Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಸೌದಿಯಿಂದ ಮಂಗಳೂರಿಗೆ ಬರುತ್ತಿದ್ದ ಹಡಗಿನ ಮೇಲೆ ಡ್ರೋನ್ ದಾಳಿ: ಬೆಂಕಿ ಅವಘಡ

editor tv by editor tv
December 24, 2023
in ರಾಷ್ಟ್ರೀಯ
0
ಸೌದಿಯಿಂದ ಮಂಗಳೂರಿಗೆ ಬರುತ್ತಿದ್ದ ಹಡಗಿನ ಮೇಲೆ ಡ್ರೋನ್ ದಾಳಿ: ಬೆಂಕಿ ಅವಘಡ
1.9k
VIEWS
Share on FacebookShare on TwitterShare on Whatsapp

Drone Attack in Arabian Sea: ಸೌದಿ ಅರೇಬಿಯಾದಿಂದ ಮಂಗಳೂರಿಗೆ ತೈಲ ಸಾಗಿಸಲು ಬರುತ್ತಿದ್ದ ವ್ಯಾಪಾರಿ ಹಡಗೊಂದಕ್ಕೆ ಭಾರತದ ಕರಾವಳಿ ಸಮೀಪದಲ್ಲಿ ಅರಬ್ಬಿ ಸಮುದ್ರದಲ್ಲಿ ಡ್ರೋನ್ ಅಪ್ಪಳಿಸಿದೆ. ಇದರ ಪರಿಣಾಮ ಹಡಗಿಗೆ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಸಾವು ನೋವು ವರದಿಯಾಗಿಲ್ಲ. ಹಡಗಿನ ರಕ್ಷಣೆಗೆ ಪೋರಬಂದರ್‌ನಿಂದ ಕರಾವಳಿ ಕಾವಲು ಪಡೆಯ ಹಡಗು ದೌಡಾಯಿಸಿದೆ.

ಹೊಸದಿಲ್ಲಿ: ಅರಬ್ಬಿ ಸಮುದ್ರದಲ್ಲಿ ವ್ಯಾಪಾರಿ ಹಡಗೊಂದಕ್ಕೆ ಡ್ರೋನ್ ಡಿಕ್ಕಿ ಹೊಡೆದು ಸ್ಫೋಟ ಹಾಗೂ ಬೆಂಕಿ ಅವಘಡಕ್ಕೆ ಕಾರಣವಾಗಿದೆ. ಶನಿವಾರ ಈ ಘಟನೆ ನಡೆದಿದ್ದು, ಯಾವುದೇ ಜೀವ ಹಾನಿ ವರದಿಯಾಗಿಲ್ಲ ಎಂದು ಸಮುದ್ರಯಾನ ಸಂಸ್ಥೆ ತಿಳಿಸಿದೆ. ಲಿಬೇರಿಯಾ ಧ್ವಜವುಳ್ಳ ಟ್ಯಾಂಕರ್, ಇಸ್ರೇಲ್‌ಗೆ ಸಂಬಂಧಿಸಿದ್ದಾಗಿದೆ ಎಂದು ಮತ್ತೊಂದು ಸಮುದ್ರಯಾನ ಸಂಸ್ಥೆ ಹೇಳಿದೆ.

ಭಾರತದ ಕರಾವಳಿ ಭಾಗದಲ್ಲಿ ನಡೆದ ಈ ದಾಳಿಯಿಂದ ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಗೆ ಯಾವುದೇ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ. ಲಿಬೇರಿಯಾ ಧ್ವಜ ಹೊತ್ತಿರುವ ಈ ರಾಸಾಯನಿಕ ಉತ್ಪನ್ನಗಳ ಟ್ಯಾಂಕರ್ ಇಸ್ರೇಲ್ ಜತೆ ನಂಟು ಹೊಂದಿದೆ ಎಂದು ಬ್ರಿಟಿಷ್ ಸೇನೆಯ ಯುನೈಟೆಡ್ ಕಿಂಗ್‌ಡಮ್ ಸಾಗರ ವ್ಯಾಪಾರ ಕಾರ್ಯಾಚರಣೆಗಳು ಮತ್ತು ಸಾಗರ ಭದ್ರತಾ ಸಂಸ್ಥೆ ಆಂಬ್ರೆ ಮಾಹಿತಿ ನೀಡಿದೆ.

ಸಿಬ್ಬಂದಿರಹಿತ ವೈಮಾನಿಕ ವ್ಯವಸ್ಥೆಯಿಂದ ದಾಳಿ ನಡೆಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಯುನೈಟೆಡ್‌ ಕಿಂಗ್‌ಡಮ್‌ ಮೆರಿಟೈಮ್ ಆಪರೇಷನ್ಸ್ ತಿಳಿಸಿದೆ.

ಹಡಗಿನಲ್ಲಿರುವ ಸಿಬ್ಬಂದಿಯಲ್ಲಿ 20 ಭಾರತೀಯರು ಕೂಡ ಸೇರಿದ್ದಾರೆ. ಗುಜರಾತ್‌ನ ಪೋರಬಂದರ್ ಕರಾವಳಿಯಿಂದ ಸುಮಾರು 217 ನಾಟಿಕಲ್ ಮೈಲು ದೂರದಲ್ಲಿರುವ ಎಂವಿ ಚೆಮ್ ಪ್ಲುಟೊ ವ್ಯಾಪಾರಿ ಹಡಗಿನ ಕಡೆಗೆ ಭಾರತೀಯ ಕರಾವಳಿ ಕಾವಲು ಹಡಗು ತೆರಳುತ್ತಿದೆ.

ಸೌದಿ ಅರೇಬಿಯಾದ ಬಂದರಿನಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಹಡಗು, ಕಚ್ಚಾ ತೈಲವನ್ನು ರವಾನಿಸುತ್ತಿತ್ತು. ಭಾರತದ ವಿಶೇಷ ಆರ್ಥಿಕ ವಲಯದಲ್ಲಿ ಪಹರೆ ನಡೆಸುತ್ತಿದ್ದ ಕರಾವಳಿ ಕಾವಲು ಹಡಗು ಐಸಿಜಿಎಸ್ ವಿಕ್ರಮ್, ಆಪತ್ತಿನಲ್ಲಿರುವ ವ್ಯಾಪಾರಿ ಹಡಗಿನ ಕಡೆಗೆ ದೌಡಾಯಿಸಿದೆ. ಅದಕ್ಕೆ ಸಹಾಯ ಒದಗಿಸುವಂತೆ ಈ ಭಾಗದಲ್ಲಿನ ಎಲ್ಲಾ ಹಡುಗಳಿಗೂ ಕರಾವಳಿ ಕಾವಲು ಪಡೆ ವಿಭಾಗ ಸೂಚನೆ ನೀಡಿದೆ.

ಬೆಂಕಿಯನ್ನು ನಂದಿಸಲಾಗಿದೆ. ಆದರೆ ಅದು ಹಡಗಿನ ಕಾರ್ಯಾಚರಣೆಗೆ ತೊಡಕು ಉಂಟುಮಾಡಿದೆ. ಹಡಗಿನಲ್ಲಿರುವ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಹೈಜಾಕ್ ಅಗಿರುವ ಹಡಗು

ಭಾರತೀಯ ನೌಕಾ ಪಡೆಯು ಹೈಜಾಕ್ ಆದ ಮಾಲ್ಟಾ ಧ್ವಜವುಳ್ಳ ಸರಗು ಸಾಗಣೆ ಹಡಗಿನಲ್ಲಿದ್ದ ಗಾಯಾಳು ನಾವಿಕನನ್ನು ರಕ್ಷಿಸುವಲ್ಲಿ ಸೋಮವಾರ ಸಹಾಯ ಮಾಡಿತ್ತು. ಅರಬ್ಬಿ ಸಮುದ್ರದಲ್ಲಿ ಎಂವಿ ರುಯೆನ್ ಹಡಗನ್ನು ಆರು ಮಂದಿ ಕಡಲ್ಗಳ್ಳರು ಹಡಗಿನ ಒಳಗೆ ಅಕ್ರಮವಾಗಿ ಪ್ರವೇಶಿಸಿದ್ದರು ಎಂದು ವರದಿಯಾಗಿತ್ತು.

ಹೈಜಾಕರ್‌ಗಳು ಗಾಯಾಳು ನಾವಿಕನನ್ನು ಸೋಮವಾರ ನಸುಕಿನಲ್ಲಿ ಬಿಡುಗಡೆ ಮಾಡಿದ್ದು, ಅವರನ್ನು ಚಿಕಿತ್ಸೆಗಾಗಿ ಒಮನ್‌ಗೆ ರವಾನಿಸಲಾಗಿತ್ತು. ಗಾಯಾಳು ಸ್ಥಿತಿ ಸ್ಥಿರವಾಗಿದೆ ಎಂದು ಭಾರತೀಯ ನೌಕಾ ಪಡೆ ಹೇಳಿಕೆ ನೀಡಿತ್ತು.

ಅರಬ್ಬಿ ಸಮುದ್ರದಲ್ಲಿ ಆರು ಮಂದಿ ಕಡಲ್ಗಳ್ಳರು ಮಾಲ್ಟಾದ ಎಂವಿ ರುಯೆನ್ ಹಡಗಿನೊಳಗೆ ಪ್ರವೇಶಿಸಿದ್ದು, ಸಹಾಯ ಮಾಡುವಂತೆ ಬಂದ ಕರೆಗೆ ತಕ್ಷಣ ಸ್ಪಂದಿಸಿದ ಭಾರತೀಯ ನೌಕಾ ಪಡೆ, ಗಲ್ಫ್ ಆಫ್ ಆಡೆನ್‌ನಲ್ಲಿದ್ದ ಕಡಲ್ಗಳ್ಳತನ ನಿಗ್ರಹ ಗಸ್ತಿನ ಯುದ್ಧ ನೌಕೆ ತಂಡಕ್ಕೆ ಎಂವಿ ರುಯೆನ್ ಹಡಗನ್ನು ಪತ್ತೆ ಮಾಡಲು ಮತ್ತು ನೆರವು ನೀಡಲು ಜವಾಬ್ದಾರಿ ವಹಿಸಿತ್ತು.

ತನ್ನ ಯುದ್ಧ ವಿಮಾನವು ಹೈಜಾಕ್ ಆದ ಹಡಗಿನ ಮೇಲೆ ಹಾರಾಟ ನಡೆಸಿದ್ದು, ಅದರ ಚಲನವಲನಗಳನ್ನು ಗಮನಿಸಲಾಗುತ್ತಿದೆ. ಹಡಗು ಸೊಮಾಲಿಯಾ ಕರಾವಳಿ ಕಡೆ ತೆರಳುತ್ತಿದೆ ಎಂದು ನೌಕಾಪಡೆ ತಿಳಿಸಿತ್ತು.

Previous Post

ಹಿಜಬ್ ವಿಚಾರದಲ್ಲಿ ಸರ್ಕಾರದ ಆದೇಶ 2, 3 ದಿನದಲ್ಲಿ ಹೊರಬೀಳುತ್ತೆ: ಹೆಚ್.ಕೆ. ಪಾಟೀಲ್

Next Post

ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್‌ ಅಧಿಕಾರಿ ಬಲಿ

Next Post
ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್‌ ಅಧಿಕಾರಿ ಬಲಿ

ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಉಗ್ರರಿಂದ ಗುಂಡೇಟು – ಜಮ್ಮು ಕಾಶ್ಮೀರದ ನಿವೃತ್ತ ಪೊಲೀಸ್‌ ಅಧಿಕಾರಿ ಬಲಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.