Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಾಂಗ್ರೆಸ್​ನತ್ತ ಮುಖ ಮಾಡಿದ್ರಾ ಶಾಸಕ ಎಸ್​ಟಿ ಸೋಮಶೇಖರ್? ಕಟೀಲ್, ಸಿಟಿ ರವಿ ಮೇಲಿಂದ ಮೇಲೆ ಕಾಲ್

editor tv by editor tv
August 17, 2023
in ರಾಜ್ಯ
0
ಕಾಂಗ್ರೆಸ್​ನತ್ತ ಮುಖ ಮಾಡಿದ್ರಾ ಶಾಸಕ ಎಸ್​ಟಿ ಸೋಮಶೇಖರ್? ಕಟೀಲ್, ಸಿಟಿ ರವಿ ಮೇಲಿಂದ ಮೇಲೆ ಕಾಲ್
1.9k
VIEWS
Share on FacebookShare on TwitterShare on Whatsapp

 Edited By: Ashraf Kammaje

Updated on: Aug 17, 2023 | 1:18 PM

ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಂಡಿದ್ದು, ಕೈ ಗಾಳಕ್ಕೆ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಬಿದ್ದಿದ್ದಾರೆ ಎನ್ನುವ ಸುದ್ದಿಉ ಹರಿದಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಂಗ್ರೆಸ್​ ಶಾಸಕರೊಬ್ಬರು ಮಾತುಕತೆ ನಡೆಸಲು ಸೋಮಶೇಖರ್​ ಕಚೇರಿಗೆ ಆಗಮಿಸಿದ್ದಾರೆ. ಇದರಿಂದ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಸೋಮಶೇಖರ್​ ಅವರನ್ನು ಸಮಾಧಾನಪಡಿಸಲು ರಾಜ್ಯ ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

ಬೆಂಗಳೂರು, (ಆಗಸ್ಟ್ 17): ಕರ್ನಾಟಕ ರಾಜ್ಯ ರಾಜಕೀಯದಲ್ಲಿ (Karnataka Politics) ಮತ್ತೆ ಆಪರೇಷನ್ (Operation Hasta) ಬಿರುಗಾಳಿ ಎದ್ದಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಹೋಗಿರುವ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಕಾಂಗ್ರೆಸ್​ನ ಈ ಗಾಳದಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​​ ಬಿದ್ದಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ. ಬಿಜೆಪಿ ಶಾಸಕರ ಕಚೇರಿಗೆ ಕಾಂಗ್ರೆಸ್ ಶಾಸಕ ಭೇಟಿ ನೀಡುವುದು ಆಪರೇಷನ್ ಹಸ್ತಕ್ಕೆ ಮತ್ತಷ್ಟು ಪುಷ್ಠಿ ನೀಡಿದಂತಿದೆ. ಹೌದು…ಬೆಂಗಳೂರಿನ ಹೇರೋಹಳ್ಳಿಯಲ್ಲಿರುವ ಎಸ್. ಟಿ. ಸೋಮಶೇಖರ್ ಕಚೇರಿಗೆ ಭೇಟಿ ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಭೇಟಿ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಅಲ್ಲದೇ ಇದು ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಮತ್ತು ಮಾಜಿ ಸಚಿವ ಸಿಟಿ ರವಿ ಎಸ್​ಟಿ ಸೋಮಶೇಖರ್​ಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಸೋಮಶೇಖರ್​ ಕಾಂಗ್ರೆಸ್​​ ನಾಯಕರ ಜೊತೆ ಸಂಪರ್ಕದಲ್ಲಿ ಇರುವ ಸುದ್ದಿ ಗೊತ್ತಾಗುತ್ತಿದ್ದಂತೆಯೇ ಬೆಂಗಳೂರು ಉತ್ತರ ಸಂಸದ ಡಿ.ವಿ. ಸದಾನಂದ ಗೌಡ ಅವರು ಬೆಳಗ್ಗೆ ತಮ್ಮ ನಿವಾಸಕ್ಕೆ ಸೋಮಶೇಖರ್ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದಾರೆ.

ಅಲ್ಲದೇ ರಾಜ್ಯ ಬಿಜೆಪಿಯ ಪ್ರಮುಖರಾದ ಈ ಮೂವರು ನಾಯಕರು ಇಂದು ಬೆಳಗ್ಗೆ ದೂರವಾಣಿ ಮೂಲಕ ಸೋಮಶೇಖರ್ ಜೊತೆ ಮಾತುಕತೆ ನಡೆಸಿದ್ದು, ಈ ವೇಳೆ ಸೋಮಶೇಖರ್​, ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಬಳಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ. ನನಗೆ ರಾಜ್ಯ ನಾಯಕರ ಮೇಲೆ ಯಾವುದೇ ಬೇಸರ ಇಲ್ಲ, ವಿಷಾದ ಇಲ್ಲ. ಆದ್ರೆ, ಕ್ಷೇತ್ರದಲ್ಲಿ ಚುನಾವಣೆಯಲ್ಲಿ ನನ್ನ ವಿರುದ್ದವೇ ಚಟುವಟಿಕೆ ನಡೆಸಿದವರ ವಿರುದ್ಧ ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದರೆ ಹೇಗೆ? ನೀವು ಯಾವಾಗ ಸಿಗುತ್ತೀರಾ ಹೇಳಿ ನಾನು ಬಂದು ನಿಮ್ಮನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದಿದ್ದಾರೆ ಎನ್ನಲಾಗಿದೆ.

ಬೆಂಬಲಿಗರ ಜೊತೆ ಸೋಮಶೇಖರ್ ಸಭೆ

ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​ ಕಾಂಗ್ರೆಸ್​ ಸೇರ್ಪಡೆಯಾಗಲು ಮನಸ್ಸು ಮಾಡಿದಂತಿದೆ. ಇದಕ್ಕೆ ಪೂರಕವೆಂಬಂತೆ, ಸೋಮೇಶಖರ್​ ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಿದ್ದು, ಈ ಸಭೆಯಲ್ಲಿ ನೆಲಮಂಗಲ ಕಾಂಗ್ರೆಸ್ ಶಾಸಕ ಎನ್. ಶ್ರೀನಿವಾಸ್ ಪಾಲ್ಗೊಂಡಿರುವುದು ಅಚ್ಚರಿ ಮೂಡಿಸಿದೆ.

ಸ್ಥಳೀಯ ಮೂಲ ಬಿಜೆಪಿ ವಿರುದ್ಧ ಸೋಮಶೇಖರ್ ಅಸಮಾಧಾನ

ನಮ್ಮ ಕ್ಷೇತ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಂದಿದ್ದರು. ಆ ವೇಳೆ ನನ್ನ ಕ್ಷೇತ್ರದಲ್ಲಿನ ಕುಡಿಯುವ ನೀರು ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದೇನೆ. ಅವರು ಬರುವುದರ ಬಗ್ಗೆ ನನಗೆ ಯಾವ ಅಧಿಕಾರಿಯೂ ಹೇಳಿರಲಿಲ್ಲ. ಕಾರ್ಯಕ್ರಮದಲ್ಲಿ ಅವರ ಬಗ್ಗೆ ಒಂದೆರಡು ಒಳ್ಳೆಯ ಮಾತಾಡಿದ್ದು ಹೌದು. ಇದು ಹೊರತು ಪಡಿಸಿ ನಾನು ಅವರ ಜತೆ ರಾಜಕೀಯ ಮಾತನಾಡಿಲ್ಲ. ಕ್ಷೇತ್ರದಲ್ಲಿ ಸ್ಥಳೀಯ ಮೂಲ ಬಿಜೆಪಿಗರು ನನ್ನ ವಿರುದ್ಧ ಕೆಲಸ ಮಾಡಿದರು. ನನ್ನ ವಿರುದ್ಧ ಸೋಲಿಸಬೇಕು ಎಂದು ಆಡಿಯೋ ವೈರಲ್ ಮಾಡಿದರು. ಬಿಜೆಪಿಯವರೇ ನನ್ನನ್ನು ಕಾಂಗ್ರೆಸ್ ಗೆ ಕಳಿಸುವಂತಿದೆ. ನಾನು ಕಾಂಗ್ರೆಸ್ ಗೆ ಹೋಗುವ ಬಗ್ಗೆ ಎಲ್ಲೂ ಹೇಳಿಲ್ಲ. ನಮ್ಮ ಕಾರ್ಯಕರ್ತರ ಜೊತೆಗೂ ಹೇಳಿಕೊಂಡಿಲ್ಲ. ಎರಡು ಸಲ ಪ್ರಧಾನಿಯವರ ಕಾರ್ಯಕ್ರಮವನ್ನೂ ಮಾಡಿದ್ದೇನೆ. ಆದರೆ ಸ್ಥಳೀಯವಾಗಿ ನನ್ನ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.

ಕಾಂಗ್ರೆಸ್‌ನವರು ಬನ್ನಿ ಅಂತ ನನ್ನ ಕರೆದಿಲ್ಲ. ನಾನೂ ಹೋಗುತ್ತೇನೆ ಎಂದು ಅಲ್ಲಿ ಅರ್ಜಿ ಹಾಕಿಲ್ಲ. ಡಿ.ಕೆ. ಶಿವಕುಮಾರ್ ಅವರನ್ನು ಹೊಗಳಿದ್ದನ್ನೇ ಸ್ಥಳೀಯ ಬಿಜೆಪಿಗರು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ. ಈ ಹಿಂದೆ ಉಸ್ತುವಾರಿ ಸಚಿವನಾಗಿ ಮೈಸೂರಿಗೆ ಹೋಗಿದ್ದಾಗ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರನ್ನೂ ಹೊಗಳಿದ್ದೇನೆ. ನಾನು ಮುಂದೆಯೂ ಕಾಂಗ್ರೆಸ್ ಗೆ ಹೋಗುವ ಪ್ಲಾನ್ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹೀಗೆ ಎಸ್​ಟಿ ಸೋಮಶೇಖರ್​​ ಬಿಜೆಪಿ ತೊರೆದು ಕಾಂಗ್ರೆಸ್​ ಸೇರುವುದಿಲ್ಲ ಎಂದು ಹೇಳುತ್ತಿದ್ದಾರೆ. ಆದ್ರೆ, ಅವರು ಸ್ಥಳೀಯ ಕೆಲ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಅಲ್ಲದೇ ಬೆಂಬಲಿಗರ ಸಭೆ ಮಾಡುತ್ತಿದ್ದು, ಈ ಸಭೆಯಲ್ಲಿ ಕಾಂಗ್ರೆಸ್​ ಶಾಸಕ ಪಾಲ್ಗೊಂಡಿರುವ ಸಂಚಲನ ಮೂಡಿಸಿದೆ.

Previous Post

ಮಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ SDPI ಬೆಂಬಲಿಗರು ಅವಿರೋಧ ಆಯ್ಕೆ

Next Post

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ, ನಮ್ಮ ವಿರೋಧವಿದೆ: ಎಐಎಂಐಎಂ ಜಿಲ್ಲಾಧ್ಯಕ್ಷ

Next Post
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ, ನಮ್ಮ ವಿರೋಧವಿದೆ: ಎಐಎಂಐಎಂ ಜಿಲ್ಲಾಧ್ಯಕ್ಷ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ, ನಮ್ಮ ವಿರೋಧವಿದೆ: ಎಐಎಂಐಎಂ ಜಿಲ್ಲಾಧ್ಯಕ್ಷ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.