Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಅಮೆರಿಕ ದಾಳಿ ಬೆನ್ನಲ್ಲೇ ಯುದ್ಧಕ್ಕೆ ಹೊಸ ತಿರುವು.. ಪುಟಿನ್ ಭೇಟಿಯಾಗಿ ‘Game is not over’ ಎಂದ ಇರಾನ್..!

editor tv by editor tv
June 23, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/06/IRAN-ISRAEL.jpg

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ರಣಕಹಳೆ ಮೊಳಗಿಸಿವೆ. ಇಸ್ರೇಲ್ ಮೇಲೆ ಇರಾನ್ ಮಿಸೈಲ್​ಗಳ ಮಳೆ ಸುರಿಸ್ತಿದೆ. ಗೇಮ್ ಇನ್ನೂ ಮುಗಿದಿಲ್ಲ ಅಂತ ಖಡಕ್ ಎಚ್ಚರಿಕೆ ರವಾನಿಸಿದೆ. . ಈ ಬೆನ್ನಲ್ಲೇ ಇರಾನ್ ವಿದೇಶಾಂಗ ಮಂತ್ರಿ ರಷ್ಯಾಧ್ಯಕ್ಷ ಪುಟಿನ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ ವಿಶ್ವಸಂಸ್ಥೆ ಶಾಂತಿಯ ಸಂದೇಶ ಕಳುಹಿಸಿದೆ.

ಇಸ್ರೇಲ್ ಜೊತೆ ಅಮೆರಿಕ ಕೂಡ ಇರಾನ್ ಮೇಲೆ ದಾಳಿ ನಡೆಸ್ತಿದೆ. ​​, ಅಮೆರಿಕ ದಾಳಿ ನಡೆಸಿದ್ರೂ ಗೇಮ್ ಇನ್ನೂ ಮುಗಿದಿಲ್ಲ ಅಂತ ಸವಾಲೆಸೆದಿದೆ. ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಲಹೆಗಾರ ಅಲಿ ಶಮ್ಖಾನಿ, ಅಮೆರಿಕ ದಾಳಿಗೆ ಪ್ರತಿಕ್ರಿಯಿಸಿದ್ದು ಇನ್ನೂ ಆಟ ಮುಗಿದಿಲ್ಲ ಅಂತ ಎಚ್ಚರಿಕೆ ನೀಡಿದ್ದಾರೆ. ಅಮೆರಿಕ ದಾಳಿ ನಡೆಸಿದ್ರೂ ಅಲ್ಲಿರುವ ಪರಮಾಣ ತಯಾರಿಕಾ ದಾಸ್ತಾನು ಸುಭದ್ರವಾಗಿದೆ ಅಂತ ಹೇಳಿದ್ದಾರೆ.

ಅಮೆರಿಕವು ಇರಾನ್ ಮೇಲೆ ದಾಳಿ ನಡೆಸಿ ದೊಡ್ಡ ತಪ್ಪು ಮಾಡಿದೆ, ಮುಂದಿನ ದಿನಗಳಲ್ಲಿ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಇರಾನ್ ಸುಪ್ರೀಂ ನಾಯಕ ಆಯತೊಲ್ಲಾ ಖಮೇನಿ ಹೇಳಿದ್ದಾರೆ. ಶತ್ರುಗಳ ಧೈರ್ಯಶಾಲಿ ಪ್ರಚೋದನೆಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಪ್ರತಿಜ್ಞೆ ಮಾಡಿದರು. ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬಳಿಕ ಮೊದಲ ಬಾರಿಗೆ ಖಮೇನಿ ಪ್ರತಿಕ್ರಿಯಿಸಿದ್ದಾರೆ.

ಇರಾನ್ ದಾಳಿಗೆ ಇಸ್ರೇಲ್ ತಿರುಗೇಟು..

ಇರಾನ್ ದಾಳಿಗೆ ಇಸ್ರೇಲ್ ಕೂಡ ಮರುದಾಳಿ ನಡೆಸ್ತಿದೆ. ಇರಾನ್​ನ ಯಾಜ್ದ್ ನಗರದ ಎರಡು ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಏಳು ಇರಾನ್ ಸೈನಿಕರು ಹತರಾಗಿದ್ದಾರೆ ಎನ್ನಲಾಗಿದೆ. ಇಸ್ರೇಲಿ ವಾಯುಪಡೆಯ ಯುದ್ಧ ವಿಮಾನಗಳು ಟೆಹ್ರಾನ್ ಮತ್ತು ಪಶ್ಚಿಮ ಇರಾನ್‌ನಲ್ಲಿರುವ ಇರಾನಿನ ಮಿಲಿಟರಿ ನೆಲೆಗಳ ಮೇಲೆ ದಾಳಿಗಳನ್ನು ನಡೆಸುತ್ತಿವೆ, ಇರಾನ್​ನ ಪಶ್ಚಿಮ ನಗರವಾದ ಕೆರ್ಮನ್‌ಶಾದಲ್ಲಿ ದೊಡ್ಡ ಸ್ಫೋಟ ಕೇಳಿಬಂದಿದೆ. ಇರಾನ್ ನಿನ್ನೆ ನಡೆಸಿದ ಪ್ರತೀಕಾರದ ದಾಳಿಗೆ ಇಸ್ರೇಲ್‌ನಲ್ಲಿ ಸುಮಾರು 86 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.ಅನೇಕ ಸಾವು ನೋವು ಇಸ್ರೇಲ್ ನಲ್ಲಿ ಆಗಿದೆ ಎಂದು ವಾರದಿಯಾಗಿದೆ

ಅಮೆರಿಕದ ಪ್ರಮುಖ ನಗರಗಳಲ್ಲಿ ಹೈ-ಅಲರ್ಟ್ ಘೋಷಣೆ

ಅಮೆರಿಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇರಾನ್ ಹವಣಿಸುತ್ತಿದೆ. ಇರಾನ್ ದಾಳಿಯ ಭೀತಿ ಇದ್ದು ಅಮೆರಿಕದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಇರಾನ್‌ನ ಮೂರು ಪರಮಾಣು ತಾಣಗಳ ಮೇಲೆ ದಾಳಿ ನಡೆಸಿರುವ ಅಮೆರಿಕ ನಮ್ಮ ಗುರಿ ಇರಾನ್ ಮೇಲಿನ ಯುದ್ಧ ಅಲ್ಲ. ಇರಾನ್​ ಮೇಲಿನ ಪರಮಾಣು ಕೇಂದ್ರಗಳನ್ನ ನಿಯಂತ್ರಿಸುವ ಯುದ್ಧ ಅಂತ ಹೇಳಿದೆ. ಅಮೆರಿಕದ ಈ ದಾಳಿಯನ್ನು ಇರಾನ್ ಖಂಡಿಸಿದ್ದು, ಇದನ್ನು ವಿಶ್ವಸಂಸ್ಥೆಯ ಚಾರ್ಟರ್ ಹಾಗೂ ಅಂತಾರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆ ಅಂತ ಕರೆದಿದೆ. ದಾಳಿಗಳ ಕುರಿತು ತುರ್ತು ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಗೂ ಟೆಹ್ರಾನ್ ಕರೆ ನೀಡಿದೆ.

ಪುಟಿನ್ ಭೇಟಿಯಾದ ಇರಾನ್ ವಿದೇಶಾಂಗ ಮಂತ್ರಿ

ಈ ಮಧ್ಯೆ ಇರಾನ್ ವಿದೇಶಾಂಗ ಮಂತ್ರಿ ಅಬ್ಬಾಸ್ ಅರಗ್ಚಿ ಸ್ನೇಹಿತ ರಷ್ಯಾಧ್ಯಕ್ ಪುಟಿನ್ ಭೇಟಿ ಮಾಡಿದ್ದು ಮಾತುಕತೆ ನಡೆಸಿದ್ದಾರೆ. ರಷ್ಯಾ ನಮ್ಮ ಸ್ನೇಹಿತ ಅಂತ ಅಬ್ಬಾಸ್ ಅರಗ್ಚಿ ಹೇಳಿದ್ದಾರೆ.

ಅಮೆರಿಕ ದಾಳಿ ಅಪಾಯಕಾರಿ ತಿರುವು ಎಂದ ವಿಶ್ವಸಂಸ್ಥೆ

ಮಧ್ಯಪ್ರಾಚ್ಯದಲ್ಲಿ ಯುದ್ಧೋತ್ಸಾಹ ತೀವ್ರಗೊಂಡ ಬೆನ್ನಲ್ಲೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ತುರ್ತು ಅಧಿವೇಶನ ನಡೆಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಈ ದಾಳಿಯನ್ನು ಅಪಾಯಕಾರಿ ತಿರುವು ಅಂತ ಕರೆದಿದ್ದಾರೆ. ಜಗತ್ತು ಶಾಂತಿಯನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಅಂತ ಸಂದೇಶ ನೀಡಿದ್ದಾರೆ.. ಅಪಾಯ ತಪ್ಪಿಸಲು, ರಾಜತಾಂತ್ರಿಕತೆ ಮೇಲುಗೈ ಸಾಧಿಸಬೇಕು, ನಾಗರಿಕರನ್ನು ರಕ್ಷಿಸಬೇಕು, ಸುರಕ್ಷಿತ ಸಮುದ್ರ ಸಂಚಾರ ಖಾತರಿಪಡಿಸಬೇಕು ಅಂತ ಹೇಳಿದ್ದಾರೆ.

ಒಟ್ಟಾರೆ, ಯುದ್ಧ ನಿಲ್ಲಿಸಬೇಕು ಅಂತ ಶಾಂತಿಧೂತ ವಿಶ್ವಸಂಸ್ಥೆ ಕರೆ ನೀಡಿದೆ. ಭಾರತ ಕೂಡ ಶಾಂತಿಯ ಸಂದೇಶ ನೀಡಿದೆ. ಆದ್ರೆ ಕೆರಳಿ ನಿಂತಿರುವ ಇಸ್ರೇಲ್-ಇರಾನ್ ನಡುವೆ ಕದನ ವಿರಾಮ ಸದ್ಯ ಸಾಧ್ಯವಿಲ್ಲದಂತಹ ಪರಿಸ್ಥಿತಿ ತಲುಪಿದೆ.

Previous Post

ಇರಾನ್‌ನಿಂದ ಬಿಗ್ ಶಾಕ್, ಹಾರ್ಮುಜ್ ಜಲಸಂಧಿ ಬಂದ್, ಜಾಗತಿಕ ಆರ್ಥಿಕತೆ ಅಲ್ಲೋಲ ಕಲ್ಲೋಲ, ಭಾರತಕ್ಕೆ ಪರಿಣಾಮ ಬೀರದಂತೆ ಕ್ರಮ!

Next Post

ಮಹಿಳೆ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಖ್ಯಾತ ಸ್ವಾಮೀಜಿ; ಮಠದಿಂದಲೇ ಓಡಿಸಿದ ಸ್ಥಳೀಯರು

Next Post

ಮಹಿಳೆ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಖ್ಯಾತ ಸ್ವಾಮೀಜಿ; ಮಠದಿಂದಲೇ ಓಡಿಸಿದ ಸ್ಥಳೀಯರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.