Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಎರಡು ಬಾರಿ ಶಾಸಕರಾದ್ರೆ ಎರಡು ಪಿಂಚಣಿ ಸಿಗುತ್ತಾ? ಎಂಎಲ್ ಎ, ಎಂಪಿಗಳ ಪೆನ್ಷನ್ ಡಿಟೇಲ್ ಇಲ್ಲಿದೆ

editor tv by editor tv
February 12, 2025
in ರಾಷ್ಟ್ರೀಯ
0
ಎರಡು ಬಾರಿ ಶಾಸಕರಾದ್ರೆ ಎರಡು ಪಿಂಚಣಿ ಸಿಗುತ್ತಾ? ಎಂಎಲ್ ಎ, ಎಂಪಿಗಳ ಪೆನ್ಷನ್ ಡಿಟೇಲ್ ಇಲ್ಲಿದೆ
1.9k
VIEWS
Share on FacebookShare on TwitterShare on Whatsapp

ಚುನಾವಣೆಯಲ್ಲಿ ಸೋತು ಮಾಜಿಯಾಗುವ ಶಾಸಕರು ಹಾಗೂ ಸಂಸದರಿಗೆ ಪಿಂಚಣಿ ವ್ಯವಸ್ಥೆ ಇದೆ. ಪ್ರತಿ ತಿಂಗಳು ಅವರು ಎಷ್ಟು ಪಿಂಚಣಿ ಪಡೀತಾರೆ, ಯಾವೆಲ್ಲ ಸೌಲಭ್ಯ ಸಿಗುತ್ತೆ ಅನ್ನೋದು ನಿಮಗೆ ಗೊತ್ತಾ?

ಸದ್ಯ ದೆಹಲಿ ವಿಧಾನಸಭೆ ಚುನಾವಣೆ (Delhi Assembly Election) ನಡೆದಿದೆ. ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ರೆ ಆಮ್ ಆದ್ಮಿ ಪಕ್ಷ 22 ಸೀಟ್ ಗೆ ತೃಪ್ತಿಪಟ್ಕೊಳ್ಬೇಕಾಗಿದೆ. ಇಲ್ಲಿ ಅನೇಕರು ಮೂರ್ನಾಲ್ಕು ಬಾರಿ ಚುನಾವಣೆಗೆ ನಿಂತು, ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕ (MLA)ರಿಗೆ ಪಿಂಚಣಿ (Pension) ಸಿಗುತ್ತೆ ಎನ್ನುವ ವಿಷ್ಯ ಅನೇಕರಿಗೆ ಗೊತ್ತು. ಆದ್ರೆ ಐದಾರು ಬಾರಿ ಶಾಸಕರಾದ್ರೆ ಐದು ಪಿಂಚಣಿ ಸಿಗುತ್ತಾ? ಇಲ್ಲಿ ಪಿಂಚಣಿಯನ್ನು ಹೇಗೆ ಲೆಕ್ಕ ಹಾಕ್ತಾರೆ? ಸಂಸದ (MP)ರು ಹಾಗೂ ಶಾಸಕರ ಪಿಂಚಣಿ ಎಷ್ಟು ಎಂಬ ಬಗ್ಗೆ ಫುಲ್ ಡಿಟೇಲ್ ಇಲ್ಲಿದೆ. 

ಶಾಸಕರಿಗೆ ಸಿಗುತ್ತೆ ಇಷ್ಟು ಪಿಂಚಣಿ : ಶಾಸಕರ ಪಿಂಚಣಿ ಪ್ರತಿಯೊಂದು ರಾಜ್ಯಕ್ಕೂ ಭಿನ್ನವಾಗಿದೆ. ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ ತಿದ್ದುಪಡಿ ಮಸೂದೆ 2022ಕ್ಕೆ ಒಪ್ಪಿಗೆ ಸಿಕ್ಕ ಮೇಲೆ ಶಾಸಕರು ಹಾಗೂ ಸಚಿವರ ವೇತನ ಶೇಕಡಾ 50ರಷ್ಟು ಹೆಚ್ಚಾಗಿದೆ. ಹಾಗೆಯೇ ಪಿಂಚಣಿಯನ್ನು ಹೆಚ್ಚು ಮಾಡಲಾಗಿದೆ. ತಿದ್ದುಪಡಿ ನಂತ್ರ ಮಾಜಿ ಶಾಸಕರಿಗೆ 40 ಸಾವಿರ ರೂಪಾಯಿ ಪಿಂಚಣಿ ಸಿಗ್ತಿದೆ. ಶಾಸಕರ ಅವಧಿ ಹೆಚ್ಚಾದಂತೆ ಒಂದು ಸಾವಿರ ರೂಪಾಯಿ ಪಿಂಚಣಿಯಲ್ಲಿ ಹೆಚ್ಚಳವಾಗುತ್ತದೆ. ಇದಲ್ಲದೆ ಅವರು ವೈದ್ಯಕೀಯ ಭತ್ಯೆ, ಪ್ರಯಾಣ ಭತ್ಯೆ ಸೇರಿದಂತೆ ಕೆಲ ಸೌಲಭ್ಯವನ್ನು ಪಡೆಯುತ್ತಾರೆ. ಇನ್ನು ದೆಹಲಿಯ ವಿಚಾರಕ್ಕೆ ಬರೋದಾದ್ರೆ ದೆಹಲಿಯ ಮಾಜಿ ಶಾಸಕರು ಪ್ರತಿ ತಿಂಗಳು 15000 ರೂಪಾಯಿ ಪಿಂಚಣಿ ಪಡೆಯುತ್ತಾರೆ. ಒಬ್ಬ ಶಾಸಕ, ಮೂರ್ನಾಲ್ಕು ಬಾರಿ ಗೆದ್ದರೂ  ಅವರ ಪಿಂಚಣಿಯಲ್ಲಿ ದೊಡ್ಡ ಮಟ್ಟದ ಬದಲಾವಣೆ ಆಗೋದಿಲ್ಲ. ಪ್ರತಿ ಗೆಲುವಿನ ನಂತ್ರ ಒಂದು ಸಾವಿರ ರೂಪಾಯಿ ಪಿಂಚಣಿ ಹೆಚ್ಚಾಗುತ್ತದೆ. ಇದು ಕೂಡ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ. ಉತ್ತರ ಪ್ರದೇಶದಲ್ಲಿ ಒಬ್ಬ ಶಾಸಕ ಪ್ರತಿ ಬಾರಿ ಗೆದ್ದಾಗ್ಲೂ ಆತನ ಪಿಂಚಣಿ 2 ಸಾವಿರ ರೂಪಾಯಿ ಹೆಚ್ಚಾಗುತ್ತದೆ. 

ಹಿರಿಯ ಸಂಸದರಿಗೆ ಪ್ರತಿ ತಿಂಗಳ ಪಿಂಚಣಿ ಎಷ್ಟು ? : ಇನ್ನು ಸಂಸತ್ ಸದಸ್ಯರ ಸಂಬಳ, ಭತ್ಯೆ ಮತ್ತು ಪಿಂಚಣಿ ಕಾಯ್ದೆ-1954 ರ ಅಡಿಯಲ್ಲಿ  ಬರುತ್ತದೆ. ಮಾಜಿ ಸಂಸದರು ಪ್ರತಿ ತಿಂಗಳು 20 ಸಾವಿರ ರೂಪಾಯಿ ಪಿಂಚಣಿ ಪಡೆಯುತ್ತಾರೆ. ಒಬ್ಬ ಸಂಸದ ಐದು ವರ್ಷಗಳಿಗಿಂತ ಹೆಚ್ಚು ಕಾಲ ಸಂಸದರಾಗಿ ಉಳಿದರೆ, ಅಂದರೆ, ಅವರ ಸೇವಾ ಹಿರಿತನವನ್ನು ಗೌರವಿಸಿ ಪ್ರತಿ ವರ್ಷ 1,500 ರೂಪಾಯಿಗಳನ್ನು ಪ್ರತ್ಯೇಕವಾಗಿ ನೀಡಲಾಗುತ್ತದೆ.

ಶಾಸಕರ ಸಂಸದರಾದ್ರೆ ಹೇಗೆ ಸಿಗುತ್ತೆ ಪಿಂಚಣಿ ? : ಒಬ್ಬ ಶಾಸಕರು ಸಂಸದರಾದ್ರೆ ಅವರಿಗೆ ಡಬಲ್ ಪಿಂಚಣಿ ಸಿಗುತ್ತದೆ. ಸಂಸದರ ಸಂಬಳ ಹಾಗೂ ಶಾಸಕರ ಪಿಂಚಣಿ ಅವರಿಗೆ ಸಿಗುತ್ತದೆ. ಮುಂದೆ ಅವರು ಮಾಜಿ ಸಂಸದರಾದ್ಮೇಲೆ ಅವರಿಗೆ ಸಂಸದರ ಪಿಂಚಣಿ ಹಾಗೂ ಶಾಸಕರ ಪಿಂಚಣಿ ಎರಡೂ ಲಭ್ಯವಾಗುತ್ತದೆ. ಇಲ್ಲಿ ಅವರು ಶಾಸಕರಾಗಿ ಅಥವಾ ಸಂಸದರಾಗಿ ಎಷ್ಟು ವರ್ಷ ಅಧಿಕಾರದಲ್ಲಿದ್ದರು ಎಂಬುದು ಮುಖ್ಯವಾಗುವುದಿಲ್ಲ. ಒಂದೇ ದಿನ ಶಾಸಕನಾಗಿರಲಿ ಇಲ್ಲ 30 ವರ್ಷ ಸಂಸದನಾಗಿರಲಿ ಅವರಿಗೆ ನಿಗದಿಪಡಿಸಿದ ಪಿಂಚಣಿಯೇ ಸಿಗುತ್ತದೆ. ಸಂಸದರ ಕುಟುಂಬ ಸದಸ್ಯರಿಗೂ ಪಿಂಚಣಿ ಸೌಲಭ್ಯ ಸಿಗುತ್ತದೆ. ಸಂಸದರು ಅಥವಾ ಮಾಜಿ ಸಂಸದರು ಸಾವನ್ನಪ್ಪಿದ್ರೆ ಅವರ ಪತ್ನಿ ಅಥವಾ ಅವಲಂಬಿತರಿಗೆ ಪಿಂಚಣಿ ಪಡೆಯುತ್ತಾರೆ. 

ಇತರ ಸೌಲಭ್ಯ : ಮಾಜಿ ಸಂಸದರು ಉಚಿತ ರೈಲು ಪ್ರಯಾಣದ ಸೌಲಭ್ಯವನ್ನು ಪಡೆಯುತ್ತಾರೆ. ಮಾಜಿ ಸಂಸದರು ಇನ್ನೊಬ್ಬರ ಜೊತೆ ಎರಡನೇ ಎಸಿಯಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಫಸ್ಟ್ ಎಸಿಯಲ್ಲಿ ಉಚಿತವಾಗಿ ಒಬ್ಬಂಟಿಯಾಗಿ ಪ್ರಯಾಣಿಸಬಹುದು.  

Previous Post

ಶನಿವಾರದೊಳಗೆ ಒತ್ತೆಯಾಳುಗಳ ಬಿಡುಗಡೆಯಾಗದಿದ್ದರೆ ಕದನ ವಿರಾಮ ಕೊನೆ – ಇಸ್ರೇಲ್‌ ಪ್ರಧಾನಿ

Next Post

ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

Next Post
ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.