Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕೊಡಗು ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 3.53 ಕೋಟಿ ಮೌಲ್ಯದ ನಗದು, ಆಸ್ತಿ ಪತ್ತೆ!

editor tv by editor tv
August 17, 2023
in ರಾಜ್ಯ
0
ಕೊಡಗು ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 3.53 ಕೋಟಿ ಮೌಲ್ಯದ ನಗದು, ಆಸ್ತಿ ಪತ್ತೆ!
1.9k
VIEWS
Share on FacebookShare on TwitterShare on Whatsapp

ಲೋಕಾಯುಕ್ತ ಪೊಲೀಸರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಮುಟ್ಟಿಸಿದ್ದಾರೆ. ಸೂರ್ಯ ಮೂಡುವಷ್ಟರಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗಳ ಕದತಟ್ಟಿದ್ದ ಅಧಿಕಾರಿಗಳು ಕೊಡಗಿನಲ್ಲೂ ಅಪರ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ.

ಕೊಡಗು (ಆ.17): ಲೋಕಾಯುಕ್ತ ಪೊಲೀಸರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಮುಟ್ಟಿಸಿದ್ದಾರೆ. ಸೂರ್ಯ ಮೂಡುವಷ್ಟರಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗಳ ಕದತಟ್ಟಿದ್ದ ಅಧಿಕಾರಿಗಳು ಕೊಡಗಿನಲ್ಲೂ ಅಪರ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರು ಎದ್ದೇಳುವ ಮೊದಲೇ ಮಡಿಕೇರಿಯಲ್ಲಿರುವ ಮನೆಗೆ ಹೋಗಿ ಬಾಗಿಲು ತೆರೆಸಿದ್ದ ಲೋಕಾಯುಕ್ತ ಪೊಲೀಸರು ಅಕ್ರಮವನ್ನು ಬಯಲಿಗೆ ಎಳೆದಿದ್ದಾರೆ. ಮನೆಯಲ್ಲಿ 23 ಲಕ್ಷ ನಗದು, 21.34 ಲಕ್ಷದ ಮೌಲ್ಯದ 388.2 ಗ್ರಾಂ ಚಿನ್ನಾಭರಣ, 9.408 ರೂಪಾಯಿಯ ಮೌಲ್ಯದ 235 ಗ್ರಾಂ ಬೆಳ್ಳಿಯ ವಸ್ತುಗಳು, 5 ಲಕ್ಷ ಮೌಲ್ಯದ ಕಾರು, 35 ಲಕ್ಷ ರೂಪಾಯಿ ಫಿಕ್ಸೆಡ್ ಡೆಪಾಸಿಟ್, ಮತ್ತೊಂದು ಬ್ಯಾಂಕ್ ಖಾತೆಯಲ್ಲಿ 4 ಲಕ್ಷ ಹಣ ಹೊಂದಿದ್ದಾರೆ.

ಜೊತೆಗೆ ವಿವಿಧೆಡೆ 2.55 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಖರೀದಿಸಿದ್ದಾರೆ. ತಮ್ಮ ಊರು ಚಾಮರಾಜನಗರದ ಕೊಳ್ಳೆಗಾಲದಲ್ಲಿ 83 ಲಕ್ಷ ಮೌಲ್ಯದ 23.74 ಎಕರೆ ಭೂಮಿ, ಕೊಡಗಿನ ಸುಂಟಿಕೊಪ್ಪದಲ್ಲಿ 10 ಲಕ್ಷ ಮೌಲ್ಯದ ಸೈಟ್, ಭಾಗಮಂಡಲದಲ್ಲಿ 40.30 ಲಕ್ಷ ಮೌಲ್ಯದ 6.80 ಎಕರೆ ಕೃಷಿ ಭೂಮಿ, ಪಿರಿಯಾಪಟ್ಟಣದ ವಿವಿಧೆಡೆ 71  ಲಕ್ಷ ಮೌಲ್ಯದ 20 ಎಕರೆ ಕೃಷಿ ಭೂಮಿ, ಜೊತೆಗೆ ಮೈಸೂರಿನ ವಿವಿಧೆಡೆ 36 ಲಕ್ಷ ಮೌಲ್ಯದ ಎರಡು ನಿವೇಶನ ಜೊತೆಗೆ 14.70 ಲಕ್ಷ ಮೌಲ್ಯದ 1.09 ಎಕರೆ ಕೃಷಿ ಭೂಮಿ ಖರೀದಿಸಿರುವುದು ಪತ್ತೆಯಾಗಿದೆ. ಒಟ್ಟಿನಲ್ಲಿ ಸ್ಥಿರಾಸ್ತಿ ಮತ್ತು ಚರಾಸ್ತಿ ಸೇರಿ 3.53 ಕೋಟಿ ಮೌಲ್ಯದ ಸಂಪತ್ತನ್ನು ಬಯಲಿಗೆಳೆದಿದ್ದಾರೆ.

ಕೊಡಗು ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ಮೂವರು ಇನ್ಸ್ಪೆಕ್ಟರ್ಗಳು ಮತ್ತು ಹತ್ತಕ್ಕೂ ಹೆಚ್ಚು ಸಿಬ್ಬಂದಿಗಳ ತಂಡ ಬೆಳಿಗ್ಗೆ 5.50 ಗಂಟೆಗೆ ದಾಳಿ ನಡೆಸಿತ್ತು. ಮನೆಗೆ ದಾಳಿ ಮಾಡಿ ತಲಾಶ್ ಶುರುಮಾಡಿದ್ದ ಅಧಿಕಾರಿಗಳಿಗೆ ಶಾಕ್ ಆಗಿತ್ತು. ಎಡಿಸಿ ಅವರ ಮನೆಯ ಯಾವ ಕಡೆಗೆ ಹೋಗಿ ನೋಡಿದರೂ ದುಡ್ಡಿನ ಕಂತೆಗಳೇ ಸಿಕ್ಕಿದ್ದವು. ಅಡುಗೆ ಕೋಣೆ, ಮಲಗುವ ಕೋಣೆ ಹೀಗೆ ಯಾವ ಕಡೆ ಹೋಗಿ ತಡಕಾಡಿದ್ದರೂ ಕಂತೆ, ಕಂತೆ ಹಣ ದೊರೆತಿತ್ತು. ಆರಂಭದಲ್ಲಿ ಕೈಯಿಂದಲೇ ಲೆಕ್ಕ ಹಾಕುವುದಕ್ಕೆ ಶುರು ಮಾಡಿದ್ದ ಲೋಕಾಯುಕ್ತ ಪೊಲೀಸರಿಗೆ ನಂತರ ಮತ್ತೆ ಮತ್ತೆ ಹಣದ ಕಂತೆ ದೊರೆತ್ತಿದ್ದರಿಂದ ಬಳಿಕ ಹಣ ಎಣಿಸುವ ಯಂತ್ರವನ್ನೇ ಮನೆಗೆ ತಂದು ಲೆಕ್ಕ ಹಾಕಿದರು. 

ಸಾಕಷ್ಟು ಪ್ರಮಾಣದ ಕಾಯಿನ್ಗಳೇ ಮನೆಯಲ್ಲಿ ದೊರೆತ್ತಿದ್ದು ಲೆಕ್ಕ ಹಾಕುವುದಕ್ಕೆ ಲೋಕಾಯುಕ್ತ ಪೊಲೀಸರು ಸುಸ್ತು ಸುಸ್ತಾಗಿದ್ದಾರೆ. ಒಂದು ತಂಡ ಅವರ ಮನೆಯಲ್ಲಿ ಶೋಧ ಮುಂದುವರಿಸಿದ್ದಾಗಲೇ ಲೋಕಾಯುಕ್ತ ಪೊಲೀಸರ ಮತ್ತೊಂದು ತಂಡ ಅಪರ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ ಅವರನ್ನು ಮನೆಯಿಂದ ಕೊಡಗು ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ಅಪರ ಜಿಲ್ಲಾಧಿಕಾರಿ ಕಚೇರಿಗೆ ಕರೆದೊಯ್ದಿತು. ಅಲ್ಲಿಯೂ ಎರಡು ಗಂಟೆಗೂ ಹೆಚ್ಚು ಸಮಯ ಶೋಧ ನಡೆಸಿದ ಲೋಕಾಯುಕ್ತ ಪೊಲೀಸರಿಗೆ ಅಚ್ಚರಿಯೇ ಎದುರಾಗಿದೆ

ಮನೆ ಜೊತೆಗೆ ಕಚೇರಿಯಲ್ಲಿಯೂ ಸಾಕಷ್ಟು ಆಸ್ತಿ ದಾಖಲೆ ಪತ್ರಗಳು ದೊರೆತ್ತಿವೆ. ಡಾ. ನಂಜುಂಡೇಗೌಡ ಅವರು ತಾವು ಎಲ್ಲಿಲ್ಲೆ ಸೇವೆ ಸಲ್ಲಿಸಿದ್ದಾರೆಯೋ ಅಲ್ಲೆಲ್ಲಾ ಆಸ್ತಿ ಖರೀದಿಸಿದ್ದಾರೆ ಎನ್ನುವುದು ಲೋಕಾಯುಕ್ತ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಸ್ಥಳಕ್ಕೆ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಪ್ರತಿಕ್ರಿಯಿಸಿದ ಅವರು ಸದ್ಯ ಇನ್ನೂ ಕೂಡ ತನಿಖೆ ನಡೆಯುತ್ತಿದ್ದು ಬಳಿಕ ಮಾಹಿತಿ ನೀಡುವುದಾಗಿ ತಿಳಿಸಿದರು. ಒಟ್ಟಿನಲ್ಲಿ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ಭೇಟೆಯಾಡಿ ಅವರನ್ನು ಖೆಡ್ಡಾಕ್ಕೆ ಬೀಳಿಸಿದ್ದಾರೆ. 

Previous Post

ಬೆಂಗಳೂರಲ್ಲಿ ಪೋಕ್ಸೋ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ : ಸಾಯುವ ಮೊದಲು ಅಪ್ರಾಪ್ತೆಯ ಖಾಸಗಿ ಪೋಟೊ, ವಿಡಿಯೋ ವೈರಲ್

Next Post

ಗಂಜೀಮಠ ಗ್ರಾ.ಪಂ. ‘ಕೈ’ವಶ: ಬಹುಮತ ಇದ್ದರೂ ಅಧಿಕಾರ ಕಳೆದುಕೊಂಡ ಬಿಜೆಪಿ

Next Post
ಗಂಜೀಮಠ ಗ್ರಾ.ಪಂ. ‘ಕೈ’ವಶ: ಬಹುಮತ ಇದ್ದರೂ ಅಧಿಕಾರ ಕಳೆದುಕೊಂಡ ಬಿಜೆಪಿ

ಗಂಜೀಮಠ ಗ್ರಾ.ಪಂ. ‘ಕೈ’ವಶ: ಬಹುಮತ ಇದ್ದರೂ ಅಧಿಕಾರ ಕಳೆದುಕೊಂಡ ಬಿಜೆಪಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.