Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Assembly Bypoll Results: ಗುಜರಾತ್ ಸೇರಿ 2 ಕಡೆ ಆಮ್ ಆದ್ಮಿ ಭರ್ಜರಿ ಗೆಲುವು; ತಲಾ 1 ಸ್ಥಾನ ಗೆದ್ದ ಕಾಂಗ್ರೆಸ್, ಬಿಜೆಪಿ, ಟಿಎಂಸಿ

editor tv by editor tv
June 23, 2025
in ರಾಷ್ಟ್ರೀಯ
0
Assembly Bypoll Results: ಗುಜರಾತ್ ಸೇರಿ 2 ಕಡೆ ಆಮ್ ಆದ್ಮಿ ಭರ್ಜರಿ ಗೆಲುವು; ತಲಾ 1 ಸ್ಥಾನ ಗೆದ್ದ ಕಾಂಗ್ರೆಸ್, ಬಿಜೆಪಿ, ಟಿಎಂಸಿ
1.9k
VIEWS
Share on FacebookShare on TwitterShare on Whatsapp

ವಿಧಾನಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಅಧಿಕಾರದಲ್ಲಿದ್ದರೂ ಹೀನಾಯ ಸೋಲನ್ನು ಅನುಭವಿಸಿದ್ದ ಆಮ್ ಆದ್ಮಿ ಪಕ್ಷ ಇದೀಗ ಗುಜರಾತ್ ಮತ್ತು ಪಂಜಾಬ್ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಎಎಪಿಯ ಉಪಚುನಾವಣೆಯ ಗೆಲುವನ್ನು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶ್ಲಾಘಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಜ್ರಿವಾಲ್ ಕಾಂಗ್ರೆಸ್ ಪಕ್ಷ ಬಿಜೆಪಿಯ ಕೈಗೊಂಬೆಯಾಗಿದೆ ಎಂದು ಆರೋಪಿಸಿದ್ದಾರೆ.

ಜೂನ್ 23: ಗುಜರಾತ್, ಪಂಜಾಬ್, ಕೇರಳ ಮತ್ತು ಪಶ್ಚಿಮ ಬಂಗಾಳ ಈ ನಾಲ್ಕು ರಾಜ್ಯಗಳಲ್ಲಿ 5 ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶಗಳು (Assembly Bypoll Results) ಇಂದು ಪ್ರಕಟವಾಗಿದೆ. ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಪ್ರಾರಂಭವಾಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ತಲಾ ಒಂದು ಸ್ಥಾನವನ್ನು ಗೆದ್ದ ರೆ, ಎಎಪಿ ಆಮ್ ಆದ್ಮಿ ಗುಜರಾತ್ ಮತ್ತು ಪಂಜಾಬ್‌ನಲ್ಲಿ ಎರಡು ಸ್ಥಾನಗಳನ್ನು ಗೆದ್ದಿತು.

ಜೂನ್ 19ರಂದು ಕೇರಳದ ನೀಲಂಬೂರ್, ಗುಜರಾತ್‌ನ ವಿಸಾವದರ್ ಮತ್ತು ಕಾಡಿ, ಪಂಜಾಬ್‌ನ ಲುಧಿಯಾನ ಪಶ್ಚಿಮ ಮತ್ತು ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಉಪಚುನಾವಣೆಗಳು ನಡೆದವು. ಈ ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ಪಿಣರಾಯಿ ವಿಜಯನ್ ಅವರ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ನಡುವೆ ತೀವ್ರ ಪೈಪೋಟಿ ಕಂಡುಬಂದಿತ್ತು. ಜೂನ್ 19ರಂದು 4 ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶವನ್ನು ಭಾರತೀಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಆಮ್ ಆದ್ಮಿ ಪಕ್ಷ (ಎಎಪಿ) 2 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್, ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತಲಾ ಒಂದು ಸ್ಥಾನವನ್ನು ಗೆದ್ದಿವೆ.

#WATCH | Ahmedabad, Gujarat: AAP party celebrates over the election results in Gujarat.

AAP's Gopal Italia wins Visavadar (Gujarat) Assembly by-election by a margin of 17,554 votes, garnering 75,942 votes in total. pic.twitter.com/lWTYhaO0iN

— ANI (@ANI) June 23, 2025

ಪಂಜಾಬ್‌ನ ಲುಧಿಯಾನ ಪಶ್ಚಿಮ ಮತ್ತು ಗುಜರಾತ್‌ನ ವಿಸಾವದರ್‌ನಲ್ಲಿ ಎಎಪಿ ಅತಿ ಹೆಚ್ಚು ಗೆಲುವು ಸಾಧಿಸಿದೆ. ಕೇರಳದ ನೀಲಂಬೂರ್ ಸ್ಥಾನವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಗುಜರಾತ್‌ನ ಕಾಡಿಯಲ್ಲಿ ಬಿಜೆಪಿ ತನ್ನ ಭದ್ರಕೋಟೆಯನ್ನು ಉಳಿಸಿಕೊಂಡಿತು. ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ತೃಣಮೂಲ ಕಾಂಗ್ರೆಸ್ ನಿರಾಯಾಸವಾಗಿ ಗೆದ್ದಿತು.

#WATCH | Rajendra Chavda says, "This is a victory of all voters…Party gave me a ticket after 40 years, and the public too made me victorious by a margin of almost 40,000 votes…" https://t.co/ozvHDjqApN pic.twitter.com/EUDQIJCqzF

— ANI (@ANI) June 23, 2025

ಕಾಂಗ್ರೆಸ್ ಅಭ್ಯರ್ಥಿ ಆರ್ಯದನ್ ಶೌಕತ್ ಕೇರಳದ ಆಡಳಿತಾರೂಢ ಸಿಪಿಐ(ಎಂ)ಗೆ ನೀಲಂಬೂರ್‌ನಲ್ಲಿ ಎಂ. ಸ್ವರಾಜ್ ಅವರನ್ನು 77,737 ಮತಗಳ ಅಂತರದಿಂದ ಸೋಲಿಸುವ ಮೂಲಕ ಪ್ರಮುಖ ಹಿನ್ನಡೆಯನ್ನುಂಟುಮಾಡಿದರು.

ಮಾಜಿ ಎಎಪಿ ರಾಜ್ಯಾಧ್ಯಕ್ಷ ಗೋಪಾಲ್ ಇಟಾಲಿಯಾ ವಿಸಾವದರ್‌ನಲ್ಲಿ ಬಿಜೆಪಿಯ ಕಿರಿತ್ ಪಟೇಲ್ ಅವರನ್ನು 75,942 ಮತಗಳಿಂದ ಸೋಲಿಸುವ ಮೂಲಕ ಅದ್ಭುತ ಗೆಲುವು ಸಾಧಿಸಿದರು. ಕಾಂಗ್ರೆಸ್‌ನ ನಿತಿನ್ ರಣಪರಿಯಾ ಅವರು ಕೇವಲ 5,501 ಮತಗಳನ್ನು ಗಳಿಸುವ ಮೂಲಕ ಬಹಳ ಹಿಂದುಳಿದಿದ್ದಾರೆ. ಕಾಡಿಯಲ್ಲಿ ಬಿಜೆಪಿಯ ರಾಜೇಂದ್ರ ಚಾವ್ಡಾ ಅವರು ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಚಾವ್ಡಾ ಅವರನ್ನು 99,752 ಮತಗಳ ಅಂತರದಿಂದ ಸೋಲಿಸುವ ಮೂಲಕ ಜಯ ಗಳಿಸಿದರು. ಫೆಬ್ರವರಿಯಲ್ಲಿ ಹಾಲಿ ಶಾಸಕ ಕರ್ಸನ್‌ಭಾಯ್ ಪಂಜಾಬಿ ಸೋಲಂಕಿ ಅವರ ನಿಧನದ ನಂತರ ಉಪಚುನಾವಣೆ ಅನಿವಾರ್ಯವಾಯಿತು.

ಲುಧಿಯಾನ ಪಶ್ಚಿಮದಲ್ಲಿ ಎಎಪಿಯ ಸಂಜೀವ್ ಅರೋರಾ ಅವರು ಕಾಂಗ್ರೆಸ್ ನಾಯಕ ಭರತ್ ಭೂಷಣ್ ಆಶು ಅವರನ್ನು 35,179 ಮತಗಳಿಂದ ಸೋಲಿಸಿ, ಪಂಜಾಬ್‌ನಲ್ಲಿ ಎಎಪಿಯ ಸ್ಥಾನವನ್ನು ಮತ್ತಷ್ಟು ಬಲಪಡಿಸಿದರು. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಭ್ಯರ್ಥಿ ಅಲಿಫಾ ಅಹ್ಮದ್ ಅವರು ಕಾಳಿಗಂಜ್ ಸ್ಥಾನವನ್ನು 1,02,759 ಮತಗಳ ಭಾರಿ ಅಂತರದಿಂದ ಗೆಲ್ಲುವ ಮೂಲಕ ಬಿಜೆಪಿಯ ಆಶಿಶ್ ಘೋಷ್ ಅವರನ್ನು ಸೋಲಿಸಿದರು.

#WATCH | Mahesana, Gujarat: BJP's Rajendra Chavda wins Kadi (Gujarat) Assembly by-election by a margin of 39,452 votes, garnering 99,742 votes in total. pic.twitter.com/dYN5dU32p4

— ANI (@ANI) June 23, 2025

ಕೇಜ್ರಿವಾಲ್ ಸಂತಸ:

ವಿಶಾವದರ್ ಮತ್ತು ಲುಧಿಯಾನ ಪಶ್ಚಿಮ ಉಪಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷದ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುಜರಾತ್‌ನ ಜನರು ಬಿಜೆಪಿಯಿಂದ ಬೇಸತ್ತಿದ್ದಾರೆ ಮತ್ತು ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ ಎಂದು ಹೇಳಿದ್ದಾರೆ. ಗುಜರಾತ್ ಜನರು ಈಗ ಪರ್ಯಾಯಕ್ಕಾಗಿ ಆಮ್ ಆದ್ಮಿ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಗುಜರಾತ್ ಜನರು ಈಗ ಬಿಜೆಪಿಯಿಂದ ಬೇಸತ್ತಿದ್ದಾರೆ ಮತ್ತು ಆಮ್ ಆದ್ಮಿ ಪಕ್ಷದಲ್ಲಿ ಭರವಸೆಯನ್ನು ನೋಡುತ್ತಿದ್ದಾರೆ ಎಂದು ಅವರು ಹಿಂದಿಯಲ್ಲಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

https://twitter.com/i/broadcasts/1ZkKzYAjldRxv

ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಜ್ರಿವಾಲ್, ಕಾಂಗ್ರೆಸ್ ಪಕ್ಷವು ಬಿಜೆಪಿಯ ಕೈಗೊಂಬೆಯಾಗಿದೆ ಎಂದು ಆರೋಪಿಸಿದರು. “ಕಾಂಗ್ರೆಸ್ ಈಗ ಒಂದರ ನಂತರ ಒಂದರಂತೆ ಬಿಜೆಪಿಯ ಗೆಲುವನ್ನು ಖಚಿತಪಡಿಸಿಕೊಳ್ಳಲು ಮಾತ್ರ ಕೆಲಸ ಮಾಡುತ್ತಿದೆ. ಅದರ ಉನ್ನತ ನಾಯಕತ್ವವು ಬಿಜೆಪಿಯ ಮಡಿಲಲ್ಲಿ ಆರಾಮವಾಗಿ ಕುಳಿತಿದೆ” ಎಂದು ಅವರು ಆರೋಪಿಸಿದರು.

Previous Post

ಅಮೆರಿಕ ನಿಜವಾಗಿಯೂ ಇರಾನ್​​ಗೆ ಮುಣ್ಣು ಮುಕ್ಕಿಸಿತೇ..? ಅಸಲಿ ಕತೆ ಬೇರೆಯೇ ನಡೆದಿದೆ..

Next Post

ಮಂಗಳೂರು ಪಾಲಿಕೆ | ನಿವೃತ್ತಿಯ 15 ವರ್ಷಗಳ ನಂತರವು ಅದೇ ಹುದ್ದೆಯಲ್ಲಿ ಮುಂದುವರೆದ ಅಧಿಕಾರಿ!

Next Post
ಮಂಗಳೂರು ಪಾಲಿಕೆ | ನಿವೃತ್ತಿಯ 15 ವರ್ಷಗಳ ನಂತರವು ಅದೇ ಹುದ್ದೆಯಲ್ಲಿ ಮುಂದುವರೆದ ಅಧಿಕಾರಿ!

ಮಂಗಳೂರು ಪಾಲಿಕೆ | ನಿವೃತ್ತಿಯ 15 ವರ್ಷಗಳ ನಂತರವು ಅದೇ ಹುದ್ದೆಯಲ್ಲಿ ಮುಂದುವರೆದ ಅಧಿಕಾರಿ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.