Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ನೀಟ್ ಅಂಕಪಟ್ಟಿಯನ್ನೇ ನಕಲಿ ಮಾಡಿದ ವಿದ್ಯಾರ್ಥಿ: ಊರಿಗೇ ಮಕ್ಮಲ್ ಟೋಪಿ ಹಾಕಿದ ಶಿಕ್ಷಕಿಯ ಮಗ

editor tv by editor tv
June 21, 2025
in ರಾಜ್ಯ
0
ನೀಟ್ ಅಂಕಪಟ್ಟಿಯನ್ನೇ ನಕಲಿ ಮಾಡಿದ ವಿದ್ಯಾರ್ಥಿ: ಊರಿಗೇ ಮಕ್ಮಲ್ ಟೋಪಿ ಹಾಕಿದ ಶಿಕ್ಷಕಿಯ ಮಗ
1.9k
VIEWS
Share on FacebookShare on TwitterShare on Whatsapp

ಉಡುಪಿಯ ವಿದ್ಯಾರ್ಥಿ ಓರ್ವ ನೀಟ್ ಪರೀಕ್ಷೆಯಲ್ಲಿ ನಕಲಿ ಅಂಕಪಟ್ಟಿಯನ್ನು ಸೃಷ್ಟಿಸಿ, ತಾನು ಟಾಪರ್ ಎಂದು ಸುಳ್ಳು ಪ್ರಚಾರ ಪಡೆದುಕೊಂಡಿರುವಂತಹ ಘಟನೆ ನಡೆದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ 107ನೇ ರ‍್ಯಾಂಕ್ ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ ಅನುಮಾನ ಬಂದು ಪರೀಶಿಲಿಸಿದಾಗ ವಿದ್ಯಾರ್ಥಿಯ ನಕಲಿ ಮುಖ ಬಯಲಾಗಿದೆ.

ಉಡುಪಿ, ಜೂನ್​ 21: ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಂಡಿರುವ ಉಡುಪಿ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಶಿಕ್ಷಕಿ ಮತ್ತು ಸರ್ಕಾರಿ ಅಧಿಕಾರಿಯ ಮಗನೇ ಅತೀ ಬುದ್ದಿವಂತಿಕೆಯಿಂದ ಇಡೀ ಊರಿಗೆ ಮಕ್ಮಲ್ ಟೋಪಿ ಹಾಕಿದ್ದಾನೆ. ಜಿಲ್ಲೆಗೆ ತಾನೇ ಟಾಪರ್ (Toppr) ಎಂದು ನಕಲಿ ಮಾಡಿದವನ ಅಸಲಿ ಮುಖ ಇದೀಗ ಬಯಲಾಗಿದೆ.

ಊರಿಗೆ ಮಕ್ಮಲ್ ಟೋಪಿ ಹಾಕಿದ ಯುವಕ

ಕೃಷ್ಣ ನಗರಿ ಉಡುಪಿ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರಿದ ಜಿಲ್ಲೆ, ಪಿಯುಸಿ, ಎಸ್​ಎಸ್​ಎಲ್​ಸಿ ಫಲಿತಾಂಶ ಬಂತು ಅಂದರೆ ಉಡುಪಿಯ ವಿದ್ಯಾರ್ಥಿಗಳೇ ಟಾಪರ್. ಆದರೆ ನೀಟ್ ಪರೀಕ್ಷೆಯಲ್ಲಿ ನಾನೇ ಟಾಪರ್ ಎಂದು ಬಿಂಬಿಸಲು ಹೋಗಿ ಖಾಸಗಿ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆಯ ಹಿರಿಯ ಅಧಿಕಾರಿಯ ಮಗ ರೋನಕ್ ಶೆಟ್ಟಿ ಊರಿಗೆ ಮಕ್ಮಲ್ ಟೋಪಿ ಹಾಕಿದ್ದಾನೆ.

ಹೌದು.. ವೈದ್ಯಕೀಯ ಪ್ರವೇಶಕ್ಕೆ ನಡೆಯುವ ನೀಟ್ ಪರೀಕ್ಷೆಯ ಫಲಿತಾಂಶ ಇತ್ತೀಚೆಗೆ ಪ್ರಕಟಗೊಂಡಿತ್ತು. ಹಲವು ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮದಿಂದ ನೀಟ್ ಪರೀಕ್ಷೆಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಆದರೆ ಉಡುಪಿಯ ಈ ರೋನಕ್ ಶೆಟ್ಟಿ ನಕಲಿ ಅಂಕ ಪಟ್ಟಿ ಸಿದ್ಧಪಡಿಸುವ ಮೂಲಕ ನಾನೇ ಟಾಪರ್ ಎಂದು ಹೇಳಿಕೊಂಡು ಇಡೀ ಊರಿಗೆ ಯಾಮಾರಿಸಿದ್ದಾನೆ.

ನಕಲಿ ಅಂಕಪಟ್ಟಿ ಮೂಲಕ ಪ್ರಚಾರ ಗಿಟ್ಟಿಸಿಕೊಂಡ ವಿದ್ಯಾರ್ಥಿ

ನೀಟ್ ಫಲಿತಾಂಶದಲ್ಲಿ ರಾಜ್ಯದ ಹಲವು ವಿದ್ಯಾರ್ಥಿಗಳು 200ನೇ ರ‍್ಯಾಂಕ್​ ನೊಳಗೆ ಸಾಧನೆ ಮಾಡಿದ್ದಾರೆ. ಇದರ ಮಧ್ಯೆ ಉಡುಪಿ ರೋನಕ್ ಶೆಟ್ಟಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯ ಮಟ್ಟದಲ್ಲಿ ಎಂಟನೇ ಸ್ಥಾನ ಎಂದು ಹೇಳಲಾಗಿತ್ತು. ಈತನ ಸಾಧನೆ ಬಗ್ಗೆ ಇತರ ವಿದ್ಯಾರ್ಥಿಗಳಿಗೆ ಸಂಶಯ ಬಂದು ಪರಿಸೀಲಿಸಿದಾಗ ಅಸಲಿಗೆ ಆತನಿಗೆ ಸಿಕ್ಕಿದ್ದು 17 ಲಕ್ಷ ಸರಣಿಯ ರ‍್ಯಾಂಕ್​​. ಇದಲ್ಲದೇ ಆತ ಮತ್ತು ಆತನ ಪೋಷಕರು ನಕಲಿ ಅಂಕಪಟ್ಟಿಯನ್ನೇ ಕಾಲೇಜಿನ ಮೂಲಕ ಪ್ರಚಾರ ತಂತ್ರಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.

ರೋನಕ್ ಶೆಟ್ಟಿ ಅಸಲಿ ಅಂಕಪಟ್ಟಿಯಲ್ಲಿ 65 ಅಂಕ ಎಂದಿದ್ದು, ನಕಲಿ ಪಟ್ಟಿಯಲ್ಲಿ 646 ಎಂದಿದೆ. ನಕಲಿ ಪ್ರಮಾಣ ಪತ್ರದ ಅಕ್ಷರಗಳು ಸಂಪೂರ್ಣ ಅದಲು ಬದಲಾಗಿದ್ದು, 2024ರ ಅಂಕಪಟ್ಟಿಗೆ ಅಂಕಗಳನ್ನು ಸೇರಿಸಲಾಗಿದೆ. ಎರಡೂ ಅಂಕಪಟ್ಟಿಯನ್ನು ತಾಳೆಹಾಕಿ ನೋಡಿದಾಗ ನಕಲಿ ಎಂಬುದು ಬಯಲಿಗೆ ಬಂದಿದೆ.

ಮುಖ್ಯವಾಗಿ ಪರೀಕ್ಷಾ ನಿರ್ದೇಶಕರ ಬದಲಾಗಿ ಹಿರಿಯ ನಿರ್ದೇಶಕರ ಸಹಿ ಹಾಕಲಾಗಿದೆ. ಮೂಲ ದಾಖಲೆಯಲ್ಲಿ ಎರಡು ಪುಟಗಳಿದ್ದರೆ ನಕಲಿಯಲ್ಲಿ ಒಂದೇ ಪುಟವಿದೆ. ಅಭ್ಯರ್ಥಿಯ ಭಾವಚಿತ್ರದಲ್ಲೂ ವ್ಯತ್ಯಾಸವಿದೆ. ಕಟ್‌ಆಫ್ ಸ್ಕೋರ್ ಹಾಗೂ ಒಟ್ಟು ಅಭ್ಯರ್ಥಿಗಳ ಸಂಖ್ಯೆಯಲ್ಲೂ ಸಾಕಷ್ಟು ಬದಲಾವಣೆಗಳಾಗಿವೆ. ನೀಟ್‌ನಲ್ಲಿ ಇಡೀ ದೇಶಕ್ಕೆ 107ನೇ ರ‍್ಯಾಂಕ್​ ಎಂದು ಬಿಂಬಿಸಿದ್ದ ರೋನಕ್​ಗೆ ನಿಜವಾಗಿ ಬಂದಿದ್ದು 17,62,258 ರ‍್ಯಾಂಕ್. 107 ನೇ ರ‍್ಯಾಂಕ್ ಹೊಸದಿಲ್ಲಿ ಮೂಲದ ವಿದ್ಯಾರ್ಥಿನಿಯೊಬ್ಬರು ಪಡೆದುಕೊಂಡಿದ್ದಾರೆ.

ನಕಲಿ ಅಂಕಪಟ್ಟಿ ಸೃಷ್ಟಿಸಿ ವಿದ್ಯಾ ಸಂಸ್ಥೆಗಳಿಗೆ ಮೋಸ ಮಾಡುವ ಮತ್ತು ವೈದ್ಯಕೀಯದಂತಹ ಸೀಟುಗಳನ್ನು ಸುಲಭವಾಗಿ ಪಡೆಯಲು ಅಡ್ಡದಾರಿ ಹಿಡಿಯಲು ಯತ್ನಿಸಿದವರ ಬಗ್ಗೆ ಸಮಗ್ರ ತನಿಖೆ ಆಗಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಸಾರ್ವಜನಿಕ ವಲಯದಲ್ಲಿ ಆಗ್ರಹ ಕೇಳಿಬಂದಿದೆ.

Previous Post

ಇರಾನ್ ಜೊತೆಗಿನ ಯುದ್ಧದಲ್ಲಿ ಇಸ್ರೇಲ್​ಗೆ ಭಾರೀ ಆರ್ಥಿಕ ಹೊರೆ -ಪ್ರತಿದಿನ ಎಷ್ಟು ಕೋಟಿ ರೂ ಖರ್ಚು ಆಗ್ತಿದೆ..?

Next Post

ಮಂಗಳೂರು: ಪಂಪ್‌ವೆಲ್ ಬಳಿ ಗಾಂಜಾ ಸುವಾಸನೆಯುಳ್ಳ ಚಾಕೊಲೇಟ್ ಮಾರಾಟ; ಉತ್ತರ ಪ್ರದೇಶ ಮೂಲದ ವ್ಯಕ್ತಿ ಅರೆಸ್ಟ್

Next Post
ಮಂಗಳೂರು: ಪಂಪ್‌ವೆಲ್ ಬಳಿ ಗಾಂಜಾ ಸುವಾಸನೆಯುಳ್ಳ ಚಾಕೊಲೇಟ್ ಮಾರಾಟ; ಉತ್ತರ ಪ್ರದೇಶ ಮೂಲದ ವ್ಯಕ್ತಿ ಅರೆಸ್ಟ್

ಮಂಗಳೂರು: ಪಂಪ್‌ವೆಲ್ ಬಳಿ ಗಾಂಜಾ ಸುವಾಸನೆಯುಳ್ಳ ಚಾಕೊಲೇಟ್ ಮಾರಾಟ; ಉತ್ತರ ಪ್ರದೇಶ ಮೂಲದ ವ್ಯಕ್ತಿ ಅರೆಸ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.