Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

ಪವಾಡ ನಡೆದ್ರೆ ಮಾತ್ರ ಪಾಕಿಸ್ತಾನ್ ಸೆಮಿಫೈನಲ್​ಗೆ: ಇಲ್ಲಿದೆ ಲೆಕ್ಕಾಚಾರ

editor tv by editor tv
November 9, 2023
in ಕ್ರೀಡೆ
0
ಪವಾಡ ನಡೆದ್ರೆ ಮಾತ್ರ ಪಾಕಿಸ್ತಾನ್ ಸೆಮಿಫೈನಲ್​ಗೆ: ಇಲ್ಲಿದೆ ಲೆಕ್ಕಾಚಾರ
1.9k
VIEWS
Share on FacebookShare on TwitterShare on Whatsapp

ICC World Cup 2023: ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ನ್ಯೂಝಿಲೆಂಡ್ ತಂಡದ ನೆಟ್ ರನ್ ರೇಟ್ +0.743 ಇದೆ. ಆದರೆ ಪಾಕಿಸ್ತಾನ್ ತಂಡವು ಸದ್ಯ ​ +0.036 ನೆಟ್ ರನ್​ ರೇಟ್​ ಅನ್ನು ಮಾತ್ರ ಹೊಂದಿದೆ. ಅಂದರೆ ಇಂಗ್ಲೆಂಡ್ ವಿರುದ್ಧ ಗೆಲ್ಲುವ ಮೂಲಕ ಪಾಕಿಸ್ತಾನ್ ತಂಡವು ತನ್ನ ನೆಟ್​ ರನ್​ ರೇಟ್​ ಅನ್ನು +0.744 ಕ್ಕೇರಿಸಬೇಕು.

ಏಕದಿನ ವಿಶ್ವಕಪ್ಅಂತಿಮ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಭಾರತ, ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಇನ್ನು ಶ್ರೀಲಂಕಾ ವಿರುದ್ಧದ ಗೆಲುವಿನೊಂದಿಗೆ ನ್ಯೂಝಿಲೆಂಡ್ ತಂಡ ಕೂಡ ಸೆಮಿಫೈನಲ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

ಇತ್ತ ನ್ಯೂಝಿಲೆಂಡ್ ತಂಡವು ಭರ್ಜರಿ ಜಯ ಸಾಧಿಸುತ್ತಿದ್ದಂತೆ ಅತ್ತ ಪಾಕಿಸ್ತಾನ್ ತಂಡದ ಸೆಮಿಫೈನಲ್ ಕನಸು ಕಮರಿದೆ ಎನ್ನಬಹುದು. ಏಕೆಂದರೆ ಶ್ರೀಲಂಕಾ ವಿರುದ್ಧ ನ್ಯೂಝಿಲೆಂಡ್ ಸೋತಿದ್ದರೆ ಮಾತ್ರ ಪಾಕ್ ತಂಡಕ್ಕೆ ಸೆಮಿಫೈನಲ್​ಗೆ​ ಪ್ರವೇಶಿಸಲು ಉತ್ತಮ ಅವಕಾಶವಿತ್ತು.

ಆದರೀಗ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನ್ಯೂಝಿಲೆಂಡ್ 5 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ಪಡೆ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಇನ್ನು ಐದನೇ ಸ್ಥಾನದಲ್ಲಿರುವ ಪಾಕಿಸ್ತಾನ್ ತಂಡವು ಇಂಗ್ಲೆಂಡ್ ವಿರುದ್ಧ ಕೊನೆಯ ಪಂದ್ಯವಾಡಬೇಕಿದೆ. ಆದರೆ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಸಾಲುವುದಿಲ್ಲ. ಬದಲಾಗಿ ತನ್ನ ನೆಟ್​ ರನ್​ ರೇಟ್ ಅನ್ನು ಕೂಡ ಹೆಚ್ಚಿಸಿಕೊಳ್ಳಬೇಕಿದೆ.

ಪವಾಡ ನಡೆದರೆ ಪಾಕ್ ಸೆಮಿಫೈನಲ್​​ಗೆ:

ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ನ್ಯೂಝಿಲೆಂಡ್ ತಂಡದ ನೆಟ್ ರನ್ ರೇಟ್ +0.743 ಇದೆ. ಆದರೆ ಪಾಕಿಸ್ತಾನ್ ತಂಡವು ಸದ್ಯ ​ +0.036 ನೆಟ್ ರನ್​ ರೇಟ್​ ಅನ್ನು ಮಾತ್ರ ಹೊಂದಿದೆ. ಅಂದರೆ ಇಂಗ್ಲೆಂಡ್ ವಿರುದ್ಧ ಗೆಲ್ಲುವ ಮೂಲಕ ಪಾಕಿಸ್ತಾನ್ ತಂಡವು ತನ್ನ ನೆಟ್​ ರನ್​ ರೇಟ್​ ಅನ್ನು +0.744 ಕ್ಕೇರಿಸಬೇಕು. ಇದಕ್ಕಾಗಿ ಪಾಕಿಸ್ತಾನ್ ತಂಡವು ಮೊದಲು ಬ್ಯಾಟ್ ಮಾಡಿದರೆ ಕನಿಷ್ಠ 300 ರನ್​ಗಳನ್ನು ಕಲೆಹಾಕಬೇಕಾಗುತ್ತದೆ. ಹಾಗಿದ್ರೆ ಪಾಕ್ ತಂಡ ಸೆಮಿಫೈನಲ್ ಹಾದಿ ಹೇಗಿರಲಿದೆ ಎಂದು ನೋಡೋಣ…

  • ಪಾಕಿಸ್ತಾನ್ ತಂಡವು ಮೊದಲು ಬೌಲಿಂಗ್ ಮಾಡಿದರೆ ಇಂಗ್ಲೆಂಡ್ ನೀಡುವ ಟಾರ್ಗೆಟ್​ ಅನ್ನು ಕೇವಲ 2.4 ಓವರ್​ಗಳಲ್ಲಿ ಚೇಸ್ ಮಾಡಬೇಕಾಗುತ್ತದೆ. ಅಂದರೆ 284 ಎಸೆತಗಳು ಬಾಕಿ ಇರುವಂತೆ ಪಾಕಿಸ್ತಾನ್ ತಂಡ ಚೇಸ್ ಮಾಡಬೇಕು.
  • ಇನ್ನು ಪಾಕಿಸ್ತಾನ್ ತಂಡವು ಮೊದಲು ಬ್ಯಾಟ್ ಮಾಡಿದರೆ 286 ಕ್ಕಿಂತ ಹೆಚ್ಚಿನ ರನ್​ಗಳಿಸಲೇಬೇಕು. ಒಂದು ವೇಳೆ 287 ಕ್ಕಿಂತ ಕಡಿಮೆ ರನ್​ಗಳಿಸಿದರೆ ಅಧಿಕೃತವಾಗಿ ಸೆಮಿಫೈನಲ್​ ರೇಸ್​ನಿಂದ ಹೊರಬೀಳಲಿದೆ.

ಒಂದು ವೇಳೆ ಪಾಕ್ ತಂಡವು 300 ರನ್​ಗಳಿಸಿದರೆ ಇಂಗ್ಲೆಂಡ್ ತಂಡವನ್ನು ಎಷ್ಟು ರನ್​ಗಳ ಒಳಗೆ ಆಲೌಟ್ ಅಥವಾ ನಿಯಂತ್ರಿಸಬೇಕು ಎಂಬುದರ ಲೆಕ್ಕಾಚಾರ ಈ ಕೆಳಗಿನಂತಿದೆ.

  • ಪಾಕಿಸ್ತಾನ್ ತಂಡ 300 ರನ್​ಗಳಿಸಿದರೆ, ಇಂಗ್ಲೆಂಡ್ ತಂಡವನ್ನು 13 ರನ್​ಗಳಿಗೆ ಆಲೌಟ್ ಮಾಡಬೇಕು.
  • ಪಾಕಿಸ್ತಾನ್ ತಂಡ 400 ರನ್​ಗಳಿಸಿದರೆ, ಇಂಗ್ಲೆಂಡ್ ತಂಡವನ್ನು 112 ರನ್​ಗಳಿಗೆ ನಿಯಂತ್ರಿಸಬೇಕು.
  • ಪಾಕಿಸ್ತಾನ್ ತಂಡ 450 ರನ್​ಗಳಿಸಿದರೆ, ಇಂಗ್ಲೆಂಡ್ ತಂಡವನ್ನು 162 ರನ್​ಗಳಿಗೆ ನಿಯಂತ್ರಿಸಬೇಕು.
  • ಪಾಕಿಸ್ತಾನ್ ತಂಡ 500 ರನ್​ಗಳಿಸಿದರೆ, ಇಂಗ್ಲೆಂಡ್ ತಂಡವನ್ನು 211 ರನ್​ಗಳಿಗೆ ನಿಯಂತ್ರಿಸಬೇಕು

ಈ ಲೆಕ್ಕಾಚಾರದಂತೆ ಪಾಕ್ ಸೆಮಿಫೈನಲ್​ಗೇರಲು ಪವಾಡವೇ ನಡೆಯಬೇಕು. ಹೀಗಾಗಿಯೇ ಸೆಮಿಫೈನಲ್​ ರೇಸ್​ನಿಂದ ಪಾಕ್ ಹೊರಬಿದ್ದಿದೆ ಎನ್ನಬಹುದು. ಅದರಂತೆ ಸೆಮಿಫೈನಲ್​ನಲ್ಲಿ ಭಾರತದ ಎದುರಾಳಿಯಾಗಿ ನ್ಯೂಝಿಲೆಂಡ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಹಾಗೆಯೇ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ

Previous Post

ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಯವರಿಗೆ ವಾಟ್ಸಪ್ ಮೂಲಕ ಅನಗತ್ಯ ಮತ್ತು ಅಸಂಬದ್ಧ ಸಂದೇಶ ರವಾನೆ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವರಿಗೆ ದೂರು

Next Post

ಉಡುಪಿ: 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜುತ್ತಾ ಜೀವ ಉಳಿಸಿಕೊಂಡ ಮೀನುಗಾರ

Next Post
ಉಡುಪಿ: 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜುತ್ತಾ ಜೀವ ಉಳಿಸಿಕೊಂಡ ಮೀನುಗಾರ

ಉಡುಪಿ: 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜುತ್ತಾ ಜೀವ ಉಳಿಸಿಕೊಂಡ ಮೀನುಗಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.