ಚನ್ನಪಟ್ಟಣ/ಶಿಗ್ಗಾಂವಿ/ಸಂಡೂರು: ರಾಜ್ಯದ ಜನತೆಯನ್ನು ಕುತೂಹಲದತ್ತ ದೂಡಿದ್ದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದು, ವಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿತ ವ್ರ ಮುಖಭಂಗ ಅನುಭವಿಸಿದೆ.

ಶಿಗ್ಗಾಂವಿಯಲ್ಲಿ ಯಾಸಿರ್ ಖಾನ್ ಪಠಾಣ್ 93,234 ಮತ ಪಡೆದಿದ್ದು, ಭರತ್ ಬೊಮ್ಮಾಯಿ 79,756 ಮತ ಪಡೆದಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ನ ಅನ್ನಪೂರ್ಣ ತುಕಾರಾಂ 93,051 ಮತ ಪಡೆದಿದ್ದು,ಬಿಜೆಪಿಯ ಬಂಗಾರು ಹನುಮಂತು 83,483 ಮತ ಪಡೆದಿದ್ದಾರೆ.
ಮತಎಣಿಕೆ ಕೇಂದ್ರದಿಂದ ಹೊರನಡೆದ ಭರತ್:15ನೇ ಸುತ್ತಿನ ಮತಎಣಿಕೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ 13,288 ಮತಗಳ ಮುನ್ನಡೆ ಸಾಧಿಸಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಘಟನೆ ನಡೆಯಿತು.
