Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು :ಮಳಲಿ ಮಸೀದಿ, ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಲು ದ.ಕ ಜಿಲ್ಲಾ ವಕ್ಫ್ ಸಮಿತಿ ನಿರ್ಧಾರ

editor tv by editor tv
February 3, 2024
in ಕರಾವಳಿ
0
ಮಂಗಳೂರು :ಮಳಲಿ ಮಸೀದಿ, ನ್ಯಾಯಾಲಯದಲ್ಲಿ  ಕಾನೂನು ಹೋರಾಟ ಮಾಡಲು ದ.ಕ ಜಿಲ್ಲಾ ವಕ್ಫ್ ಸಮಿತಿ ನಿರ್ಧಾರ
1.9k
VIEWS
Share on FacebookShare on TwitterShare on Whatsapp

ಮಂಗಳೂರು ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ದ.ಕ ಜಿಲ್ಲಾ ವಕ್ಫ್ ಸಮಿತಿ ನಿರ್ಧಾರ

ಮಂಗಳೂರು: ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್ ಬೋರ್ಡ್ ಕಡೆಯಿಂದ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್ ತಿಳಿಸಿದ್ದಾರೆ

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈವರೆಗೆ ಕೇವಲ ಮಳಲಿ ಮಸೀದಿ ಆಡಳಿತ ಸಮಿತಿಯವರು ಕಾನೂನು ಹೋರಾಟ ನಡೆಸುತ್ತಿದ್ದರು, ಮುಂದಕ್ಕೆ ವಕ್ಫ್ ಬೋರ್ಡ್ ಕಡೆಯಿಂದಲೂ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.


ಮಂಗಳೂರಿನ ಕೆಳಹಂತದ ನ್ಯಾಯಲಯದ ವಿಚಾರಣೆಗೆ ತಡೆಕೋರಿ ಮಳಲಿ ಮಸೀದಿ ಆಡಳಿತ ಸಮಿತಿ ಹೈಕೋರ್ಟ್ ಮೆಟ್ಟಿಲೇರಿತ್ತು. ಮಳಲಿ ಮಸೀದಿ ವಕ್ಫ್‌‌ ಗೆ ಒಳಪಟ್ಟಿರುವುದರಿಂದ ವಕ್ಫ್ ಟ್ರಿಬ್ಯುನಲ್ ನಲ್ಲಿ ವಿಚಾರಣೆ ನಡೆಸುವಂತೆ ಮಳಲಿ ಮಸೀದಿ ಆಡಳಿತ ಸಮಿತಿ ಮನವಿ ಮಾಡಿತ್ತು. ಆದರೆ ಹೈಕೋರ್ಟ್ ನಲ್ಲಿ ಮಳಲಿ ಮಸೀದಿಯ ಮೇಲ್ಮನವಿ ಅರ್ಜಿ ವಜಾ ಆಗಿದ್ದು, ಕೆಳಹಂತದ ನ್ಯಾಯಲಯದಲ್ಲೇ ಅದು ವಕ್ಫ್ ಆಸ್ತಿಯೋ ಅಲ್ವೋ ಎಂಬ ವಿಚಾರಣೆ ನಡೆಸಲು ಸೂಚನೆ ನೀಡಲಾಗಿದೆ‌. ಮಳಲಿ ಮಸೀದಿ ವಕ್ಫ್ ಆಸ್ತಿ ಎಂಬ ದಾಖಲೆ‌ ನಮ್ಮ‌ ಬಳಿ ಇರುವುದರಿಂದ ವಕ್ಫ್ ಮಂಡಳಿ ಈ ಪ್ರಕರಣದಲ್ಲಿ ದಾವೆ ಹಾಕಲು ತೀರ್ಮಾನಿಸಿದೆ ಎಂದು ತಿಳಿಸಿದರು.

ಈ ಪ್ರಕರಣ ಟ್ರಿಬ್ಯುನಲ್ ಗೆ ಬರುತ್ತದೆ ಎಂಬ ನಂಬಿಕೆ ವಕ್ಫ್ ಮಂಡಳಿಗೆ ಇತ್ತು. ಆ ಕಾರಣಕ್ಕೆ ವಕ್ಫ್ ಸಮಿತಿ ಮಧ್ಯಪ್ರವೇಶ ಮಾಡಿರಲಿಲ್ಲ. ಸದ್ಯ ಮಳಲಿ‌ಮಸೀದಿ ವಕ್ಫ್ ಆಸ್ತಿ ಹೌದು ಅಲ್ವೋ ಎಂಬ ವಿಷಯಕ್ಕೆ ಬಂದಿರುವುದರಿಂದ ವಕ್ಫ್ ಮಂಡಳಿ ಕಾನೂನು ಹೋರಾಟದಲ್ಲಿ ಪ್ರವೇಶ ಮಾಡಲಿದೆ ಎಂದರು.

ಮಳಲಿ ಮಸೀದಿಗೆ ಸಂಬಂಧಪಟ್ಟ ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ. ಸರ್ವೇ ಆಗಿದೆ, ಆರ್ ಟಿಸಿ ಇದೆ, ನಕ್ಷೆ ಇದೆ, ಮಸೀದಿಗೆ ತಸ್ತಿಕ್ ಬರುತ್ತಿದೆ, 2004ರಲ್ಲೇ ಮಸೀದಿ ಜಾಗದ ಸರ್ವೇ ಆಗಿದೆ, ಗೆಜೆಟ್ ನೋಟಿಫಿಕೇಷನ್ ಕೂಡ ಆಗಿದೆ. ಮಳಲಿ ಮಸೀದಿಯು ಮಸೀದಿ ಎಂಬುದಕ್ಕೆ ಅಬ್ಬಕ್ಕ ರಾಣಿ ಕಾಲದ ಇತಿಹಾಸ ಇದೆ. ಹಿರಿಯ ಸಾಹಿತಿ ದಿವಂಗತ ಅಮೃತ ಸೋಮೇಶ್ವರ್ ಅವರ ರಾಣಿ ಅಬ್ಬಕ್ಕ ಸಂಕಥನ ಪುಸ್ತಕದಲ್ಲಿ ಮಳಲಿ ಮಸೀದಿ ಬಗ್ಗೆ ಉಲ್ಲೇಖ ಇದೆ ಎಂದರು. ಮಸೀದಿಗೆ 400 ವರ್ಷಗಳ ಇತಿಹಾಸ ಇದ್ದು ಅರಸರ ಕಾಲದಲ್ಲಿ, ಬ್ರಿಟೀಷರ ಕಾಲದಲ್ಲಿ, ಆರ್ಟಿಸಿ ಬರುವ ಮುಂಚೆ ಇದ್ದಂತಹ ಅಡಂಗಲ್ ನಲ್ಲೂ ಮಳಲಿ ಮಸೀದಿ ಇದ್ದದ್ದಕ್ಕೆ ದಾಖಲೆ ಇದೆ. ನಮ್ಮಲ್ಲಿ ಎಲ್ಲಾ ದಾಖಲೆಗಳು ಇರುವ ಕಾರಣಕ್ಕೆ ವಕ್ಫ್ ಸಮಿತಿ ಈ ಪ್ರಕರಣದಲ್ಲಿ ಪಾರ್ಟಿ ಆಗಲು ಇಚ್ಛಿಸಿದೆ. ನಮ್ಮಲ್ಲಿರುವ ದಾಖಲೆಗಳನ್ನಿಟ್ಟು ನಾವು ವಾದ ಮಂಡಿಸುತ್ತೇವೆ, ನಮಗೆ ಜಯ ಸಿಕ್ಕೇ ಸಿಗುತ್ತೆ ಎಂಬ ವಿಶ್ವಾಸ ಇದೆ ಎಂದರು.

ಮಳಲಿ ಮಸೀದಿಗೆ ಸಂಬಂಧಪಟ್ಟು ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿ ತಪ್ಪು ಮಾಹಿತಿಗಳನ್ನು ಹರಡಲಾಗುತ್ತಿದೆ. ಮಳಲಿ ಪ್ರದೇಶದ ಜನರಲ್ಲಿ ಯಾವುದೇ ಗೊಂದಲ ಇಲ್ಲ, ಆದರೆ ಹೊರಗಿನ ಶಕ್ತಿಗಳು ಇದರಲ್ಲಿ ತಪ್ಪುಮಾಹಿತಿ ಹರಡುತ್ತಿದ್ದಾರೆ. ಇಲ್ಲಿ ಜಯ, ಅಪಜಯ ಎಂಬುದು ಯಾವುದೂ ಇಲ್ಲ, ಇನ್ನೂ ವಿಚಾರಣೆಯೇ ಶುರುವಾಗಿಲ್ಲ, ಮಂದಿರ ಮಸೀದಿ ಎಂಬ ಬಗ್ಗೆ ಯಾವುದೇ ಆದೇಶಗಳು ಬಂದಿಲ್ಲ. ಮಸೀದಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಸದ್ಯ ಯಾವುದೇ ತಡೆ ಇಲ್ಲ, ಅಲ್ಲಿ ನಮಾಝ್ ನಡೀತಿದೆ, ಧಾರ್ಮಿಕ ಕಾರ್ಯಕ್ರಮಗಳು ನಡೀತಿವೆ, ದಫನ ಮಾಡಲಾಗುತ್ತಿದೆ. ತಡೆ ಇರುವುದು ಕೇವಲ ಆ ರಚನೆ ಬಗ್ಗೆ, ಅಲ್ಲಿನ ರಚನೆಯನ್ನು ತೆರವು ಮಾಡಬಾರದು ಎಂಬ ತಡೆ ಅಷ್ಟೇ ಇದೆ, ಯಾವುದೇ ಧಾರ್ಮಿಕ ವಿಧಿವಿಧಾನಗಳಿಗೆ ಕೋರ್ಟ್ ತಡೆ ಇಲ್ಲ, ಎಲ್ಲವೂ ಈ ಹಿಂದಿನಂತೆ ಮುಂದುವರಿಯುತ್ತಿದೆ ಎಂದು ನಾಸೀರ್ ಲಕ್ಕಿಸ್ಟಾರ್ ತಿಳಿಸಿದರು.

ಮಳಲಿ‌ ಮಸೀದಿ ವಿಚಾರದಲ್ಲಿ ನಮಗೆ ಜಯ ಸಿಗುತ್ತದೆ, ಎಂದು ವಿಶ್ವಾಸ ವ್ಯಕ್ತಪಡಿಸಿದರು.

Previous Post

ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ; ಹಿಗ್ಗಾಮುಗ್ಗಾ ಬೈದ ಫ್ಯಾನ್ಸ್

Next Post

ಉಡುಪಿ ಗೃಹಿಣಿ ಕೊಲೆ ಪ್ರಕರಣ; ಮೂರು ವರ್ಷದ ಬಳಿಕ ಏರ್ ಪೋರ್ಟ್​ನಲ್ಲಿ ಸಿಕ್ಕಿಬಿದ್ದ ಆರೋಪಿ

Next Post
ಉಡುಪಿ ಗೃಹಿಣಿ ಕೊಲೆ ಪ್ರಕರಣ; ಮೂರು ವರ್ಷದ ಬಳಿಕ ಏರ್ ಪೋರ್ಟ್​ನಲ್ಲಿ ಸಿಕ್ಕಿಬಿದ್ದ ಆರೋಪಿ

ಉಡುಪಿ ಗೃಹಿಣಿ ಕೊಲೆ ಪ್ರಕರಣ; ಮೂರು ವರ್ಷದ ಬಳಿಕ ಏರ್ ಪೋರ್ಟ್​ನಲ್ಲಿ ಸಿಕ್ಕಿಬಿದ್ದ ಆರೋಪಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.