Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಹೆಂಡತಿ ಬರ್ತ್‌ ಡೇಗೆ ಸರ್‌ಪ್ರೈಸ್ ಕೊಡೋಕೆ ಬಂದ ಗಂಡನಿಗೆ ಶಾಕ್‌; ಡ್ರಮ್‌ನಲ್ಲಿ ಪೀಸ್, ಪೀಸ್‌ ಶವ ಪತ್ತೆ!

editor tv by editor tv
March 19, 2025
in ರಾಷ್ಟ್ರೀಯ
0
ಹೆಂಡತಿ ಬರ್ತ್‌ ಡೇಗೆ ಸರ್‌ಪ್ರೈಸ್ ಕೊಡೋಕೆ ಬಂದ ಗಂಡನಿಗೆ ಶಾಕ್‌; ಡ್ರಮ್‌ನಲ್ಲಿ ಪೀಸ್, ಪೀಸ್‌ ಶವ ಪತ್ತೆ!
1.9k
VIEWS
Share on FacebookShare on TwitterShare on Whatsapp

ಹೆಂಡತಿ ಹುಟ್ಟುಹಬ್ಬಕ್ಕೆ ರಜೆ ಹಾಕದಿದ್ರೆ ಗಂಡಂದಿರಿಗೆ ಕಷ್ಟ ಅನ್ನೋ ಕಾಲ ಇದು. ಆದರೆ ಹೆಂಡತಿ ಹುಟ್ಟುಹಬ್ಬ ಆಚರಿಸಲು ಲಂಡನ್‌ನಲ್ಲಿದ್ದ ಗಂಡ ಸರ್‌ಪ್ರೈಸ್‌ ಕೊಡೋಕೆ ಬಂದು ಹೆಣವಾಗಿ ಹೋಗಿದ್ದಾನೆ. ಉತ್ತರಪ್ರದೇಶದ ಮೀರತ್‌ನಲ್ಲಿ ಇಂತಹ ಒಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಏನಿದು ಗಂಡನ ದುರಂತ? ಪ್ರಿಯಕರನ ಜೊತೆ ಸೇರಿ ಪೀಸ್, ಪೀಸ್ ಮಾಡಿದ ಪತ್ನಿ ಮಾಡಿದ್ದೇನು? ಅನ್ನೋ ಕಂಪ್ಲೀಟ್ ಡಿಟೇಲ್ ಇಲ್ಲಿದೆ.

ಮೀರತ್‌ನಲ್ಲಿ 15 ದಿನಗಳ ನಂತರ ಪತಿಯನ್ನು ಪ್ರಿಯತಮನ ಜೊತೆ ಸೇರಿ ಪತ್ನಿ ಬರ್ಬರವಾಗಿ ಕೊಂದು ಹಾಕಿರುವ ಘಟನೆ ಬಯಲಾಗಿದೆ. ಮರ್ಚೆಂಟ್ ನೇವಿ ಆಫೀಸರ್ ಸೌರಭ್ ರಜಪೂತ್ ನತದೃಷ್ಟ ಗಂಡ. ಪತ್ನಿ ಮುಸ್ಕಾನ್ ರಸ್ತೋಗಿ, ಪ್ರಿಯಕರ ಸಾಹಿಲ್ ಶುಕ್ಲಾ ಈ ಹತ್ಯೆಯ ಪ್ರಮುಖ ಆರೋಪಿಗಳಾಗಿದ್ದಾರೆ.

ಕಳೆದ ಮಾರ್ಚ್ 4ಕ್ಕೆ ಮರ್ಚೆಂಟ್ ನೇವಿ ಆಫೀಸರ್ ಸೌರಭ್ ರಜಪೂತ್ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದರ ಜಾಡು ಹಿಡಿದು ಹೋಗುವಷ್ಟರಲ್ಲಿ ಸೀಮೆಂಟ್ ತುಂಬಿದ್ದ ಡ್ರಮ್‌ ಒಳಗಿದ್ದ ತುಂಡು, ತುಂಡಾದ ಶವದ ವಾಸನೆ ಅಕ್ಕ-ಪಕ್ಕದ ಮನೆಯವರ ಮೂಗಿಗೆ ಬಡಿದಿದೆ. ಪೊಲೀಸರು ಈ ಪ್ರಕರಣದ ಇಂಚಿಂಚೂ ಮಾಹಿತಿಯನ್ನು ಹೊರ ತೆಗೆದಿದ್ದಾರೆ.

ಗಂಡ ಸಮುದ್ರದಲ್ಲಿ.. ಹೆಂಡ್ತಿ ಪ್ರಿಯಕರನ ಜೊತೆಯಲ್ಲಿ!
ನೌಕೆಯಲ್ಲಿ ಅಧಿಕಾರಿಯಾಗಿದ್ದ 35 ವರ್ಷದ ಸೌರಭ್ ರಜಪೂತ್, ಮುಸ್ಕಾನ್ ರಸ್ತೋಗಿಯನ್ನು ಪ್ರೀತಿಸುತ್ತಿದ್ದ. 2016ರಲ್ಲಿ ಸೌರಭ್ ರಜಪೂಜ್‌, ಮುಸ್ಕಾನ್‌ಳನ್ನು ಮದುವೆಯಾಗಿದ್ದ. ಇವರಿಬ್ಬರ ಪ್ರೀತಿ ಮತ್ತು ಮದುವೆಗೆ ಸೌರಭ್ ಕುಟುಂಬಸ್ಥರ ವಿರೋಧವಿತ್ತು.

ಸೌರಭ್ ಹಾಗೂ ಮುಸ್ಕಾನ್ ಜೋಡಿಗೆ 6 ವರ್ಷದ ಮಗಳಿದ್ದಾಳೆ. ಕೆಲಸದ ಹಿನ್ನೆಲೆಯಲ್ಲಿ ಸೌರಭ್ ಲಂಡನ್‌ಗೆ ಹೋಗಿದ್ದ. ಗಂಡ ಸಮುದ್ರದಲ್ಲಿ ಕೆಲಸ ಮಾಡುತ್ತಿದ್ರೆ ಹೆಂಡತಿ ಪ್ರಿಯಕರನ ಜೊತೆ ಕಾಲ ಕಳೆಯುತ್ತಿದ್ದಳು.
ಕಳೆದ ಮಾರ್ಚ್‌ 4ರಂದು ಪತ್ನಿ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್‌ ಕೊಡಲು ಸೌರಭ್‌ ಲಂಡನ್‌ನಿಂದ ಮೀರತ್‌ಗೆ ಬಂದಿದ್ದ. ಸರ್​ಪ್ರೈಸ್ ಕೊಡೋಕೆ ಬಂದ ಗಂಡನಿಗೆ ಪತ್ನಿ ಬಿಗ್ ಶಾಕ್ ಕೊಟ್ಟಿದ್ದಾಳೆ. ತನ್ನ ಪ್ರಿಯಕರ ಸಾಹಿಲ್ ಜೊತೆ ಪತ್ನಿ ಮುಸ್ಕಾನ್ ರಸ್ತೋಗಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ.

ತನ್ನ ಲವ್ವರ್‌ ಜೊತೆ ಸಿಕ್ಕಿಬೀಳುತ್ತಿದ್ದಂತೆ ಮುಸ್ಕಾನ್, ಸೌರಭ್​ನನ್ನ ಸಾಹಿಲ್ ಜೊತೆ ಸೇರಿ ಕೊಲೆ ಮಾಡಿದ್ದಾಳೆ. ನಂತರ ಸೌರಭ್​ನ ದೇಹ ತುಂಡು ತುಂಡಾಗಿ ಕತ್ತರಿಸಿ ಸಿಮೆಂಟ್ ತುಂಬಿದ ಡ್ರಮ್‌ನಲ್ಲಿ ಹಾಕಿ ಹಿಲ್ ಸ್ಟೇಷನ್‌ಗೆ ಜಾಲಿ ಟ್ರಿಪ್‌ ಹೋಗಿದ್ದಾರೆ.

ಖತರ್ನಾಕ್ ಹೆಂಡತಿ ಜೂಟಾಟ!
ತನ್ನ ಪ್ರಿಯಕರನ ಜೊತೆ ಜಾಲಿ ಟ್ರಿಪ್‌ಗೆ ಹೋಗಿದ್ದ ಮುಸ್ಕಾನ್ ಸೌರಭ್​ನ ಫೋನ್ ಅನ್ನು ತನ್ನ ಜೊತೆಯಲ್ಲೇ ತಗೊಂಡು ಹೋಗಿದ್ದಳು. ಸೌರಭ್ ಕುಟುಂಬಸ್ಥರಿಗೆ ಆತನಂತೆಯೇ ಮೆಸೇಜ್‌ಗಳನ್ನು ಮಾಡ್ತಿದ್ದಳು. ಮುಸ್ಕಾನ್ ಜೂಟಾಟದ ಹಿನ್ನೆಲೆಯಲ್ಲಿ ಸೌರಭ್ ಕೂಡ ಬದುಕಿದ್ದಾನೆ ಎಂದು ಕುಟುಂಬಸ್ಥರು ನಂಬಿದ್ದರು.

ಸೌರಭ್ ಸತ್ತಿರುವ ವಿಷಯ ಮುಚ್ಚಿಟ್ಟಿದ್ದ ಪತ್ನಿ ಮುಸ್ಕಾನ್ ರಸ್ತೋಗಿ, ಗಂಡನಿಗೆ ಫೋನ್ ಕೊಡು ಅಂದ್ರೆ ನೆಪವೊಡ್ಡಿ ತಪ್ಪಿಸಿಕೊಳುತ್ತಿದ್ದಳು. ಸರಿಯಾಗಿ 15 ದಿನಗಳ ಬಳಿಕ ಈ ದಂಪತಿ ವಾಸವಿದ್ದ ಮನೆಯಿಂದ ಕೆಟ್ಟ ವಾಸನೆ ಬರೋಕೆ ಶುರುವಾಗಿದೆ. ನೆರೆ ಹೊರೆಯವರು ಪೊಲೀಸರಿಗೆ ತಿಳಿಸಿದ ಮೇಲೆ ಸೌರಭ್ ಕೊಲೆಯಾಗಿರೋದು ಪತ್ತೆಯಾಗಿದೆ. ಆರೋಪಿಗಳಿಬ್ಬರನ್ನೂ ಮೀರತ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Previous Post

ಬೆಂಗಳೂರಿನಲ್ಲೇ ಪ್ರಭಾವಿ ಸಚಿವರ ಹನಿ ಟ್ರ್ಯಾಪ್‌ಗೆ ಮತ್ತೊಬ್ಬ ನಾಯಕನಿಂದ ಯತ್ನ!

Next Post

ಉಡುಪಿ | ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ

Next Post
ಉಡುಪಿ | ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ

ಉಡುಪಿ | ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.