Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಆಫ್ರಿಕಾದ ಮೊರಾಕ್ಕೋದಲ್ಲಿ ಸಾವಿನ ಸಂಖ್ಯೆ 1050ಕ್ಕೆ ಏರಿಕೆ: ಎಲ್ಲಾ ನೆರವು ನೀಡಲು ಸಿದ್ಧ: ಪ್ರಧಾನಿ ಘೋಷಣೆ

editor tv by editor tv
September 10, 2023
in ವಿದೇಶ
0
ಆಫ್ರಿಕಾದ ಮೊರಾಕ್ಕೋದಲ್ಲಿ ಸಾವಿನ ಸಂಖ್ಯೆ 1050ಕ್ಕೆ ಏರಿಕೆ: ಎಲ್ಲಾ ನೆರವು ನೀಡಲು ಸಿದ್ಧ: ಪ್ರಧಾನಿ ಘೋಷಣೆ
1.9k
VIEWS
Share on FacebookShare on TwitterShare on Whatsapp

ಅಟ್ಲಾಂಟಿಕ್‌ ಹಾಗೂ ಮೆಡಿಟರೇನಿಯನ್‌ ಸಮುದ್ರ ತೀರದಲ್ಲಿರುವ ಉತ್ತರ ಆಫ್ರಿಕಾ ಖಂಡದ ಮೊರಾಕ್ಕೊ (Morocco) ದೇಶದಲ್ಲಿ ಶುಕ್ರವಾರ ತಡರಾತ್ರಿ 6.8 ತೀವ್ರತೆಯ ಅತ್ಯಂತ ಶಕ್ತಿಶಾಲಿ ಭೂಕಂಪ ಸಂಭವಿಸಿದ್ದು, 1050 ಮಂದಿ ಸಾವಿಗೀಡಾಗಿದ್ದಾರೆ.

ಮ್ಯಾರಕೇಶ್‌: ಅಟ್ಲಾಂಟಿಕ್‌ ಹಾಗೂ ಮೆಡಿಟರೇನಿಯನ್‌ ಸಮುದ್ರ ತೀರದಲ್ಲಿರುವ ಉತ್ತರ ಆಫ್ರಿಕಾ ಖಂಡದ ಮೊರಾಕ್ಕೊ (Morocco) ದೇಶದಲ್ಲಿ ಶುಕ್ರವಾರ ತಡರಾತ್ರಿ 6.8 ತೀವ್ರತೆಯ ಅತ್ಯಂತ ಶಕ್ತಿಶಾಲಿ ಭೂಕಂಪ ಸಂಭವಿಸಿದ್ದು, 1050 ಮಂದಿ ಸಾವಿಗೀಡಾಗಿದ್ದಾರೆ. 750ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 205 ಜನರ ಸ್ಥಿತಿ ಗಂಭೀರವಾಗಿದೆ. ಅವಶೇಷಗಳಡಿ ಜನರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆಗೆ ಹಲವು ಅಡ್ಡಿಗಳು ಎದುರಾಗಿವೆ. ಹೀಗಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಭೂಕಂಪದಿಂದಾಗಿ (earthquake) ಅಟ್ಲಾಸ್‌ ಪರ್ವತಶ್ರೇಣಿಯಿಂದ (Atlas Mountain) ಐತಿಹಾಸಿಕ ನಗರಿ ಮ್ಯಾರಕೇಶ್‌ವರೆಗೆ ಇರುವ ನಗರ, ಹಳ್ಳಿಗಳ ಹಲವಾರು ಕಟ್ಟಡಗಳು ಸಂಪೂರ್ಣ ಅಥವಾ ಭಾಗಶಃ ಕುಸಿದಿವೆ. ವಿದ್ಯುತ್‌ ಹಾಗೂ ರಸ್ತೆ ಸಂಪರ್ಕ ಹಲವು ಪ್ರದೇಶಗಳಲ್ಲಿ ಕಡಿತಗೊಂಡಿದೆ. ಗಾಯಾಳುಗಳನ್ನು ಸಾಗಣೆ ಮಾಡುವುದಕ್ಕೆ ಆ್ಯಂಬುಲೆನ್ಸ್‌ ಸಂಚರಿಸುವುದಕ್ಕೂ ಆಗದಷ್ಟು ರಸ್ತೆಗಳ ಮೇಲೆ ಬಂಡೆಗಳು ಕುಸಿದಿದ್ದು, ರಕ್ಷಣಾ ತಂಡಗಳು ರಸ್ತೆ ತೆರವುಗೊಳಿಸುವ ಕಾರ್ಯದಲ್ಲಿ ನಿರತವಾಗಿವೆ.

45 ಲಕ್ಷ ಜನರು ನೆಲೆಸಿರುವ ಮೊರಾಕ್ಕೊದ (Morocco) ವಾಣಿಜ್ಯ ನಗರ ಮ್ಯಾರಕೇಶ್‌ನಿಂದ (Marrakesh) ದಕ್ಷಿಣ ದಿಕ್ಕಿಗೆ 70 ಕಿ.ಮೀ. ದೂರದಲ್ಲಿರುವ ಅಲ್‌ ಹೌಜ್‌ ಪ್ರಾಂತ್ಯದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ. ಭೂಮಿಯ ಮೇಲಿನ ಪದರದಿಂದ 18 ಕಿ.ಮೀ. ಆಳದಲ್ಲಿ ಈ ಕಂಪನ ಸಂಭವಿಸಿದೆ ಎಂದು ಅಮೆರಿಕದ ಭೂಗರ್ಭ ಸರ್ವೇಕ್ಷಣಾಲಯ ತಿಳಿಸಿದ್ದರೆ, 11 ಕಿ.ಮೀ. ಆಳದಲ್ಲಿ ಕಂಪನ ಉಂಟಾಗಿದೆ ಎಂದು ಮೊರೊಕ್ಕೊದ ಭೂಕಂಪನ ಸಂಸ್ಥೆ (seismological agency) ತಿಳಿಸಿದೆ. ಇಷ್ಟೊಂದು ಆಳದಲ್ಲಿ ಸಂಭವಿಸುವ ಭೂಕಂಪಗಳು ಅಪಾಯಕಾರಿಯಾಗಿಯೇ ಇರುತ್ತವೆ ಎಂದು ತಜ್ಞರು ತಿಳಿಸಿದ್ದಾರೆ. ಸಾಮಾನ್ಯವಾಗಿ ಉತ್ತರ ಆಫ್ರಿಕಾದಲ್ಲಿ ಭೂಕಂಪನಗಳೇ ಬಲು ಅಪರೂಪ ಎಂಬುದು ಗಮನಾರ್ಹ.

ಮೃತರಲ್ಲಿ ಹೆಚ್ಚಿನವರು ಮ್ಯಾರಕೇಶ್‌ ಹಾಗೂ ಭೂಕಂಪನದ ಕೇಂದ್ರ ಬಿಂದು ಇರುವ ಐದು ಪ್ರಾಂತ್ಯಗಳಿಗೆ ಸೇರಿದವರಾಗಿದ್ದಾರೆ. ಮೊರೊಕ್ಕೊ ದುರಂತಕ್ಕೆ ಜಗತ್ತಿನಾದ್ಯಂತ ಹಲವಾರು ದೇಶಗಳು ಕಂಬನಿ ಮಿಡಿದಿದ್ದು, ನೆರವು ನೀಡಲು ಮುಂದೆ ಬಂದಿವೆ.

ಮಲಗಿದ್ದವರು ಎದ್ದೋಡಿದರು

ಶುಕ್ರವಾರ ರಾತ್ರಿ 11.11ರ ವೇಳೆಗೆ ಮೊರಾಕ್ಕೊದಲ್ಲಿ ಭೂಕಂಪನ ಸಂಭವಿಸಿದೆ. ಅಷ್ಟೊತ್ತಿಗಾಗಲೇ ಮಲಗಿದ್ದವರು ಕಂಪನದಿಂದ ಹೆದರಿ, ಗಾಬರಿಗೆ ಒಳಗಾಗಿ ಬೀದಿಗಳಿಗೆ ಓಡಿ ಬಂದಿದ್ದಾರೆ. ಮ್ಯಾರಕೇಶ್‌ನ ರಸ್ತೆಗಳಲ್ಲಿ ತಡರಾತ್ರಿಯಾದರೂ ಜನರು ಗುಂಪುಗುಂಪಾಗಿ ನಿಂತಿರುವ, ಮನೆಯೊಳಕ್ಕೆ ವಾಪಸ್‌ ಹೋಗಲು ಹಿಂಜರಿಯುತ್ತಿರುವ ದೃಶ್ಯಗಳು ಕಂಡುಬಂದಿವೆ.

ಮಾಡಿಟ್ಟಅಡುಗೆ ಹಾಗೂ ಗೋಡೆಗೆ ನೇತು ಹಾಕಿದ್ದ ವಸ್ತುಗಳೆಲ್ಲಾ ನೆಲಕ್ಕೆ ಬಿದ್ದವು. ಕುರ್ಚಿ ಮೇಲೆ ಕೂತಿದ್ದವರೆಲ್ಲ ಕೆಳಕ್ಕೆ ಬಿದ್ದರು. ಇಡೀ ಮನೆಯೇ ಅಲುಗಾಡಿತು ಎಂದು – ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಎಲ್ಲ ನೆರವು ನೀಡಲು  ಸಿದ್ಧ: ಪ್ರಧಾನಿ ಮೋದಿ

ನವದೆಹಲಿ: ಉತ್ತರ ಆಫ್ರಿಕಾದ ಮೊರಾಕ್ಕೊ ದೇಶದಲ್ಲಿ ಭೂಕಂಪ ಸಂಭವಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅತೀವ ದುಃಖ ವ್ಯಕ್ತಪಡಿಸಿದ್ದಾರೆ. ಈ ಸಂಕಷ್ಟದ ಸಂದರ್ಭದಲ್ಲಿ ಮೊರೊಕ್ಕೊಗೆ ಸಾಧ್ಯವಿರುವ ಎಲ್ಲ ನೆರವು ನೀಡಲೂ ಭಾರತ ಸಿದ್ಧವಿದೆ ಎಂದು ಘೋಷಿಸಿದ್ದಾರೆ. ಜಿ20 ಶೃಂಗಸಭೆಯಲ್ಲಿ ಶನಿವಾರ ಪ್ರಾಸ್ತಾವಿಕ ಭಾಷಣ ಮಾಡಿದ ಮೋದಿ ಅವರು, ಭೂಕಂಪದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದರು. ‘ಈ ಸಂಕಷ್ಟದ ಸಂದರ್ಭದಲ್ಲಿ ಇಡೀ ವಿಶ್ವ ಸಮುದಾಯ ಮೊರಾಕ್ಕೊ ಜತೆಗಿದೆ. ಸಾಧ್ಯವಿರುವ ಎಲ್ಲ ನೆರವು ನೀಡಲು ನಾವು ಸಿದ್ಧವಿದ್ದೇವೆ’ ಎಂದು ತಿಳಿಸಿದರು.

ಮತ್ತೊಂದೆಡೆ ಟ್ವೀಟ್‌ ಮಾಡಿರುವ ಮೋದಿ ಅವರು, ‘ಮೊರಾಕ್ಕೊ ಭೂಕಂಪದಿಂದ ಜೀವಹಾನಿಯಾಗಿರುವುದಕ್ಕೆ ಅತೀವ ನೋವಾಗಿದೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

Previous Post

ಕೊಲಂಬೋದಲ್ಲಿ ಭಾರತ-ಪಾಕ್ ಹಣಾಹಣಿ; ಇಂದಿನ ಮ್ಯಾಚ್‌ಗೆ ವರುಣನ ಭೀತಿ

Next Post

City in England; ಸ್ವತಃ ದಿವಾಳಿ ಎಂದು ಘೋಷಿಸಿಕೊಂಡ ಬರ್ಮಿಂಗ್‌ಹ್ಯಾಮ್‌

Next Post
City in England; ಸ್ವತಃ ದಿವಾಳಿ ಎಂದು ಘೋಷಿಸಿಕೊಂಡ ಬರ್ಮಿಂಗ್‌ಹ್ಯಾಮ್‌

City in England; ಸ್ವತಃ ದಿವಾಳಿ ಎಂದು ಘೋಷಿಸಿಕೊಂಡ ಬರ್ಮಿಂಗ್‌ಹ್ಯಾಮ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.