| Edited By:Ashraf kammaje
Updated on:Sep 09, 2023 | 5:15 PM

ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಸರಣಿ ಅಪಘಾತವಾಗಿದ್ದು, ಕಾರು ನುಜ್ಜುಗುಜ್ಜು ಆಗಿದೆ. ಗಂಭೀರವಾಗಿ ಗಾಯಗೊಂಡ ಕಾರು ಚಾಲಕನನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಹೌದು, ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ಮಿನಿ ಲಾರಿ, ಕಾರು, ಬಸ್ಸಿನ ನಡುವೆ ಅಪಘಾತವಾಗಿದೆ.

ದಕ್ಷಿಣ ಕನ್ನಡ, ಸೆ.09: ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಸರಣಿ ಅಪಘಾತ (Accident)ವಾಗಿದ್ದು, ಕಾರು ನುಜ್ಜುಗುಜ್ಜು ಆಗಿದೆ. ಗಂಭೀರವಾಗಿ ಗಾಯಗೊಂಡ ಕಾರು ಚಾಲಕನನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಹೌದು, ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ಮಿನಿ ಲಾರಿ, ಕಾರು, ಬಸ್ಸಿನ ನಡುವೆ ಅಪಘಾತವಾಗಿದೆ. ಹಠಾತ್ ಬ್ರೇಕ್ ಹಾಕಿದ ಪರಿಣಾಮ ಈ ಅವಘಡ ಸಂಭವಿಸಿದೆ. ಸಡನ್ ಬ್ರೇಕ್ ಹಾಕಿದ ಕಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿಯಾಗಿದ್ದು, ಅದರ ಹಿಂದೆ ಇದ್ದ ಕಾರು ಸಡನ್ ಬ್ರೇಕ್ ಹಾಕಿದ್ದಾರೆ. ಆದರೆ, ದುರಂತವೆಂಬಂತೆ ವೇಗದಲ್ಲಿದ್ದ ಕೇರಳ ಸಾರಿಗೆ ಬಸ್, ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಅಪ್ಪಚ್ಚಿಯಾಗಿದೆ. ಈ ವೇಳೆ ಕಾರಿನಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ ದಿನೇಶ್ ಎಂಬುವವರು ಸಿಲುಕಿದ್ದಾರೆ. ಇನ್ನು ಈ ಭೀಕರ ಅಪಘಾತದ ದೃಶ್ಯ ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

