Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಸಿಕ್ಕಿಂನಲ್ಲಿ ಮೇಘಾಸ್ಫೋಟ; ಜಲ ಪ್ರವಾಹಕ್ಕೆ ಸಿಲುಕಿ 10 ಸಾವು, 82 ಮಂದಿ ನಾಪತ್ತೆ, 3 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಲಾಕ್​

editor tv by editor tv
October 5, 2023
in ರಾಷ್ಟ್ರೀಯ
0
ಸಿಕ್ಕಿಂನಲ್ಲಿ ಮೇಘಾಸ್ಫೋಟ; ಜಲ ಪ್ರವಾಹಕ್ಕೆ ಸಿಲುಕಿ 10 ಸಾವು, 82 ಮಂದಿ ನಾಪತ್ತೆ, 3 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಲಾಕ್​
1.9k
VIEWS
Share on FacebookShare on TwitterShare on Whatsapp

ಪ್ರವಾಸಿಗರ ಸ್ವರ್ಗದಂತಿದ್ದ ಸಿಕ್ಕಿಂ ರಾಜ್ಯ ಮೇಘಸ್ಫೋಟ ಕ್ಕೆ ನರಳಿಹೋಗಿದೆ. ಮೇಘಸ್ಪೋಟದ ಕರಾಳತೆಗೆ ಸಿಕ್ಕಿಂನಲ್ಲಿ ಸ್ಮಶಾನ ಮೌನ ಆವರಿಸಿದೆ. ಭಾರತದ ರಕ್ಷಣೆಗೆ ಗಡಿಯಲ್ಲಿ ಗನ್​ ಹಿಡಿದು ನಿಂತಿದ್ದ ಯೋಧರನ್ನೂ ಪ್ರವಾಹ ಪರಿತಪ್ಪಿಸುವಂತೆ ಮಾಡಿದೆ. ಪ್ರವಾಹದ ರೌದ್ರರೂಪಕ್ಕೆ ಸಿಕ್ಕಿಂನಲ್ಲಿ ಸಂಕಷ್ಟಗಳ ಸರಮಾಲೆಯೇ ಸೃಷ್ಟಿಯಾಗಿದೆ.

ಮನುಕುಲವನ್ನ ತನ್ನೊಡಲಲ್ಲಿ ಸಾಕಿ ಸಲಹೋ ಪೃಕೃತಿ ಮುನಿದರೆ ಎಂಥೆತಾ ಪ್ರಕೋಪಗಳು ಸೃಷ್ಟಿಯಾಗ್ಬೋದು. ಅಂತದೊಂದು ರಣಭೀಕರ ಪ್ರಕೋಪಕ್ಕೆ ಸಿಕ್ಕಿಂ ಸಾಕ್ಷಿಯಾಗಿ ನಿಂತಿದೆ. ಪದೇ ಪದೇ ಮುನಿವ ಪ್ರಕೃತಿ ಯ ವಕ್ರದೃಷ್ಟಿಯಿಂದ ತತ್ತರಿಸೋ ಸಿಕ್ಕಿಂ ಜನ ನಿನ್ನೆ ಅಕ್ಷರಶಃ ನಡುಗಿಹೋಗಿದ್ದಾರೆ. ಮೇಘಸ್ಪೋಟದ ಹೊಡೆತಕ್ಕೆ ಮುಳುಗಿ ಹೋಗಿರೋ ಸಿಕ್ಕಿಂನಲ್ಲಿ ಸ್ಮಶಾನ ಮೌನ ಆವರಿಸಿದೆ.

People being rescued and taken to a safe shelter. They didn’t have any say in large infrastructure project, but pay the price of the disaster. #Sikkim pic.twitter.com/KdKu3yIOdT

— Aparna (@chhuti_is) October 4, 2023

ಮೇಘಸ್ಪೋಟದಿಂದ ಉಂಟಾದ ದಿಢೀರ್ ಪ್ರವಾಹದಿಂದ ಉತ್ತರ ಸಿಕ್ಕಿಂನ ಲೋನಾಕ್ ಸರೋವರ ತುಂಬಿ ಹರಿಯುತ್ತಿದೆ. ಸರೋವರದ ನೀರು ಹಠಾತ್​ ಲಗ್ಗೆ ಇಟ್ಟ ಪರಿಣಾಮ ಸಿಕ್ಕಿಂನ ಪ್ರಮುಖ ನದಿಯಾದ ತೀಸ್ತಾ ಸೇರಿದಂತೆ ಹಲವು ಉಪನದಿಗಳು ಉಗ್ರರೂಪ ತಾಳಿವೆ. ತೀಸ್ತಾನದಿಯ ಭೋರ್ಗರೆತಕ್ಕೆ ನದಿ ತೀರದ ಜನರ ಬದುಕು ಕೊಚ್ಚಿಹೋಗಿದೆ. ಪ್ರವಾಹದ ನಂತರ ಚುಂಗ್‌ಥಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೆಳಭಾಗದ ಪ್ರದೇಶಗಳು ಮುಳುಗಡೆಯಾಗಿವೆ.

It seems that the Chungthang Dam (Teesta III Hydropower project) on the Teesta has been breached this morning.

Scary visuals floating around. Civilians and army personnel are missing. Lots of immediate assistance and long term re-thinking required. #Sikkim #Teesta #Rivers pic.twitter.com/u3ajHy2h7r

— Siddharth Agarwal (@sidagarwal) October 4, 2023

ಸಿಕ್ಕಿಂನಲ್ಲಿ ನಿರೀಕ್ಷೆಯೇ ಮಾಡದ ರೀತಿಯಲ್ಲಿ ಉಂಟಾದ ಪ್ರವಾಹದಿಂದ ಗಡಿಯಲ್ಲಿ ನಿಯೋಜಿಸಿದ್ದ 23 ಸೇನಾ ಸಿಬ್ಬಂದಿ ಹಾಗೂ 82 ಮಂದಿ ನಾಗರೀಕರು ನಾಪತ್ತೆಯಾಗಿದ್ರು. ನಾಪತ್ತೆಯಾದ ಯೋಧರ ರಕ್ಷಣೆಗೆ ಕಾರ್ಯಾರಣೆಗಿಳಿದ ಸೇನಾ ಪಡೆ ಓರ್ವ ಯೋಧನನ್ನ ರಕ್ಷಣೆ ಮಾಡಿದೆ. ಇನ್ನುಳಿದ 22 ಮಂದಿ ಸೈನಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಪ್ರವಾಹದ ಕೆಸರಿನಲ್ಲಿ ಹುದುಗಿಹೋಗಿರೋ ಸೇನಾ ವಾಹನಗಳನ್ನ ಜೆಸಿಬಿಗಳ ಮೂಲಕ ಪತ್ತೆಹಚ್ಚಲಾಗಿದೆ.

NH10 near Melli badly damaged after Massive Flood in Teesta River#Sikkim #Bengal pic.twitter.com/jFjeRyQ9JF

— Weatherman Shubham (@shubhamtorres09) October 4, 2023

ಸಿಕ್ಕಿಂನಲ್ಲಿ ಮೇಘಸ್ಪೋಟದಿಂದ ಉಂಟಾದ ಹಠಾತ್​ ಪ್ರವಾಹ 14 ಸೇತುವೆಗಳನ್ನ ಜಖಂಗೊಳಿಸಿದೆ. ಪ್ರವಾಹದಿಂದ 3,000 ಕ್ಕೂ ಹೆಚ್ಚು ಪ್ರವಾಸಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಿಲುಕಿರುವ ಶಂಕೆ ಇದೆ. 9 ಬಾರ್ಡರ್ ರೋಡ್ಸ್, 5 ರಾಜ್ಯ ಹೆದ್ದಾರಿ ಕುಸಿತವಾಗಿವೆ. ಚುಂಗ್‌ಥಾಂಗ್‌ನ ತೀಸ್ತಾ ಸ್ಟೇಜ್ 3 ಅಣೆಕಟ್ಟಿನ 14 ಕಾರ್ಮಿಕರು ಸುರಂಗಗಳಲ್ಲಿ ಸಿಲುಕಿಕೊಂಡಿದ್ದಾರೆ. ಪ್ರವಾಹದ ಅಬ್ಬರಕ್ಕೆ ಸಿಲುಕಿ ಗಾಯಗೊಂಡ 25ಕ್ಕೂ ಹೆಚ್ಚು ಜನರನ್ನ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಚುಂಗ್‌ಥಾಂಗ್‌ನಲ್ಲಿರುವ ಪೊಲೀಸ್ ಠಾಣೆ ಸಹ ಪ್ರವಾದಲ್ಲಿ ಕೊಚ್ಚಿಹೋಗಿದೆ.

#BREAKING_NEWS : Many Army personnel have been reported missing and some vehicles are submerged under slush at Bardang near Singtam after a Cloudburst over Lhonak Lake in Mangan near LAC.
National Highway 10 washed away at Melli. Prayers for our troops and #Sikkim #IndianArmy pic.twitter.com/chGYk6L5dE

— Ram Tyagi Hindu (@RamTyagiHindu) October 4, 2023

ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳ ಗಡಿಯಲ್ಲಿ ತೀಸ್ತಾ ನದಿಯ ಅಬ್ಬರಿಂದ ಸಿಂಥಮ್ ಕಾಲುವೆ ಕುಸಿದಿದೆ.. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.. ಪಶ್ಚಿಮ ಬಂಗಾಳದಿಂದ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10ರ ಹಲವು ಭಾಗಗಳು ಕೊಚ್ಚಿ ಹೋಗಿವೆ.

ಒಟ್ನಲ್ಲಿ ಸಿಕ್ಕಿಂನಲ್ಲಿ ಸಂಭವಿಸಿದ ಭೀಕರ ಪ್ರವಾಹ ಸಂಕಷ್ಟಗಳ ಸರಮಾಲೆಯನ್ನೇ ಸೃಷ್ಟಿಸಿದೆ. ನಾಪತ್ತೆಯಾದವರ ಪತ್ತೆಗೆ ರಕ್ಷಣಾ ಕಾರ್ಯಚರಣೆ ಭರದಿಂದ ಸಾಗಿದೆ. ಪ್ರವಾಹದಿಂದ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ. ಮಳೆ ಹೀಗೆ ಮುಂದುವರಿದ್ರೆ ಮತ್ತಷ್ಟು ಹಾನಿ ಸಂಭವಿಸುವ ಸಾಧ್ಯತೆಯೂ ಇದೆ.

Previous Post

ENG vs NZ ICC WC Match Preview: ಏಕದಿನ ವಿಶ್ವಕಪ್ ಟೂರ್ನಿಗೆ ಇಂದು ಚಾಲನೆ: ಇಂಗ್ಲೆಂಡ್-ನ್ಯೂಝಿಲೆಂಡ್ ನಡುವೆ ಹೈವೋಲ್ಟೇಜ್ ಪಂದ್ಯ

Next Post

ಹಾಲಶ್ರೀ ವಂಚಕ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸ್ರು

Next Post
ಹಾಲಶ್ರೀ ವಂಚಕ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸ್ರು

ಹಾಲಶ್ರೀ ವಂಚಕ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸ್ರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.