Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಕೇರಳ: ಕಳಮಶ್ಶೇರಿ ಸ್ಫೋಟ; ಆರೋಪಿ ಡೊಮಿನಿಕ್ ಮನೆಯಲ್ಲೇ ತಯಾರಿಸಿದ್ದ ಬಾಂಬ್

editor tv by editor tv
October 30, 2023
in ರಾಷ್ಟ್ರೀಯ
0
ಕೊಚ್ಚಿ: ಸರಣಿ ಸ್ಪೋಟ ಪ್ರಕರಣ: ವಿಡಿಯೋ ಹೇಳಿಕೆ ಕೊಟ್ಟು ಪೊಲೀಸರಿಗೆ ಶರಣಾದ ಆರೋಪಿ
1.9k
VIEWS
Share on FacebookShare on TwitterShare on Whatsapp

Kalamassery bomb blast: ಟಿಫಿನ್ ಬಾಕ್ಸ್ ನಲ್ಲಿ ಬಾಂಬ್ ಇಡದೇ ಆರು ಪ್ಲಾಸ್ಟಿಕ್ ಕವರ್​​ಗಳಲ್ಲಿ ಬಾಂಬ್ ಇಡಲಾಗಿತ್ತು ಎಂದು ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೆಟ್ರೋಲ್ ತುಂಬಿದ ಪ್ಲಾಸ್ಟಿಕ್ ಚೀಲಕ್ಕೆ ರಿಮೋಟ್ ಜೋಡಿಸಲಾಗಿತ್ತು. ಬ್ಯಾಟರಿಗೆ ಜೋಡಿಸಲಾದ ಗನ್ ಕಿಡಿಯನ್ನು ಸೃಷ್ಟಿಸಿದ್ದು, ನಂತರ ಸ್ಫೋಟಗೊಂಡಿತ್ತು

ಕೊಚ್ಚಿ ಅಕ್ಟೋಬರ್ 30: ಕೇರಳದ (Kerala) ಕಳಮಸ್ಸೆರಿ ಯಲ್ಲಿ (Kalamassery Blast) ಭಾನುವಾರ ‘ಜೆಹೋವನ ಸಾಕ್ಷಿಗಳ’ ಸಮಾವೇಶದ ಸ್ಥಳದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಅಂದಹಾಗೆ ಆರೋಪಿ ಡೊಮಿನಿಕ್ ಮಾರ್ಟಿನ್ (Dominic Martin) ಸ್ಫೋಟಕ್ಕೆ ಬಳಸಿದ ಬಾಂಬ್ ನ್ನು ತಯಾರಿಸಿದ್ದು ತನ್ನ ಮನೆಯಲ್ಲೇ. ಇಂಟರ್‌ನೆಟ್ ನೋಡಿ ಬಾಂಬ್ ತಯಾರಿಸುವುದನ್ನು ಕಲಿತಿದ್ದೇನೆ ಎಂದು ಆತ ಪೊಲೀಸರಿಗೆ ಹೇಳಿದ್ದಾನೆಡೊಮಿನಿಕ್ ನ ಯೂಟ್ಯೂಬ್ ಲಾಗಿನ್ ಅನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಫಾರ್​​​ಮೆನ್ ಆಗಿರುವ ಈತನಿಗೆ ತಂತ್ರಜ್ಞಾನದ ಅರಿವೂ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಡೊಮಿನಿಕ್ ಮಾರ್ಟಿನ್ ನಿನ್ನೆ ಅಲುವಾ ಬಳಿಯ ಕುಟುಂಬ ಮನೆಗೆ ಬಂದಿದ್ದು, ಬಾಂಬ್ ತಯಾರಿಸಿದ ಬಳಿಕ ನೇರವಾಗಿ ಕಳಮಶ್ಶೇರಿಯಲ್ಲಿರುವ ಕನ್ವೆನ್ಷನ್ ಸೆಂಟರ್‌ಗೆ ತೆರಳಿದ್ದ. ಬೆಳಗ್ಗೆ 7 ಗಂಟೆ ಸುಮಾರಿಗೆ ಕುರ್ಚಿಯ ಕೆಳಗೆ ಬಾಂಬ್ ಇಡಲಾಗಿತ್ತು. ಆ ವೇಳೆ ಸಭಾಂಗಣದಲ್ಲಿ ಮೂವರು ಮಾತ್ರ ಇದ್ದರು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.

ಟಿಫಿನ್ ಬಾಕ್ಸ್ ನಲ್ಲಿ ಬಾಂಬ್ ಇಡದೇ ಆರು ಪ್ಲಾಸ್ಟಿಕ್ ಕವರ್​​ಗಳಲ್ಲಿ ಬಾಂಬ್ ಇಡಲಾಗಿತ್ತು ಎಂದು ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೆಟ್ರೋಲ್ ತುಂಬಿದ ಪ್ಲಾಸ್ಟಿಕ್ ಚೀಲಕ್ಕೆ ರಿಮೋಟ್ ಜೋಡಿಸಲಾಗಿತ್ತು. ಬ್ಯಾಟರಿಗೆ ಜೋಡಿಸಲಾದ ಗನ್ ಕಿಡಿಯನ್ನು ಸೃಷ್ಟಿಸಿದ್ದು, ನಂತರ ಸ್ಫೋಟಗೊಂಡಿತ್ತು. ಇದಕ್ಕಾಗಿ ಎಂಟು ಲೀಟರ್ ಪೆಟ್ರೋಲ್ ಬಳಸಲಾಗಿದೆ. ಸ್ಫೋಟಕ್ಕಾಗಿ 50 ಶೆಲ್‌ಗಳನ್ನು ಸ್ಫೋಟಿಸಲಾಗಿದೆ. ತ್ರಿಪೂಣಿತ್ತರದ ಪಟಾಕಿ ಅಂಗಡಿಯೊಂದರಲ್ಲಿ ಇವುಗಳನ್ನು ಖರೀದಿಸಿರುವುದಾಗಿಯೂ ಆರೋಪಿ ಹೇಳಿದ್ದಾನೆ.

ಮಾರ್ಟಿನ್ ತನ್ನನ್ನು ಕಡವಂತ್ರ ಮೂಲದವನೆಂದು ಪೊಲೀಸರಿಗೆ ಪರಿಚಯಿಸಿಕೊಂಡಿದ್ದಾನೆ. ಆದರೆ ನಂತರ ಆತ ತಮ್ಮ ಕುಟುಂಬದೊಂದಿಗೆ 6 ವರ್ಷಗಳಿಂದ ತಮ್ಮನಂನಲ್ಲಿ ಬಾಡಿಗೆ ಮನೆಯಲ್ಲಿದ್ದಾನೆ ಎಂದು ಹೇಳಿದ್ದಾನೆ. ಕೇಂದ್ರ ಏಜೆನ್ಸಿಗಳು ಮತ್ತು ಕೇರಳ ಪೊಲೀಸರು ತಮ್ಮನಂನಲ್ಲಿರುವ ಬಾಡಿಗೆ ಮನೆಯಲ್ಲಿ ಹುಡುಕಾಟ ನಡೆಸಿದಾಗ, ಆತ ಒಂದು ವರ್ಷದ ಹಿಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿತ್ತು.

ಡೊಮಿನಿಕ್ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟು ಸ್ಫೋಟಕಗಳೊಂದಿಗೆ ಕಳಮಶ್ಶೇರಿಯ ಕನ್ವೆನ್ಷನ್ ಸೆಂಟರ್ ತಲುಪಿದ್ದಾನೆ. 8 ಗಂಟೆಯ ನಂತರ 2 ಬಾರಿ ಹಾಲ್ ಒಳಗೆ ಮತ್ತು ಹೊರಗೆ ಹೋಗಿದ್ದಾನೆ. ಡೊಮಿನಿಕ್ ತನ್ನ ಮೊಬೈಲ್ ಫೋನ್‌ನಲ್ಲಿ ಅದುವರೆಗಿನ ಸಂಪೂರ್ಣ ಚಲನವಲನಗಳನ್ನು ರೆಕಾರ್ಡ್ ಮಾಡಿದ್ದ. ವರ್ಷಗಳ ಹಿಂದೆ, ‘ಜೆಹೋವನ ಸಾಕ್ಷಿಗಳ ನಂಬಿಕೆಯುಳ್ಳ ಡೊಮಿನಿಕ್ ಚರ್ಚ್‌ನ ಬೈಬಲ್ ತರಗತಿಗಳಿಗೆ ಹಾಜರಾಗಿದ್ದ. ನಂತರ, ಮಾರ್ಟಿನ್ ವಿದೇಶಕ್ಕೆ ಹೋಗಿದ್ದು ಚರ್ಚ್ ತೊರೆದ್ದಿದ್ದ ನಿಖರವಾದ ಯೆಹೋವನ ಸಾಕ್ಷಿಗಳ ಕಲ್ಪನೆಗಳನ್ನು ವಿರೋಧಿಸಲೆಂದೇ ತಾನು ಈ ಕೃತ್ಯವೆಸಗಿರುವುದಾಗಿ ಮಾರ್ಟಿನ್ ವಿಡಿಯೊದಲ್ಲಿ ಹೇಳಿದ್ದಾನೆ.

ಕಳಮಶ್ಶೇರಿಯ ‘ಜೆಹೋವನ ಸಾಕ್ಷಿಗಳ’ ಚರ್ಚ್‌ನ ಸಮಾವೇಶದ ಸ್ಥಳದಲ್ಲಿ ನಡೆದ ಸ್ಫೋಟದ ಶಂಕಿತ ಡೊಮಿನಿಕ್ ಮಾರ್ಟಿನ್ ಅವರ ಸಂಬಂಧಿಕರು ಸಮಾವೇಶದಲ್ಲಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಡೊಮಿನಿಕ್ ಅವರ ಅತ್ತೆ ಮತ್ತು ಇತರ ಸಂಬಂಧಿಕರು ಸಮಾವೇಶದಲ್ಲಿ ಭಾಗವಹಿಸಿದ್ದರು. ಸ್ಫೋಟ ಸಂಭವಿಸಿದ ಸಭಾಂಗಣದ ಹಿಂಭಾಗದಲ್ಲಿ ಅವರು ಕುಳಿತಿದ್ದರು. ಅತ್ತೆ ಬಂದರೂ ಕಾರ್ಯಾಚರಣೆಯಿಂದ ಹಿಂದೆ ಸರಿಯಲಿಲ್ಲ. ಆಕೆಗೆ ಸ್ಫೋಟದಲ್ಲಿ ಏನೂ ಆಗಲಿಲ್ಲ ಎಂದು ಆತ ಹೇಳಿಕೆ ನೀಡಿದ್ದಾನೆ. ಡೊಮಿನಿಕ್ ಮಾರ್ಟಿನ್ ಆಗಮನವನ್ನು ಗಮನಿಸಲಿಲ್ಲ ಎಂದು ಸಂಬಂಧಿಕರು ಹೇಳಿದ್ದಾರೆ.

ಆರೋಪಿ ಡೊಮಿನಿಕ್ ಮಾರ್ಟಿನ್ ಎರಡು ತಿಂಗಳ ತಯಾರಿಯ ನಂತರ ಕಳಮಶ್ಶೇರಿಯಲ್ಲಿ ಜೆಹೋವನ ಸಾಕ್ಷಿಗಳ ಸಭೆಯನ್ನು ಸ್ಫೋಟಿಸಿದನು ಎಂದು ಪೊಲೀಸರು ತಿಳಿಸಿದ್ದಾರೆ. ಸಭೆಯ ದಿನಾಂಕ ತಿಳಿದು ಆರೋಪಿ ದುಬೈನಿಂದ ಬಂದಿದ್ದರು. ಕಳೆದ ಮೂರು ದಿನಗಳಿಂದ ಅವರು ಅತ್ತಾಣಿಯಲ್ಲಿರ ತಮ್ಮ ಮನೆಯಲ್ಲಿದ್ದರು ಎಂದು ವರದಿಯಾಗಿದೆ. ಈ ದಿನಗಳಲ್ಲಿ ಅವರನ್ನು ನೋಡಿದ್ದೇವೆ ಎಂದು ಸ್ಥಳೀಯರು ಹೇಳಿದ್ದಾರೆ

Previous Post

Kota ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

Next Post

ಲಾಂಗ್ ಬೀಸಿದ ರೌಡಿಶೀಟರ್ ಮಂಡಿ ಸೀಳಿದ ಖಾಕಿ

Next Post
ಲಾಂಗ್ ಬೀಸಿದ ರೌಡಿಶೀಟರ್ ಮಂಡಿ ಸೀಳಿದ ಖಾಕಿ

ಲಾಂಗ್ ಬೀಸಿದ ರೌಡಿಶೀಟರ್ ಮಂಡಿ ಸೀಳಿದ ಖಾಕಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.