Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಕೇರಳ: ಕೊಲ್ಲಂನಲ್ಲಿ ಎಸ್ಎಫ್ಐ ವಿರುದ್ಧ ರಸ್ತೆಯಲ್ಲಿ ಕುಳಿತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆಕ್ರೋಶ

editor tv by editor tv
January 27, 2024
in ರಾಷ್ಟ್ರೀಯ
0
ಕೇರಳ: ಕೊಲ್ಲಂನಲ್ಲಿ ಎಸ್ಎಫ್ಐ ವಿರುದ್ಧ ರಸ್ತೆಯಲ್ಲಿ ಕುಳಿತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆಕ್ರೋಶ
1.9k
VIEWS
Share on FacebookShare on TwitterShare on Whatsapp

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ ಎಸ್ಎಫ್ಐ ಕಾರ್ಯಕರ್ತರು. ಇದರಿಂದ ಕುಪಿತಗೊಂಡ ರಾಜ್ಯಪಾಲರು ಪ್ರತಿಭಟನಾಕಾರರಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸುವವರೆಗೂ ನಾನು ಇಲ್ಲಿಂದ ತೆರಳುವುದಿಲ್ಲ ಎಂದು ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲ್ಲಂ (ಕೇರಳ) ಜನವರಿ 27: ಕೊಲ್ಲಂ (Kollam) ಜಿಲ್ಲೆಯ  ನಿಲಮೇಲ್‌ನಲ್ಲಿ ಇಂದು (ಶನಿವಾರ) ಕೇರಳ ದ (Kerala) ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ (Arif Mohammed Khan) ವಿರುದ್ಧ ಎಸ್‌ಎಫ್‌ಐ (SFI) ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ ನಂತರ ನಾಟಕೀಯ ದೃಶ್ಯಗಳು ನಡೆದಿವೆ. ಎಸ್ಎಫ್ಐ ವಿರುದ್ಧ ಗುಡುಗಿದ ರಾಜ್ಯಪಾಲರು ವಾಹನದಿಂದ ಕೆಳಗಿಳಿದು  ಎಸ್ಎಫ್ಐ ಕಾರ್ಯಕರ್ತರು ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಪ್ರತಿಭಟನಾಕಾರರಿಗೆ ರಕ್ಷಣೆ ನೀಡುತ್ತಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸದೆ ಅಲ್ಲಿಂದ ಕದಲುವುದಿಲ್ಲ ಎಂಬ ದೃಢ ನಿಲುವಿನಿಂದ ರಾಜ್ಯಪಾಲರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ಸದಾನಂದ ಆಶ್ರಮದಲ್ಲಿ ಸಮಾರಂಭವನ್ನು ಉದ್ಘಾಟಿಸಲು ರಾಜ್ಯಪಾಲರು ತಿರುವನಂತಪುರದಿಂದ ನಿಲಮೇಲ್ ಮೂಲಕ ಸದಾನಂದಪುರಕ್ಕೆ ಹೋಗುತ್ತಿದ್ದರು. ಪ್ರಯಾಣದ ವೇಳೆ ಎಸ್‌ಎಫ್‌ಐ ಸದಸ್ಯರು ರಾಜ್ಯಪಾಲರ ವಾಹನದ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಕುಪಿತಗೊಂಡ ರಾಜ್ಯಪಾಲರು ಕಾರಿನಿಂದ ಇಳಿದು ಪ್ರತಿಭಟನಾಕಾರರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

#WATCH | "I will not leave from here. Police is giving them protection, " says Governor Arif Mohammed Khan after SFI activists held a protest against him in Kollam. Police present on the spot https://t.co/nQHF9PWqpr pic.twitter.com/RHFFBRCh9s

— ANI (@ANI) January 27, 2024

ಪ್ರತಿಭಟನಾಕಾರರಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸುವವರೆಗೂ ನಾನು ಇಲ್ಲಿಂದ ತೆರಳುವುದಿಲ್ಲ. ಪೊಲೀಸರೇ ಕಾನೂನನ್ನು ಉಲ್ಲಂಘಿಸಿದರೆ ಕಾನೂನನ್ನು ಯಾರು ಕಾಪಾಡುತ್ತಾರೆ ಎಂದು ರಾಜ್ಯಪಾಲರು ಕೊಲ್ಲಂ ಗ್ರಾಮಾಂತರ ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡರು. ಮನವೊಲಿಸಲು ಬಂದ ಕಚೇರಿ ಸಿಬ್ಬಂದಿ ಮೇಲೂ ರಾಜ್ಯಪಾಲರು ಸಿಟ್ಟಿಗೆದ್ದರು. ಪ್ರಧಾನಿ ಕಚೇರಿಗೆ ಕರೆ ಮಾಡಿ ಗೃಹ ಸಚಿವ ಅಮಿತ್ ಶಾ ಅವರನ್ನು ಕರೆಸಿ ಎಂದು ಖಾನ್ ಪಟ್ಟು ಹಿಡಿದಿದ್ದಾರೆ.

ಸ್ಥಳೀಯ ಮುಖಂಡರು ಮಧ್ಯ ಪ್ರವೇಶಿಸಿ ಮನವೊಲಿಸಲು ಯತ್ನಿಸಿದರೂ ರಾಜ್ಯಪಾಲರು ಮಣಿಯಲಿಲ್ಲ. ರಾಜ್ಯದ ಗೃಹ ಇಲಾಖೆ ವಿಫಲವಾಗಿದ್ದು, ಪೊಲೀಸರು ಪ್ರತಿಭಟನಾಕಾರರ ಜತೆ ಶಾಮೀಲಾಗಿದ್ದಾರೆ ಎಂದು ರಾಜ್ಯಪಾಲರು ಆರೋಪಿಸಿದ್ದಾರೆ. ಇದೇ ವೇಳೆ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ಸ್ಥಳದಿಂದ ಚದುರಿಸಿದ್ದಾರೆ. ಈ ಹಿಂದೆಯೂ ಕಪ್ಪು ಬಾವುಟ ಪ್ರತಿಭಟನೆಯ ನಂತರ ರಾಜ್ಯಪಾಲರು ಇದೇ ರೀತಿ ಆಕ್ರೋಶ ವ್ಯಕ್ತಪಡಿಸಿದ್ದರು.

ಖಾನ್ ಮತ್ತು ಕೇರಳದಲ್ಲಿನ ಎಡ ಸರ್ಕಾರವು ಹಲವಾರು ವಿಷಯಗಳಲ್ಲಿ ಜಗಳವಾಡುತ್ತಿದೆ. ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆ ಮತ್ತು ಅಸೆಂಬ್ಲಿ ಅಂಗೀಕರಿಸಿದ ಕೆಲವು ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಿಲ್ಲ ಎಂಬುದು ಈ ಜಟಾಪಟಿಗೆ ಕಾರಣಗಳಲ್ಲೊಂದು. ಈ ಜಗಳಗಳ ನಡುವೆ ಗುರುವಾರ, ರಾಜ್ಯಪಾಲರು ಕೇರಳ ವಿಧಾನಸಭೆಯಲ್ಲಿ ತಮ್ಮ ಸಾಂಪ್ರದಾಯಿಕ ನೀತಿ ಭಾಷಣದಲ್ಲಿ ಕೊನೆಯ ಪ್ಯಾರಾಗ್ರಾಫ್ ಅನ್ನು ಮಾತ್ರ ಓದಿ ಎರಡು ನಿಮಿಷಗಳಲ್ಲಿ ಭಾಷಣ ಮುಗಿಸಿದ್ದರು.

ಎಸ್‌ಎಫ್‌ಐಯವರು ಪಿಣರಾಯಿಯವರ ಗೂಂಡಾಗಳು: ವಿ. ಮುರಳೀಧರನ್

ಎಸ್‌ಎಫ್‌ಐ ಕಾರ್ಯಕರ್ತರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಗೂಂಡಾಗಳು. ಈ ಗೂಂಡಾಗಳ ಮೂಲಕ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಅಪಾಯಕ್ಕೆ ಸಿಲುಕಿಸಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಎಸ್.ಎಫ್.ಐ. ಮುರಳೀಧರನ್ ಹೇಳಿದ್ದಾರೆ.

ರಾಜ್ಯಪಾಲರ ಧರಣಿ ಸತ್ಯಾಗ್ರಹದ ಕುರಿತು ಕಾಸರಗೋಡಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುರಳೀಧರನ್, ರಾಜ್ಯಪಾಲರು ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದು, ದಾರಿಯುದ್ದಕ್ಕೂ ಎಲ್ಲಾದರೂ ತೊಂದರೆ ಆಗುವ ಸಂಭವವಿದ್ದರೆ ರಾಜ್ಯಪಾಲರಿಗೆ ತಿಳಿಸುವುದು ಪೊಲೀಸರ ಜವಾಬ್ದಾರಿ. ಅದು ಸಾಧ್ಯವಾಗದಿದ್ದರೆ ಪೊಲೀಸರು ಬಹಿರಂಗವಾಗಿ ಒಪ್ಪಿಕೊಳ್ಳಬೇಕು. ಕೇರಳದಲ್ಲಿ ಕಾನೂನು ಸುವ್ಯವಸ್ಥೆ  ಹದಗೆಟ್ಟಿದೆ.

ರಾಜ್ಯದ ರಾಜ್ಯಪಾಲರು ರಸ್ತೆಯಲ್ಲಿ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೇರಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೋ ಇಲ್ಲವೋ ಎಂಬುದನ್ನು ಇಂತಹ ವಾತಾವರಣ ನಿರ್ಮಿಸುವವರೇ ಹೇಳಬೇಕು ಎಂದು ಮುರಳೀಧರನ್ ಹೇಳಿದರು. ಸ್ವಜನಪಕ್ಷಪಾತ ಸೇರಿದಂತೆ ರಾಜ್ಯ ಸರ್ಕಾರದ ಲೋಪದೋಷಗಳ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ರಾಜ್ಯಪಾಲರ ಮೇಲಿನ ಸಿಟ್ಟನ್ನು ಹೊರಹಾಕುತ್ತಿದ್ದಾರೆ ಎಂದು ಮುರಳೀಧರನ್ ಹೇಳಿದ್ದಾರೆ.

Previous Post

ಕೊರೊನಾದಿಂದ ಕೆಲಸ ಕಳಕೊಂಡ ಇಂಜಿನಿಯರ್ ಮೈಸೂರಿನಲ್ಲಿ ಅದ್ಭುತ ನಕಲಿ ನೋಟು ತಯಾರಿಸುತ್ತಿದ್ದ; ಹರಿಹರ ಪೊಲೀಸರಿಗೆ ಸಿಕ್ಕಿಬಿದ್ದ!

Next Post

ಒಂದೇ ಓವರ್​ನಲ್ಲಿ 5 ಸಿಕ್ಸ್; 13 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಅಫ್ರಿಕಾ ಬ್ಯಾಟರ್..! ವಿಡಿಯೋ ನೋಡಿ

Next Post
ಒಂದೇ ಓವರ್​ನಲ್ಲಿ 5 ಸಿಕ್ಸ್; 13 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಅಫ್ರಿಕಾ ಬ್ಯಾಟರ್..! ವಿಡಿಯೋ ನೋಡಿ

ಒಂದೇ ಓವರ್​ನಲ್ಲಿ 5 ಸಿಕ್ಸ್; 13 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಅಫ್ರಿಕಾ ಬ್ಯಾಟರ್..! ವಿಡಿಯೋ ನೋಡಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.