
ಕಾವೇರಿ ಸಮಸ್ಯೆ ಕುರಿತು ಕರ್ನಾಟಕದ ವಾದವನ್ನು ತಳ್ಳಿ ಹಾಕಿದರು. ಅಲ್ಲದೇ ‘ಕಾವೇರಿ ವಿಷಯದ ಕುರಿತು ಮಾತುಕತೆಗೆ ಅವಕಾಶವಿಲ್ಲ. ಏಕೆಂದರೆ ಹಲವು ವರ್ಷಗಳಿಂದ ನಡೆದ ಮಾತುಕತೆಗಳು ಯಾವುದೇ ಫಲಿತಾಂಶ ನೀಡಿಲ್ಲ. ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ತಮಿಳುನಾಡು ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ: ತಮಿಳುನಾಡು ಜಲ ಸಂಪನ್ಮೂಲ ಸಚಿವ ದುರೈಮುರುಗನ್

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಮಿಳುನಾಡು ಜಲ ಸಂಪನ್ಮೂಲ ಸಚಿವ ದುರೈಮುರುಗನ್, ಕಾವೇರಿ ಸಮಸ್ಯೆ ಕುರಿತು ಕರ್ನಾಟಕದ ವಾದವನ್ನು ತಳ್ಳಿ ಹಾಕಿದರು. ಅಲ್ಲದೇ ‘ಕಾವೇರಿ ವಿಷಯದ ಕುರಿತು ಮಾತುಕತೆಗೆ ಅವಕಾಶವಿಲ್ಲ. ಏಕೆಂದರೆ ಹಲವು ವರ್ಷಗಳಿಂದ ನಡೆದ ಮಾತುಕತೆಗಳು ಯಾವುದೇ ಫಲಿತಾಂಶ ನೀಡಿಲ್ಲ. ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ತಮಿಳುನಾಡು ಯಾವುದೇ ರಾಜೀ ಮಾಡಿಕೊಳ್ಳುವುದಿಲ್ಲ’ ಎಂದಿದ್ದಾರೆ.

ಇನ್ನು ಕಾವೇರಿ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆ ಮಾಡಬೇಕೆಂಬ ಕರ್ನಾಟಕದ ವಾದವನ್ನು ತಳ್ಳಿ ಹಾಕಿದ ಮುರುಗನ್, ಕರ್ನಾಟಕವು ‘ಕಾವೇರಿ ಜಲವಿವಾದ ನ್ಯಾಯಮಂಡಳಿ’ಯನ್ನು ಸಂಪರ್ಕಿಸಬೇಕಿತ್ತು. ಆದರೆ ಈಗ ಇದರ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಅಂತಿಮವಾಗಿರಲಿದೆ’ ಎಂದಿದ್ದಾರೆ.
