Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿ ಕೆಲಸ ಕಳೆದುಕೊಂಡ ಪೊಲೀಸರು

editor tv by editor tv
June 30, 2025
in ರಾಜ್ಯ
0
ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿ ಕೆಲಸ ಕಳೆದುಕೊಂಡ ಪೊಲೀಸರು
1.9k
VIEWS
Share on FacebookShare on TwitterShare on Whatsapp

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಸುಳ್ಳು ಕೊಲೆ ಪ್ರಕರಣ ದಾಖಲಿಸಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ. ನ್ಯಾಯಾಲಯದ ತನಿಖೆಯಿಂದ ಸುಳ್ಳು ಆರೋಪ ಸಾಬೀತಾಗಿದೆ. ಅಮಾಯಕನಾದ ಸುರೇಶ್ ಎರಡು ವರ್ಷಗಳ ಕಾಲ ಅನಗತ್ಯವಾಗಿ ಜೈಲಿನಲ್ಲಿ ಕಳೆದಿದ್ದಾನೆ. ಈ ಘಟನೆಯಿಂದ ಪೊಲೀಸ್ ಇಲಾಖೆಯ ಖ್ಯಾತಿಗೆ ಧಕ್ಕೆಯಾಗಿದೆ.

ಮೈಸೂರು, ಜೂನ್​ 30: ಸುಳ್ಳು ಕೊಲೆ ಕೇಸ್​ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್​ಪೆಕ್ಟರ್ ಮತ್ತು ಇಬ್ಬರು ಸಬ್​ ಇನ್ಸ್​ಪೆಕ್ಟರ್​ಗಳನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ (Periyapatna) ತಾಲೂಕಿನ ಬೆಟ್ಟದಪುರ ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಬಿ.ಜಿ ಪ್ರಕಾಶ್, ಇಲವಾಲ ಸಬ್​​ ಇನ್ಸ್​​ಪೆಕ್ಟರ್​​ ಮಹೇಶ್‌ ಕುಮಾರ್ ಹಾಗೂ ಜಯಪುರ ಪೊಲೀಸ್​ ಠಾಣೆಯ ಸಬ್ ಇನ್ಸ್​ಪೆಕ್ಟರ್​ ಪ್ರಕಾಶ್ ಎತ್ತಿನಮನೆಯವರನ್ನು ಅಮಾನತು ಮಾಡಲಾಗಿದೆ. ಕೊಲೆ ಪ್ರಕರಣದ ವಿಚಾರಣಾಧಿಕಾರಿಗಳಾದ ಇವರು ಸುಳ್ಳು ಚಾರ್ಜ್​​ಶೀಟ್ ಹಾಕಿ ಜೈಲಿಗೆ ಕಳುಹಿಸಿದ್ದರು

ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ಗಾಂಧಿ ಎಂಬುವರ ಪುತ್ರ ಸುರೇಶ್​ ಅಲಿಯಾಸ್ ಕುರುಬರ ಸುರೇಶ್ ಎಂಬುವನ ವಿರುದ್ಧ ಅಂದು ಬೆಟ್ಟದಪುರ ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಬಿ.ಜಿ ಪ್ರಕಾಶ್ ಸುಳ್ಳು ಚಾರ್ಜ್​ಶೀಟ್​​ ಸಲ್ಲಿಸಿದ್ದರು. ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದಾಗ ಸುಳ್ಳು ಚಾರ್ಜ್​​ಶೀಟ್​ ಹಾಕಿರುವುದು ಬೆಳಕಿಗೆ ಬಂದಿದೆ.

ಏನಿದು ಪ್ರಕರಣ

2020ರ ನವೆಂಬರ್​ 12 ರಂದು ಬೆಟ್ಟದಪುರದಲ್ಲಿ ಓರ್ವ ಮಹಿಳೆಯ ಮೃತದೇಹ ಸಿಕ್ಕಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಬಲವಾದ ಏಟಿನಿಂದ ಮಹಿಳೆ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖವಾಗಿತ್ತು. ಹೀಗಾಗಿ ಅದು ಕೊಲೆ ಎಂದು ಸ್ಪಷ್ಟಪವಾಗಿತ್ತು. ಈ ಮೃತ ಮಹಿಳೆ ಯಾರು? ಕೊಲೆ ಮಾಡಿದವರು ಯಾರು? ಎಂಬ ಪ್ರಶ್ನೆಗಳು ಮೂಡಿದ್ದವು.

ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ಜೇನುಕುರುಬ ಆದಿವಾಸಿ ಸಮುದಾಯಕ್ಕೆ ಸೇರಿದವರಾದ ಸುರೇಶ್​ ಅಲಿಯಾಸ್ ಕುರುಬರ ಸುರೇಶ್ ಅವರು 2020ರ ನವೆಂಬರ್​​ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್​ ಎಂಬಾತನೇ ಕಾರಣ ಎಂದು ತಿಳಿಸಿದ್ದರು. ಬಳಿಕ, ಮಲ್ಲಿಗೆಯ ತಾಯಿ ಗೌರಿ ಅವರು ಮಗಳು ಕೊಲೆಯಾಗಿದ್ದಾಳೆ ಎಂದು ದೂರು ನೀಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಸುರೇಶ್​ ಅವರನ್ನೇ ಆರೋಪಿಯಾಗಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ವಿಚಾರಣಾಧಿಕಾರಿಗಳು ಕಟ್ಟು ಕಥೆ ಕಟ್ಟಿದ್ದರು. ಬೆಟ್ಟದಪುರ ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಬಿ.ಜಿ ಪ್ರಕಾಶ್ ನ್ಯಾಯಾಲಯಕ್ಕೆ ಸುಳ್ಳು ಚಾರ್ಜ್​ಶೀಟ್​​ ಸಲ್ಲಿಸಿದ್ದರು.

ಕೋರ್ಟ್​ನಲ್ಲಿ ಸತ್ಯ ಬಯಲು

ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈಗಾಗಲೇ 9 ಜನ ಸಾಕ್ಷಿದಾರರ ವಿಚಾರಣೆಯೂ ನಡೆದಿತ್ತು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುವ ಸಂದರ್ಭದಲ್ಲಿ, ನಾನು (ಸುರೇಶ್) ನನ್ನ ಪತ್ನಿಯನ್ನು ಕೊಂದಿಲ್ಲ, ಆಕೆ ಬದುಕಿದ್ದಾಳೆ ಎಂದು ಸುರೇಶ್​ ಅವರು ಪದೇ ಪದೆ ಮನವಿ ಮಾಡುತ್ತಿದ್ದರು.

ಅಷ್ಟೇ ಅಲ್ಲದೆ ನಮ್ಮ ತಾಯಿ ಬದುಕಿದ್ದಾಳೆ, ನಮ್ಮ ತಾಯಿ ಸತ್ತಿಲ್ಲ ಎಂದು ಸುರೇಶ್​ ಮತ್ತು ಮಲ್ಲಿಗೆ ದಂಪತಿಯ ಮಕ್ಕಳಾದ ಕೃಷ್ಣ, ಕೀರ್ತಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದರು. ಅಕ್ಕಪಕ್ಕದ ಮನೆಯವರೂ ಸಹಿತ ಮಲ್ಲಿಗೆ ಸತ್ತಿಲ್ಲ ಎಂದು ಸಾಕ್ಷ್ಯ ಹೇಳಿದ್ದರು.

ಕೊನೆಗೆ 2025ರ ಏಪ್ರಿಲ್ 2ರಂದು ಮಲ್ಲಿಗೆ ಜಡ್ಜ್ ಮುಂದೆ ಹಾಜರಾಗಿದ್ದರು. ಕೋರ್ಟ್​ನಲ್ಲಿ ಪೊಲೀಸರು ಹೇಳಿದ್ದು ಕಟ್ಟುಕತೆ ಎಂದು ಸಾಬೀತಾಗಿತ್ತು. ಆದರೆ, ಪತ್ನಿಯನ್ನು ಕೊಲೆ ಮಾಡಿದ ಆರೋಪ ಹೊತ್ತಿದ್ದ ಸುರೇಶ್​ ಎರಡು ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದಾರೆ. ಇದೀಗ, ಸತ್ಯ ಹೊರ ಬಂದಿರುವುದರಿಂದ ಸುರೇಶ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುರೇಶ್ ವಿರುದ್ಧ ಸುಳ್ಳು ಕೇಸ್ ಹಾಕಿದ್ದ ಮೂವರು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

Previous Post

ಬ್ರಹ್ಮಾವರ: ಕುಂಜಾಲಿನ ಜಂಕ್ಷನ್ ನಲ್ಲಿ ಪತ್ತೆಯಾದ ದನದ ಕಳೇಬರ ಪ್ರಕರಣ :ಐದು ಮಂದಿ ವಶಕ್ಕೆ

Next Post

ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Next Post
ಬಂಟ್ವಾಳ | ರಹೀಂ ಹತ್ಯೆ ಪ್ರಕರಣ: ಮತ್ತಿಬ್ಬರ ಸೆರೆ; ಬಂಧಿತರ ಸಂಖ್ಯೆ 5ಕ್ಕೆ ಏರಿಕೆ

ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.