ಬಿಜೆಪಿ ಶಾಸಕ ನಿತೇಶ್ ರಾಣೆಗೆ ಮತ್ತೊಮ್ಮೆ ದ್ವೇಷ ಕಾರಿದ್ದಾನೆ . ಆತನ ವಿರುದ್ಧ ಎರಡು ಎಫ್ಐಆರ್ಗಳು ದಾಖಲಾಗಿವೆ. ಅಹ್ಮದ್ನಗರ ಪೊಲೀಸರ ಪ್ರಕಾರ, ನಿನ್ನೆ ಅಹ್ಮದ್ನಗರ ಜಿಲ್ಲೆಯ ಶ್ರೀರಾಮಪುರ ಮತ್ತು ಟೋಪ್ಖಾನಾ ಪೊಲೀಸ್ ಪ್ರದೇಶಗಳಲ್ಲಿ ಎರಡು ಪ್ರತ್ಯೇಕ ಸಂದರ್ಭಗಳಲ್ಲಿ ಬಿಜೆಪಿ ಶಾಸಕ ನಿತೀಶ್ ರಾಣೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಿತೀಶ್ ರಾಣೆ ಅಹ್ಮದ್ ನಗರದಲ್ಲಿ ಸಕಲ್ ಹಿಂದೂ ಸಮಾಜ ಚಳವಳಿಯಲ್ಲಿ ಭಾಗವಹಿಸಿ ಭಾಷಣ ಮಾಡಿದ್ದನು .
ಮುಸ್ಲಿಮರನ್ನು ಹುಡುಕಿ ಕೊಲ್ಲುತ್ತೇವೆ ಎಂದು ಹೇಳಿಕೆ ನೀಡಿರುವ ಬಿಜೆಪಿ ಶಾಸಕ ನಿತೀಶ್ ರಾಣೆ ವಿರುದ್ಧ ಪ್ರಕರಣ ದಾಖಲಾಗಿದೆ. ರಾಣೆ ಉದ್ರೇಕಕಾರಿ ಭಾಷಣಗಳನ್ನು ನೀಡಿದ್ದಾನೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ ಎಂದು ಆರೋಪಿಸಲಾಗಿದೆ.

ಮಹಾರಾಷ್ಟ್ರದ ಅಹ್ಮದ್ನಗರದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಶಾಸಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 302, 153 ಮತ್ತು ಇತರ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಿತೀಶ್ ರಾಣೆ ಕಾರ್ಯಕ್ರಮವೊಂದರಲ್ಲಿ ಮುಸ್ಲಿಮರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾನೆ ಎಂದು ಟಿವಿ9 ಭಾರತ್ವರ್ಷ್ ವರದಿ ಮಾಡಿದೆ.

ಆತನ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಒಂದು ಪ್ರಕರಣ ಶ್ರೀರಾಮಪುರದಲ್ಲಿ ಮತ್ತು ಇನ್ನೊಂದು ತೋಪಖಾನಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಎಐಎಂಐಎಂ ನಾಯಕ ವಾರೀಶ್ ಪಠಾಣ್ ನಿತೀಶ್ ರಾಣೆ ಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಬಿಜೆಪಿಯು ಚುನಾವಣೆಗೆ ಮುನ್ನ ಕೋಮುಗಲಭೆ ಸೃಷ್ಟಿಸಲು ಬಯಸುತ್ತದೆ ಎಂದು ಆರೋಪಿಸಿದ್ದಾರೆ. ನಿತೀಶ್ ರಾಣೆ ಭಾಷಣದಲ್ಲಿ ಉದ್ರೇಕಕಾರಿಯಾಗಿದ್ದು, ನಿತೀಶ್ ವಿರುದ್ಧ ಎಫ್ ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ
