Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

editor tv by editor tv
June 16, 2025
in ಕರಾವಳಿ
0
ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ
1.9k
VIEWS
Share on FacebookShare on TwitterShare on Whatsapp

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಸಾವು ನೋವುಗಳ ಎರಡು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಎರಡೂ ಘಟನೆಗಳು ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದ್ದು, ಒಂದು ಘಟನೆ ತಾಲೂಕಿನ ಮೊಂಟೆಪದವು ಎಂಬಲ್ಲಿ ಸಂಭವಿಸಿದ್ದು ಇದರಲ್ಲಿ ಒಂದೆ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟರೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಅದೇ ದಿನ ನಡೆದ ಮತ್ತೊಂದು ಘಟನೆಯಲ್ಲಿ ದೇರಳಕಟ್ಟೆ ಬಳಿ ಗುಡ್ಡ ಜರಿದು 6 ವರ್ಷದ ಬಾಲಕಿ ಸಾವನ್ನಪ್ಪಿದ್ದರು.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾರಮ್ಮ ಅವರು, “ನಮ್ಮ ಮನೆಯ ಮೂರು ದಿಕ್ಕಿನಲ್ಲಿ ಗುಡ್ಡಿವಿದ್ದು, ಜೋರಾಗಿ ಮಳೆ ಬಂದರೆ ಕುಸಿಯುವ ಅಪಾಯದ ಸ್ಥಿತಿಯಲ್ಲಿದೆ. ಈ ಬಗ್ಗೆ ನಾವು ಗ್ರಾಮ ಪಂಚಾಯತ್ ಕಚೇರಿಗೆ ಮೂರು ವರ್ಷಗಳಿಂದ ಪತ್ರ ಬರೆಯುತ್ತಲೆ ಇದ್ದೇವೆ. ಆದರೆ ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಸ್ಥಳೀಯ ವ್ಯಕ್ತಿಯು ಪಂಚಾಯತ್‌ನ ಅಧಿಕಾರಿಗಳನ್ನು ಮತ್ತು ಪ್ರತಿನಿಧಿಗಳನ್ನು ತನ್ನ ಹಣ ಬಲದಿಂದ ನಮಗೆ ಸಹಾಯ ಮಾಡದಂತೆ ತಡೆಯುತ್ತಿದ್ದಾರೆ” ಎಂದು ಅರೋಪಿಸಿದ್ದಾರೆ.

“ಮಳೆ ಬಂದರೆ ನಮ್ಮ ಮನೆಯ ಮೇಲಿನ ಗುಡ್ಡದ ನೀರು ಅಂಗಳಕ್ಕೆ ಬಂದು ಬೀಳುತ್ತಿವೆ. ಹಾಗಾಗಿ ಅಲ್ಲಿನ ಮಣ್ಣು ಕರಗಿ ಕುಸಿಯುವ ಅಪಾಯವಿದೆ. ಈ ಬಗ್ಗೆ ನಾವು ಪದೇ ಪದೇ ಪಂಚಾಯತ್‌ನಲ್ಲಿ ದೂರಿದಾಗ ನಮ್ಮ ಮನೆಗೆ ಬರುವ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಗುಡ್ಡದಿಂದ ಬಂದ ನೀರು ಅಂಗಳದಲ್ಲೆ ಬಾಕಿಯಾಗಿದ್ದು ನೀರು ಹೊರಗೆ ಹೋಗದಂತೆ ತೊಂದರೆ ನೀಡುತ್ತಿದ್ದಾರೆ. ಇತ್ತ ಕುಸಿಯುವ ಭೀತಿಯಲ್ಲಿರುವ ಗುಡ್ಡವಿದ್ದರೆ, ಮತ್ತೊಂದೆಡೆ ಮನೆಗೆ ಬರಬಹುದಾದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೆ ಅವರೂ ಸಹಾಯ ಮಾಡುತ್ತಿಲ್ಲ, ಪಂಚಾಯತ್ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಅವರು ಅಸಾಯಕಾರಿ ಹೇಳಿದ್ದಾರೆ. “ಸ್ಥಳೀಯ ಪ್ರತಿನಿಧಿಗಳು ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಸಾರಮ್ಮ ಅವರು ಆರೋಪಿಸಿದ್ದಾರೆ.

“ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ಉಲ್ಲಾಸ್ ರೈ, ಉತ್ತಮ್ ರೈ ಮತ್ತು ಉದಯ ರೈ ಎಂಬವರ ತಂದೆಯಾದ ತ್ಯಾಂಪಣ್ಣ ರೈ ಎಂಬವರ ಕೈಯ್ಯಿಂದ 2007ರಲ್ಲಿ 10 ಸೆಂಟ್ಸ್‌ ಭೂಮಿಯನ್ನು ಖರೀದಿ ಮಾಡಿ ಮನೆ ನಿರ್ಮಿಸಿದ್ದವು. ಜಮೀನು ಖರೀದಿ ಮಾಡುವ ವೇಳೆ ವಾಹನ ಬರುವ ರಸ್ತೆಯನ್ನು ಉಪಯೋಗಿಸುವ ಹಕ್ಕು ಕೂಡಾ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಈಗ ತ್ಯಾಂಪಣ್ಣ ರೈ ಅವರ ಮಕ್ಕಳು ಆ ರಸ್ತೆಯನ್ನು ಬಂದ್‌ ಮಾಡಿ ನಮ್ಮ ಅಂಗಳದಲ್ಲಿ ನೀರು ನಿಲ್ಲುವಂತೆ ಆಗಿದೆ.” ಎಂದು ಸಾರಮ್ಮ ಅವರು ಹೇಳಿದ್ದಾರೆ.

ಈ ಬಗ್ಗೆ ಅವರು ಭೂಮಿ ಖರೀದಿ ವೇಳೆ ಮಾಡಿರುವ ದಾಖಲೆಯನ್ನು ನಾನುಗೌರಿ.ಕಾಂಗೆ ನೀಡಿದ್ದಾರೆ. ಇಷ್ಟೆಲ್ಲಾ ದಾಖಲೆಯಿದ್ದರೂ ಪಂಚಾಯತ್ ಸ್ಥಳೀಯ ಪ್ರತಿನಿಧಿಗಳು ಗುಡ್ಡವನ್ನು ವಶದಲ್ಲಿ ಇಟ್ಟುಕೊಂಡಿರುವ ವ್ಯಕ್ತಿಗಳಿಗೆ ಬೆಂಬಲ ನೀಡುತ್ತಾ ನಮಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಮಾತನಾಡಿದ ಬಾಳ್ತಿಲ ಗ್ರಾಮ ಪಂಚಾಯತ್ ಪಿಡಿಒ ಸಂಧ್ಯಾ ಅವರು, “ಈ ಬಗ್ಗೆ ಪಂಚಾಯತ್‌ಗೆ ದೂರು ಬಂದಿದೆ. ಆದರೆ ಸಮಸ್ಯೆ ಏನೆಂದರೆ, ಕುಸಿಯುವ ಭೀತಿಯಲ್ಲಿರುವ ಗುಡ್ಡವೂ ಉದಯ್ ರೈ ಮತ್ತು ಉತ್ತಮ್ ರೈ ಎಂಬವರ ಖಾಸಗಿ ಭೂಮಿಯಾಗಿದ್ದು, ಸರ್ಕಾರಿ ಭೂಮಿಯಲ್ಲ. ಈ ಹಿಂದೆಯೆ ನಾವು ಅಪಾಯದಂಚಿನಲ್ಲಿರುವ ಮಣ್ಣನ್ನು ತೆರವು ಮಾಡುವಂತೆ ಅವರಿಗೆ ತಿಳಿಸಿದ್ದೆವು. 6 ತಿಂಗಳ ಒಳಗೆ ಅದನ್ನು ತೆರವು ಮಾಡುತ್ತೇವೆ ಎಂದು ಅವರು ಹೇಳಿದ್ದರೂ, ಈವರೆಗೆ ಅದನ್ನು ಮಾಡಿಲ್ಲ.” ಎಂದು ಹೇಳಿದರು.

“ಅದರ ನಂತರ, ಇತ್ತಿಚೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಹೇಳಿದ್ದೆವು. ಖಾಸಗಿ ಭೂಮಿ ಆಗಿರುವುದರಿಂದ, ಬಂಟ್ವಾಳ ತಹಶಿಲ್ದಾರ್ ಅವರಿಗೆ ಪತ್ರ ಕೂಡಾ ಬರೆದು ಮಣ್ಣು ತೆರವು ಮಾಡಿಸುವಂತೆ ಕೇಳಿಕೊಂಡಿದ್ದೇವೆ. ಜೊತೆಗೆ ರಸ್ತೆ ಬಂದ್ ಮಾಡಿರುವ ವಿಚಾರದ ಬಗ್ಗೆ ಕೂಡಾ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, “ಈ ಬಗ್ಗೆ ಕಂದಾಯ ನಿರೀಕ್ಷಕರು ಬಂದು ಪರಿಶೀಲನೆ ಮಾಡಿದ್ದಾರೆ. ಗುಡ್ಡವು ಖಾಸಗಿ ಜಮೀನಾಗಿದ್ದು ಉತ್ತಮ್ ರೈ  ಮತ್ತು ಸಹೋದರರ ಜಂಟಿ ಆಸ್ತಿ ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಅಪಾಯದಂಚಿನಲ್ಲಿರುವ ಮಣ್ಣು ತೆರವು ಮಾಡುತ್ತೇವೆ ಎಂದು ಹೇಳಿದ್ದರೂ ಅವರು ಈ ವರೆಗೆ ಅದನ್ನು ಮಾಡಿಲ್ಲ. ಸಧ್ಯ ಯಾವುದೇ ಅಪಾಯವನ್ನು ತಡೆಗಟ್ಟಲು ನಾವು ಸಾರಮ್ಮ ಅವರಿಗೆ ಮನೆಯಿಂದ ಸ್ಥಳಾಂತರಗೊಳ್ಳುವಂತೆ ಕೇಳಿಕೊಂಡಿದ್ದೇವೆ. ಮಳೆ ಕಡಿಮೆಯಾದರೆ ಮಣ್ಣು ತೆರವು ಮಾಡಿಕೊಡುತ್ತೇವೆ” ಎಂದು ಹೇಳಿದರು.

ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಅವರು ಮಾತನಾಡಿ, “ಬಾಳ್ತಿಲ ಪಂಚಾಯತ್‌ಗೆ ಭೇಟಿ ನೀಡಿ ಈ ಸಮಸ್ಯೆಯನ್ನು ಪರಿಶೀಲನೆ ಮಾಡಿದ್ದೇನೆ. ಸಧ್ಯ ಭಾರಿ ಮಳೆ ಸುರಿಯುತ್ತಿದ್ದು, ನಮಗೆ ಜನರ ಜೀವ ಮುಖ್ಯವಾಗಿದೆ. ಹಾಗಾಗಿ, ಸಾರಮ್ಮ ಅವರ ಕುಟುಂಬವನ್ನು ಮನೆಯಿಂದ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದೇನೆ. ಉಳಿದಂತೆ ಅಪಾಯದಂಚಿನಲ್ಲಿರುವ ಮಣ್ಣನ್ನು ಮಳೆ ನಿಂತ ನಂತರ ತೆರವು ಮಾಡುತ್ತೇವೆ. ಉಳಿದಂತೆ ಅವರ ಮನೆಗೆ ಹೋಗುವ ರಸ್ತೆಯ ವಿವಾದವನ್ನು ಮತ್ತೆ ಪರಿಶೀಲನೆ ಮಾಡುತ್ತೇವೆ” ಎಂದು ಹೇಳಿದರು.

ಈ ಬಗ್ಗೆ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಚೇರಿಯು ಈ ಬಗ್ಗೆ ಮಾಹಿತಿ ಪಡೆದಿದ್ದು, ತಹಶಿಲ್ದಾರ್ ಅವರಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಲಿದ್ದೇವೆ ಎಂದು ತಿಳಿದು ಬಂದಿದೆ

ವರದಿ :ನಾನು ಗೌರಿ

Previous Post

ತಪ್ಪಿದ ಘೋರ ದುರಂತ.. ಏರ್​ಪೋರ್ಟ್​​ಗೆ ವಾಪಸ್ ಆದ ಏರ್ ಇಂಡಿಯಾ ವಿಮಾನ!

Next Post

Karnataka Rains: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ, ಕರಾವಳಿಗೆ ರೆಡ್ ಅಲರ್ಟ್​

Next Post
Karnataka Rains: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ, ಕರಾವಳಿಗೆ ರೆಡ್ ಅಲರ್ಟ್​

Karnataka Rains: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ, ಕರಾವಳಿಗೆ ರೆಡ್ ಅಲರ್ಟ್​

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.