Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಇದು ಅಂಜು ಲವ್ಸ್ ನಾಸ್ರುಲ್ಲಾ; ಪ್ರೀತಿಗಾಗಿ ಪಾಕಿಸ್ತಾನಕ್ಕೆ ಹಾರಿದ ಭಾರತದ ಯುವತಿಯ ಕಹಾನಿ!

editor tv by editor tv
July 24, 2023
in ರಾಷ್ಟ್ರೀಯ
0
ಇದು ಅಂಜು ಲವ್ಸ್ ನಾಸ್ರುಲ್ಲಾ; ಪ್ರೀತಿಗಾಗಿ ಪಾಕಿಸ್ತಾನಕ್ಕೆ ಹಾರಿದ ಭಾರತದ ಯುವತಿಯ ಕಹಾನಿ!
1.9k
VIEWS
Share on FacebookShare on TwitterShare on Whatsapp

ಸೀಮಾ ಹೈದರ್ ತನ್ನ ಪ್ರೀತಿಯ ಇನಿಯನಿಗಾಗಿ ಪಾಕಿಸ್ತಾನದಿಂದ ಅಕ್ರಮವಾಗಿ ಭಾರತಕ್ಕೆ ಬಂದ ಕತೆ ನೀವು ಕೇಳಿಬರಹುದು.ಅದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಭಾರತದ ಅಂಜು ಅನ್ನೋ ಯುವತಿ ಫೇಸ್‌ಬುಕ್ ಮೂಲಕ ಪರಿಚಯವಾದ ಪಾಕಿಸ್ತಾನದ ನಾಸ್ರುಲ್ಲಾಗಾಗಿ ಪಾಕಿಸ್ತಾನಕ್ಕೆ ತೆರಳಿದ್ದಾಳೆ.

ನವದೆಹಲಿ(ಜು.23) ಪಬ್‌ಜಿ ಮೂಲಕ ಪರಿಚಯವಾಗಿ ಗಂಡನ ಬಿಟ್ಟು, ತನ್ನ ಮಕ್ಕಳೊಂದಿಗೆ ಪಾಕಿಸ್ತಾನದ ಸೀಮಾ ಹೈದರ್ ಅಕ್ರಮವಾಗಿ ಭಾರತ ಪ್ರವೇಶಿದ  ಘಟನೆ ಭಾರಿ ಸಂಚಲನ ಸೃಷ್ಟಿಸಿದೆ. ಪಬ್‌ಜಿಯಲ್ಲಿ ಚಿಗುರೊಡೆದ ಪ್ರೀತಿಗಾಗಿ ಭಾರತಕ್ಕೆ ಬಂದ ಸೀಮಾ ಹೈದರ್ ಮಾಧ್ಯದಲ್ಲಿ ಭಾರಿ ಸುದ್ದಿಯಾಗಿದ್ದಾಳೆ. ಇದರ ನಡುವೆ ಇದೇ ರೀತಿಯ ರಿವರ್ಸ್ ಘಟನೆ ನಡೆದಿದೆ. ಫೇಸ್‌ಬುಕ್ ಮೂಲಕ ಪರಿಚಯವಾಗಿ, ಪರಿಚಯ ಪ್ರೀತಿಯಾಗಿ ಇದೀಗ ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ ಅಂಜು ಭಾರಿ ಸಂಚಲನ ಸೃಷ್ಟಿಸಿದ್ದಾಳೆ. ಆದರೆ ಸೀಮಾ ಹೈದರ್ ಹಾಗೂ ಅಂಜು ಲವ್ ಸ್ಟೋರಿಯಲ್ಲಿ ಮಹತ್ವದ ವತ್ಯಾಸವೊಂದಿದೆ. ಅದೇನೆಂದರೆ ಸೀಮಾ ಹೈದರ್ ಅಕ್ರಮವಾಗಿ ಭಾರತ ಪ್ರವೇಶಿಸಿದರೆ, ಅಂಜು, ಎಲ್ಲಾ ದಾಖಲೆ ಪತ್ರ ನೀಡಿ ವೀಸಾ ಪಡೆದು ಪಾಕಿಸ್ತಾನಕ್ಕೆ ತೆರಳಿದ್ದಾಳೆ.

ಪಾಕಿಸ್ತಾನದ ಖೈಬರ್ ಪಕ್ತಾಂಕ್ವಾ ಪ್ರಾಂತ್ಯದ ನಿವಾಸಿಯಾಗಿರುವ ನಾಸ್ರುಲ್ಲಾ ಹಾಗೂ ಭಾರತದ ಅಂಜು ಫೇಸ್‌ಬುಕ್ ಮೂಲಕ ಪರಿಚಯವಾಗಿದ್ದಾರೆ. ಕೆಲ ದಿನಗಳ ಪರಿಚಯ ಪ್ರೀತಿಗೆ ತಿರುಗಿದೆ. ಪ್ರೀತಿ ಗಾಢವಾಗಿದೆ. ವರ್ಚುವಲ್ ಮೂಲಕವೇ ರೋಮ್ಯಾನ್ಸ್ ಶುರುವಾಗಿದೆ. ಇವರಿಬ್ಬರ ಸಂಬಂಧ, ಭಾರತ ಹಾಗೂ ಪಾಕಿಸ್ತಾನ ಸಂಬಂಧಕ್ಕಿಂತ ಗಟ್ಟಿಯಾಗಿ ಬೇರೂರಿದೆ. ಹೀಗಾಗಿ ಅಂತರ, ಎರಡು ರಾಷ್ಟ್ರಗಳ ಸಂಬಂಧ ಬಗ್ಗೆ ತಲೆಕೆಡಿಸಿಕೊಳ್ಳದ ಅಂಜು, ತನ್ನ ಇನಿಯನಿಗಾಗಿ ಪಾಕಿಸ್ತಾನಕ್ಕೆ ತೆರಳಲು ನಿರ್ಧರಿಸಿದ್ದಾಳೆ

ಇತ್ತ ನಾಸ್ರುಲ್ಲಾ ಪಾಕಿಸ್ತಾನಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾನೆ. ಬದುಕಿದರೆ ನಾಸ್ರುಲ್ಲಾ ಜೊತೆ ಮಾತ್ರ ಬದುಕುವುದಾಗಿ ನಿರ್ಧರಿಸಿದ ಅಂಜು, ನೇರವಾಗಿ ಎಲ್ಲಾ ದಾಖಲೆ ಪತ್ರ  ಸಲ್ಲಿಸಿ ಪಾಕಿಸ್ತಾನಕ್ಕೆ ತೆರಳಲು ವೀಸಾಗೆ ಅರ್ಜಿ ಹಾಕಿದ್ದಾಳೆ. ಜೂನ್ 21ಕ್ಕೆ ಅಂಜು ಪಾಕಿಸ್ತಾನಕ್ಕೆ ತೆರಳಲು ಅರ್ಜಿ ಹಾಕಿದ್ದಾಳೆ. ವೀಸಾ ಕೈಸೇರುತ್ತಿದ್ದಂತೆ ಅಂಜು ಪಾಕಿಸ್ತಾನಕ್ಕೆ ತೆರಳಿದ್ದಾಳೆ. ಪೋಷಕರು, ಕುಟಂಬಸ್ಥರು, ಜೊತೆಗೆ ಭಾರತಕ್ಕೆ ಗುಡ್ ಬೈ ಹೇಳಿ ಬದುಕು ಕಟ್ಟಿಕೊಳ್ಳಲು ಪಾಕಿಸ್ತಾನಕ್ಕೆ ತೆರಳಿದ್ದಾಳೆ.

ಎಲ್ಲಾ ದಾಖಲೆಯೊಂದಿಗೆ ಪಾಕಿಸ್ತಾನಕ್ಕೆ ತೆರಳಿದ ಅಂಜುವನ್ನು ಭದ್ರತಾ ಅಧಿಕಾರಿಗಳ ಹಲವು ಸುತ್ತಿನ ವಿಚಾರಣೆ ನಡೆಸಿದ್ದಾರೆ. ಸದ್ಯ ನಾಸ್ರುಲ್ಲಾ ಭೇಟಿಯಾಗಿರುವ ಅಂಜು ಮದುವೆಯಾಗಲು ನಿರ್ಧರಿಸಿದ್ದಾಳೆ. ಆದರೆ ಕೆಲ ಸುತ್ತಿನ ವಿಚಾರಣೆ ಬಾಕಿ ಇರುವುದರಿಂದ ಮದುವೆ ಮುಂದೂಡಲಾಗಿದೆ.

  • ಅಂಜುಗೆ ಫೇಸ್‌ ಬುಕ್‌ ನಲ್ಲಿ ಪರಿಚಯವಾದ ಪಾಕ್‌ ಮೂಲದ 29 ವರ್ಷದ ನಸ್ರುಲ್ಲಾನೊಂದಿಗೆ ಆತ್ಮೀಯವಾಗಿದ್ದರು. ಅಂಜು ಹಾಗೂ ನಸ್ರುಲ್ಲಾ ಪರಸ್ಪರ ಪ್ರೀತಿಸುತ್ತಿದ್ದು, ಪತಿಯ ಬಳಿ ಜೈಪುರಕ್ಕೆ ಹೋಗಿ ಬರುವುದಾಗಿ ಹೇಳಿ ಪ್ರಿಯಕರನನ್ನು ಭೇಟಿ ಆಗಲು ಪಾಕಿಸ್ತಾನಕ್ಕೆ ಅಂಜು ತೆರಳಿದ್ದಾರೆ ಎಂದು ತಿಳಿದಿದೆ.ಅಂಜು ಅವರು ಪಾಕ್‌ ತಲುಪಿದ ಬಳಿಕ ಅವರನ್ನು ಆರಂಭದಲ್ಲಿ ಪೊಲೀಸ್ ಕಸ್ಟಡಿಯಲ್ಲಿರಿಸಿದ್ದರು. ಆ ಬಳಿಕ ಅವರು ಪ್ರಯಾಣದ ದಾಖಲೆಗಳನ್ನು ಪರಿಶೀಲಿಸಿದ ನಂತರ ಬಿಡುಗಡೆ ಮಾಡಲಾಯಿತು ಎಂದು ವರದಿ ತಿಳಿಸಿದೆ.
    ಇತ್ತ ಅಂಜು ಪತಿ ಅರವಿಂದ್‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಕಳೆದ ಕೆಲ ದಿನಗಳ ಕಾಲ ಅಂಜು ಜೈಪುರಕ್ಕೆ ಹೋಗುವುದಾಗಿ ಹೇಳಿದ್ದಳು. ಆದರೆ 23 ಮಾಧ್ಯಮಗಳ ಮೂಲಕ ನನಗೆ ಪತ್ನಿ ಪಾಕಿಸ್ತಾನಕ್ಕೆ ಹೋಗಿದ್ದಾಳೆ ಎಂಬುದಾಗಿ ಗೊತ್ತಾಗಿದೆ. ಅದೇ ದಿನ ಸಂಜೆ 4 ಗಂಟೆಗೆ ಅಂಜು ವಾಟ್ಸಾಪ್‌ ಮೂಲಕ ಕರೆ ಮಾಡಿ ನಾನು ಲಾಹೋರ್‌ ನಲ್ಲಿದ್ದೇನೆ. ಮೂರು- ನಾಲ್ಕು ದಿನದಲ್ಲಿ ಬರುವುದಾಗಿ ಹೇಳಿದ್ದಾಳೆ. ವಿದೇಶದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸಿದ ಕಾರಣ 2020 ರಲ್ಲಿ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದಾಳೆ. ಅವಳು ಶೀಘ್ರದಲ್ಲಿ ಬರುತ್ತಾಳೆ ಎನ್ನುವ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ.ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ಅರವಿಂದ್ ಅವರೊಂದಿಗೆ ಮದುವೆಯಾಗಿದ್ದಾರೆ. ಅರವಿಂದ್ ಅವರು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಅಂಜು ಅವರ ಸಹೋದರನೊಂದಿಗೆ ಭಿವಾಡಿಯಲ್ಲಿ ಬಾಡಿಗೆ ಫ್ಲಾಟ್‌ನಲ್ಲಿ ವಾಸವಾಗಿದ್ದಾರೆ ಎನ್ನಲಾಗುತ್ತಿದೆ.

ಭಾರತಕ್ಕೆ ಬಂದ ಸೀಮಾ ಹೈದರ್ ಕತೆ ಕೊಂಚ ಭಿನ್ನ. ಕಾರಣ ಸೀಮಾ ಹೈದರ್,ಪಾಕಿಸ್ತಾನದಿಂದ ನೇರವಾಗಿ ನೇಪಾಳಕ್ಕೆ ತೆರಳಿದ್ದಾಳೆ. ಬಳಿಕ ಭಾರತದ ಪ್ರೀತಿಯ ಇನಿಯ ಸಚಿನ್ ನೇಪಾಳದಲ್ಲಿ ಒಂದು ವಾರ ತಂಗಿದ್ದಾರೆ. ಇದಾದ ಬಳಿಕ ಸೀಮಾ ಹೈದರ್ ಯಾವುದೇ ದಾಖಲೆ, ವೀಸಾ ಇಲ್ಲದೆ ಭಾರತ ಪ್ರವೇಶಿಸಿದ್ದಾಳೆ. ಸೀಮಾ ಹೈದರ್ ತನ್ನ ಪತಿಯನ್ನು ಬಿಟ್ಟು ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಆಗಮಿಸಿದ್ದಾಳೆ

Previous Post

Kodagu Rains: ಹೆದ್ದಾರಿ ಮೇಲೆ ಕುಸಿದು ಬಿದ್ದ ಗುಡ್ಡ, ಬೃಹತ್ ಮರ; ಮಡಿಕೇರಿ ಮಂಗಳೂರು ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತ

Next Post

Kondangeri Mosque: ಮಾದಕ ವ್ಯಸನಿಗಳಿಗೆ ಜಮಾತ್, ಮಸೀದಿಯಲ್ಲಿ ಪ್ರವೇಶವಿಲ್ಲ; ಡ್ರಗ್ಸ್ ನಿಯಂತ್ರಣಕ್ಕೆ ಕೊಡಗಿನ ಜಮಾತ್​​ನಿಂದ ದಿಟ್ಟ ಹೆಜ್ಜೆ

Next Post
Kondangeri Mosque: ಮಾದಕ ವ್ಯಸನಿಗಳಿಗೆ ಜಮಾತ್, ಮಸೀದಿಯಲ್ಲಿ ಪ್ರವೇಶವಿಲ್ಲ; ಡ್ರಗ್ಸ್ ನಿಯಂತ್ರಣಕ್ಕೆ ಕೊಡಗಿನ ಜಮಾತ್​​ನಿಂದ ದಿಟ್ಟ ಹೆಜ್ಜೆ

Kondangeri Mosque: ಮಾದಕ ವ್ಯಸನಿಗಳಿಗೆ ಜಮಾತ್, ಮಸೀದಿಯಲ್ಲಿ ಪ್ರವೇಶವಿಲ್ಲ; ಡ್ರಗ್ಸ್ ನಿಯಂತ್ರಣಕ್ಕೆ ಕೊಡಗಿನ ಜಮಾತ್​​ನಿಂದ ದಿಟ್ಟ ಹೆಜ್ಜೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.