
ರಣ ಬಿಸಿಲಿಗೆ ನಲುಗಿದ್ದ ಜನರಿಗೆ ಮಳೆ ಕೃಪೆ ತೋರಿದ್ದು, ರಾಜ್ಯದ ಹಲವೆಡೆ ಮಳೆಯಾಗಿದೆ. ಅದರಂತೆ ವಿಜಯಪುರ ನಗರದಲ್ಲೂ ಭರ್ಜರಿ ಗುಡುಗು ಸಹಿತ ಮಳೆಯಾಗಿದೆ. ಈ ಹಿನ್ನಲೆ ನಗರದ ಜುಮ್ಮಾ ಮಸೀದ್ ರಸ್ತೆಯಲ್ಲಿರುವ ಐತಿಹಾಸಿಕ ಮೆಹೆತರ್ ಮಹಲ್ಗೆ ಸಿಡಿಲು ಬಡಿದು ಮಹಲ್ನ ಮಿನಾರ್ ನಿಂತಿದ್ದ ಕಾರಿನ ಮೇಲೆ ಬಿದ್ದಿದೆ. ಇದನ್ನು ಆದಿಲ್ ಶಾಹಿ ಕಾಲದಲ್ಲಿ ನಿರ್ಮಾಣ ಮಾಡಲಾಗಿತ್ತು.


ಬಿಸಿಲಿನ ಬೇಗಗೆ ಬಳಲಿದ್ದ ಜನಕ್ಕೆ ವರುಣದೇವ ತಂಪರೆದಿದ್ದಾನೆ. ಹೌದು, ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ಮಳೆಯ ಸಿಂಚನ ಮೂಡಿದೆ


ಇನ್ನು ವಿಜಯಪುರ ಜಿಲ್ಲೆಯಲ್ಲೂ ಇಂದು(ಏ.18) ಗಾಳಿ, ಗುಡುಗು, ಸಿಡಿಲು ಸಹಿತ ಭರ್ಜರಿ ಮಳೆಯಾಗಿದ್ದು, ಜನರಲ್ಲಿ ಮಂದಹಾಸ ಮೂಡಿದೆ.

ವಿಜಯಪುರ ಸೇರಿದಂತೆ ರಾಜ್ಯದ ಬಾಗಲಕೋಟೆ, ಹಾವೇರಿ, ಶಿವಮೊಗ್ಗ, ಗದಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ

ಇನ್ನು ವಿಜಯಪುರ ಜಿಲ್ಲೆಯ ಬಬಲೇಶ್ವರ ನಾಕಾ ರಸ್ತೆಯಲ್ಲಿ ಮಳೆಯ ಅಬ್ಬರಕ್ಕೆ ಬೃಹತ್ ಮರಗಳು ಧರೆಗುರುಳಿದಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

ಇತ್ತ ಸಿಡಿಲು ಬಡಿದು ವಿಜಯಪುರದ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಐತಿಹಾಸಿಕ ಮೆಹೆತರ್ ಮಹಲ್ಗೆ ಹಾನಿಯಾಗಿದೆ

ಆದಿಲ್ ಶಾಹಿ ಕಾಲದಲ್ಲಿ ನಿರ್ಮಿಸಲಾಗಿದ್ದ ಈ ಐತಿಹಾಸಿಕ ಮೆಹೆತರ್ ಮಹಲ್ನ ಮಿನಾರ್ಗೆ ಬಡಿದಿರುವ ಸಿಡಿಲ ಹೊಡೆತಕ್ಕೆ ಮಿನಾರ್ ತುಂಡಾಗಿ ಮೆಹರತ್ ಮೆಹಲ್ ಬಳಿ ನಿಂತಿದ್ದ ಕಾರಿನ ಮೇಲೆ ಬಿದ್ದಿದೆ
