Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮತ್ತೆ ರೀ ಓಪನ್ ಆಗುತ್ತಾ ಸುರತ್ಕಲ್ ಟೋಲ್?

editor tv by editor tv
September 2, 2023
in ಕರಾವಳಿ
0
ಮತ್ತೆ ರೀ ಓಪನ್ ಆಗುತ್ತಾ ಸುರತ್ಕಲ್ ಟೋಲ್?
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಈ ಬಾರಿಯ ಚುನಾವಣೆ ವೇಳೆ ಭಾರೀ ಸುದ್ದು ಮಾಡಿದ ಟೋಲ್ ಪ್ಲಾಜಾ ಅಂದ್ರೆ ಅದು ಸುರತ್ಕಲ್ ಟೋಲ್. ಇದು ಅನದಿಕೃತ ಟೋಲ್, ಇದನ್ನು ರದ್ದು ಮಾಡಬೇಕು ಅಂತಾ ಸಾಕಷ್ಟು ಸಂಘಟನೆಗಳು ಹೋರಾಟ ಮಾಡಿದವು. ಕರಾವಳಿಗರ ಭಾರೀ ಹೋರಾಟದಿಂದ ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಬಂದ್ ಮಾಡಲಾಯ್ತು. ಬಳಿಕ ಇದರ ಕ್ರೆಡಿಟ್ ಕಿತ್ತಾಟ ಕೂಡ ನಡೆಯಿತು. ಆದರೆ ಈಗ ಈ ಟೋಲ್ ಮತ್ತೆ ಕಾರ್ಯಾರಂಭವಾಗುವ ಲಕ್ಷಣಗಳು ಕಾಣುತ್ತಿದೆ

ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ (Surathakl Toll) ನಿಂದ ಸಾಕಷ್ಟು ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹ ಮಾಡುತ್ತಿತ್ತು. ಆದರೆ ಇದು ಅಕ್ರಮ ಟೋಲ್ ಅಂತಾ ಇದರ ವಿರುದ್ಧ ಸಾಕಷ್ಟು ಸಂಘಟನೆಗಳು, ರಾಜಕೀಯ ಪಕ್ಷಗಳು ನಿರಂತರ ಪ್ರತಿಭಟನೆಗಳನ್ನು ಮಾಡಿದ್ವು. ಚುನಾವಣಾ ವರ್ಷವನ್ನು ಗುರಿಯಿಟ್ಟುಕೊಂಡು ಮಾಡಿದ ಬೃಹತ್ ಪ್ರತಿಭಟನೆಯಿಂದಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಈ ಟೋಲ್ ರದ್ದು ಮಾಡಲಾಗಿದೆ ಅಂತಾ ಒಂದು ನೋಟಿಫಿಕೇಷನ್ ನ್ನು ಮಾಡಿಸಿದ್ರು. ಆ ಬಳಿಕ ಟೋಲ್ ನಲ್ಲಿ ಹಣ ಸಂಗ್ರಹ ನಿಲ್ಲಿಸಲಾಗಿತ್ತು. ಇನ್ನೇನು ಈ ಟೋಲ್ ಪ್ಲಾಜಾವನ್ನು ತೆರವುಗೊಳಿಸುತ್ತಾರೆ. ಅನ್ನುವಷ್ಟರಲ್ಲಿ ಈಗ ಮತ್ತೆ ಟೋಲ್ ಸಂಗ್ರಹದ ಆತಂಕ ಎದುರಾಗಿದೆ.

ಎಂಟು ತಿಂಗಳಿಂದೀಚೆಗೆ ಈ ಟೋಲ್ ಪ್ಲಾಜಾ ನಿರ್ವಹಣೆಯಿಲ್ಲದೆ ಶಿಥಿಲವಾಗಿತ್ತು. ರಸ್ತೆಯಲ್ಲಿ ಹೊಂಡಗಳು ಸೃಷ್ಟಿಯಾಗಿ ಹಲವು ಅಪಘಾತಗಳಿಗೂ ಕಾರಣವಾಗಿತ್ತು. ಶಿಥಿಲ ಟೋಲ್ ಪ್ಲಾಜಾದ ಅವಶೇಷಗಳು ಕುಸಿದು ಅವಘಡ ಸಂಭವಿಸುವ ಸಾಧ್ಯತೆಯೂ ಇತ್ತು. ಹಾಗಾಗಿ ತೆರವುಗೊಳಿಸುವಂತೆ ನಾಗರಿಕರ ಆಗ್ರಹವೂ ಕೇಳಿಬಂದಿತ್ತು. ಆದರೆ ಈಗ ಈ ಟೋಲ್ ಪ್ಲಾಜಾವನ್ನು ತೆರವುಗೊಳಿಸುವ ಬದಲು ಭರದಿಂದ ದುರಸ್ತಿಗೊಳಿಸಲಾಗುತ್ತಿದೆ. ವಾಹನಗಳು ಗುದ್ದಿ ಮುರಿದು ಬಿದ್ದಿದ್ದ ಕಂಬ, ಶಿಥಿಲ ಛಾವಣಿಯನ್ನು ರಿಪೇರಿ ಮಾಡಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಟೋಲ್ ಹೋರಾಟ ಸಮಿತಿಯ ಸದಸ್ಯರು ಟೋಲ್ ಪ್ಲಾಜಾ ಬಳಿ ಭೇಟಿ ನೀಡಿದ್ರು.

ಇನ್ನು ಈ ಟೋಲ್ ನ ಕಲೆಕ್ಷನ್ ನಿಲ್ಲಸಲು ಸಾದ್ಯವಿಲ್ಲ ಅನ್ನೊದೇ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ವಾದವಾಗಿತ್ತು. ಆದ್ರಿಂದ ಹೆಜಮಾಡಿ ಟೋಲ್ ಗೆ ಇದನ್ನು ಮರ್ಜ್ ಮಾಡುವ ಭರವಸೆ ಮೇಲೆ ಈ ಟೋಲ್ ನ್ನು ರದ್ದು ಮಾಡಲಾಗಿತ್ತು. ಆದರೆ ಹೆಜಮಾಡಿಯಲ್ಲಿರೋ ನವಯುಗ ಟೋಲ್ ಗೆ ಇದನ್ನು ಮರ್ಜ್ ಮಾಡಲು ಸಾಧ್ಯವಾಗಿಲ್ಲ. ಅಲ್ಲದೇ ಸುರತ್ಕಲ್ ನಿಂದ ಬಿ.ಸಿ.ರೋಡ್ ವರೆಗೂ ರಸ್ತೆ ನಿರ್ವಹಣೆಯನ್ನು ಇದೇ ಟೋಲ್ ನಲ್ಲಿ ಸಂಗ್ರಹವಾದ ಹಣದಿಂದ ಮಾಡಬೇಕು. ಆದರಿಂದ ಟೋಲ್ ಮತ್ತೆ ಆರಂಭಿಸಲು ಎನ್.ಹೆಚ್.ಎ.ಐ ಹುನ್ನಾರ ನಡೆಸಿದೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ.

ಈ ಬಗ್ಗೆ ದೂರುಗಳು ಬಂದಿದೆ. ಆದ್ರೆ ಟೋಲ್ ಪುನಃ ತೆರೆಯುವ ಯೋಚನೆ ಸದ್ಯಕ್ಕಿಲ್ಲ. ಸುರತ್ಕಲ್‍ನ ಟೋಲ್ ಪ್ಲಾಜಾವನ್ನು ಹೆಜಮಾಡಿಯ ಪ್ಲಾಜಾದೊಂದಿಗೆ ವಿಲೀನಗೊಳಿಸಲು ರಾಜ್ಯ ಸರಕಾರದ ಸಹಕಾರ ಅಗತ್ಯವಿದೆ.ವಿಲೀನ ಆಗುವ ಪ್ರಕ್ರಿಯೆ ಹಾಗೂ ಕಾರ್ಯದ ರೂಪುರೇಷೆ ಸೂಕ್ತ ನಿರ್ಧಾರಕ್ಕೆ ಬರುವವರೆಗೆ ಸುರತ್ಕಲ್ ಟೋಲ್ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಇರಿಸಿಕೊಳ್ಳಲು ದುರಸ್ತಿ ಮಾಡುತ್ತಿದ್ದೇವೆ. ವಿಲೀನದ ಅನುಮತಿಗಾಗಿ ಕಾಯುತ್ತಿದ್ದೇವೆ.

ಸದ್ಯ ರಸ್ತೆ ನಿರ್ವಣೆಗಾಗಿ ಹಾಗೂ ಟೋಲ್ ವಿಲೀನವಾಗದ ಕಾರಣ ಇದನ್ನು ರಿಓಪನ್ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇನ್ ಸೈಡ್ ವರ್ಕ್ ಮಾಡುತ್ತಿದೆ ಅನ್ನೊ ಗುಸುಗುಸು ಕೇಳುತ್ತಿದೆ. ಹೀಗಾಗಿ ಮತ್ತೆ ಪ್ರಯಾಣಿಕರ ಜೇಬಿಗೆ ಬರೆ ಬೀಳೋ ಎಲ್ಲಾ ಲಕ್ಷಣಗಳು ಕಾಣುತ್ತಿದೆ.

Previous Post

ಬಡವರ ಸರ್ಕಾರ ಬರಲಿದೆ, ಅದಾನಿಯದ್ದಲ್ಲ: ಛತ್ತೀಸ್‌ಗಢದಲ್ಲಿ ರಾಹುಲ್ ಗಾಂಧಿ

Next Post

ಮಂಗಳೂರು ಡ್ರಗ್ಸ್‌ ಜಾಲದ ಕಿಂಗ್‌ಪಿನ್‌ ನೈಜೀರಿಯಾದ ಮಹಿಳೆ ಬೆಂಗಳೂರಿನಲ್ಲಿ ಬಂಧನ

Next Post
ಮಂಗಳೂರು ಡ್ರಗ್ಸ್‌ ಜಾಲದ ಕಿಂಗ್‌ಪಿನ್‌ ನೈಜೀರಿಯಾದ ಮಹಿಳೆ ಬೆಂಗಳೂರಿನಲ್ಲಿ ಬಂಧನ

ಮಂಗಳೂರು ಡ್ರಗ್ಸ್‌ ಜಾಲದ ಕಿಂಗ್‌ಪಿನ್‌ ನೈಜೀರಿಯಾದ ಮಹಿಳೆ ಬೆಂಗಳೂರಿನಲ್ಲಿ ಬಂಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.