Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

ಬರೋಬ್ಬರಿ 4300 ಕೋಟಿ ರೂ: ಐಪಿಎಲ್​ಗೆ ಟಕ್ಕರ್ ಕೊಡಲು ಸೌದಿ ಅರೇಬಿಯಾ ಪ್ಲ್ಯಾನ್

editor tv by editor tv
March 17, 2025
in ಕ್ರೀಡೆ
0
ಬರೋಬ್ಬರಿ 4300 ಕೋಟಿ ರೂ: ಐಪಿಎಲ್​ಗೆ ಟಕ್ಕರ್ ಕೊಡಲು ಸೌದಿ ಅರೇಬಿಯಾ ಪ್ಲ್ಯಾನ್
1.9k
VIEWS
Share on FacebookShare on TwitterShare on Whatsapp

2034 ರಲ್ಲಿ ಫಿಫಾ ಫುಟ್​ಬಾಲ್ ವಿಶ್ವಕಪ್ ಅನ್ನು ಆಯೋಜಿಸಲು ಸಿದ್ಧವಾಗುತ್ತಿರುವ ಸೌದಿ ಅರೇಬಿಯಾ ಇದೀಗ ಕ್ರಿಕೆಟ್ ಜಗತ್ತಿಗೂ ಕಾಲಿಡಲು ಮುಂದಾಗುತ್ತಿದೆ. ಅದು ಬರೋಬ್ಬರಿ 4300 ಕೋಟಿ ರೂ. ಹೂಡಿಕೆ ಮಾಡುವುದರೊಂದಿಗೆ. ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್​ನಂತ ಸೌದಿ ಅರೇಬಿಯಾ ಮತ್ತೊಂದು ಟಿ20 ಲೀಗ್​ ಅನ್ನು ಪರಿಚಯಿಸಲು ಸಜ್ಜಾಗುತ್ತಿದೆ.

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಟಕ್ಕರ್ ಕೊಡಲು ಸೌದಿ ಅರೇಬಿಯಾ ತೆರೆಮರೆಯಲ್ಲೇ ಯೋಜನೆ ರೂಪಿಸುತ್ತಿದೆ. ಇದಕ್ಕಾಗಿ ಆರಂಭಿಕ ರೂಪುರೇಷೆಗಳು ಸಿದ್ಧವಾಗಿದ್ದು, ಇದರ ಅನುಮೋದನೆಗಾಗಿ ಶೀಘ್ರದಲ್ಲೇ ಐಸಿಸಿಗೆ ಯೋಜನೆಯ ವಿವರಗಳನ್ನು ಕಳುಹಿಸಲಾಗುತ್ತದೆ ಎಂದು ವರದಿಯಾಗಿದೆ.

ಗ್ರ್ಯಾಂಡ್ ಸ್ಲ್ಯಾಮ್ ಟೂರ್ನಿ:

ಹೊಸ ಟಿ20 ಲೀಗ್ ಅನ್ನು ಸೌದಿ ಅರೇಬಿಯಾ ಟೆನಿಸ್ ಟೂರ್ನಿ ಗ್ರ್ಯಾಂಡ್ ಸ್ಲ್ಯಾಮ್​ನಂತೆ ಆಯೋಜಿಸಲು ಯೋಜನೆ ರೂಪಿಸಿದೆ. ಅದರಂತೆ ಎಲ್ಲಾ ತಂಡಗಳು ವರ್ಷದಲ್ಲಿ 4 ವಿಭಿನ್ನ ಸ್ಥಳಗಳಲ್ಲಿ ಕಣಕ್ಕಿಳಿಯಲಿವೆ. ಇದಾದ ನಂತರ ಸೌದಿ ಅರೇಬಿಯಾದಲ್ಲಿ ಫೈನಲ್ ಪಂದ್ಯ ಜರುಗಲಿದೆ.

8 ತಂಡಗಳು:

ಸೌದಿ ಅರೇಬಿಯಾ ಪ್ರಸ್ತುತ ಪಡಿಸಲಿರುವ ಹೊಸ ಟಿ20 ಲೀಗ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈಗಾಗಲೇ ಈ ಟೂರ್ನಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ನಿಂದ ಬಾಹ್ಯ ಬೆಂಬಲ ವ್ಯಕ್ತವಾಗಿದೆ ಎಂದು ಹೇಳಲಾಗಿದೆ. ಹೀಗಾಗಿ ವೆಸ್ಟ್ ಇಂಡೀಸ್, ನ್ಯೂಝಿಲೆಂಡ್, ಶ್ರೀಲಂಕಾ ಹಾಗೂ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ಗಳಿಂದ ಸಹ ಈ ಟೂರ್ನಿಗೆ ಬೆಂಬಲ ಸಿಗುವುದು ಖಚಿತ ಎನ್ನಬಹುದು.

4300 ಕೋಟಿ ರೂ:

ನೂತನ ಲೀಗ್​ಗಾಗಿ ಸೌದಿ ಅರೇಬಿಯಾ ಬರೋಬ್ಬರಿ 4300 ಕೋಟಿ ರೂ.ಗಳನ್ನು ಖರ್ಚು ಮಾಡಲಿದೆ. ಇದಕ್ಕಾಗಿ ಸೌದಿ ಅರೇಬಿಯಾದ ಡ್ಯಾನಿ ಟೌನ್‌ಸೆಂಡ್ ನೇತೃತ್ವದ ಎಸ್‌ಆರ್‌ಜೆ ಸ್ಪೋರ್ಟ್ಸ್ ಇನ್ವೆಸ್ಟ್‌ಮೆಂಟ್‌ ಹೂಡಿಕೆ ಮಾಡಲಿದೆ. ಈ ಮೂಲಕ ಸೌದಿ ಅರೇಬಿಯಾ ಕ್ರಿಕೆಟ್​ ಜಗತ್ತಿನಲ್ಲಿ ತನ್ನ ಛಾಪು ಮೂಡಿಸಲು ಮುಂದಾಗುತ್ತಿದೆ.

ಆಸ್ಟ್ರೇಲಿಯನ್ ಮೈಂಡ್:

ಸೌದಿ ಅರೇಬಿಯಾ ಆಯೋಜಿಸಲಿರುವ ಹೊಸ ಟಿ20 ಲೀಗ್​ನ ಹಿಂದಿರುವುದು ಆಸ್ಟ್ರೇಲಿಯಾದ ಕ್ರಿಕೆಟ್ ತಜ್ಞ ನೀಲ್ ಮ್ಯಾಕ್ಸ್‌ವೆಲ್‌. ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗನಾಗಿರುವ ನೀಲ್ ಮ್ಯಾಕ್ಸ್‌ವೆಲ್, ಆಸ್ಟ್ರೇಲಿಯನ್ ಕ್ರಿಕೆಟಿಗರ ಸಂಘ ಮತ್ತು ಕ್ರಿಕೆಟ್ NSW ಸೇರಿದಂತೆ ವಿವಿಧ ಕ್ರಿಕೆಟ್ ಮಂಡಳಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದೀಗ ಸೌದಿ ಅರೇಬಿಯಾ ಲೀಗ್​ಗಾಗಿ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿದ್ದಾರೆ.

ಹೊಸ ಲೀಗ್​ನ ಉದ್ದೇಶವೇನು?

ಪ್ರಸ್ತುತ ಕ್ರಿಕೆಟ್ ಅಂಗಳದ ಬಲಿಷ್ಠ ರಾಷ್ಟ್ರಗಳೆಂದರೆ ಭಾರತ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್. ಈ ರಾಷ್ಟ್ರಗಳನ್ನು ಹೊರತುಪಡಿಸಿ ಇತರ ಕ್ರಿಕೆಟ್ ಆಡುವ ದೇಶಗಳನ್ನು ಆರ್ಥಿಕವಾಗಿ ಬಲಪಡಿಸಲು ಗುರಿಯನ್ನು ನೂತನ ಲೀಗ್ ಹೊಂದಿದೆ.

ಈ ಲೀಗ್ ಮೂಲಕ ಹೊಸ ಆದಾಯದ ಮೂಲ ತೆರೆದುಕೊಳ್ಳಲಿದ್ದು, ಹಣಕಾಸಿಗಾಗಿ ಕಷ್ಟಪಡುತ್ತಿರುವ ಮಂಡಳಿಗಳಿಗೆ ಇದರಿಂದ ಸಹಾಯವಾಗಲಿದೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಹಾಗೂ ಬಿಗ್ ಬ್ಯಾಷ್ ಲೀಗ್​ಗೆ ಪರ್ಯಾಯಾವಾಗಿ ಮತ್ತೊಂದು ಶ್ರೀಮಂತ ಕ್ರಿಕೆಟ್​ ಟೂರ್ನಿಯನ್ನು ಪರಿಚಯಿಸಲು ಸೌದಿ ಅರೇಬಿಯಾ ಮುಂದಾಗುತ್ತಿದೆ.

Previous Post

Viral: ಬಿಸಿ ಕಾಫಿ ಬಿದ್ದು ಸುಟ್ಟು ಹೋದ ತೊಡೆ ಭಾಗ; ಸಂತ್ರಸ್ತನಿಗೆ 415 ಕೋಟಿ ರೂ. ಪರಿಹಾರ ನೀಡುವಂತೆ ಸ್ಟಾರ್‌ಬಕ್ಸ್‌ಗೆ ಆದೇಶ ನೀಡಿದ ಕೋರ್ಟ್‌

Next Post

ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

Next Post
ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.