Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

editor tv by editor tv
May 27, 2025
in ರಾಜ್ಯ
0
ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ
1.9k
VIEWS
Share on FacebookShare on TwitterShare on Whatsapp

ದಲಿತ ವಿರೋಧಿ ಮನಸ್ಥಿತಿ; ತಳಸಮುದಾಯಗಳ ಪರವಾಗಿ ಧ್ವನಿ ಎತ್ತುವ ಪತ್ರಕರ್ತರ ಕುರಿತು ಅಸಹನೆ! ಇದಿಷ್ಟೇ ಅಲ್ಲ, ಮುಖ್ಯವಾಹಿನಿ ಮಾಧ್ಯಮದಲ್ಲಿ ಕೆಲಸ ಮಾಡುತ್ತಿರುವ ನಾನು ಏನೇ ಮಾಡಿದರೂ ನೀಗಿಸಿಕೊಳ್ಳುತ್ತೇನೆ ಎಂಬ ಅಹಂಕಾರವನ್ನೇ ಮೈಗೂಡಿಸಿಕೊಂಡಿರುವ ಪಬ್ಲಿಕ್ ಟಿವಿಯ ತುಮಕೂರು ಜಿಲ್ಲಾ ವರದಿಗಾರ ಮಂಜುನಾಥ್ ತಾಳಮಕ್ಕಿ ಕುರಿತು ಇನ್ನೂ ಹೇಳಬೇಕಾಗಿರುವ ಸಾಕಷ್ಟು ವಿಚಾರಗಳಿವೆ ಎನ್ನುತ್ತಾರೆ ಅಲ್ಲಿನ ಕೆಲ ಪತ್ರಕರ್ತರು.

ದಲಿತ ಸಮುದಾಯದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದಡಿ ತುಮಕೂರು ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದಾ ದಲಿತ ವಿರೋಧಿ ಮನಸ್ಥಿತಿಯ ಮಂಜುನಾಥ್, ಮಾದಿಗ ಸಮುದಾಯದ ಜಿ.ಎನ್.ಮಂಜುನಾಥ್ (ಸಮಯ ಮಂಜು) ಎಂಬುವವರ ಮೇಲೆ ತಾನು ಹಿಡಿದಿದ್ದ ಪಬ್ಲಿಕ್ ಟಿವಿ ಲೋಗೋ ಮೈಕ್‌ನಿಂದ ಹಲ್ಲೆ ನಡೆಸಿದ್ದಾನೆ; ಜಾತಿ ಹೆಸರಿಡಿದು ನಿಂದಿಸಿದ ಆತನ ಮೇಲೆ ಇದೀಗ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989’ ಅಡಿ ಪ್ರಕರಣ ದಾಖಲಾಗಿದೆ.

ದಲಿತ ಸಮುದಾಯದ ಪತ್ರಕರ್ತನ ಮೇಲೆ ಹಲ್ಲೆ ನಡೆಸಿರುವ ಪಬ್ಲಿಕ್ ಟಿವಿ ವರದಿಗಾರನ ಕುರಿತು ಮಾಹಿತಿ ಕಲೆ ಹಾಕಲು ಅಲ್ಲಿನ ಸ್ಥಳೀಯ ಪತ್ರಕರ್ತರನ್ನು ಸಂಪರ್ಕಿಸಿದಾಗ, ಮಂಜುನಾಥ್ ಈ ಹಿಂದೆ ಕೂಡ ಮಂಡ್ಯದಲ್ಲಿ ವರದಿಗಾರನಾಗಿದ್ದಾಗ ಇದೇ ರೀತಿ ವರ್ತಿಸಿದ್ದ ಎನ್ನಲಾಗಿದೆ. ಆಗಲೂ ಈತನ ಮೇಲೆ ‘ಅಟ್ರಾಸಿಟಿ’ ಪ್ರಕರಣ ದಾಖಲಾಗಿ, ಬಳಿಕ ಕೆಲವರು ರಾಜಿ ಮಾಡಿಸಿ ದೂರು ಹಿಂಪಡೆಯುವಂತೆ ಮನವೊಲಿಸಿದ್ದರು ಎಂದು ತಿಳಿದುಬಂದಿದೆ. ಇಷ್ಟೆಲ್ಲಾ ಆದರೂ ಬುದ್ದಿ ಕಲಿಯದ ಈತ, ತಾನು ಕೆಲಸ ಮಾಡುತ್ತಿದ್ದ ಸುದ್ದಿವಾಹಿನಿಯ ‘ಕ್ಯಾಮೆರಾಮ್ಯಾನ್‌’ ಒಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದನಂತೆ! ವಿವಾದದ ಬಳಿಕ ಈತನನ್ನು ತುಮಕೂರಿಗೆ ವರ್ಗಾವಣೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ತನ್ನ ಹಿಂದಿನ ಕೃತ್ಯಗಳಿಗೆ ಕೇಸು ಹಾಕಿಸಿಕೊಂಡು, ವರ್ಗಾವಣೆಯಾಗಿದ್ದರೂ ಬುದ್ದಿ ಕಲಿಯದ ಮಂಜುನಾಥ್, ತುಮಕೂರಿಗೆ ಬಂದ ಬಳಿಕವೂ ತನ್ನ ಹಿಂದಿನ ಅದೇ ದಾಳಿ ಮನಸ್ಥಿತಿಯನ್ನೇ ಮುಂದುವರಿಸಿದ್ದಾರೆ.
ಮಂಜುನಾಥ್ ತಾಳಮಕ್ಕಿ ತುಮಕೂರಿಗೆ ವರ್ಗಾವಣೆ ಆದ ಬಳಿಕ, ಈಗ ದಾಳಿಗೆ ಒಳಗಾಗಿರುವ ದಲಿತ ಸಮುದಾಯದ ಪತ್ರಕರ್ತ ಜಿ.ಎನ್‌.ಮಂಜುನಾಥ್ ಅವರ ಮನೆಯಲ್ಲೇ ಆಶ್ರಯ ಪಡೆದುಕೊಂಡಿದ್ದನಂತೆ. ದಲಿತ ಸಮುದಾಯದ ಮಂಜುನಾಥ್ ತಮ್ಮ ಕೈಯಾರೆ ಮಾಡುತ್ತಿದ್ದ ಅನ್ನವನ್ನೇ ಉಣ್ಣುತ್ತಿದ್ದಾಗ ಆತನಿಗೆ ಕಾಣದ ಜಾತಿಪ್ರಜ್ಞೆ, ಈಗ ತುಮಕೂರಿನಲ್ಲಿ ನೆಲೆ ಕಂಡುಕೊಂಡ ಬಳಿಕ ಎಚ್ಚರವಾಗಿಬಿಟ್ಟಿದೆ. ಅನ್ನ-ಆಶ್ರಯ ಕೊಟ್ಟವರಿಗೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾನೆ.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಹಲ್ಲೆಗೊಳಗಾದ ದಲಿತ ಪತ್ರಕರ್ತ ಜಿ.ಎನ್‌.ಮಂಜುನಾಥ್, “ದೈಹಿಕವಾಗಿ ಚೇತರಿಕೊಂಡಿದ್ದೇನೆ. ಆದರೆ, ಅಂದು ನಡೆದ ಮಾನಸಿಕ ಆಘಾತದಿಂದ ಇನ್ನೂ ಹೊರಬರುವುದಕ್ಕೆ ಸಾಧ್ಯವಾಗಿಲ್ಲ. ಹತ್ತಾರು ಜನ ಸಹೋದ್ಯೋಗಿಗಳು ಮತ್ತು ಅಲ್ಲಿದ್ದ ವಿದ್ಯಾರ್ಥಿಗಳ ಎದುರು ನಡೆದ ಅವಮಾನದಿಂದ ಸಾಕಷ್ಟು ನೊಂದಿದ್ದೇನೆ” ಎಂದು ನೋವು ತೋಡಿಕೊಂಡರು.

“ಮಂಜುನಾಥ್ ತಾಳಮಕ್ಕಿ ಸದಾ ದಲಿತ ವಿರೋಧಿ ಮನಸ್ಥಿತಿಯ ಪತ್ರಕರ್ತ; ತಳ ಸಮುದಾಯಗಳ ಪರವಾಗಿ ಮಾತನಾಡುವ ಎಲ್ಲರನ್ನೂ ಸಕಾರಣವಿಲ್ಲದೆ ದ್ವೇಷಿಸುತ್ತಾರೆ. ಈತ ಕೆಲಸ ಮಾಡುವ ಸಂಸ್ಥೆಯ ಸಂಪಾದಕರನ್ನು ವಿಮರ್ಷೆ ಮಾಡಿ ಲೇಖನ ಪ್ರಕಟಿಸಿದ್ದ ಸ್ವತಂತ್ರ ಮಾಧ್ಯಮ ಸಂಸ್ಥೆಯೊಂದರ ಜಿಲ್ಲಾ ವರದಿಗಾರನನ್ನು ವೈಯಕ್ತಿಕವಾಗಿ ನಿಂದಿಸಿ, ಆಗಲೂ ಈತ ದಲಿತ ಸಮುದಾಯದ ಪತ್ರಕರ್ತರನ್ನು ಹೀಯಾಳಿಸಿದ್ದ. ‘ನೀವು ದನ ತಿನ್ನುವವರನ್ನು ಬೆಂಬಲಿಸುವವರು’ ಎಂದು ತೇಜೋವಧೆ ಮಾಡಿದ್ದ. ಹೀಗೆಲ್ಲಾ ಮಾತನಾಡುವುದು ಸರಿಯಲ್ಲ ಎಂದು ನಾನು ಆಕ್ಷೇಪಿಸಿದ್ದೆ” ಎಂದರು.

ತಮ್ಮ ಮೇಲೆ ಹಲ್ಲೆ ನಡೆಸಿದ್ದಕ್ಕೆ ಕಾರಣ ಏನು ಎಂಬುದರ ಹಿನ್ನೆಲೆ ವಿವರಿಸಿದ ಮಂಜುನಾಥ್ “ಇದೇ ತಿಂಗಳ 8 ರಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ತುಮಕೂರು ನಿರೀಕ್ಷಣಾ ಮಂದಿರಕ್ಕೆ (ಐಬಿ) ಬಂದಿದ್ದಾಗ, ಅವರ ಹೇಳಿಕೆ ಪಡೆಯಲು ನಾವೆಲ್ಲರೂ (ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರು) ಹೋಗಿದ್ದೆವು. ಸಚಿವರು ಮಾತನಾಡಿದ ಬಳಿಕ, ಅವರದ್ದೇ ಕ್ಷೇತ್ರವಾದ ಕೊರಟಗೆರೆಯಲ್ಲಿ ದಲಿತರಿಗೆ ನೀಡಿದ್ದ ನಿವೇಶನದ ಹಕ್ಕುಪತ್ರದ ಬಗ್ಗೆ ಎದ್ದಿರುವ ಗೊಂದಲದ ಕುರಿತು ನಾನು ಪ್ರಶ್ನೆ ಮಾಡಿದ್ದೆ. ಆದರೆ, ‘ಸ್ಥಳೀಯ ವಿಚಾರ ಬಿಟ್ಟು, ಬೇರೆ ಏನಾದರೂ ಕೇಳಿ’ ಎಂದಿದ್ದ ಸಚಿವರು, ತುಮಕೂರು ಪತ್ರಕರ್ತರನ್ನು ನಿರ್ಲಕ್ಷಿಸುವ ರೀತಿ ಮಾತನಾಡಿದ್ದರು. ಸಚಿವರ ನಡೆಯಿಂದ ನಾನೂ ಸೇರಿದಂತೆ ಉಳಿದ ಪತ್ರಕರ್ತರು ಅಸಮಾಧಾನಗೊಂಡಿದ್ದರು. ಕೆಲ ದಿನಗಳ ಬಳಿಕ, ಜಿಲ್ಲಾ ದೇಶ್ಯ ಮಾಧ್ಯಮ ವರದಿಗಾರರ ಸಭೆ ನಡೆಸಿದ್ದೆವು. ‘ಪತ್ರಕರ್ತರಿಗೆ ಅವಮಾನ ಮಾಡಿದ ಸಚಿವರ ಕುರಿತು ಸುದ್ದಿ ಪ್ರಕಟಿಸುವುದಿಲ್ಲ ಎಂದು ನಿರ್ಣಯ ಮಾಡಬೇಕು’ ಎಂದು ಮಂಜುನಾಥ್ ತಾಳಮಕ್ಕಿ ಹೇಳಿದ್ದರು. ಹೀಗೆ ನಿರ್ಧಾರ ಮಾಡುವುದು ತಪ್ಪಾಗುತ್ತದೆ ಎಂದು ಹೇಳಿದ್ದೆ; ಉಳಿದ ಪತ್ರಕರ್ತರಿಗೂ ಈ ಬಗ್ಗೆ ಸಹಮತವಿರಲಿಲ್ಲ. ಆದರೂ ಆತ ಒತ್ತಾಯ ಮಾಡಿ ಎಲ್ಲರಿಂದ ಸಹಿ ಪಡೆದುಕೊಂಡು, ಗೃಹ ಸಚಿವರ ಸುದ್ದಿಗಳನ್ನು ‘ಬಾಯ್ಕಾಟ್’ ಮಾಡಿದ್ದೇವೆ ಎಂದು ಪತ್ರಕರ್ತರ ವಾಟ್ಸಾಪ್‌ ಗ್ರೂಪ್‌ನಲ್ಲಿ ಹೇಳಿಕೆ ಹೊರಡಿಸಿದ್ದರು. ಆದರೆ, ಆ ಪತ್ರಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸಿ, ಹೀಗೆ ಮಾಡುವುದು ಸರಿಯಲ್ಲ ಎಂದಿದ್ದರು. ನಾನೂ ಕೂಡ ಈ ಬೆಳವಣಿಗೆ ಒಳ್ಳೆಯದಲ್ಲ, ಮುಂದಿನ ದಿನಗಳಲ್ಲಿ ನಾವು ಅವರ ಕುರಿತು ಸುದ್ದಿ ಮಾಡಬೇಕಾಗಿ ಬರಬಹುದು ಎಂದು ಹೇಳಿದ್ದೆ. ಈ ವಿಚಾರದಲ್ಲಿ ಎಲ್ಲರನ್ನೂ ಬಿಟ್ಟು, ನನ್ನನ್ನು ಮಾತ್ರ ಗುರಿಯಾಗಿಸಿಕೊಂಡು ಕೆಟ್ಟದಾಗಿ ಮಾತನಾಡಿದರು” ಎಂದು ವಿವರಿಸಿದರು.

“ನಿನಗೆ ಪರಮೇಶ್ವರ್ ಮೇಲೆ ಜಾತಿಪ್ರೇಮವಿದೆ, ಎಡಚರ ಲದ್ದಿ, ಬುದ್ದಿ ತೋರಿಸಬೇಡಾ ಎಂದು ನಿಂದಿಸಿದ್ದ. ಆತನ ಟೀಕೆಗಳಿಗೆ ನಾನು ನಯವಾಗೇ ಪ್ರತಿಕ್ರಿಯೆ ನೀಡಿದ್ದೆ. ಮರುದಿನ, ಗೃಹ ಸಚಿವರಾದ ಜಿ.ಪರಮೇಶ್ವರ್ ಕುಟುಂಬದ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ (ಜಾರಿ ನಿರ್ದೇಶನಾಲಯ) ನಡೆಯುತ್ತದೆ; ಎಂದಿನಂತೆ ಎಲ್ಲರ ಜೊತೆಗೆ ನಾನೂ ಕೂಡ ಅಲ್ಲಿ ವರದಿಗಾಗಿ ತೆರಳಿದ್ದೆ. ಅಲ್ಲಿಗೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ಕೂಡ ಆಗಮಿಸಿ, ಹಿಂದಿನ ದಿನ ನಾನು ವಾಟ್ಸಾಪ್‌ ಗ್ರೂಪಿನಲ್ಲಿ ಅವರ ನಿರ್ಧಾರ ವಿರೋಧಿಸಿದ್ದನ್ನೇ ಮುಂದಿಟ್ಟುಕೊಂಡು ಕಾಲುಕೆರೆದು ಜಗಳಕ್ಕೆ ಬಂದರು. ಏನಲೇ, ನೀನು ಬಂದಿದಿಯಾ, ನಿನಗೆ ನೀನು ದೊಡ್ಡ ಬುದ್ದಿವಂತ ಎಂದು ತೋರಿಸಿಕೊಳ್ಳೊಕೆ ಬಂದಿದಿಯಾ ಎಂದು ಹಿಯಾಳಿಸುತ್ತಾನೆ. ‘ಇಡಿ ದಾಳಿ’ ಗಂಭೀರ ಸುದ್ದಿಯಾಗಿದ್ದು, ಈಗ ಸುಮ್ಮನಿರು ನಂತರ ಮಾತನಾಡೋಣ ಎಂದು ನಾನು ಸೇರಿದಂತೆ ಉಳಿದ ಪತ್ರಕರ್ತರೂ ಅವರಿಗೆ ತಿಳುವಳಿಕೆ ಹೇಳಲು ಯತ್ನಿಸಿದರು. ಆದರೆ, ಯಾವುದನ್ನೂ ಕೇಳಿಸಿಕೊಳ್ಳದ ಆತ ಜಗಳ ಮುಂದುವರಿಸಿದ್ದ. ಅಶ್ಲೀಲ ಮಾತುಗಳಿಂದ ನನ್ನ ಮೇಲೆ ದಾಳಿ ನಡೆಸಿ, ಏನೆ ಮಾಡಿದರೂ ನಿಮ್ಮ ಜಾತಿ ಕೀಳು ಜಾತಿನೇ, ನೀವು ಕೀಳು ಜಾತಿ ಬುದ್ದಿ ಬಿಡಲ್ಲಾ, ಎಂದು ಮಾದಿಗ ನನ್ನ ಮಗನೇ’ ಎಂದು ಜಾತಿ ಬಳಸಿ ನಿಂದಿಸಿ ಅವಾಚ್ಯ ಶಬ್ದಗಳನ್ನ ಬಳಸಿ ಸಾರ್ವಜನಿಕವಾಗಿ ಅವಮಾನಿಸುತ್ತಾನೆ. ನಾನು ನಾಲಿಗೆ ಬಿಗಿ ಹಿಡಿದು ಮಾತನಾಡು ಎಂದು ಜಾತಿ ಹಿಡಿದು ಯಾಕೆ ಮಾತನಾಡುತ್ತಿಯಾ ಎಂದು ಪ್ರಶ್ನಿಸಿದ್ದಕ್ಕೆ ಆತ ನೇರವಾಗಿ ತನ್ನ ಕೈನಲ್ಲಿದ್ದ ಲೋಗೋದಿಂದ ನನ್ನ ಮೇಲೆ ದಾಳಿ ಮಾಡಿದ, ಇದರಿಂದ ನನ್ನ ತಲೆಗೆ ಪೆಟ್ಟಾಗಿ ಕಿವಿ ಹಿಂದೆ ಗಾಯ ಆಗಿದೆ. ತಕ್ಷಣ ಮಧ್ಯಪ್ರವೇಶಿಸಿದ ಸ್ಥಳದಲ್ಲಿದ್ದ ವರದಿಗಾರರು, ಸಾರ್ವಜನಿಕರು ಆಸ್ಪತ್ರೆಗೆ ತೆರಳುವಂತೆ ನನ್ನನ್ನು ಅಲ್ಲಿಂದ ಕಳುಹಿಸಿದರು. ಈ ಘಟನೆಯಿಂದ ನನಗೆ ಬಹಳ ಆಘಾತವಾಯಿತು. ನೇರವಾಗಿ ಮನೆಗೆ ತೆರಳಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಿಗೆ ಕರೆ ಮಾಡಿದೆ. ಹಿರಿಯ ಪತ್ರಕರ್ತರನ್ನು ಸಂಪರ್ಕಿಸಿ ಆತನಿಗೆ ಬುದ್ದಿ ಹೇಳುವಂತೆ ಕೇಳಿಕೊಂಡೆ. ಆದರೆ, ಆತ ಯಾರ ಮಾತನ್ನೂ ಕೇಳುವುದಿಲ್ಲ ಎಂದು ಕೆಲವರು ಅಸಹಾಯಕತೆ ವ್ಯಕ್ತಪಡಿಸಿದರು. ನಾನು ಕೆಲಸ ಮಾಡುತ್ತಿರುವ ಸಂಸ್ಥೆ ಹಾಗೂ ಹಿರಿಯರ ಸಲಹೆ ಪಡೆದು ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ” ಎಂದರು.

“ಹಿಂದಿನಿಂದಲೂ ಈತ ಇದೇ ರೀತಿಯ ಕೃತ್ಯ ಮಾಡಿಕೊಂಡು ಬಂದಿದ್ದಾನೆ. ಮಂಡ್ಯದಲ್ಲಿ ಕೂಡ ದಲಿತ ಯುವಕನನ್ನು ಥಳಿಸಿ ಜಾತಿ ನಿಂದನೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಆಗ ತಲೆಮರೆಸಿಕೊಂಡಿದ್ದ ಈತನಿಗೆ, ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರು ನೆರವಿಗೆ ಬಂದು ರಾಜಿ ಮಾಡಿಸಿದ್ದರು. ಆ ಬಳಿಕವೂ ಈತ ತನ್ನ ಸಹೋದ್ಯೋಗಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಎಂದು ಅಲ್ಲಿನ ಸ್ಥಳೀಯ ಪತ್ರಕರ್ತರು ನನಗೆ ತಿಳಿಸಿದ್ದಾರೆ. ಅಲ್ಲಿಂದ ವರ್ಗಾವಣೆ ಆದ ಬಳಿಕ ಈತನಿಗೆ ನಾನೇ ಆಶ್ರಯ ನೀಡಿದ್ದೆ; ಈತ ಮೂಲತಃ ಕಾರವಾರದವನು. ಅವನಿಗೆ ನಾನೇ ಅಡುಗೆ ಮಾಡಿ ಬಡಿಸಿದ್ದೆ, ಅವನಿಗೆ ಕೋವಿಡ್ ತಗುಲಿದ್ದಾಗ ನಮ್ಮ ಸಮುದಾಯದ ಹುಡುಗರೇ ಮುಂದೆ ನಿಂತು ಆಸ್ಪತ್ರೆಯಲ್ಲಿ ನೆರವಾಗಿದ್ದರು. ಆಗ ಆತನಿಗೆ ಕಾಣದ ಜಾತಿ ಈಗ ಕಾಣಿಸುತ್ತಿದೆ. ನನ್ನ ಮೇಲೆ ಹಲ್ಲೆ ನಡೆಸಿದ ಬಳಿಕ, ಕ್ಷಮೆ ಕೇಳಿ ರಾಜಿ ಮಾಡಿಕೊಳ್ಳುವಂತೆ ಆತನಿಗೆ ಕೆಲ ಹಿರಿಯರು ಸಲಹೆ ನೀಡಿದ್ದಾರೆ. ‘ಅವರ ಬಳಿ ನಾನು ಕ್ಷಮೆ ಕೇಳುವುದಕ್ಕೆ ಸಾಧ್ಯವೇ? ಬೇಕಿದ್ದರೆ ಜೈಲಿನಲ್ಲಿ ಇದ್ದು ಬರುತ್ತೇನೆ’ ಎಂದು ದುರಹಂಕಾರದಿಂದ ಮಾತನಾಡಿದ್ದಾನೆ” ಎಂದು ಹೇಳಿದರು.

Previous Post

ಪ್ರಜ್ವಲ್ ರೇವಣ್ಣಗೆ ಮಾಜಿ ಕಾರು ಚಾಲಕನಿಂದ ಮತ್ತೆ ಸಂಕಷ್ಟ.. ಕೋರ್ಟ್​ಗೆ ನೀಡಿದ ಹೇಳಿಕೆಯಲ್ಲಿ ಏನೇನಿದೆ..?

Next Post

ಅವೈಜ್ಞಾನಿಕವಾಗಿ ಸವಾರರನ್ನು ತಡೆಯಬೇಡಿ: ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಖಡಕ್ ಎಚ್ಚರಿಕೆ

Next Post

ಅವೈಜ್ಞಾನಿಕವಾಗಿ ಸವಾರರನ್ನು ತಡೆಯಬೇಡಿ: ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಖಡಕ್ ಎಚ್ಚರಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.