
ಬಿಜೆಪಿ ದಾವಣಗೆರೆ ಕಾರ್ಯಕರ್ತ ಹೆಸರಿನ ಫೇಸ್ ಬುಕ್ ಖಾತೆಯಿಂದ ಸಿದ್ದು ಸವಾರಿ ಮಸೀದಿ ಕಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ಗೆ ಮತ್ತಷ್ಟು ಅವಹೇಳನಕಾರಿಯಾಗಿ ಹತ್ತಾರು ಜನ ಕಾಮೆಂಟ್ ಹಾಕಿದ್ದಾರೆ. ಹಾಗಾಗಿ ಪೋಸ್ಟ್ ಮಾಡಿದ ಹಾಗೂ ಅದಕ್ಕೆ ಕಾಮೆಂಟ್ ಮಾಡಿದವರ ವಿರುದ್ದ ಕಾನೂನು ಕ್ರಮಕ್ಕೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದಾವಣಗೆರೆ, ಸೆಪ್ಟೆಂಬರ್ 30: ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ ಅವಹೇಳನಕಾರಿ ಪೋಸ್ಟ್ ಮಾಡಿದ ಹಾಗೂ ಅದಕ್ಕೆ ಕಾಮೆಂಟ್ ಮಾಡಿದವರ ವಿರುದ್ದ ಕಾನೂನು ಕ್ರಮ ಜರಗಿಸುವಂತೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್ ಅವರು ಸೈಬರ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಜೆಪಿ ದಾವಣಗೆರೆ ಕಾರ್ಯಕರ್ತ ಹೆಸರಿನ ಫೇಸ್ ಬುಕ್ ಖಾತೆಯಿಂದ ಸಿದ್ದು ಸವಾರಿ ಮಸೀದಿ ಕಡೆ ಎಂದು ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ಗೆ ಮತ್ತಷ್ಟು ಅವಹೇಳನಕಾರಿಯಾಗಿ ಹತ್ತಾರು ಜನ ಕಾಮೆಂಟ್ ಹಾಕಿದ್ದಾರೆ.

ಸದ್ಯ ಫೇಸ್ ಬುಕ್ನಲ್ಲಿ ಪೋಸ್ಟ್ ಹಾಕಿದವರ ಹಾಗೂ ಕಾಮೆಂಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹಿಸಿದೆ. ಸಿಎಂ ಸಿದ್ದರಾಮಯ್ಯರಂತಹ ಒಬ್ಬ ನಾಯಕನ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಹಾಗೂ ಕಾಮೆಂಟ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಡಿ.ಬಸವರಾಜ್ ಆಗ್ರಹಿಸಿದ್ದಾರೆ

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರ ನೂತನ ಸರ್ಕಾರ ರಚನೆಯಾದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿತ್ತು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಳಿಸಿ ಬಿಇಒ ಜಯಪ್ಪ ಆದೇಶ ಹೊರಡಿಸಿದ್ದರು.

ಅದೇ ರೀತಿಯಾಗಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಬೆಂಗಳೂರು ನಗರದ ವೈಟ್ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು