Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಟಿಪ್ಪು ಸಮಾಧಿ ಬಳಿ ಅಶ್ಲೀಲ ನೃತ್ಯದ ಶೂಟಿಂಗ್‌: ಶಾಸಕ ತನ್ವೀರ್‌ ಸೇಠ್‌ ವಿರುದ್ಧ ಹರಿಹಾಯ್ದ ಎಸ್‌ಡಿಪಿಐ

editor tv by editor tv
September 29, 2023
in ರಾಜ್ಯ
0
ಟಿಪ್ಪು ಸಮಾಧಿ ಬಳಿ ಅಶ್ಲೀಲ ನೃತ್ಯದ ಶೂಟಿಂಗ್‌: ಶಾಸಕ ತನ್ವೀರ್‌ ಸೇಠ್‌ ವಿರುದ್ಧ ಹರಿಹಾಯ್ದ ಎಸ್‌ಡಿಪಿಐ
1.9k
VIEWS
Share on FacebookShare on TwitterShare on Whatsapp

ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಿದ ಪುರಾತತ್ವ ಇಲಾಖೆ ಹಾಗೂ ಸ್ಥಳೀಯವಾಗಿ ಈ ಸ್ಥಳದ ಪಾವಿತ್ರ್ಯತೆಯ ರಕ್ಷಣೆ ಮಾಡುವ ಹೊಣೆ ಹೊತ್ತಿರುವ ಎಸ್ಟೇಟ್‌ ಸಮಿತಿ ಸ್ಥಳದ ಮಹತ್ವದ ಬಗ್ಗೆ ಚಿತ್ರ ನಿರ್ಮಾಪಕರಿಗೆ ಮನವರಿಕೆ ಮಾಡಿಕೊಡಬೇಕಿತ್ತು. ಆದರೇ ಚಿತ್ರ ನಿರ್ಮಾಪಕರು ನೀಡಿದ ಹಣದ ಆಸೆಗೆ ಟಿಪ್ಪು ಸುಲ್ತಾನ್‌ ವಕ್ಫ್‌ ಎಸ್ಟೇಟ್‌ ಸಮಿತಿ ಮಾರುಹೋಗಿ ಇಂತಹ ಅಶ್ಲೀಲ ಹಾಡಿನ ಚಿತ್ರೀಕರಣಕ್ಕೆ ಅವಕಾಶ ನೀಡಿದೆ ಎಂದು ಕಿಡಿ ಕಾರಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌

ಮೈಸೂರು(ಸೆ.29): ಶ್ರೀರಂಗಪಟ್ಟಣದ ಗುಂಬಜ್‌ನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಹುತಾತ್ಮ ಟಿಪ್ಪು ಸುಲ್ತಾನ್‌ ಸಮಾಧಿ ಎದುರು ಕನ್ನಡ ಚಲನಚಿತ್ರವೊಂದರ ಅಶ್ಲೀಲ ಹಾಡಿನ ಚೀತ್ರೀಕರಣ ನಡೆದಿದ್ದು, ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ. ಕೂಡಲೇ ಸೆನ್ಸಾರ್‌ ಮಂಡಳಿ ಈ ದೃಶ್ಯವನ್ನು ತೆಗೆಯಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಒತ್ತಾಯಿಸಿದರು.

ನಗರದ ಎಸ್‌ಡಿಪಿಐ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜಗತ್ತಿನ ಕೊಟ್ಯಾಂತರ ಮುಸಲ್ಮಾನರು ಮತ್ತು ಟಿಪ್ಪು ಸುಲ್ತಾನರ ಅಭಿಮಾನಿಗಳ ಪಾಲಿಗೆ ಗುಂಬಜ್‌ ಅತ್ಯಂತ ಪವಿತ್ರವಾದ ಸ್ಥಳವಾಗಿದೆ. ಇಲ್ಲಿ ಟಿಪ್ಪು ಸುಲ್ತಾನರು ಮತ್ತವರ ತಂದೆ ಹೈದರಾಲಿ ಹಾಗು ತಾಯಿಯವರ ಸಮಾಧಿ ಇದೆ. ಅಲ್ಲದೇ ಟಿಪ್ಪು ಸುಲ್ತಾನರ ಕುಟುಂಬದವರು, ಬ್ರಿಟೀಷರ ವಿರುದ್ಧ ಹೋರಾಡಿ ಮಡಿದ ಅಸಂಖ್ಯಾತ ಸೈನಿಕರ ಸಮಾಧಿಗಳಿವೆ. ಸನಿಹದಲ್ಲೇ ಪವಿತ್ರವಾದ ಮಸೀದಿ ಇದೆ. ಇಂತಹ ಸ್ಥಳದಲ್ಲಿ ಕೋಮಲ್‌ ಕುಮಾರ್‌ ನಟನೆಯ ನಮೋ ಭೋತಮ್ಮ ಚಿತ್ರದ ದ್ವಂದಾರ್ಥದ ಅಶ್ಲೀಲ ಹಾಡಿನ ಚಿತ್ರೀಕರಣಕ್ಕೆ ಅವಕಾಶ ನೀಡಿದ್ದು ತಪ್ಪು, ಇದಕ್ಕೆ ಅಲ್ಲಿನ ಟಿಪ್ಪು ಸುಲ್ತಾನ್‌ ವಕ್ಫ್‌ ಎಸ್ಟೇಟ್‌ ಸಮಿತಿ ಹಾಗೂ ರಾಜ್ಯ ವಕ್ಫ್‌ ಮಂಡಳಿ ನೇರ ಹೊಣೆಯಾಗಿದೆ. ಶಾಸಕ ತನ್ವೀರ್‌ ಸೇಠ್‌ ಈ ಸಮಿತಿಯ ಅಧ್ಯಕ್ಷರಾಗಿದ್ದು, ವಕ್ಫ್‌ ಬೋರ್ಡ್‌ ಸದಸ್ಯರೂ ಆಗಿದ್ದಾರೆ. ಕೂಡಲೇ ನೈತಿಕ ಹೊಣೆ ಹೊತ್ತು ಅವರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕೆಂದು ಮಜೀದ್‌ ಆಗ್ರಹಿಸಿದರು.

ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಿದ ಪುರಾತತ್ವ ಇಲಾಖೆ ಹಾಗೂ ಸ್ಥಳೀಯವಾಗಿ ಈ ಸ್ಥಳದ ಪಾವಿತ್ರ್ಯತೆಯ ರಕ್ಷಣೆ ಮಾಡುವ ಹೊಣೆ ಹೊತ್ತಿರುವ ಎಸ್ಟೇಟ್‌ ಸಮಿತಿ ಸ್ಥಳದ ಮಹತ್ವದ ಬಗ್ಗೆ ಚಿತ್ರ ನಿರ್ಮಾಪಕರಿಗೆ ಮನವರಿಕೆ ಮಾಡಿಕೊಡಬೇಕಿತ್ತು. ಆದರೇ ಚಿತ್ರ ನಿರ್ಮಾಪಕರು ನೀಡಿದ ಹಣದ ಆಸೆಗೆ ಟಿಪ್ಪು ಸುಲ್ತಾನ್‌ ವಕ್ಫ್‌ ಎಸ್ಟೇಟ್‌ ಸಮಿತಿ ಮಾರುಹೋಗಿ ಇಂತಹ ಅಶ್ಲೀಲ ಹಾಡಿನ ಚಿತ್ರೀಕರಣಕ್ಕೆ ಅವಕಾಶ ನೀಡಿದೆ ಎಂದು ಅವರು ಕಿಡಿ ಕಾರಿದರು.

   

ಸಮಿತಿ ಚಪ್ಪಲಿ ಕಾಯಲಿಕ್ಕೆ ಲಾಯಕ್ಕು

ಟಿಪ್ಪು ಸುಲ್ತಾನರ ಸಮಾಧಿ ಸ್ಥಳ ಗುಂಬಜ್‌ನ ಪಾವಿತ್ರ್ಯತೆ ಕಾಪಾಡಲು ಹಾಗೂ ಅಲ್ಲಿನ ಮಸೀದಿಯ ದೈನಂದಿನ ಚಟುವಟಿಕೆ ನಿರ್ವಹಣೆಗೆ ರಚಿಸಿರುವ ಟಿಪ್ಪು ಸುಲ್ತಾನ್‌ ವಕ್ಫ್‌ ಎಸ್ಟೇಟ್‌ ಸಮಿತಿ ದಂಧೆ ಕೋರರ ಪಾಲಾಗಿದೆ. ಪ್ರವಾಸಿಗರ ಚಪ್ಪಲಿ ಕಾಯುವ ಹಣ ಮತ್ತು ವಾಹನ ನಿಲುಗಡೆ ಹಣಕ್ಕಾಗಿ ಇಲ್ಲಿ ಲಾಬಿ ನಡೆಯುತ್ತಿದೆ. ಈ ಪವಿತ್ರ ಸ್ಥಳದ ಧಾರ್ಮಿಕ ಪಾವಿತ್ರ್ಯತೆ ಕಾಪಾಡುವಲ್ಲಿ ಈ ಸಮಿತಿ ವಿಫಲವಾಗಿದ್ದು, ಕೂಡಲೇ ಚಪ್ಪಲಿ ಕಾಯಲು ಲಾಯಕ್ಕಾದ ಈ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ರಫತ್‌ ಖಾನ್‌, ಜಿಲ್ಲಾ ಉಪಾಧ್ಯಕ್ಷ ಹಾಗೂ ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಸ್‌.ಸ್ವಾಮಿ,ಪ್ರಧಾನ ಕಾರ್ಯದರ್ಶಿ ಸಫಿಯುಲ್ಲಾ, ಕಾರ್ಯದರ್ಶಿ ಫರ್ದೀನ್‌ ಅಹಮದ್‌ ಇದ್ದರು.

Previous Post

ಭಾರತಕ್ಕೆ ಬಂದ ಪಾಕ್‌ ತಂಡದ ನಾಯಕನಿಗೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

Next Post

ಕಾವೇರಿ ವಿಚಾರದಲ್ಲಿ ಕಲಾವಿದರನ್ನು ಹಿಂಸಿಸುವುದು ತಪ್ಪು : ಪ್ರಕಾಶ್ ರಾಜ್

Next Post
ಕಾವೇರಿ ವಿಚಾರದಲ್ಲಿ ಕಲಾವಿದರನ್ನು ಹಿಂಸಿಸುವುದು ತಪ್ಪು : ಪ್ರಕಾಶ್ ರಾಜ್

ಕಾವೇರಿ ವಿಚಾರದಲ್ಲಿ ಕಲಾವಿದರನ್ನು ಹಿಂಸಿಸುವುದು ತಪ್ಪು : ಪ್ರಕಾಶ್ ರಾಜ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.