Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಇನ್ನು ಜಿಪಂ, ತಾಪಂ ಎಲೆಕ್ಷನ್‌ ಹಾದಿ ಸುಸೂತ್ರ; ಕ್ಷೇತ್ರ ಮರುವಿಂಗಡಣೆ, ಪ್ರವರ್ಗವಾರು ಮೀಸಲು ಕೊನೆಗೂ ಅಂತಿಮ

editor tv by editor tv
December 27, 2023
in ರಾಜ್ಯ
0
ಇನ್ನು ಜಿಪಂ, ತಾಪಂ ಎಲೆಕ್ಷನ್‌ ಹಾದಿ ಸುಸೂತ್ರ; ಕ್ಷೇತ್ರ ಮರುವಿಂಗಡಣೆ, ಪ್ರವರ್ಗವಾರು ಮೀಸಲು ಕೊನೆಗೂ ಅಂತಿಮ
1.9k
VIEWS
Share on FacebookShare on TwitterShare on Whatsapp

ಅಂತೂ ಬಹಳ ಸಮಯದಿಂದ ನನೆಗುದಿಗೆ ಬಿದ್ದಿದ್ದ ಜಿಪಂ ಮತ್ತು ತಾಪಂ ಚುನಾವಣೆ ಹಾದಿ ಇದೀಗ ಸುಗಮಗೊಂಡಿದೆ. ರಾಜ್ಯದ 30 ಜಿಲ್ಲೆಗಳ ಜಿಪಂ ಮತ್ತು ತಾಪಂಗಳ ಕ್ಷೇತ್ರ ಮರುವಿಂಗಡಣೆ ಮತ್ತು ಪ್ರವರ್ಗವಾರು ಮೀಸಲು ಕೊನೆಗೂ ಅಂತಿಮಗೊಂಡಿದ್ದು ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸನ್ನು ಸರ್ಕಾರ ಅಂಗೀಕರಿಸಿದೆ. ಆದರೆ ಕ್ಷೇತ್ರವಾರು ಮೀಸಲು ಪ್ರಕ್ರಿಯೆ ಮಾತ್ರ ಇನ್ನೂ ಬಾಕಿ ಉಳಿದಿದೆ. ಅದಾದ ಬಳಿಕ ಚುನಾವಣೆ ದಿನಾಂಕ ಪ್ರಕಟ ಆಗಲಿದೆ.

ಹೈಲೈಟ್ಸ್‌:

  • ಎರಡೂವರೆ ವರ್ಷಗಳ ಹಿಂದೆಯೇ ನಡೆಯಬೇಕಿದ್ದ ಜಿಪಂ ಮತ್ತು ತಾಪಂ ಚುನಾವಣೆ
  • ಕೋವಿಡ್ ಬೆನ್ನಲ್ಲೇ ಮೀಸಲು ನಿಗದಿ, ಕ್ಷೇತ್ರ ಮರುವಿಂಗಡಣೆಯೇ ತೊಡಕಾಗಿತ್ತು
  • ಇದೀಗ ಜಿಪಂ, ತಾಪಂ ಕ್ಷೇತ್ರ ಮರುವಿಂಗಡಣೆ, ಪ್ರವರ್ಗವಾರು ಮೀಸಲು ಪ್ರಕಟ
  • ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸಿಗೆ ಸರ್ಕಾರ ಅಸ್ತು

ಬೆಂಗಳೂರು: ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಕ್ಷೇತ್ರ ಮರುವಿಂಗಡಣೆ ಹಾಗೂ ಪ್ರವರ್ಗವಾರು ಮೀಸಲು ಕೊನೆಗೂ ಅಂತಿಮಗೊಂಡಿದೆ. ಈ ಸಂಬಂಧ ಕರ್ನಾಟಕ ಪಂಚಾಯತ್‌ರಾಜ್‌ ಸೀಮಾ ನಿರ್ಣಯ ಆಯೋಗದ ಶಿಫಾರಸನ್ನು ಸರಕಾರ ಅಂಗೀಕರಿಸಿದ್ದು, ಕೊಡಗು ಜಿಲ್ಲೆ ಹೊರತುಪಡಿಸಿ ಇತರ 30 ಜಿಲ್ಲಾ ಪಂಚಾಯತಿಗಳಿಗೆ ಒಟ್ಟು 1,101 ಸದಸ್ಯರು ಹಾಗೂ 234 ತಾಲೂಕು ಪಂಚಾಯಿತಿಗಳಿಗೆ 3,621 ಸದಸ್ಯರ ಸಂಖ್ಯೆಯನ್ನು ನಿರ್ಧರಿಸಿ ಅಧಿಸೂಚನೆ ಹೊರಡಿಸಿದೆ.

ಕ್ಷೇತ್ರ ಪುನರ್‌ ವಿಂಗಡಣೆ, ಮೀಸಲು ನಿಗದಿ ಸಮಸ್ಯೆ ಮತ್ತಿತರ ಕಾರಣಕ್ಕೆ ಸುಮಾರು ಎರಡೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಹಾದಿ ಈ ಮೂಲಕ ಭಾಗಶಃ ಸುಸೂತ್ರವಾಗಿದೆ. ಸದಸ್ಯರ ಸಂಖ್ಯೆ ನಿರ್ಣಯಿಸುವ ಜತೆಗೆ ಪ್ರವರ್ಗವಾರು ಶೇ 33 ಹಾಗೂ ಶೇ 50 ಮಹಿಳಾ ಮೀಸಲು ನಿಗದಿಪಡಿಸಲಾಗಿದೆ. ಈ ಸಂಬಂಧ ಡಿಸೆಂಬರ್ 16 ರಂದು ಸರಕಾರ ಅಧಿಸೂಚನೆ ಹೊರಡಿಸಿದೆ. ಕ್ಷೇತ್ರವಾರು ಮೀಸಲು ನಿಗದಿ ಪ್ರಕ್ರಿಯೆ ಇನ್ನೂ ಬಾಕಿ ಉಳಿದಿದೆ.

ಜಿಪಂಗಳಿಗೆ 1,126 ಸದಸ್ಯರು
ರಾಜ್ಯದ 31 ಜಿಲ್ಲಾ ಪಂಚಾಯ್ತಿಗಳಿಗೆ ಒಟ್ಟು 1,126 ಸದಸ್ಯರ ಸಂಖ್ಯೆ ನಿರ್ಧರಿಸಿ ಸೀಮಾ ಆಯೋಗ ಶಿಫಾರಸು ಮಾಡಿತ್ತು. ಈ ಪೈಕಿ ಕೋರ್ಟ್‌ ಪ್ರಕರಣ ಬಾಕಿ ಇರುವ ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದಂತೆ 30 ಜಿ.ಪಂಗಳಿಗೆ ಚುನಾಯಿತರಾಗಬೇಕಿರುವ 1,101 ಸದಸ್ಯರ ಸಂಖ್ಯೆಯನ್ನು ನಿರ್ಧರಿಸಲಾಗಿದೆ. ಅಂತೆಯೇ, ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದಂತೆ 234 ತಾಲೂಕು ಪಂಚಾಯಿತಿಗಳಿಗೆ 3,621 ಸದಸ್ಯರ ಸಂಖ್ಯೆಯನ್ನು ನಿರ್ಧರಿಸಲಾಗಿದೆ.

ಪ್ರತಿ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿಗಳಿಗೆ ನಿಗದಿಪಡಿಸಲಾದ ಒಟ್ಟು ಸದಸ್ಯರ ಸಂಖ್ಯೆಯಲ್ಲಿ ಶೇಕಡಾ 50 ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಪ್ರವರ್ಗ – ‘ಅ’ ಮತ್ತು ‘ಬ’ ಮೀಸಲಿರಿಸಲಾಗಿದೆ. ಉಳಿದ ಅರ್ಧದಷ್ಟು ಸ್ಥಾನಗಳು ಸಾಮಾನ್ಯ ವರ್ಗದ ಸ್ಥಾನಗಳೆಂದು ಪರಿಗಣಿಸಲಾಗಿದೆ. ಪ್ರತಿ ಪ್ರವರ್ಗದಲ್ಲಿ ಮಹಿಳೆಯರಿಗೆ ಶೇ.50 ಮೀಸಲು ನಿಗದಿಪಡಿಸಲಾಗಿದೆ.

ದೀರ್ಘ ಕಸರತ್ತು
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಳಿಗೆ ಎರಡೂವರೆ ವರ್ಷಗಳ ಹಿಂದೆಯೇ ಚುನಾವಣೆ ನಡೆಯಬೇಕಿತ್ತು. ಕೋವಿಡ್‌ ಸಾಂಕ್ರಾಮಿಕದ ಬೆನ್ನಲ್ಲೇ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲು ಸಮಸ್ಯೆ ಚುನಾವಣೆಗೆ ತೊಡಕಾಗಿತ್ತು. 2021ರ ಆರಂಭದಲ್ಲಿ ರಾಜ್ಯ ಚುನಾವಣಾ ಆಯೋಗ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲು ನಿಗದಿ ಮಾಡಿ ಮತದಾರರ ಕರಡು ಪಟ್ಟಿಯನ್ನೂ ಪ್ರಕಟಿಸಿತ್ತು. ಆದರೆ ಕ್ಷೇತ್ರ ಮರುವಿಂಗಡಣೆ ಬೇಕಾಬಿಟ್ಟಿ ನಡೆದಿದೆ ಎಂದು ವ್ಯಾಪಕ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸರಕಾರ ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993’ ಕ್ಕೆ ತಿದ್ದುಪಡಿ ತಂದು ‘ಕರ್ನಾಟಕ ಪಂಚಾಯಿತಿ ರಾಜ್‌ ಸೀಮಾ ನಿಯಂತ್ರಣ ಆಯೋಗ’ವನ್ನು ರಚಿಸಿತ್ತು.

ನಿವೃತ್ತ ಐಎಎಸ್‌ ಅಧಿಕಾರಿ ಲಕ್ಷ್ಮೀ ನಾರಾಯಣ ನೇತೃತ್ವದ ಆಯೋಗವು ಜಿಪಂ ಮತ್ತು ತಾಪಂಗಳಿಗೆ ಚುನಾಯಿತರಾಗಬೇಕಾದ ಸದಸ್ಯರ ಸಂಖ್ಯೆಯನ್ನು ನಿರ್ಧರಿಸಿ, ಪ್ರವರ್ಗವಾರು ಮೀಸಲು ನಿಗದಿಪಡಿಸಿ ಸರಕಾರಕ್ಕೆ ಶಿಫಾರಸು ಮಾಡಿತ್ತು. ಮತ್ತೊಬ್ಬ ಐಎಎಸ್‌ ಅಧಿಕಾರಿ ಎಂ.ಆರ್‌.ಕಾಂಬ್ಳೆ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿದ ಬಳಿಕ ಈ ಶಿಫಾರಸುಗಳನ್ನು ಸರಕಾರ ಒಪ್ಪಿ ಅಧಿಸೂಚನೆ ಹೊರಡಿಸಿದೆ.

Previous Post

ಮುಸ್ಲಿಂ ಮಹಿಳೆಯರ ಅವಹೇಳನ,ಪ್ರಭಾಕರ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲು

Next Post

ಜ.14 ರಿಂದ ‘ಭಾರತ ನ್ಯಾಯ ಯಾತ್ರಾ’ – ಮಣಿಪುರದಿಂದ ಮುಂಬೈಗೆ ರಾಹುಲ್‌ ಗಾಂಧಿ ಪಡೆ ಯಾತ್ರೆ

Next Post
ಜ.14 ರಿಂದ ‘ಭಾರತ ನ್ಯಾಯ ಯಾತ್ರಾ’ – ಮಣಿಪುರದಿಂದ ಮುಂಬೈಗೆ ರಾಹುಲ್‌ ಗಾಂಧಿ ಪಡೆ ಯಾತ್ರೆ

ಜ.14 ರಿಂದ ‘ಭಾರತ ನ್ಯಾಯ ಯಾತ್ರಾ’ – ಮಣಿಪುರದಿಂದ ಮುಂಬೈಗೆ ರಾಹುಲ್‌ ಗಾಂಧಿ ಪಡೆ ಯಾತ್ರೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.