Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಹಾಲಶ್ರೀ ವಂಚಕ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸ್ರು

editor tv by editor tv
October 5, 2023
in ರಾಜ್ಯ
0
ಹಾಲಶ್ರೀ ವಂಚಕ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸ್ರು
1.9k
VIEWS
Share on FacebookShare on TwitterShare on Whatsapp

ಚೈತ್ರಾ ಹಾಗೂ ಹಾಲಶ್ರೀ ಪ್ರಕರಣ ಇಡೀ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ‌. ಈ ಇನ್ನೊಂದು ಪ್ರಕರಣದಲ್ಲಿ ಹಾಲಶ್ರೀ ವಂಚಕ ಸ್ವಾಮೀಜಿಗೆ ಉರುಳು ಗಟ್ಟಿಯಾಗುವ ಲಕ್ಷಣಗಳಿವೆ. ಟಿಕೆಟ್‌ಗಾಗಿ ಹಣ ಒಂದು ಕೋಟಿ ಹಣ ಪಡೆದಿರುವ ಆರೋಪದಲ್ಲಿ ಹಾಲಶ್ರೀ ಸ್ವಾಮೀಜಿ ಮುಂಡರಗಿ ಫುಲ್ ಗ್ರೀಲ್ ಮಾಡಿದ್ದಾರೆ. ನಿನ್ನೆ ಸ್ಥಳ ಮಹಜರು ನಡೆಸಿ ಸಾಕ್ಷ್ಯ ಕಲೆಹಾಕಿದ್ದಾರೆ.

ಗದಗ, (ಅಕ್ಟೋಬರ್ 05): ವಿಧಾನ ಸಭೆ ಚುನಾವಣೆ ಯಲ್ಲಿ (Karnataka Assembly Elections 2023) ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ರೂ. ವಂಚನೆ ಮಾಡಿದ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿ ಮಾಡಿದೆ. ಮಂಗಳೂರು ಮೂಲದ ಉದ್ಯಮಿಗೆ ವಂಚನೆ ಬೆನ್ನಲ್ಲೇ ಗದಗ ಜಿಲ್ಲೆಯಲ್ಲೂ ಅಭಿನವ ಹಾಲಶ್ರೀ(Abhinava Halashri) ವಿರುದ್ಧ ವಂಚನೆ ಕೇಸ್ ದಾಖಲಾಗಿತ್ತು. ಈಗ ಬೆಂಗಳೂರಿನ ಜೈಲಿನಲ್ಲಿದ್ದ ಹಾಲಶ್ರೀ ವಂಚಕ ಸ್ವಾಮೀಯನ್ನು ಮುಂಡರಗಿ ಪೊಲೀಸ್ರು ಬಾಡಿ ವಾರಂಟ್ ಮೇಲೆ ಆಚೆ ಕರೆದುಕೊಂಡು ಬಂದು ಎಲ್ಲೆಡೆ ಸ್ಥಳ ಮಹಜರು ಮಾಡಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ಮತಕ್ಷೇತ್ರ ಶಾಸಕ ಆಗಬೇಕು ಎಂದು ಟಿಕೆಟ್‌ಗಾಗಿ ಪೈಪೊಟಿ ನಡೆಸುತ್ತಿದ್ದ ಸಂಜಯ್ ಚವಡಾಳಗೆ ಹಾಲಶ್ರೀ ಸ್ವಾಮೀ ಟಿಕೆಟ್ ಕೊಡಿಸೋದಾಗಿ ಒಂದು ಕೋಟಿ ರೂ. ಪಡೆದಿದ್ದರಂತೆ. ಹೀಗಾಗಿ ಸಂಜಯ್ ಚವಡಾಳ ಸೆಪ್ಟೆಂಬರ್ 25ರಂದು ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ರು.. ಆ ಪ್ರಕರಣ ಸಂಬಂಧ ಹಾಲಶ್ರೀ ವಂಚಕ ಸ್ವಾಮೀಜಿಯ ವಿಚಾರಣೆ ಮಾಡಲಾಗ್ತಿದೆ. ನಿನ್ನೆ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಹಾಲಶ್ರೀ ಮಠಕ್ಕೆ ಕರೆದುಕೊಂಡು ಹೋಗಿ ಮಹಜರು ಮಾಡಲಾಗಿದೆ. ಮುಂಡರಗಿ ಪಟ್ಟಣದ ಹಣಕಾಸಿನ ವ್ಯವಹಾರ ನಡೆದ ವಿವಿಧ ಸ್ಥಳಗಳಲ್ಲೂ ಸ್ಥಳ ಮಹಜರು ಮಾಡಲಾಗಿದೆ.

ಮುಂಡರಗಿ ಪಟ್ಟಣದ ಕೊಪ್ಪಳ ರಸ್ತೆಯಲ್ಲಿ ದೂರುದಾರ ಪಿಡಿಓ ಸಂಜಯ್ ಚವಡಾಳ ಮನೆಗೆ ಹಾಲಶ್ರೀ ಸ್ವಾಮೀಜಿಯನ್ನು ಕರೆದುಕೊಂಡು ಮುಂಡರಗಿ ಪೊಲೀಸರು ಹೋಗಿದ್ರು. ಆದ್ರೆ, ದೂರುದಾರ ಸಂಜಯ್ ಚವಡಾಳ ಮನೆಯಲ್ಲಿ ಇಲ್ಲದ ಕಾರಣ ಪೊಲೀಸ್ರು ಸ್ಥಳ ಮಹಜರು ಮಾಡದೇ ವಾಪಸ್ಸಾಗಿದ್ದಾರೆ. ಪಿಡಿಓ ಸಂಜಯ ಅವರು, ಮೊದಲ ಹಂತದಲ್ಲಿ, 10 ಲಕ್ಷ ರೂ, ಎರಡನೆಯ ಹಂತದಲ್ಲಿ 40 ಲಕ್ಷ ರೂ, ಮೂರನೇಯ ಹಂತದಲ್ಲಿ 50 ಲಕ್ಷ ರೂಪಾಯಿ ಹಣವನ್ನು ನೀಡಿದ್ದಾರಂತೆ.‌ ಹೀಗಾಗಿ ಆ ನಿಟ್ಟಿನಲ್ಲಿ ಸ್ಥಳ ಮಹಜರು ಮಾಡಿ ಇದೀಗ ಬೆಂಗಳೂರು ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಹಾಲಶ್ರೀ ಬೆಂಗಳೂರು ಜೈಲಿಗೆ ಶಿಫ್ಟ್..

ಸ್ಥಳ ಮಹಜರು ಹಾಗೂ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಗದಗ ಜಿಲ್ಲೆಯ‌ ಮುಂಡರಗಿ ಪೊಲೀಸರು ವಾಪಸ್ ಬೆಂಗಳೂರು ಕೇಂದ್ರ ಕಾರಗೃಹಕ್ಕೆ ಶಿಫ್ಟ್ ಮಾಡಿದ್ದಾರೆ. ಅಕ್ಟೊಬರ್ 3 ಮತ್ತು 4 ಎರಡು‌ ದಿನ ತೀವ್ರ ವಿಚಾರಣೆ ಮಾಡಿದ‌ ಪೊಲೀಸರು, ನಿನ್ನೆ (ಅಕ್ಟೋಬರ್ 04) ರಾತ್ರಿಯೇ ಬೆಂಗಳೂರ ಜೈಲಿಗೆ ಬಿಟ್ಟುಬಂದಿದ್ದಾರೆ.

ಹಾಲಶ್ರೀ ಹಣ ಪಡೆದಿರುವ ಸಾಕ್ಷ್ಯಗಳು ಸಾಬೀತಾಗಿವೆ ಎನ್ನಲಾಗಿದ್ದು, ಸಂಪೂರ್ಣ ತನಿಖೆಯಿಂದ ಸತ್ಯ ಹೊರಗಡೆ ಬರಬೇಕಾಗಿದೆ.

Previous Post

ಸಿಕ್ಕಿಂನಲ್ಲಿ ಮೇಘಾಸ್ಫೋಟ; ಜಲ ಪ್ರವಾಹಕ್ಕೆ ಸಿಲುಕಿ 10 ಸಾವು, 82 ಮಂದಿ ನಾಪತ್ತೆ, 3 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಲಾಕ್​

Next Post

ಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣ?

Next Post
ಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣ?

ಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.