Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

LKG UKG In Govt Schools: 578 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಆದೇಶ; ಶಿಕ್ಷಕರಾಗಲು ಅರ್ಹತೆ ಏನು?

editor tv by editor tv
June 21, 2024
in ರಾಜ್ಯ
0
LKG UKG In Govt Schools: 578 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಆದೇಶ; ಶಿಕ್ಷಕರಾಗಲು ಅರ್ಹತೆ ಏನು?
1.9k
VIEWS
Share on FacebookShare on TwitterShare on Whatsapp

LKG UKG In Govt Schools: 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.

ಬೆಂಗಳೂರು: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (govt pre-schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆ ಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (LKG UKG In Govt Schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಅದರಂತೆ, 2023-24 ನೇ ಸಾಲಿನಲ್ಲಿ ರಾಜ್ಯದ ಆಯ್ದ 262 ಮತ್ತು 2024-25ನೇ ಸಾಲಿನಲ್ಲಿ 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ಅನುಮತಿ ನೀಡುವಂತೆ ಕೋರಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಆದೇಶ ಹೊರಡಿಸಲಾಗಿದೆ.

ಇನ್ನು ಶಿಕ್ಷಣ ಸಚಿವಾಲದ ಸೂಚನೆಯಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸುವ ಸಂಬಂಧದಲ್ಲಿ ಈ ಕೆಳಗಿನಂತೆ ವಿವರವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ

ತರಗತಿ ಪ್ರಾರಂಭಿಸಲು ಪಾಲಿಸಬೇಕಾದ ಸೂಚನೆಗಳು

  • 2024-25ನೇ ಸಾಲಿನ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
  • 2024-25ನೇ ಸಾಲಿನಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರಿ ಪ್ರಾಥಮಿಕ ಶಾಲೆಗಳ ಎಸ್.ಡಿ.ಎಂ.ಸಿಯವರು ಮತ್ತು ಶಿಕ್ಷಕರು ಸ್ಥಳೀಯ ಮಟ್ಟದಲ್ಲಿ ಪ್ರಚಾರ ಮಾಡಬೇಕು.
  • 2024-25ನೇ ಸಾಲಿನ ಪೂರ್ವ ಪ್ರಾಥಮಿಕ LKGಯ ಒಂದು ವಿಭಾಗವನ್ನು ಮಾತ್ರ ಪ್ರಾರಂಭಿಸುವುದು, ಈ LKG ತರಗತಿಗೆ 4 ವರ್ಷದಿಂದ 5 ವರ್ಷದ ವಯೋಮಿತಿಯ ಒಳಗಿನ ಮಕ್ಕಳನ್ನು ದಾಖಲುಮಾಡಿಕೊಳ್ಳುವುದು. ಈ ವಿಭಾಗ ಪ್ರಾರಂಭಿಸಲು 4 ವರ್ಷದಿಂದ 5 ವರ್ಷದ ವಯೋಮಾನದ ಕನಿಷ್ಠ 20 ಮಕ್ಕಳು ಪ್ರವೇಶ ಪಡೆಯುವಂತಿರಬೇಕು ಹಾಗೂ ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸಬೇಕು.
  • ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಒಂದು ಕೊಠಡಿಯನ್ನು ಗುರುತಿಸಿಕೊಳ್ಳುವುದು ಹಾಗೂ ಕೊಠಡಿ ಸಜ್ಜುಗೊಳಿಸುವುದು ಅವಶ್ಯ ಸಾಧನ ಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸುವುದು. ಕೊಠಡಿ ಸಜ್ಜುಗೊಳಿಸಲು ಸ್ಥಳಿಯ ಚಿತ್ರಕಲಾ ಶಿಕ್ಷಕರನ್ನು / ಚಿತ್ರಕಲಾ ಪರಿಣಿತರನ್ನು ಬಳಸಿಕೊಂಡು ಮಕ್ಕಳಿಗೆ ಆಕರ್ಷಕವಾದ ಚಿತ್ರಗಳ ರಚನೆ, ಗೋಡೆ ಮೇಲೆ ನೆಲ ಮಟ್ಟದಿಂದ 2 ಅಡಿಯವರೆಗೆ ಮಕ್ಕಳು ಬರೆಯಲು/ ಚಿತ್ರ ರಚಿಸಲು ಸಾಧ್ಯವಾಗುವಂತೆ ಗ್ರೀನ್ ಬೋರ್ಡ/ಕರಿಹಲಗೆ ರಚನೆ ಮುಂತಾದ ಕಾರ್ಯಗಳನ್ನು ಮಾಡುವುದು. ಖರೀದಿಸಬೇಕಾದ ಸಾಧನ ಸಾಮಗ್ರಿಗಳ ಪಟ್ಟಿಯನ್ನು ಹಾಗೂ ಕೆಲವು ಕೊಠಡಿಯ ವಿನ್ಯಾಸದ ಕೆಲವು ಮಾದರಿ ಉದಾಹರಣೆಗಳನ್ನು ಕೂಡಲೇ ಒದಗಿಸಬೇಕು.
  • ಪ್ರತಿ ಪೂರ್ವ ಪ್ರಾಥಮಿಕ ತರಗತಿಗೆ ಒಬ್ಬ ಶಿಕ್ಷಕಿ/ಶಿಕ್ಷಕ ಮತ್ತು ಒಬ್ಬರು ಆಯಾರವರನ್ನು ಶಾಲಾ ಎಸ್.ಡಿ.ಎಂ.ಸಿ ವತಿಯಿಂದ ತಾತ್ಕಾಲಿಕವಾಗಿ 10 ತಿಂಗಳುಗಳ ಅವಧಿಗೆ ನೇಮಕ ಮಾಡಿಕೊಳ್ಳತಕ್ಕದ್ದು. ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕರಿಗೆ ಪ್ರಸ್ತುತ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಸಂಭಾವನೆಯಂತೆಯೇ ಮಾಸಿಕ 10,000 ರೂ. ಮತ್ತು ಆಯಾಗಳಿಗೆ ಮಾಸಿಕ 5000 ರೂ. ಸಂಭಾವನೆಯನ್ನು ನಿಗದಿಪಡಿಸತಕ್ಕದ್ದು.
  • ವೇತನ ಅನುದಾನವನ್ನು ಆಯಾ ಎಸ್.ಡಿ.ಎಂ.ಸಿ. ಖಾತೆಗೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಿಂದ ಬಿಡುಗಡೆ ಮಾಡಬೇಕು

ಆಯಾಗಳ ಹುದ್ದೆಗೆ ಅರ್ಹತೆ:

  1. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಕಡ್ಡಾಯವಾಗಿ ಮಹಿಳೆಯಾಗಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಸ್ಥಳಿಯರಾಗಿರಬೇಕು (ಆಯಾ ಗ್ರಾಮ/ವಾರ್ಡ್ ವ್ಯಾಪ್ತಿಯವರು), ಒಂದು ವೇಳೆ ಸ್ಥಳಿಯವಾಗಿ ಯಾವುದೇ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಸರ್ಕಾರಿ ಶಾಲೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದವರನ್ನು/ಪಕ್ಕದ ವಾರ್ಡಿನವರನ್ನು ಪರಿಗಣಿಸತಕ್ಕದ್ದು.

ಶಿಕ್ಷಕರ/ಆಯಾರ ಆಯ್ಕೆಯಲ್ಲಿ ಅನುಸರಿಸಬೇಕಾದ ಮಾನದಂಡಗಳು

  1. a) ಶಿಕ್ಷಕರ/ಆಯಾರ ಆಯ್ಕೆ ಸಮಿತಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಇರುವ ಮುಖ್ಯ ಶಿಕ್ಷಕರು, ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಒಬ್ಬ ಹಿರಿಯ ಸಹ ಶಿಕ್ಷಕ / ಶಿಕ್ಷಕಿ ಸದಸ್ಯರಾಗಿರತಕ್ಕದ್ದು.
    B)ಶಿಕ್ಷಕರ ಆಯ್ಕೆಗೆ ವಿವಿಧ ಅಂಶಗಳಿಗೆ ನೀಡಬೇಕಾದ ಮೌಲ್ಯ (weightage): ಅರ್ಹ ಅಭ್ಯರ್ಥಿಗಳ ಪೈಕಿ ನಿಗದಿತ ಮಾನದಂಡದಂತೆ ಅತೀ ಹೆಚ್ಚು ಒಟ್ಟು ಅಂಕಗಳಿಸಿದವರನ್ನು ಪರಿಗಣಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Previous Post

Delhi Liquor Policy Scam: ಅರವಿಂದ್ ಕೇಜ್ರಿವಾಲ್‌ ಜಾಮೀನು ತಾತ್ಕಾಲಿಕ ತಡೆ ಹಿಡಿದ ಹೈಕೋರ್ಟ್

Next Post

T20 World Cup 2024 : ಗೆಲುವು ಬೋನಸ್​ ಎನ್ನುತ್ತಿರುವ ಬಾಂಗ್ಲಾವನ್ನು ಮಟ್ಟ ಹಾಕುವುದೇ ಭಾರತ?

Next Post
T20 World Cup 2024 : ಗೆಲುವು ಬೋನಸ್​ ಎನ್ನುತ್ತಿರುವ ಬಾಂಗ್ಲಾವನ್ನು ಮಟ್ಟ ಹಾಕುವುದೇ ಭಾರತ?

T20 World Cup 2024 : ಗೆಲುವು ಬೋನಸ್​ ಎನ್ನುತ್ತಿರುವ ಬಾಂಗ್ಲಾವನ್ನು ಮಟ್ಟ ಹಾಕುವುದೇ ಭಾರತ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.