
ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಅಸುಂತ ಡಿಸೋಜ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಂಘಪರಿವಾರದ ಕಾರ್ಯಕರ್ತ ಸಂತು ಬೆದ್ರ ಎಂಬಾತನ ಮೇಲೆ ಜನವಾದಿ ಮಹಿಳಾ ಸಂಘಟನೆಯ ನಿಯೋಗವು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ. ನಿಯೋಗದಲ್ಲಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಜಯಂತಿ ಬಿ ಶೆಟ್ಟಿ, ಕಾರ್ಯದರ್ಶಿ ಭಾರತೀ ಬೋಳಾರ, ಅಸುಂತ ಡಿಸೋಜ, ಪ್ರಮಿಳಾ ದೇವಾಡಿಗ, ಪ್ರಮಿಳಾ ಶಕ್ತಿನಗರ, ಆಶಾ ಬೋಳೂರು, ಯೋಗಿತಾ ಉಳ್ಳಾಲ ಮುಂತಾದವರು ಉಪಸ್ಥಿತರಿದ್ದರು.

