅಹ್ಮದ್ ಪುತ್ರ ಸಮೀರ್ ಮತ್ತು ಅಳಿಯ ಶಹನಾಜ್ ರನ್ನು ಒತ್ತೆಯಾಳಾಗಿರಿಸಿಕೊಂಡು ಕಾರಲ್ಲಿ ಕರೆದೊಯ್ದಿದೆ.

ಚಿತ್ರದುರ್ಗದ ಕ್ಯಾದಿಗ್ಗೆರೆ ಬಳಿ ಓರ್ವ ವ್ಯಕ್ತಿ ಬಳಿ ತುರ್ತಾಗಿ ಹಣ ಬೇಕೆಂದು ಕೇಳಿಕೊಂಡು 25 ಲಕ್ಷ ರೂ. ತೆಗೆದುಕೊಂಡು ಕೊಟ್ಟಿದ್ದಾರೆ. ಬಳಿಕ ದಾವಣಗೆರೆಗೆ ಕರೆದೊಯ್ದು ಅಲ್ಲೊಬ್ಬರ ಬಳಿ 25 ಲಕ್ಷ ರೂ. ಪಡೆದು ಕೊಟ್ಟಿದ್ದಾರೆ. ಬಳಿಕ ರಾತ್ರಿ 9ಗಂಟೆ ಸುಮಾರಿಗೆ ಚಿತ್ರದುರ್ಗಕ್ಕೆ ವಾಪಸ್ ಬರುವ ವೇಳೆ ಚನ್ನಗಿರಿ ತಾಲೂಕಿನ ಗ್ರಾಮವೊಂದರ ಬಳಿ ಪೊಲೀಸ್ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದಿದ್ದಾರೆ.

ಪರಿಣಾಮ ಅನುಮಾನಗೊಂಡ ದಾವಣಗೆರೆ ಪೊಲೀಸರು ಕಾರ್ ನ್ನು ಬೆನ್ನತ್ತಿದ್ದಾರೆ. ಕೊನೆಗೂ ಪೊಲೀಸ್ರು ಕಾರ್ ಹಿಡಿದಾಗ ಸಮೀರ್ ಮತ್ತು ಶಹನಾಜ್ ರನ್ನು ಬಿಟ್ಟು ದರೋಡೆಕೋರರು ಜಮೀನುಗಳಲ್ಲಿ ಓಡಿ ಎಸ್ಕೇಪ್ ಗೆ ಯತ್ನಿಸಿದ್ದಾರೆ. ಇಬ್ಬರು ತಪ್ಪಿಸಿಕೊಂಡಿದ್ದು ಓರ್ವ ಸಿಕ್ಕಿ ಬಿದ್ದಿದ್ದಾನೆ. ಸದ್ಯ ಪೊಲೀಸ್ರು ವಿಚಾರಣೆ ನಡೆಸುತ್ತಿದ್ದಾರೆ ಅಂತಾರೆ ಒತ್ತೆಯಾಳಾಗಿದ್ದ ಸಮೀರ್ ಮತ್ತು ಮುನೀರ್.

ಇನ್ನು ವಿಷಯ ತಿಳಿಯುತ್ತಿದ್ದಂತೆ ಚಿತ್ರದುರ್ಗ ಪೊಲೀಸರು ಅಲರ್ಟ್ ಆಗಿದ್ದಾರೆ. ರಾತ್ರಿಯೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ಬಳಿಗೆ ತೆರಳಿ ಸಮೀರ್ ಮತ್ತು ಶಹನಾಜ್ ರನ್ನು ಕರೆ ತಂದಿದ್ದಾರೆ. ಉದ್ಯಮಿ ನಜೀರ್ ಅಹ್ಮದ್ ಬಡಾವಣೆ ಠಾಣೆಗೆ ದೂರು ನೀಡಿದ್ದು ಮೂವರು ದರೋಡೆಕೋರರು ಬೆದರಿಸಿ ಐವತ್ತು ಲಕ್ಷ ನಗದು, 12ತೊಲೆ ಚಿನ್ನಾಭರಣೆ ದೋಚಿದ್ದಾರೆಂದು ದೂರು ದಾಖಲಿಸಿದ್ದಾರೆ.

ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಎಸ್ಪಿ ಕೆ.ಪರಶುರಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಪ್ರಕರಣದ ಬಗ್ಗೆ ಪೊಲೀಸ್ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ. ದೂರುದಾರ ಉದ್ಯಮಿ ನಜೀರ್ ಅಹ್ಮದ್ ರನ್ನು ಕೇಳಿದ್ರೆ ದರೋಡೆಕೋರರು ನಮ್ಮ ಮನೆಯಲ್ಲಿ ಕೋಟ್ಯಂತರ ರೂ. ಹಣವಿದೆ ಎಂದು ಭಾವಿಸಿ ಬಂದಿದ್ದರು ಅನ್ನಿಸುತ್ತದೆ. ಅವರು ಹಲವು ಭಾಷೆಯಲ್ಲಿ ಮಾತಾಡುತ್ತಿದ್ದರು. ಗಾಂಜಾ ವ್ಯಸನಿಗಳಾಗಿದ್ದು ಸೈಕೋ ರೀತಿ ವರ್ತಿಸುತ್ತಿದ್ದರು ಎನ್ನುತ್ತಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಹಾಡುಹಗಲಲ್ಲೇ ಸಿನಿಮೀಯ ರೀತಿಯ ದರೋಡೆ ಪ್ರಕರಣ ನಡೆದಿದೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆಯಿಂದಷ್ಟೇ ಪ್ರಕರಣದ ಅಸಲಿಯತ್ತೇನು, ದರೋಡೆಕೋರರು ಯಾರು, ಉದ್ದೇಶ ಏನಾಗಿತ್ತು ಎಂಬುದು ಬಯಲಾಗಬೇಕಿದೆ.

Previous Post

Bengaluru News: ಟೊಮೆಟೊ ತುಂಬಿದ್ದ ಬೊಲೆರೋ ವಾಹನ ಕಳವು, ರೈತ ಕಂಗಾಲು

Next Post

ಭಾರತದಿಂದ ಕ್ರಿಶ್ಚಿಯಾನಿಟಿ ನಾಶಪಡಿಸಬಹುದು ಎಂದು ಯಾರೂ ಯೋಚಿಸಬಾರದು: ಕೇರಳ ಬಿಷಪ್

Next Post
ಭಾರತದಿಂದ ಕ್ರಿಶ್ಚಿಯಾನಿಟಿ ನಾಶಪಡಿಸಬಹುದು ಎಂದು ಯಾರೂ ಯೋಚಿಸಬಾರದು: ಕೇರಳ ಬಿಷಪ್

ಭಾರತದಿಂದ ಕ್ರಿಶ್ಚಿಯಾನಿಟಿ ನಾಶಪಡಿಸಬಹುದು ಎಂದು ಯಾರೂ ಯೋಚಿಸಬಾರದು: ಕೇರಳ ಬಿಷಪ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.