Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಆರೋಪ ಸಾಬೀತಾದ್ರೆ ದೇಶ ಬಿಟ್ಟು ಹೋಗ್ತೇನೆ, ಇಲ್ಲದಿದ್ರೆ ಯಾತ್ನಾಳ್ ಏನು ಮಾಡ್ಬೇಕು ಅಂದರೆ..’ ಮುಸ್ಲಿಂ ಧರ್ಮಗುರು ಸವಾಲ್

editor tv by editor tv
December 7, 2023
in ರಾಜ್ಯ
0
ಆರೋಪ ಸಾಬೀತಾದ್ರೆ ದೇಶ ಬಿಟ್ಟು ಹೋಗ್ತೇನೆ, ಇಲ್ಲದಿದ್ರೆ ಯಾತ್ನಾಳ್ ಏನು ಮಾಡ್ಬೇಕು ಅಂದರೆ..’ ಮುಸ್ಲಿಂ ಧರ್ಮಗುರು ಸವಾಲ್
1.9k
VIEWS
Share on FacebookShare on TwitterShare on Whatsapp

ಯತ್ನಾಳ್​​ ಸಿಡಿಸಿದ ಐಸಿಸ್ ಬಾಂಬ್​ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಯತ್ನಾಳ್ ಆರೋಪದ ಕಿಡಿ ಹೊತ್ತಿಸುತ್ತಿದ್ದಂತೆ ಕಾಂಗ್ರೆಸ್ ನಾಯಕರು ಯತ್ನಾಳ್​ ವಿರುದ್ದ ಮಾತಿನ ಮಳೆ ಗರೆಯುತ್ತಿದ್ದಾರೆ. ಅತ್ತ ಒಂದು ವಾರದೊಳಗೆ ಆರೋಪ ಸಾಬೀತು ಪಡಿಸಿ ಎಂದು ಯತ್ನಾಳ್​ಗೆ ಮುಸ್ಲಿಂ ಧರ್ಮಗುರು ಸವಾಲು ಸಹ ಹಾಕಿದ್ದಾರೆ.

ಏನಿದು ಆರೋಪ..?

ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಐಸಿಸ್​ ಸಂಪರ್ಕದಲ್ಲಿರುವ ವ್ಯಕ್ತಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಅನ್ನೋ ಯತ್ನಾಳ್​ ಆರೋಪದ ಸಿಡಿಗುಂಡು ಕೈಪಾಳಯವನ್ನ ಕೆರಳಿ ಕೆಂಡವಾಗಿಸಿದೆ. ಯತ್ನಾಳ್​ ಅರೋಪದ ಅಲೆ ಎಬ್ಬಿಸ್ತಾ ಇದ್ದಂತೆ ಕಾಂಗ್ರೆಸ್​ನ ಜೋಡೆತ್ತುಗಳು ಯತ್ನಾಳ್​ ವಿರುದ್ಧ ಮಾತಿನ ಮಲ್ಲಯುದ್ಧಕ್ಕಿಳಿದಿದ್ದಾರೆ.

ಯತ್ನಾಳ್​ ಆರೋಪದ ಬಗ್ಗೆ ಸಿಎಂ ಸಿದ್ದರಾಮಯ್ಯ ಗರಂ

ಬೆಳಗಾವಿಯಲ್ಲಿ ಬೀಡು ಬಿಟ್ಟಿರೋ ಸಿಎಂ ಸಿದ್ದರಾಮಯ್ಯಗೆ ಯತ್ನಾಳ್​ ಆರೋಪದ ಬಗ್ಗೆ ಪ್ರಶ್ನೆ ಕೇಳುತ್ತಿದ್ದಂತೆ ಫುಲ್​ ಗರಂ ಆಗಿದ್ದಾರೆ. ಮಾಧ್ಯಮದವರು ಯತ್ನಾಳ್​ ಅನ್ನುತ್ತಿದ್ದಂತೆ ಏ ನಡಿಯಪ್ಪ ಅಂತ ಗುಟುರು ಹಾಕುತ್ತಲೇ ಹೊರನಡೆದಿದ್ದಾರೆ.

ಯತ್ನಾಳ್​ರನ್ನ ನಿಮ್ಹಾನ್ಸ್​ ಆಸ್ಪತ್ರೆಗೆ ಸೇರಿಸೋಣ’​

ಸಿಎಂ ವಿರುದ್ಧ ಯತ್ನಾಳ್​ ಮಾಡಿರೋ ಆರೋಪದ ಬಗ್ಗೆ ಡಿಸಿಎಂ ನಿಗಿ ನಿಗಿ ಕೆಂಡವಾಗಿದ್ದಾರೆ.. ಯತ್ನಾಳ್​ರನ್ನ ಒಳ್ಳೆ ಆಸ್ಪತ್ರೆಗೆ ಸೇರಿಸೋಣ, ನಿಮ್ಹಾನ್ಸ್​ಗೋ ಅಥವಾ ಬೇರೆ ಆಸ್ಪತ್ರೆಗೋ ಸೇರಿಸೋಣ ಅಂತ ಡಿ.ಕೆ. ಶಿವಕುಮಾರ್​ ಡಿಚ್ಚಿ ಕೊಟ್ಟಿದ್ದಾರೆ. ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಸಹ ಅಸಮಾಧಾನ ಹೊರಹಾಕಿದ್ದಾರೆ.. ಪಾಪ್ಯುಲಾರಿಟಿಗೆ ಮಾತಾಡೋದು ಎಷ್ಟು ಸರಿ ಅಂತ ಪ್ರಶ್ನಿಸಿದ್ದಾರೆ.

ಯತ್ನಾಳ್​ ಆರೋಪಕ್ಕೆ ಸವಾಲೆಸೆದ ಮುಸ್ಲಿಂ ಧರ್ಮಗುರು

ಯತ್ನಾಳ್​ ಆರೋಪದ ಬಗ್ಗೆ ಮುಸ್ಲಿಂ ಧರ್ಮಗುರು ತನ್ವೀರ್ ಪೀರಾ ಸಹ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರೋ ತನ್ವೀರ್ ಪೀರಾ, ಯತ್ನಾಳ್​ ಆರೋಪಕ್ಕೆ ಸವಾಲು ಎಸೆದಿದ್ದಾರೆ.. ಒಂದು ವಾರದೊಳಗೆ ಆರೋಪ ಸಾಬೀತು ಪಡಿಸುವಂತೆ ಯತ್ನಾಳ್​ಗೆ ಗಡುವು ನೀಡಿದ್ದಾರೆ. ಒಂದು ವೇಳೆ ಯತ್ನಾಳ್​ ಆರೋಪ ಸಾಬೀತಾದರೆ, ನಾನು ದೇಶವನ್ನ ಬಿಟ್ಟು ಹೋಗುತ್ತೇನೆ. ಸಾಬೀತು ಮಾಡದಿದ್ದರೆ ಯತ್ನಾಳ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಕಿಸ್ತಾನಕ್ಕೆ ಪಲಾಯನ ಮಾಡಬೇಕು ಅಂತ ತನ್ವೀರ್ ಪೀರಾ ಸವಾಲು ಹಾಕಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದ ಯತ್ನಾಳ್

ಮುಸ್ಲಿಂ ಧರ್ಮಗುರು ತನ್ವೀರ ಪೀರಾ ಅವರಿಗೆ ಐಸಿಸ್ ಜೊತೆ ಲಿಂಗ್ ಇದೆ ಅನ್ನೋ ಬಗ್ಗೆ ಎನ್ಐಎ ತನಿಖೆ ಆಗಬೇಕು ಅಂತ ಯತ್ನಾಳ್ ಕೇಂದ್ರ ಸಚಿವ ಸಮಿತ್ ಶಾಗೆ ಪತ್ರ ಬರೆದಿದ್ದಾರೆ.. ತನ್ವೀರ ಪೀರಾ ಐಸಿಸ್ ಬೆಂಬಲ ಇರುವ ವ್ಯಕ್ತಿಯಾಗಿದ್ದು, ಬೇರೆ ಬೇರೆ ದೇಶದಲ್ಲಿ ಅಂತಹ ವ್ಯಕ್ತಿಗಳನ್ನು ತನ್ವೀರ್ ಪೀರಾ ಭೇಟಿ ಆಗಿದ್ದಾರೆ.. ಆದ್ರಿಂದ ಎನ್​ಐಎ ತನಿಖೆ ಮಾಡಿ ಕ್ರಮ ಜರುಗಿಸುವಂತೆ ಯತ್ನಾಳ್ ಮನವಿ ಮಾಡಿದ್ದಾರೆ.
ಒಟ್ನಲ್ಲಿ ಯತ್ನಾಳ್​ ಹೂಡಿದ ಆರೋಪದ ಬಾಣ ಸದ್ಯ ಕೈ ನಾಯಕರನ್ನು ಮಾತಿನ ಮಲ್ಲಯುದ್ದಕ್ಕೆ ಆಮಂತ್ರಿಸಿದೆ. ಆರೋಪ ಸಾಬೀತು ಪಡಿಸಿ ಅನ್ನೋ ತನ್ವೀರ್ ಪೀರ್ ಅವರ ಸವಾಲು ಯತ್ನಾಳ್​ಗೆ ಅಗ್ನಿಪರೀಕ್ಷೆಯನ್ನ ತಂದೊಡ್ಡಿದೆ. ಒಂದು ವಾರದಲ್ಲಿ ಆರೋಪ ಸಾಬೀತು ಪಡಿಸಿ ತಮ್ಮ ಮಾತಿನ ಮೇಲೆ ಯತ್ನಾಳ್​ ನಿಲ್ತಾರಾ ಕಾದು ನೋಡ್ಬೇಕಿದೆ.

ತನ್ವೀರ್ ಪೀರ್ ಮನೆಗೆ ಸಿದ್ದು ಭೇಟಿ ಫೋಟೋಸ್ ವೈರಲ್

ಐಸಿಸ್​ ನಂಟಿನ ಆರೋಪ-ಪ್ರತ್ಯಾರೋಪದ ನಡುವೆ ಸಿಎಂ ಸಿದ್ದರಾಮಯ್ಯ ತನ್ವೀರ್ ಪೀರ್ ಮನೆಗೆ ಭೇಟಿ ನೀಡಿದ್ದ ಪೋಟೋಗಳು ಎಲ್ಲೆಡೆ ವೈರಲ್ ಆಗ್ತಿವೆ. ಕಳೆದ ನವೆಂಬರ್ 20ರಂದು ಸಿಎಂ ಸಿದ್ದರಾಮಯ್ಯ ವಿಜಯಪುರ ಪ್ರವಾಸದ ವೇಳೆ, ಮುಸ್ಲಿಂ ಧರ್ಮಗುರು ತನ್ವಿರಾ ಪೀರಾ ಅವರನ್ನು ಭೇಟಿ ಮಾಡಿದ್ರು.. ಈ ಭೇಟಿಯ ಫೋಟೊಗಳು ವೈರಲ್​ ಆಗ್ತಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

Previous Post

ಕೊಪ್ಪಳ | ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧನಿಗೆ ಹಲ್ಲೆಗೈದ ಪ್ರಕರಣ: ಇಬ್ಬರ ಬಂಧನ

Next Post

North Korea: ಕಣ್ಣೀರು ಸುರಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌!

Next Post
North Korea: ಕಣ್ಣೀರು ಸುರಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌!

North Korea: ಕಣ್ಣೀರು ಸುರಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.