Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮಕ್ಕಳ ಮಾರಾಟ ಪ್ರಕರಣ; ಯಾರ್ಯಾರಿಗೆ ಯಾವ್ಯಾವ ಪಾತ್ರ? – ಇಲ್ಲಿದೆ ವಿವರ

editor tv by editor tv
November 28, 2023
in ರಾಜ್ಯ
0
ಮಕ್ಕಳ ಮಾರಾಟ ಪ್ರಕರಣ; ಯಾರ್ಯಾರಿಗೆ ಯಾವ್ಯಾವ ಪಾತ್ರ? – ಇಲ್ಲಿದೆ ವಿವರ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಮಕ್ಕಳ ಕಳ್ಳಸಾಗಾಣಿಕೆ (Child Trafficking) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು (CCB Police) ಭರ್ಜರಿ ಕಾರ್ಯಾಚರಣೆ ನಡೆಸಿ ಹಸುಗೂಸು ಮಾರಾಟ ದಂಧೆಯನ್ನು ಭೇದಿಸಿದ್ದಾರೆ. ಇನ್ನೂ ಈ ಗ್ಯಾಂಗ್‌ನಲ್ಲಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಆರೋಪಿಗಳ ಪಾತ್ರ ಏನು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿ ನೀಡಲಾಗಿದೆ.

ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳಾದ ಶರಣ್ಯ, ರಾಧ, ಸುಹಾಸಿನಿ, ಮಹಾಲಕ್ಷ್ಮಿ, ಗೋಮತಿ, ಹೇಮಲತಾ, ಕಣ್ಣನ್ ರಾಮಸ್ವಾಮಿ ಎಂಬವರನ್ನು ಬಂಧಿಸಲಾಗಿದೆ. ಈ 7 ಆರೋಪಿಗಳ ಪೈಕಿ ಮಹಾಲಕ್ಷ್ಮಿ ಮತ್ತು ರಾಧ ಪ್ರಮುಖ ಆರೋಪಿಗಳಾಗಿದ್ದಾರೆ. ಮಹಾಲಕ್ಷ್ಮಿ ಮಗು ಯಾರಿಗೆ ಬೇಕು ಎನ್ನುವುದನ್ನು ಹುಡುಕಿ ಡೀಲ್ ಮಾಡಿದರೇ ರಾಧ ಎಲ್ಲಿ ಮಗು ಇದೆ ಎಂಬುದನ್ನು ಹುಡುಕಿ ಅಲ್ಲಿಂದ ಡೀಲ್ ಮಾಡಿ ಮಹಾಲಕ್ಷ್ಮಿ ಹೇಳಿದ ಕಡೆಗೆ ಶರಣ್ಯ ಮತ್ತು ಇತರರ ಮೂಲಕ ಕಳುಹಿಸುತ್ತಿದ್ದಳು

ಶರಣ್ಯ: ಈಕೆ ರಾಧ ಮಗು ಸೇಲ್ ಮಾಡುವಾಗ ಜೊತೆಗೆ ಹೋಗುತ್ತಿದ್ದಳು ಮತ್ತು ಮಗುವನ್ನು ಸೇಲ್ ಮಾಡಿದ ನಂತರ ಹಣವನ್ನು ಪಡೆಯುವುದು ಈಕೆಯ ಕೆಲಸವಾಗಿತ್ತು.

ಸುಹಾಸಿನಿ: ಈಕೆ ಸರೋಗೆಸಿ ಏಜೆಂಟ್ ಮಕ್ಕಳು ಯಾರಿಗೆ ಬೇಕು ಮತ್ತು ಮಕ್ಕಳನ್ನು ಯಾರು ಕೊಡುತ್ತಾರೆ ಎನ್ನುವುದನ್ನು ಫೋಟೊಗಳ ಸಹಿತ ಕೆಲಸ ಮಾಡುತ್ತಿದ್ದಳು.

ರಾಧ: ಹೇಮಲತ ಮತ್ತು ಶರಣ್ಯನನ್ನು ಕಳುಹಿಸಿ ಹಣ ಪಡೆಯುವುದು ಮತ್ತೆ ಮಗುವನ್ನು ಕೊಟ್ಟುಬರುವ ಕೆಲಸ ಈಕೆ ಮಾಡಿಸುತ್ತಿದ್ದಳು. ಈಕೆ ತಮಿಳುನಾಡಿನ ಆಸ್ಪತ್ರೆಯಲ್ಲಿ ಬಾಡಿಗೆ ತಾಯ್ತನ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಳು. ಈಕೆ ಮಗುವನ್ನು ಮಾಡಿಕೊಂಡು ಸಾಕಲು ಆಗಲ್ಲಾ ಎನ್ನುವವರನ್ನು ಟಾರ್ಗೆಟ್ ಮಾಡಿ ಸಂಪರ್ಕ ಮಾಡುತ್ತಿದ್ದಳು.

ಕಣ್ಣನ್ ರಾಮಸ್ವಾಮಿ: ಈತ ಸಹ ಒರ್ವ ಏಜೆಂಟ್ ಆಗಿದ್ದು, ಮಹಾಲಕ್ಷ್ಮಿ ಮಗು ಬೇಕು ಎಂದು ರಾಧಗೆ ಹೇಳಿದಾಗ ರಾಧ ಕಣ್ಣನ್‌ಗೆ ಮಾಹಿತಿ ನೀಡುತ್ತಾಳೆ. ಆಗ ಕಣ್ಣನ್ ಈ ವಿಚಾರವನ್ನು ಗೋಮತಿಗೆ ಹೇಳುತ್ತಿದ್ದ. ಗೋಮತಿ ಮಗುವಿನ ತಾಯಿಗೆ ಸಂಪರ್ಕ ಮಾಡುತ್ತಿದ್ದಳು.

ಮಹಾಲಕ್ಷ್ಮಿ: ಈಕೆ ಕರ್ನಾಟಕದಲ್ಲಿ ಮಗು ಯಾರಿಗೆ ಬೇಕು ಎಂದು ಮಾಹಿತಿ ಪಡೆದು ನಂತರ ಆ ಮಾಹಿತಿಯನ್ನು ತಮಿಳುನಾಡಿನ (Tamil Nadu) ಗ್ಯಾಂಗ್‌ಗೆ ಹೇಳುತ್ತಿದ್ದಳು. ಆಗ ತಮಿಳುನಾಡಿನ ಗ್ಯಾಂಗ್ ಕೆಲಸ ಶುರು ಮಾಡುತ್ತಿತ್ತು.

ಗೋಮತಿ: ಈಕೆ ತಮಿಳುನಾಡಿನಿಂದ ಮಗು ಮತ್ತು ಮಗುವಿನ ತಾಯಿಯನ್ನು ಕರೆದುಕೊಂಡು ಬರುತ್ತಿದ್ದಳು.

ಹೇಮಲತಾ: ರಾಧ ಹೇಳಿದಂತೆ ಮಗುವನ್ನು ತಂದು ಕೊಡುವ ಕೆಲಸ ಈಕೆಯದಾಗಿತ್ತು. ರಾಧ ಹೇಳುತ್ತಿದ್ದ ಪ್ರತಿಯೊಂದು ಕೆಲಸವನ್ನು ಈಕೆ ಮಾಡುತ್ತಿದ್ದಳು.

ಇದಾದ ಬಳಿಕ ಆರೋಪಿಗಳು ಗರ್ಭಿಣಿಯರು ಗರ್ಭಪಾತ ಮಾಡಿಸಲು ಬರುತ್ತಿದ್ದವರನ್ನು ಟಾರ್ಗೆಟ್ ಮಾಡಿದ್ದಾರೆ. ಮಹಿಳೆಯರನ್ನು ಮನವೊಲಿಸಿ ಕರೆದುಕೊಂಡು ಹೋಗಿ ಅವರಿಗೆ ಇರಲು ಬೇಕಾದ ವ್ಯವಸ್ಥೆ ಮಾಡಿಕೊಡುತ್ತಾರೆ. ಹೀಗೆ ಮಗು ಹುಟ್ಟುವವರೆಗೆ ಕಾದು ಹೆರಿಗೆ ಮಾಡಿಸುತ್ತಾರೆ. ನಂತರ ಮಗುವಿನ ಫೋಟೋವನ್ನು ಎಲ್ಲರಿಗೂ ಶೇರ್ ಮಾಡುವ ಮೂಲಕ ಯಾರು ಮಕ್ಕಳು ಇಲ್ಲ ಎಂದು ಹುಡುಕುತ್ತಾರೋ ಅವರನ್ನು ಟಾರ್ಗೆಟ್ ಮಾಡುತ್ತಾರೆ. ಬಳಿಕ ಅವರಿಗೆ ಮಗುವಿನ ಫೋಟೋ ಕಳುಹಿಸಿ ಡೀಲ್ ಮಾಡುತ್ತಾರೆ. ಅಲ್ಲದೇ ಮಗುವಿಗೆ ಬೇಕಾದ ದಾಖಲಾತಿ ಸೃಷ್ಟಿ ಮಾಡುತ್ತಾರೆ. ಮಕ್ಕಳು ಹೇಗಿದ್ದಾರೆ? ಯಾವ ಬಣ್ಣ? ಲಿಂಗ ಯಾವುದು ಎಂಬ ಆಧಾರದ ಮೇಲೆ ಹಣವನ್ನು ನಿಗದಿ ಮಾಡಲಾಗುತ್ತದೆ. ಗಂಡು ಮಕ್ಕಳಾದರೆ 5ರಿಂದ 10 ಲಕ್ಷ ರೂ. ವರೆಗೆ ಮಾರಾಟ ಮಾಡುತ್ತಾರೆ. ಹೆಣ್ಣುಮಗುವಾದರೆ 4ರಿಂದ 5 ಲಕ್ಷದವರೆಗೂ ಮಾರಾಟ ಮಾಡಲಾಗುತ್ತದೆ. ಮಗುವನ್ನು ಹೆತ್ತುಕೊಟ್ಟ ತಾಯಂದಿರಿಗೆ ಒಂದೂವರೆಯಿಂದ 2 ಲಕ್ಷ ರೂ. ಹಣ ನೀಡಿ ಕಳುಹಿಸುತ್ತಾರೆ.

ಇದಕ್ಕೂ ಮೊದಲು ಆರೋಪಿಗಳು ಡೋನರ್‌ಗಳನ್ನು ಕರೆದುಕೊಂಡು ಹೋಗಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. 2021ರಲ್ಲಿ ಕಾಯ್ದೆ ಕಠಿಣ ಆಗಿತ್ತು. ಸೆರೋಗೆಸಿ ಕಾಯ್ದೆ ಕಠಿಣ ಆದ ಬಳಿಕ ಇವರೆಲ್ಲರಿಗೂ ಏಜೆಂಟ್ ಕೆಲಸ ಮಾಡುವುದು ಕಷ್ಟವಾಗುತ್ತದೆ. ನಂತರ ಐವಿಎಫ್ ಆಸ್ಪತ್ರೆಗೆ ಡೋನರ್‌ಗಳನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಾರೆ. ಒಂದು ಡೋನರ್‌ಗೆ 25,000 ಕಮಿಷನ್ ಪಡೆಯುತ್ತಿರುತ್ತಾರೆ. ಡೋನರ್ ಮತ್ತು ಎಗ್ಸ್ ಪಡೆಯುವವರು ಭೇಟಿಯಾಗಬೇಕು ಎಂದರೆ ಅದನ್ನು ಮಾಡಿಸುತ್ತಿರಲಿಲ್ಲಾ. ಆರೋಪಿಗಳು ತಾವು ಕುಟುಂಬ ಎಂದು ಸಹಿ ಮಾಡುತ್ತಿದ್ದರು. 25-35 ವಯಸ್ಸಿನ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದರು. ಆ ಮಹಿಳೆಯರು ಸಿಕ್ಕಿಲ್ಲಾ ಎಂದಾಗ ಆಧಾರ್ ಕಾರ್ಡ್ ನಕಲಿ ಮಾಡಿ ಕೆಲಸ ಮಾಡಲಾಗುತ್ತಿತ್ತು. ತಮಿಳುನಾಡಿನ ಆಸ್ಪತ್ರೆ ಕೇಸ್ ಆದ ಬಳಿಕ ಈ ದಂಧೆಯೂ ಕಷ್ಟ ಆಯಿತು. ನಂತರ ಗರ್ಭಿಣಿರು ಗರ್ಭಪಾತ ಮಾಡಿಸಲು ಬರುತ್ತಿದ್ದವರನ್ನು ಟಾರ್ಗೆಟ್ ಮಾಡಿದ್ದಾರೆ.

ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನವೆಂಬರ್ 26ರಂದು ಆರ್‌ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಕ್ಕಳನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಅನುಮಾನದಿಂದ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಯಿತು. 20 ದಿನದ ನವಜಾತ ಶಿಶುವನ್ನು ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸಿದ್ದರು. ಈ ಗ್ಯಾಂಗ್‌ನಲ್ಲಿ 7 ಜನ ಆರೋಪಿಗಳಿದ್ದಾರೆ. ಇವರು ಮಹಿಳೆಯರನ್ನು ಪುಸಲಾಯಿಸಿ ಮಗುವನ್ನು ಹೆತ್ತುಕೊಡಲು ಒಪ್ಪಿಸಿದ್ದರು. ಹಣಕ್ಕಾಗಿ ಬಾಡಿಗೆ ತಾಯಿಯನ್ನು ಮಾಡುತ್ತಿದ್ದರು. ಇದುವರೆಗೆ ಈ ಗ್ಯಾಂಗ್ 10 ಮಕ್ಕಳನ್ನು ಮಾರಾಟ ಮಾಡಿದೆ ಎಂದು ಹೇಳಿದರು.

8ರಿಂದ 10 ಲಕ್ಷ ರೂ.ಗೆ ಮಕ್ಕಳನ್ನು ಮಾರಾಟ ಮಾಡಲಾಗುತ್ತಿತ್ತು. ಅನಧಿಕೃತವಾಗಿ ದಾಖಲಾತಿಗಳನ್ನು ಮಾಡಿಕೊಡಲಾಗುತಿತ್ತು. ತಮಿಳುನಾಡಿನ ಪ್ರತಿಷ್ಠಿತ ವೈದ್ಯರು ಇದರಲ್ಲಿ ಭಾಗಿಯಾಗಿದ್ದಾರೆ. ತಮಿಳುನಾಡಿನ 4 ಆಸ್ಪತ್ರೆಗಳು ಇದರಲ್ಲಿ ಭಾಗಿಯಾಗಿದೆ. ಈಗಾಗಲೇ 3 ಆಸ್ಪತ್ರೆಗಳನ್ನು ಮುಚ್ಚಲಾಗಿದ್ದು, 1 ಆಸ್ಪತ್ರೆಯಲ್ಲಿ ಇನ್ನೂ ಈ ಅವ್ಯವಹಾರ ನಡೆಯುತ್ತಿದೆ. ಅಲ್ಲಿನ ಬಡ ಹೆಣ್ಣುಮಕ್ಕಳಿಗೆ ಪುಸಲಾಯಿಸಿ ಈ ರೀತಿ ಮಾಡಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವ ಡಾಕ್ಟರ್‌ಗಳ ಬಂಧನ ಆಗಬೇಕು ಎಂದರು

Previous Post

ಕೇರಳ: ಅಪಹರಣಕ್ಕೊಳಗಾದ 6ರ ಹರೆಯದ ಬಾಲಕಿ 21 ಗಂಟೆಗಳ ನಂತರ ಪತ್ತೆ

Next Post

UP: ಬುರ್ಖಾ ಧರಿಸಿಕೊಂಡು ಫ್ಯಾಷನ್‌ ಶೋನಲ್ಲಿ ಭಾಗಿಯಾದ ವಿದ್ಯಾರ್ಥಿನಿಯರು; ಸಂಘಟನೆ ಗರಂ

Next Post
UP: ಬುರ್ಖಾ ಧರಿಸಿಕೊಂಡು ಫ್ಯಾಷನ್‌ ಶೋನಲ್ಲಿ ಭಾಗಿಯಾದ ವಿದ್ಯಾರ್ಥಿನಿಯರು; ಸಂಘಟನೆ ಗರಂ

UP: ಬುರ್ಖಾ ಧರಿಸಿಕೊಂಡು ಫ್ಯಾಷನ್‌ ಶೋನಲ್ಲಿ ಭಾಗಿಯಾದ ವಿದ್ಯಾರ್ಥಿನಿಯರು; ಸಂಘಟನೆ ಗರಂ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.