Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದಳು! 8ನೇ ವಿದ್ಯಾರ್ಥಿನಿಯ ಬರ್ಬರ ಘಟನೆ

editor tv by editor tv
May 18, 2025
in ರಾಷ್ಟ್ರೀಯ
0
ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದಳು! 8ನೇ ವಿದ್ಯಾರ್ಥಿನಿಯ ಬರ್ಬರ ಘಟನೆ
1.9k
VIEWS
Share on FacebookShare on TwitterShare on Whatsapp

ರಸ್ತೆಯ ಮೇಲೆ ಯಾರೋ ಬಿಟ್ಟುಹೋಗಿದ್ದ 3 ದಿನಗಳ ಶಿಶುವನ್ನು ತಂದು ಸಾಕಿದ್ದ ತಾಯಿಯನ್ನು ಅದೇ ಮಗಳು ಭಯಾನಕವಾಗಿ ಮುಗಿಸಿರುವ ಘಟನೆ ನಡೆದಿದೆ. ಆಗಿದ್ದೇನು? 

14 ವರ್ಷಗಳ ಹಿಂದೆ ಯಾರೋ ಬೀದಿಯಲ್ಲಿ ಬಿಟ್ಟು ಹೋಗಿದ್ದ ಮೂರು ದಿನಗಳ ಕಂದನನ್ನು ತಂದು ಸಾಕಿ, ಸಲುಹಿ ಅಮ್ಮನ ಪ್ರೀತಿಯನ್ನೆಲ್ಲಾ ಧಾರೆಯೆರೆದಿದ್ದ ಈ ಮಹಿಳೆ ಮುಂದೆ ಈಕೆಯೇ ತನ್ನ ಪಾಲಿನ ಯಮಸ್ವರೂಪಿಣಿಯಾಗುತ್ತಾಳೆ ಎನ್ನುವುದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಮಕ್ಕಳಿಲ್ಲದ ಕೊರಗನ್ನು ಈ ಕಂದ ನೀಗಿಸಿದಳು ಎಂದು ಯಾರೋ ಹೆತ್ತು ಬೀಸಾಡಿದ ಮಗುವನ್ನು ತಂದು ಸಾಕಿ, ಸಲುಹಿ ಆಕೆಗೆ ಆರೈಕೆ ಮಾಡಿದ್ದರು ಈ ಅಮ್ಮ. ಆದರೆ, ಆ ಮಗುವಿನ ದೇಹದಲ್ಲಿ ಅದ್ಯಾವ ಕಟುಕನ ರಕ್ತ ಹರಿದಿತ್ತೋ ತಿಳಿಯದು. 8ನೇ ಕ್ಲಾಸ್​ ಓದುತ್ತಿರುವಾಗಲೇ ತನ್ನಿಬ್ಬರು ಸ್ನೇಹಿತರ ಜೊತೆಗೂಡಿ ಅಮ್ಮನನ್ನೇ  ಮುಗಿಸಿದ್ದಾಳೆ 14 ವರ್ಷದ ಈ ಹಂತಕಿ! ಅಷ್ಟಕ್ಕೂ ಆಗಿದ್ದೇನು? ಯಾಕೆ ಈ ರೀತಿ ಮಾಡಿದ್ದಳು ಎನ್ನುವುದು ಇಲ್ಲಿದೆ ನೋಡಿ! 

ಈ ಘಟನೆ ನಡೆದಿರುವುದು ಒಡಿಶಾದ ಭುವನೇಶ್ವರದಲ್ಲಿ.  ಗಜಪತಿ ಜಿಲ್ಲೆಯ ಪರಲಖೆಮುಂಡಿಯ ರಾಜಲಕ್ಷ್ಮೀ ಎನ್ನುವ ಮಹಿಳೆ ಈ ಮಗುವನ್ನು ಬೀದಿಯಿಂದ ತಂದು ಸಾಕಿಕೊಂಡಿದ್ದರು. ಕಾನೂನು ಪ್ರಕಾರವಾಗಿ ದತ್ತು ಕೂಡ ಪಡೆದುಕೊಂಡಿದ್ದರು. ಅಮ್ಮನ ಪ್ರೀತಿಯ ಧಾರೆಯನ್ನೇ ಹರಿಸಿದ್ದರು. ಸ್ವಲ್ಪ ವರ್ಷದ ಬಳಿಕ ಅವರ ಪತಿ ನಿಧನರಾದಾಗ, ಮಗಳೇ ರಾಜಲಕ್ಷ್ಮೀ ಅವರಿಗೆ ಪ್ರಪಂಚವಾಯಿತು. ಆಕೆಗೆ ಚೆನ್ನಾಗಿ ಓದಿಸುವ ಉದ್ದೇಶದಿಂದ  ಪರಲಖೆಮುಂಡಿಗೆ ಆಗಮಿಸಿ, ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆದರೆ, ರಾಜಲಕ್ಷ್ಮೀ ಅವರ ಗ್ರಹಗತಿ ಇಲ್ಲಿಂದಲೇ ಕೆಡಲು ಶುರುವಾಯಿತು. 8ನೇ ಕ್ಲಾಸ್​ನಲ್ಲಿ ಓದುತ್ತಿರುವಾಗಲೇ ಈ ಮಗಳಿಗೆ  ದೇವಸ್ಥಾನದ ಅರ್ಚಕ ಗಣೇಶ್ ರಾತ್ (21) ಮತ್ತು ದಿನೇಶ್ ಸಾಹು(20)ವಿನೊಂದಿಗೆ ಸ್ನೇಹ ಬೆಳಯಿತು. ಶಾಲೆಗೂ ಹೋಗದೇ ಅವರಿಬ್ಬರ ಜೊತೆ ತಿರುಗಾಡಲು ಶುರು ಮಾಡಿದಳು.

ಈ ವಿಷಯ ಅಮ್ಮನಿಗೆ ತಿಳಿಯಿತು. ಇಷ್ಟು ಚಿಕ್ಕ ವಯಸ್ಸಿನಲ್ಲಿ ಹೀಗೆಲ್ಲಾ ಮಾಡುವುದು ಸರಿಯಲ್ಲ ಎಂದು  ಬೈದು ಬುದ್ದಿವಾದ ಹೇಳಿದ್ದರು. ಪದೇ ಪದೇ ಬುದ್ಧಿವಾದ ಹೇಳಿದ್ದರಿಂದ ಸಿಟ್ಟುಗೊಂಡ ಮಗಳು, ತನ್ನ ಸ್ನೇಹಿತರಿಗೆ ವಾಟ್ಸ್​ಆ್ಯಪ್​ ಮೂಲಕ ಈ ವಿಷಯ ತಿಳಿಸಿದ್ದಳು. ಆ ಬಳಿಕ ಮೂವರೂ ಸೇರಿ ತಾಯಿಯನ್ನು ಮುಗಿಸುವ ಸ್ಕೆಚ್​ ಹಾಕಿದರು.  ರಾಜಲಕ್ಷ್ಮೀ ಅವರನ್ನು ಸಾಯಿಸಿದರೆ ಅವರ ಹೆಸರಿನಲ್ಲಿ ಇರುವ ಆಸ್ತಿಯನ್ನು ಪಡೆದು ಮೂವರೂ ಚೆನ್ನಾಗಿ ಇರಬಹುದು ಎಂದು ಬಾಲಕಿಯ ತಲೆ ತುಂಬಿದರು ಹಾಗೂ ಮುಗಿಸುವ ಎಲ್ಲಾ ಪ್ಲ್ಯಾನ್​ ರೂಪಿಸಿದರು. ಅದರಂತೆಯೇ, ಬಾಲಕಿ ತಾಯಿ ರಾಜಲಕ್ಷ್ಮೀಗೆ ನಿದ್ರೆ ಮಾತ್ರೆ ನೀಡಿದಳು. ಅವರು ಪ್ರಜ್ಞಾಹೀನರಾದಾಗ  ಸ್ನೇಹಿತರಿಗೆ ಕರೆ ಮಾಡಿ ಮನೆಗೆ ಬರುವಂತೆ ತಿಳಿಸಿದಳು. ಮೂವರೂ ಸೇರಿ ರಾಜಲಕ್ಷ್ಮೀ ಅವರನ್ನು ದಿಂಬಿನಿಂದ ಉಸಿರುಗಟ್ಟಿಸಿ ಸಾಯಿಸಿಯೇ ಬಿಟ್ಟರು. 
  
ಇಷ್ಟು ಮಾಡಿದ ಬಳಿಕ ಬಾಲಕಿಗೆ  ಕುಟುಂಬಸ್ಥರಿಗೆ ಫೋನ್​ ಮಾಡಿ ಅಮ್ಮನಿಗೆ ಹುಷಾರಿರಲಿಲ್ಲ,  ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟರು ಎಂದೆಲ್ಲಾ ಹೇಳಿ ನಂಬಿಸಿದಳು.  ಈ ಹಿಂದೆ ರಾಜಲಕ್ಷ್ಮೀ ಅವರಿಗೆ ಲಘು ಹೃದಯಾಘಾತವಾಗಿತ್ತು. ಬಾಲಕಿ ಅದನ್ನೇ ಹೇಳಿ ಎಲ್ಲರನ್ನೂ ನಂಬಿಸಿದಳು. ಕುಟುಂಬದವರು ಎಲ್ಲರೂ ಇದನ್ನು ನಂಬಿದರು.  ಆದರೆ ಈ ಗಡಿಬಿಡಿಯಲ್ಲಿ ಬಾಲಕಿ ಮೊಬೈಲ್​ ಬಿಟ್ಟು ಹೋಗಿದ್ದಳು. ಅದು  ರಾಜಲಕ್ಷ್ಮೀ ಅವರ ಸಹೋದರ ಸಿಬಾ ಪ್ರಸಾದ್ ಮಿಶ್ರಾ ಅವರಿಗೆ ಸಿಕ್ಕಿದೆ. ಅವರಿಗೆ ಮೊದಲೇ ಏನೋ ಸಂದೇಹ ಬಂದಿದ್ದರಿಂದ  ಮೊಬೈಲ್ ಪರಿಶೀಲಿಸಿದ್ದಾರೆ. ಆಗ ಅದರಲ್ಲಿ ಬಾಲಕಿ ತನ್ನ ಸ್ನೇಹಿತರಿಗೆ ಮಾಡಿದ ಮೆಸೇಜ್​ ಎಲ್ಲವೂ ಸಿಕ್ಕಿದೆ.  ರಾಜಲಕ್ಷ್ಮಿಯನ್ನು ಮುಗಿಸಿ ಚಿನ್ನಾಭರಣಗಳು ಮತ್ತು ಹಣವನ್ನು ತೆಗೆದುಕೊಂಡು ಹೋಗುವ ಬಗ್ಗೆಯೂ ಸ್ನೇಹಿತರು ಅದರಲ್ಲಿಯೇ ಉಲ್ಲೇಖಿಸಿದ್ದರು.

ಈ ಹಿನ್ನೆಲೆಯಲ್ಲಿ ಕೂಡಲೇ ಅವರು  ದೂರು ದಾಖಲಿಸಿದ್ದರು. ತನಿಖೆಯಿಂದ ಪೊಲೀಸರಿಗೆ ಸತ್ಯ ಬಯಲಾಗಿದೆ. ಅಪ್ರಾಪ್ತ ಹುಡುಗಿ, ಗಣೇಶ್ ರಾತ್ ಮತ್ತು ದಿನೇಶ್ ಸಾಹುವನ್ನು ಸದ್ಯ ಬಂಧಿಸಿದ್ದಾರೆ. ಹುಡುಗಿ ಅದಾಗಲೇ  ತಾಯಿಯ ಕೆಲವು ಚಿನ್ನದ ಆಭರಣಗಳನ್ನು ಸ್ನೇಹಿತರಿಗೆ ನೀಡಿಬಿಟ್ಟಿದ್ದಳು.  ಅದರಲ್ಲಿ ಒಬ್ಬಾತ  ಚಿನ್ನಾಭರಣಗಳನ್ನು 2.4 ಲಕ್ಷ ರೂ.ಗೆ ಅಡವಿಟ್ಟಿದ್ದು ತಿಳಿದಿದೆ. ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ

Previous Post

ಮುಸ್ಲಿಂ ಧರ್ಮಗ್ರಂಥ ಪವಿತ್ರ ಕುರ್ ಆನ್ ಬಗ್ಗೆ ಬ್ಯಾಡ್ ಕಾಮೆಂಟ್; ಠಾಣೆಗೆ ಮುತ್ತಿಗೆ ಹಾಕಿ ಸಮುದಾಯ ಆಕ್ರೋಶ!

Next Post

ಧರ್ಮಸ್ಥಳದ ಯುವತಿ ಕೇಸ್​; ಪ್ರೊಫೆಸರ್ ಜತೆ ಪ್ರೇಮ ವೈಫಲ್ಯ.. ಕಟ್ಟಡದಿಂದ ಹಾರಿದ್ದ ಆಕಾಂಕ್ಷ

Next Post

ಧರ್ಮಸ್ಥಳದ ಯುವತಿ ಕೇಸ್​; ಪ್ರೊಫೆಸರ್ ಜತೆ ಪ್ರೇಮ ವೈಫಲ್ಯ.. ಕಟ್ಟಡದಿಂದ ಹಾರಿದ್ದ ಆಕಾಂಕ್ಷ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.